Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ನವದೆಹಲಿ: ಕೆಂಪು ಕೋಟೆ ಪ್ರದೇಶದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆತ್ಮಹತ್ಯಾ ಬಾಂಬರ್ನೊಂದಿಗೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಕಾಶ್ಮೀರಿ ನಿವಾಸಿಯನ್ನು ಬಂಧಿಸಿದೆ. ಈ ದಾಳಿಯಲ್ಲಿ 10 ಅಮಾಯಕರ ಜೀವಗಳು ಬಲಿಯಾಗಿ ಸುಮಾರು 25 ಜನರು ಗಾಯಗೊಂಡರು. ದಾಳಿಯಲ್ಲಿ ಭಾಗಿಯಾಗಿದ್ದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿಯನ್ನು ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದ ಎನ್ಐಎ, ದೆಹಲಿಯಿಂದ ಬಂಧಿಸಿತು. ದಾಳಿಯಲ್ಲಿ ಭಾಗಿಯಾಗಿದ್ದ ಕಾರನ್ನು ಹೆಸರಿಸಲಾಗಿದ್ದ ಅಲಿಯನ್ನು ದೆಹಲಿಯಿಂದ ಬಂಧಿಸಲಾಯಿತು. https://twitter.com/NIA_India/status/1990051171546153320 ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ನ ಸಂಬೂರಾದ ನಿವಾಸಿಯಾಗಿರುವ ಆರೋಪಿಯು ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಯೊಂದಿಗೆ ಭಯೋತ್ಪಾದಕ ದಾಳಿಯನ್ನು ನಡೆಸಲು ಸಂಚು ರೂಪಿಸಿದ್ದ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಸ್ಫೋಟವನ್ನು ಪ್ರಚೋದಿಸಲು ವಾಹನದಲ್ಲಿ ಸಾಗಿಸುವ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಆಗಿ ಬಳಸಲಾದ ಕಾರನ್ನು ಖರೀದಿಸಲು ಅನುಕೂಲವಾಗುವಂತೆ ಅಮೀರ್ ದೆಹಲಿಗೆ ಬಂದಿದ್ದರು. ಐಇಡಿ ಸ್ಫೋಟದಲ್ಲಿ…
ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರವಾಗಿದೆ. ನಾಯಕತ್ವ ಬದಲಾವಣೆ ಬಗ್ಗೆ ನಾನಾಗಲೀ, ಸಿಎಂ ಸಿದ್ಧರಾಮಯ್ಯ ಆಗಲೀ ಕಾಂಗ್ರೆಸ್ ಹೈಕಮಾಂಡ್ ಬಳಿಯಲ್ಲಿ ಚರ್ಚಿಸಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನ್ಯಾಕೆ ರಾಜೀನಾಮೆ ಕೊಡಲಿ? ನಾನು ಪಕ್ಷಕ್ಕೆ ಯಾವತ್ತೂ ಬ್ಲ್ಯಾಕ್ ಮೇಲ್ ಮಾಡುವವನಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂಬುದಾಗಿ ಹೇಳಿದರು. ಪಕ್ಷ ವಹಿಸಿರುವ ಕೆಲಸವನ್ನು ಮಾಡುತ್ತೇನೆ. ಪಕ್ಷ ಹೇಳುವವರೆಗೂ ನಾನು ಅಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಸಂಪುಟ ಪುನಾರಚನೆ ಸಿಎಂ ಸಿದ್ಧರಾಮಯ್ಯಗೆ ಬಿಟ್ಟ ವಿಚಾರವಾಗಿದೆ. ನನ್ನನ್ನು ಕರೆದ್ರೆ ಹೋಗ್ತೇನೆ ಎಂಬುದಾಗಿ ತಿಳಿಸಿದರು.
ಬಾಗಲಕೋಟೆ: ಸಕ್ಕರೆ ಕಾರ್ಖಾನೆ ಬಳಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಈ ಪ್ರಕರಣ ಸಂಬಂಧ ಈವರೆಗೆ 10 ಮಂದಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಎಸ್ ಪಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬಾಗಲಕೋಟೆ ಎಸ್ ಪಿ ಮಾಹಿತಿ ನೀಡಿದ್ದು, ಸಕ್ಕರೆ ಕಾರ್ಖಾನೆ ಮುಂದೆ ನಿಲ್ಲಿಸಿದ್ದಂತ ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಿದ ಕೃತ್ಯವು ರೈತರದ್ದಲ್ಲ. ಬದಲಾಗಿ ಕಿಡಿಗೇಡಿಗಳದ್ದಾಗಿದೆ. ಈ ಕೃತ್ಯ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕವಾಗಿ ಎಫ್ಐಆರ್ ದಾಖಲಾಗಿದೆ ಎಂದರು. ನಮ್ಮ ಪಿಎಸ್ಐಗಳ ದೂರು ಆಧರಿಸಿ ಎರಡು ಎಫ್ಐಆರ್, ಕಾರ್ಖಾನೆಯವರ ದೂರಿನಡಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಘಟನೆಯ ಬಗ್ಗೆ ವೀಡಿಯೋ ದೃಶ್ಯಾವಳಿ ಸಂಗ್ರಹ ಮಾಡಿದ್ದೇವೆ. ಪ್ರತ್ಯಕ್ಷ ಸಾಕ್ಷಿ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಎವಿಡೆನ್ಸ್ ಆಧಾರದ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂಬುದಾಗಿ ತಿಳಿಸಿದರು. ಇದು ರೈತರು ಮಾಡಿರುವ ಕೃತ್ಯವಲ್ಲ. ಕಿಡಿಗೇಡಿಗಳ ಕೃತ್ಯವಾಗಿದೆ. ಈ ಸಂಬಂಧ ಈವರೆಗೆ 10…
ಪಾಟ್ನಾ: ನವೆಂಬರ್ 22 ರ ಮೊದಲು ಬಿಹಾರದಲ್ಲಿ ಮುಂದಿನ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಹೇಳಿದ್ದಾರೆ. ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥರು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಶೀಘ್ರದಲ್ಲೇ ಸರ್ಕಾರ ರಚನೆಗೆ ನೀಲನಕ್ಷೆಯನ್ನು ಅಂತಿಮಗೊಳಿಸಲಿದೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಅದರ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಹೇಳಿದರು. “ಇದು ಶೀಘ್ರದಲ್ಲೇ ನಡೆಯಲಿದೆ. ಚರ್ಚೆಗಳು ನಡೆಯುತ್ತಿವೆ” ಎಂದು ಬಿಹಾರದಲ್ಲಿ ಸರ್ಕಾರ ರಚನೆಯ ಬಗ್ಗೆ ಕೇಳಿದಾಗ ಪಾಸ್ವಾನ್ ಹೇಳಿದರು. “ಸರ್ಕಾರದ ನೀಲನಕ್ಷೆಯ ಬಗ್ಗೆ ಸ್ಪಷ್ಟತೆಯ ಅರಿವು ಬರುತ್ತದೆ. ಇಂದು ರಾತ್ರಿಯೊಳಗೆ, ನಾನು ಹಿರಿಯ ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ಇಂದು ಅಥವಾ ನಾಳೆಯೊಳಗೆ ನೀಲನಕ್ಷೆ ಸಿದ್ಧವಾಗಲಿದೆ. ನವೆಂಬರ್ 22 ರ ಮೊದಲು ನಾವು ಸರ್ಕಾರ ರಚಿಸಬೇಕು. ಅದು ಪೂರ್ಣಗೊಳ್ಳುತ್ತದೆ.” 43 ವರ್ಷದ ಅವರ ಹೇಳಿಕೆಯು ಜನತಾದಳ ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರನ್ನು…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ಹಸುವೊಂದು ಬಲಿಯಾಗಿದ್ದು, ಕೂದಲೆಳೆಯ ಅಂತರದಲ್ಲಿ ರೈತನೊಬ್ಬ ಪಾರಾಗಿದ್ದಾನೆ. ಮೈಸೂರು ಜಿಲ್ಲೆಯ ಬೆಣ್ಣೆಗೆರೆ ಬಳಿ 1 ಲಕ್ಷ ಮೌಲ್ಯದ ಹೆಚ್ ಎಫ್ ತಳಿಯ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿ, ಕೊಂದು ಹಾಕಿದೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಸು ಮೇಲೆ ಹುಲಿ ದಾಳಿ ವೇಳೆ ಅಲ್ಲೇ ಇದ್ದಂತ ರೈತ ರಾಜಶೇಖರ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾನೆ. ರೈತ ಜಯಪ್ಪ ಎಂಬುವರಿಗೆ ಸೇರಿದಂತ ಹೆಚ್ ಎಫ್ ತಳಿಯ ಹಸು ಹುಲಿದಾಳಿಗೆ ಬಲಿಯಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದನ್ನು ಕಂಡಂತ ರೈತ ಜಯಪ್ಪ, ಬಿಡಿಸಲಾಗದೇ ತಾನು ಬದುಕಿದರೆ ಸಾಕು ಎಂಬುದಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿ ಹಿಡಿಯದಂತ ಅರಣ್ಯ ಇಲಾಖೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. https://kannadanewsnow.com/kannada/hospitals-must-provide-immediate-first-aid-for-animal-bites-without-asking-for-advance-payment-state-government-orders/ https://kannadanewsnow.com/kannada/shocking-under-the-pretext-of-petting-a-dog-a-pervert-sexually-harassed-a-young-woman-by-touching-her-body/
ಬೆಂಗಳೂರು : ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು. ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ.…
ಕಲಬುರ್ಗಿ: ಆರ್ ಎಸ್ ಎಸ್ ತೆರಿಗೆ ವಂಚನೆ, ಕೆ ಕೆ ಆರ್ ಡಿ ಬಿಯಿಂದ ಲೂಟಿಯ ಬಗ್ಗೆ ದಾಖಲೆ ಸಹಿತ ಮಾಹಿತಿ ಬಿಡುಗಡೆ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾವು ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ವಿರೋಧ ಮಾಡಿಲ್ಲ. ಆದರೇ ಅನುಮತಿಯನ್ನು ಪಡೆದುಕೊಂಡು ಪಥಸಂಚಲನ ಮಾಡಿ ಎಂದು ಹೇಳಿದ್ದೇವೆ ಎಂದರು. ಇಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ಕೊಟ್ಟವರು ನಾವು. ಎಷ್ಟು ಮಂದಿ ಭಾಗಿಯಾಗಬೇಕು. ಮಾರ್ಗ ಎಲ್ಲಿಂದ ಎಲ್ಲಿಗೆ ಇರಬೇಕು ಎಂದು ಹೇಳಿದ್ದೇವೆ. ಇದರಲ್ಲಿ ಗೊಂದಲವೇನಿದೆ ಎಂಬುದಾಗಿ ಪ್ರಶ್ನಿಸಿದರು. ಕಲಬುರ್ಗಿಯ ಚಿತ್ತಾಪುರದ ಆರ್ ಎಸ್ ಎಸ್ ಪಥಸಂಚಲನಕ್ಕೆ 3 ಲಕ್ಷ ಬರ್ತೀವಿ ಅಂದ್ರು ಬಂದ್ರಾ? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿಯ ಘಟಾನುಘಟಿ ನಾಯಕರು ಬರ್ತೀವಿ ಅಂದ್ರು ಬಂದಿದ್ದಾರಾ? ಯಾರು ಬಂದಿಲ್ಲ. ಯಾವುದೇ ಪ್ರಮುಖ ನಾಯಕರಿಲ್ಲದೇ ಚಿತ್ತಾಪುರದಲ್ಲಿ ಪಥಸಂಚನ ನಡೆಯುತ್ತಿದೆ ಎಂದರು. ಆರ್…
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರನ್ನು ತೆಗೆದಿದ್ದಾರೆ. ಬಿಹಾರದಲ್ಲಿ ಮತದಾರರ ಪಟ್ಟಿಗೆ 18 ಲಕ್ಷ ಜನರನ್ನು ಸೇರಿಸಿದ್ದರು. ವಿಧಾನಸಭಾ ಚುನಾವಣೆಗೂ ಮೊದಲು 1 ಕೋಟಿ ಜನರಿಗೆ ಹಣ ನೀಡಿದ್ದಾರೆ. ಒಂದು ಕೋಟಿ ಜನರ ಖಾತೆಗೆ ತಲಾ 10,000 ಹಣ ಹಾಕಿದ್ದರು. ಕೇಂದ್ರ ಸರ್ಕಾರದ ಜೊತೆಗೆ ಚುನಾವಣಾ ಆಯೋಗ ಶಾಮೀಲಾಗಿದೆ ಎಂಬುದಾಗಿ ಆರೋಪಿಸಿದರು. ಕೇಂದ್ರ ಚುನಾವಣಾ ಆಯೋಗವೇ ಬಿಜೆಪಿ ಜೊತೆಗೆ ಸೇರಿಕೊಂಡಾಗ ಕಳ್ಳನನ್ನು ಹಿಡಿಯುವವರು ಯಾರು ಎಂಬುದಾಗಿ ಪ್ರಶ್ನಿಸಿದಂತ ಸಚಿವ ರಾಮಲಿಂಗಾರೆಡ್ಡಿ, ಚುನಾವಣಾ ಆಯೋಗದ ನಡೆಯ ಬಗ್ಗೆ ಬೇಸರ ವ್ಯಕ್ತ ಪಡಿಸಿದರು. https://kannadanewsnow.com/kannada/if-siddaramaiah-is-removed-from-the-cm-post-the-revolution-will-be-fixed-vatal-nagaraj/ https://kannadanewsnow.com/kannada/follow-these-steps-to-grow-mushrooms-in-a-bucket-at-home/
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಅದು ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದಾಗ ಮಾತ್ರ ಫಿಕ್ಸ್ ಎಂಬುದಾಗಿ ಸಿಎಂ ಪರವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರ ಚುನಾವಣೆಗೂ ಸಿಎಂ ಸಿದ್ಧರಾಮಯ್ಯನವರೇ ಇರಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯನಷ್ಟು ಸಮರ್ಥ ವ್ಯಕ್ತಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಇಲ್ಲ ಎಂಬುದಾಗಿ ತಿಳಿಸಿದರು. ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಸಿದ್ಧರಾಮಯ್ಯ ಬಹಳ ಬುದ್ಧಿವಂತ ವ್ಯಕ್ತಿಯಾಗಿದ್ದಾರೆ. ಸಿಎಂ ಸ್ಥಾನದಿಂದ ಸಿದ್ಧರಾಮಯ್ಯನವರನ್ನು ತೆಗೆದರೇ ಮಾತ್ರ ಕ್ರಾಂತಿಯಾಗಲಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಭದ್ರವಾಗಿ ಇರುತ್ತಾರೆ ಎಂದರು. https://kannadanewsnow.com/kannada/rss-procession-begins-in-chittapur-kalaburagi/ https://kannadanewsnow.com/kannada/follow-these-steps-to-grow-mushrooms-in-a-bucket-at-home/
ಕಲಬುರ್ಗಿ: 300 ಗಣವೇಷಧಾರಿಗಳು, 50 ಜನ ಬ್ಯಾಂಡ್ ವಾದಕರು ಸೇರಿದಂತೆ 350 ಮಂದಿಯಿಂದ ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ಆರಂಭಗೊಂಡಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚನಕ್ಕೆ ಜಿಲ್ಲಾಡಳಿತ ಆರಂಭದಲ್ಲಿ ಅವಕಾಶ ನೀಡಿರಲಿಲ್ಲ. ಹೀಗಾಗಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಕೋರ್ಟ್ ಅರ್ಜಿ ವಿಚಾರಣೆ ನಡೆಸಿ, ಸೂಕ್ತ ನಿರ್ಧಾರ ಕೈಗೊಂಡು, ಪಥಸಂಚಲನಕ್ಕೆ ಅನುಮತಿಸುವಂತೆ ನಿರ್ದೇಶಿಸಿತ್ತು. ಈ ಹಿನ್ನಲೆಯಲ್ಲಿ ಚಿತ್ತಾಪುರ ತಾಲ್ಲೂಕು ಆಡಳಿತವು ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿಸಿ ಆದೇಶಿಸಿತ್ತು. ಜೊತೆ ಜೊತೆಗೆ 300 ಕಾರ್ಯಕರ್ತರು, 50 ಬ್ಯಾಂಡ್ ನವರು ಸೇರಿದಂತೆ 350 ಜನರಿಗೆ ಮಾತ್ರವೇ ಅವಕಾಶ ನೀಡುವಂತ ಷರತ್ತು ವಿಧಿಸಲಾಗಿತ್ತು. ಈ ಷರತ್ತಿನಂತೆ ಕಲಬುರ್ಗಿಯಲ್ಲಿ 300 ಗಣಧಾರಿಗಳು, 50 ಬ್ಯಾಂಡ್ ನವರೊಂದಿಗೆ ಆರ್ ಎಸ್ ಎಸ್ ಪಥಸಂಚಲನವು ಚಿತ್ತಾಪುರದಲ್ಲಿ ನಡೆಯುತ್ತಿದೆ. https://kannadanewsnow.com/kannada/shocking-under-the-pretext-of-petting-a-dog-a-pervert-sexually-harassed-a-young-woman-by-touching-her-body/ https://kannadanewsnow.com/kannada/follow-this-method-and-grow-cardamom/














