Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾನೂನಿನ ಕುಣಿಕೆಗೆ ಸಿಲುಕಿದ್ದಾರೆ. ಇದರ ನಡುವೆ ತಮ್ಮ ಮೊದಲ ಹೇಳಿಕೆಯಲ್ಲಿ ತಮ್ಮ ಕಾರ್ಯಕ್ರಮದ ವೇಳೆ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದರು. ಅದಕ್ಕೆ ಪಹಲ್ಗಾಮ್ ಹೋಲಿಕೆ ಕೊಟ್ಟಿದ್ದಾಗಿ ತಿಳಿಸಿದ್ದಾರೆ. ಇಂತ ಹೇಳಿಕೆ ನೀಡಿದಂತ ಸೋನು ನಿಗಮ್ ವಿರುದ್ಧ ಕನ್ನಡದ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಕಿಡಿಕಾರಿದ್ದಾರೆ. ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಚಿತ್ರಸಾಹಿತಿ ಕವಿರಾಜ್ ಅವರು, ಸೋನು ನಿಗಮ್ ಅವರ ವೀಡಿಯೊ ಕ್ಲಿಪ್ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು. ಅದು conclusive ಆಗಿರಲಿಲ್ಲ. ಹಾಗಾಗಿ ನಾನು ಯಾವತ್ತೂ ವಿಧಿಸಿಕೊಂಡಿರುವ ನಿಯಮದಂತೆ ಸರಿಯಾದ ಮಾಹಿತಿ ಬರೋವರೆಗೂ ಅವಸರಕ್ಕೆ ಬಿದ್ದು ಕಾಮೆಂಟ್ ಮಾಡಿರಲಿಲ್ಲ ಎಂದಿದ್ದಾರೆ. ಈಗಷ್ಟೇ ಸೋನುನಿಗಮ್ ಸ್ಪಷ್ಟೀಕರಣ ನೀಡಿದ ವೀಡಿಯೊ ನೋಡಿದೆ. ಅಲ್ಲಿಗೆ ಕನ್ನಡ ಹಾಡಿಗೆ ಬೇಡಿಕೆ ಇಟ್ಟಿದ್ದನ್ನು ಪೆಹಲ್ಗಾಮ್ ಉಗ್ರಗಾಮಿಗಳ ದಾಳಿಯೊಂದಿಗೆ ಸಮೀಕರಿಸಿದ್ದು ಅವರ ಮೂರ್ಖತನ ಮತ್ತು ದುರಹಂಕಾರವನ್ನು ಇನ್ನಷ್ಟು ಜಾಹೀರು ಮಾಡಿದೆ. ಹಿಂದಿ ಚಿತ್ರೋದ್ಯಮದಿಂದ ಅಘೋಷಿತ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಅವರು ಪ್ರಸ್ತುತ ತಾತ್ಕಾಲಿಕ ಅಮಾನತು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಇದು 2025 ರ ಇಂಡಿಯನ್ ಪ್ರೀಮಿಯರ್ ಲೀಗ್ನ ಮಧ್ಯದಲ್ಲಿ ಅವರನ್ನು ನಿರ್ಗಮಿಸಲು ಕಾರಣವಾಯಿತು. 29 ವರ್ಷದ ವೇಗಿ ಗುಜರಾತ್ ಟೈಟಾನ್ಸ್ ಅಭಿಯಾನದ ಮಧ್ಯದಲ್ಲಿ ಐಪಿಎಲ್ನಿಂದ ಏಕೆ ನಿರ್ಗಮಿಸಿದರು ಎಂಬುದನ್ನು ಸ್ಪಷ್ಟಪಡಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ವರದಿಯಾಗಿರುವಂತೆ, ನಾನು ಇತ್ತೀಚೆಗೆ ವೈಯಕ್ತಿಕ ಕಾರಣಗಳಿಗಾಗಿ ಐಪಿಎಲ್ನಲ್ಲಿ ಭಾಗವಹಿಸದೆ ದಕ್ಷಿಣ ಆಫ್ರಿಕಾಕ್ಕೆ ಮರಳಿದೆ. ಮನರಂಜನಾ ಔಷಧದ ಬಳಕೆಗಾಗಿ ಪ್ರತಿಕೂಲವಾದ ವಿಶ್ಲೇಷಣಾತ್ಮಕ ಸಂಶೋಧನೆಯನ್ನು ನಾನು ಹಿಂದಿರುಗಿಸಿದ್ದರಿಂದ ಇದು ಸಂಭವಿಸಿದೆ ಎಂದಿದ್ದಾರೆ. ನಾನು ನಿರಾಶೆಗೊಂಡ ಎಲ್ಲದಕ್ಕೂ ನಾನು ತೀವ್ರವಾಗಿ ವಿಷಾದಿಸುತ್ತೇನೆ. ಕ್ರಿಕೆಟ್ ಆಡುವ ಸವಲತ್ತನ್ನು ನಾನು ಎಂದಿಗೂ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಇದು ನನ್ನ ವೈಯಕ್ತಿಕ ಆಕಾಂಕ್ಷೆಗಳನ್ನು ಮೀರಿದೆ ಎಂದು ಹೇಳಿದ್ದಾರೆ. ನಾನು ತಾತ್ಕಾಲಿಕ ಅಮಾನತು ಶಿಕ್ಷೆಯನ್ನು ಅನುಭವಿಸುತ್ತಿದ್ದೇನೆ ಮತ್ತು ನಾನು ಆಡಲು ಇಷ್ಟಪಡುವ ಆಟಕ್ಕೆ ಮರಳಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ. ನಾನು ಇದನ್ನು ಒಬ್ಬಂಟಿಯಾಗಿ…
ಬೆಂಗಳೂರು : ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು. ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದರು. ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ…
ಬೆಂಗಳೂರು: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. ಅಲ್ಲದೇ ಸಿಎಂ ಸಿದ್ಧರಾಮಯ್ಯ ಅವರಿಗೆ ಈ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ಧರಾಮಯ್ಯಗೆ ಈ ಬೇಡಿಕೆ *ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. *ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. *ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು. https://kannadanewsnow.com/kannada/comprehensive-survey-on-categorisation-of-internal-reservation-among-scheduled-castes-to-begin-from-may-5/ https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/
ಮಡಿಕೇರಿ : ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ, 05 ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಸಮೀಕ್ಷೆ ಗಣತಿದಾರರಿಗೆ(ಶಿಕ್ಷಕರಿಗೆ) ತರಬೇತಿ ಕಾರ್ಯಾಗಾರವು ನಗರದ ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆಯಿತು. ಮಡಿಕೇರಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ನಡೆದ ತರಬೇತಿಯಲ್ಲಿ 170 ಶಿಕ್ಷಕರು ಪಾಲ್ಗೊಂಡು ಮಾಹಿತಿ ಪಡೆದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಮಾಸ್ಟರ್ ಟ್ರೈನರ್ಗಳಾದ ಪ್ರಶಾಂತ್ ಕುಮಾರ್, ಭಾರತಿ, ಜೊತೆಗೆ 13 ಮಂದಿ ಮೇಲ್ವಿಚಾರಕರು ಇದ್ದರು. ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂದ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಸಮೀಕ್ಷೆಗೆ ನಿಯೋಜಿಸಿರುವ ಶಿಕ್ಷಕರು/ ಗಣತಿದಾರರು ಪರಿಶಿಷ್ಟ ಜಾತಿ ಕುಟುಂಬಗಳು ಹೇಳುವ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಭರ್ತಿ…
ಮಡಿಕೇರಿ: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ಫಲಾನುಭವಿಗಳಿಗೆ ಜನವರಿ-2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ಸಂಬಂಧ ಮೇ, 01 ರಿಂದ ಮೇ, 20 ಒಳಗೆ ಯುವನಿಧಿ ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅಭ್ಯರ್ಥಿಗಳು ಇದರ ಸೌಲಭ್ಯವನ್ನು ಪಡೆಯಲು ಮುಂದುವರಿಸಬೇಕಾದಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ. ಸ್ವಯಂ ಘೋಷಣೆ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಅಥವಾ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.9449692691 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ. https://kannadanewsnow.com/kannada/final-notification-for-3614-revenue-villages-by-june-end-minister-krishna-byre-gowda/ https://kannadanewsnow.com/kannada/minister-ishwar-khandre-instructs-officials-to-protect-sheebi-forest-land-from-land-grabbers/
ಬೆಂಗಳೂರು : ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಇಂದು ಗಡುವು ನಿಗದಿಗೊಳಿಸಿದ್ದಾರೆ. ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದರು. “ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ…
ಶಿವಮೊಗ್ಗ: ಕೇಂದ್ರ ಲೋಕಸೇವಾ ಆಯೋಗ ನಡೆಸಿದಂತ ಐಎಎಸ್ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಸಾಗರದ ವಿಕಾಸ್ ತೇರ್ಗಡೆಯಾಗಿದ್ದರು. ಈ ಮೂಲಕ ಐಎಎಸ್ ಪಾಸ್ ಮಾಡಿದ್ದರು. ಇಂತಹ ವಿಕಾಸ್ ಗೆ ಸಾಗರ ನಗರಸಭೆ ವತಿಯಿಂದ ಮೇ.5ರಂದು ನಾಗರೀಕ ಸನ್ಮಾನ ಮಾಡಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾಗರ ನಗರಸಭೆ ಕಮೀಷನರ್ ಹೆಚ್.ಕೆ ನಾಗಪ್ಪ ಅವರು, ಸಾಗರ ನಗರದಲ್ಲಿ ಪ್ರಪ್ರಥಮ ಬಾರಿಗೆ ಯುಪೆಸ್ಸಿ ಪರೀಕ್ಷೆಯಲ್ಲಿ 288ನೇ ಶ್ರೇಯಾಂಕದಲ್ಲಿ ಐಎಎಸ್ ಅಧಿಕಾರಿಯಾಗಿ ನಮ್ಮೂರಿನ ವಿಕಾಸ್.ವಿ ಆಯ್ಕೆಯಾಗಿದ್ದಾರೆ. ಅವರಿಗೆ ಸಾಗರ ಜನತೆಯ ಪರವಾಗಿ ನಗರಸಭೆ ವತಿಯಿಂದ ನಾಗರೀಕ ಸನ್ಮಾನ ಮಾಡಲಾಗುತ್ತಿದೆ ಎಂದಿದ್ದಾರೆ. ಮೇ.5ರಂದು ಬೆಳಗ್ಗೆ 11 ಗಂಟೆಗೆ ಸಾಗರದ ಪುರಭವನದಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿರುವಂತ ವಿಕಾಸ್.ವಿ ಅವರನ್ನು ಸನ್ಮಾನಿಸಲಾಗುತ್ತದೆ. ಸಾಗರ ತಾಲ್ಲೂಕಿನ ಜನತೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ನಮ್ಮೂರಿನ ಹೆಮ್ಮೆಯ ಪುತ್ರ ವಿಕಾಸ್.ವಿ ಅಭಿನಂದಿಸುವಂತೆ ಕೋರಿದ್ದಾರೆ. ಮೊದಲ ಪ್ರಯತ್ನದಲ್ಲೇ ‘UPSC’ ತೇರ್ಗಡೆ: 288ನೇ Rank ಗಳಿಸಿದ ‘ಸಾಗರದ ವಿಕಾಸ್’ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಿಕಾಸ್…
ಧಾರವಾಡ: ಪದೇ ಪದೇ ಕೈ ಕೊಡುತ್ತಿದ್ದಂತ ಇಲೆಕ್ಟ್ರಿಕ್ ದ್ವಿಚಕ್ರ ವಾಹನ ರಿಪೇರಿಯ ನಂತ್ರವೂ ಸರಿಯಾಗದ ಕಾರಣ, ಹೊಸ ಬ್ಯಾಟರಿ ಹಾಕಿಕೊಡುವಂತೆ ಮನವಿ ಮಾಡಿದರೂ ಕೇಳದ ಕಂಪನಿಗೆ ಗ್ರಾಹಕರ ನ್ಯಾಯಾಲಯ ಶಾಕ್ ನೀಡಿದೆ. ಹೊಸ ಬ್ಯಾಟರಿ ಹಾಕಿ, ಇಲ್ಲವೇ ವಾಹನ ಖರೀದಿಸಿದ ಹಣದ ಜೊತೆಗೆ ಶೇ.10ರ ಬಡ್ಡಿ ದರದಲ್ಲಿ ಹಣ ವಾಪಾಸ್ಸು ನೀಡುವಂತೆ ಆದೇಶಿಸಿದೆ. ಧಾರವಾಡದ ವಿಧ್ಯಾರ್ಥಿನಿಯಾದ ಅನನ್ಯಾ ಅಕ್ಕಿಹಾಳ ದಿ:02/04/2022 ರಂದು ರೂ.80,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಾದ ಹೈದರಾಬಾದಿನ ಪ್ಯೂವರ್ ಎನರ್ಜಿ ಇವರಿಂದ ಖರೀದಿಸಿದ್ದರು. ವಾಹನದ ಬ್ಯಾಟರಿಯ ಮೇಲೆ 36 ತಿಂಗಳ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದರು. ನಂತರ ಒಂದೇ ವರ್ಷದಲ್ಲಿ ಒಮ್ಮಿಂದೊಮ್ಮೆಲೆ ರಸ್ತೆಯ ಮಧ್ಯ ವಾಹನ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅದನ್ನು ಸರಿಪಡಿಸಿಕೊಟ್ಟರೂ ಸಹ ವಾಹನವು ಯಥಾ ಪ್ರಕಾರ ಅದೇ ಸಮಸ್ಯೆಗಳನ್ನು ಕೊಡುತ್ತಿತ್ತು. ಎದುರುದಾರರು ದೂರುದಾರರ ಸಮಸ್ಯೆಯನ್ನು ಪರಿಹರಿಸಲಿಲ್ಲ.…
ಬಳ್ಳಾರಿ : ಜಿ.ಆರ್.ಟಿ.ಡಿ.ಸಿ ಬಳ್ಳಾರಿ ಸಂಸ್ಥೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಪ್ರಥಮ ಬಿ.ಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿ.ಯು.ಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಮತ್ತು ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಜಿ.ಆರ್.ಟಿ.ಡಿ.ಸಿ ಬಳ್ಳಾರಿ ಸಂಸ್ಥೆಯು ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆ ಇದರ ಅಂಗ ಸಂಸ್ಥೆಯಾಗಿದೆ. ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಬೆಳಗಾವಿ ಮತ್ತು ಬೆಂಗಳೂರು ಇದರಡಿ 2009 ರಲ್ಲಿ ಪ್ರಾರಂಭವಾಗಿದ್ದು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಮೊದಲನೇಯ ರೈಲ್ವೆ ಗೇಟ್ ಹತ್ತಿರದ ನಲ್ಲಚೇರುವು ಪ್ರದೇಶದ ಜಿ.ಆರ್.ಟಿ.ಡಿ.ಸಿ ಕಾಲೇಜ್ ನ ಪ್ರಾಂಶುಪಾಲರ ಕಚೇರಿ ಅಥವಾ ಬೋಧಕ ಸಿಬ್ಬಂದಿಗಳ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಜಿಆರ್ಟಿಡಿಸಿ…