Author: kannadanewsnow09

ಶಿವಮೊಗ್ಗ: ನಿನ್ನೆಯ ಬುಧವಾರದಂದು ಐಸಿಎಸ್ಸಿ 10ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿತ್ತು. ಈ ಪರೀಕ್ಷೆಯಲ್ಲಿ ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಯ ನಿಸರ್ಗ.ಬಿ ಶೇ.96.8ರಷ್ಟು ಅಂಕಗವನ್ನು ಗಳಿಸಿ, ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ರಾಧಾಕೃಷ್ಣ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಐಸಿಎಸ್ಸಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದಾರೆ. ನಿನ್ನೆ ಪ್ರಕಟವಾದಂತ ಐಸಿಎಸ್ಸಿ 10ನೇ ತರಗತಿ ಪರೀಕ್ಷೆಯ ಫಲಿತಾಂಶದಲ್ಲಿ ನಿಸರ್ಗ.ಬಿ ಶೇ.96.8ರಷ್ಟು ಅಂಕ ಗಳಿಸಿದ್ದಾರೆ. ಅಂದಹಾಗೇ ನಿಸರ್ಗ.ಬಿ ಅವರು ಸಾಗರದ ಮೆಸ್ಕಾಂ ವಿಭಾಗದಲ್ಲ ಆಡಳಿತ ಮತ್ತು ಸಿಬ್ಬಂದಿ ಶಾಖೆಯಲ್ಲಿ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವಂತ ಭಾಸ್ಕರ್.ಆರ್ ಮತ್ತು ಸವಿತಾ ದಂಪತಿಗಳ ಪುತ್ರಿಯಾಗಿದ್ದಾರೆ. ನಿಸರ್ಗ ಅವರು ಐಸಿಎಸ್ಸಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.96.8 ಅಂಕಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಕ್ಕೆ, ರಾಧಾಕೃಷ್ಣ ಶಾಲೆಯ ಪ್ರಾಂಶುಪಾಲಕರು, ಶಿಕ್ಷಕ ವೃಂದ, ತಂದೆ ಭಾಸ್ಕರ್.ರ್ ಅವರ ಮೆಸ್ಕಾಂ ಸಿಬ್ಬಂದಿಗಳು ಶ್ಲಾಘಿಸಿ, ಅಭಿನಂದನೆ ತಿಳಿಸಿದ್ದಾರೆ. https://kannadanewsnow.com/kannada/firing-case-police-issues-notice-to-muthappa-rais-son-ricky-to-appear-before-it/ https://kannadanewsnow.com/kannada/another-feather-in-karnatakas-glory-third-in-the-country-in-financial-management-development-and-governance/

Read More

ರಾಮನಗರ: ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದಂತ ಪ್ರಕರಣ ವರದಿಯಾಗಿತ್ತು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಡದಿ ಠಾಣೆಯ ಪೊಲೀಸರು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಎರಡನೇ ಪತ್ನಿಗೂ ಪೊಲೀಸರು ನೋಟಿಸ್ ನೀಡಿದ್ದರು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಫೈರಿಂಗ್ ಪ್ರಕರಣದಲ್ಲಿ ಮೇ.7ರ ಬುಧವಾರದಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಡದಿ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಮೂಲಕ ರಿಕ್ಕಿ ರೈ ಹೇಳಿಕೆ ದಾಖಲಿಸೋದಕ್ಕೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ. ಅಂದಹಾಗೇ ಗುಂಡಿನ ದಾಳಿ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕೈ ಹಾಗೂ ಮೂಗಿನ ಭಾಗಕ್ಕೆ ಗಂಭೀರವಾದಂತ ಗಾಯವಾಗಿತ್ತು. ಆ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಈ ಫೈರಿಂಗ್ ಪ್ರಕರಣಕ್ಕೆ ಆಸ್ತಿವಿವಾದವೇ ಕಾರಣ. ನನ್ನ ಚಿಕ್ಕಮ್ಮನೇ ಇದಕ್ಕೆಲ್ಲ ಹೊಣೆ ಎಂಬುದಾಗಿ ರಿಕ್ಕಿ…

Read More

ದೈನಂದಿನ ತಪ್ಪದೆ ಹೇಳಬೇಕಾದ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಸಾಧನೆಯ ಸರಮಾಲೆ ಮುಂದುವರೆದಿದೆ. ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಎನ್ನುವಂತೆ ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕಕಕ್ಕೆ ಮೂರನೇ ಸ್ಥಾನ ದೊರೆತಿದೆ. ರಾಜ್ಯ ಸರ್ಕಾರದ ದಕ್ಷ ಮತ್ತು ದೂರದೃಷ್ಟಿಯ ಆಡಳಿತದಿಂದಾಗಿ ಕರ್ನಾಟಕದ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ರಾಜ್ಯಗಳ ಅಭಿವೃದ್ಧಿ ಸಾಮರ್ಥ್ಯ ಆಧಾರದ ಮೇಲೆ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿಯಾದ ಕೇರ್‌ಎಡ್ಜ್‌ ರೇಟಿಂಗ್ಸ್‌ ಸಿದ್ಧಪಡಿಸಿರುವ ಶ್ರೇಯಾಂಕ ಪಟ್ಟಿಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನ ಪಡೆದುಕೊಂಡಿದೆ. ಹಣಕಾಸು ನಿರ್ವಹಣೆ, ಹಣಕಾಸು ಅಭಿವೃದ್ಧಿ, ಆಡಳಿತ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ತೋರಿದೆ. https://twitter.com/KarnatakaVarthe/status/1917508095447818597 https://kannadanewsnow.com/kannada/no-war-no-one-will-be-saved-from-it-ramya/ https://kannadanewsnow.com/kannada/pahalgam-terror-attack-sc-refuses-to-entertain-plea-seeking-judicial-probe/

Read More

ಬೆಂಗಳೂರು: ಯುದ್ಧ ಬೇಡ, ಯುದ್ಧದಿಂದ ಯಾರೂ ಉದ್ದಾರ ಆಗಿಲ್ಲ. ಯುದ್ಧ ಮಾಡುವುದರಿಂದ ನಮ್ಮ ಸೈನಿಕರೇ ಸಾಯೋದು ಎಂಬುದಾಗಿ ಪಹಲ್ಗಾಮ್ ಉಗ್ರರ ದಾಳಿಯ ಬಗ್ಗೆ ಸ್ಯಾಂಡಲ್ ವುಡ್ ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಂತ ಉಗ್ರರ ದಾಳಿಗೆ ಭದ್ರತಾ ವೈಫಲ್ಯವೇ ಕಾರಣ. ಉಗ್ರರು ಪಹಲ್ಗಾಮ್ ಗೆ ಹೇಗೆ ಬಂದ್ರು? ಹೀಗೆಲ್ಲಾ ಆಗಿದ್ದರ ಹಿಂದಿನ ನ್ಯೂನ್ಯತೆ ಏನು ಅನ್ನೋದನ್ನು ತಿಳಿದುಕೊಳ್ಳಬೇಕು ಎಂದರು. ನಾನು ಈ ಹಿಂದೆ ಉಪೇಂದ್ರ ಜೊತೆಗಿನ ಒಂದು ಸಿನಿಮಾ ಸಂದರ್ಭದಲ್ಲಿ ಕಾಶ್ಮೀರ ಹೋಗಿ ಬಂದಿದ್ದೇನೆ. ಆ ಸಂದರ್ಭದಲ್ಲಿ ನಮ್ಮ ಶೂಟಿಂಗ್ ಗೆ ಕಾಶ್ಮೀರದಲ್ಲಿ ಪುಲ್ ಸೆಕ್ಯೂರಿಟಿ ನೀಡಿದ್ದರು ಎಂದು ಹೇಳಿದರು. ಪಹಲ್ಗಾಮ್ ದಾಳಿಯ ಪ್ರತೀಕವಾಗಿ ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕೇ ಎನ್ನುವ ಪ್ರಶ್ನೆಗೆ ಉತ್ತರಿಸಿದಂತ ಅವರು, ನಾನು ಯುದ್ಧ ಮಾಡುವುದನ್ನು ಇಷ್ಟ ಪಡಲ್ಲ. ಯುದ್ಧ ಮಾಡೋದರಿಂದ ಯಾರೂ ಉದ್ದಾರ ಆಗಲ್ಲ. ಎಲ್ಲದಕ್ಕೂ ಯುದ್ಧವೇ ಉತ್ತರವಲ್ಲ. ನಮ್ಮ ಸೈನಿಕರೇ ಸಾಯೋದು. ನಾವು ನಾಯಕನ್ನು ಎಲೆಕ್ಟ್…

Read More

ಪಾಕಿಸ್ತಾನ: ಭಾರತದಿಂದ ವಾಪಸ್ ಕರೆಸಿಕೊಳ್ಳುತ್ತಿರುವ ತನ್ನ ನಾಗರಿಕರ ವಾಪಸಾತಿಯನ್ನು ಸ್ವೀಕರಿಸಲು ಪಾಕಿಸ್ತಾನ ನಿರಾಕರಿಸಿದ್ದರಿಂದ ಅಟ್ಟಾರಿ-ವಾಘಾ ಗಡಿಯಲ್ಲಿ ಪ್ರಮುಖ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಇಂದು ಬೆಳಿಗ್ಗೆ 8:00 ಗಂಟೆಯಿಂದ ತನ್ನ ಸ್ವೀಕರಿಸುವ ಕೌಂಟರ್‌ಗಳನ್ನು ಮುಚ್ಚಿದೆ ಎಂದು ಭಾರತೀಯ ವಲಸೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದರಿಂದಾಗಿ ಡಜನ್ಗಟ್ಟಲೆ ಪಾಕಿಸ್ತಾನಿ ಪ್ರಜೆಗಳು ಗಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಹಿರಿಯ ವ್ಯಕ್ತಿಗಳು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಪಾಕಿಸ್ತಾನಿ ನಾಗರಿಕರು ಈಗ ಯಾವುದೇ ಆಶ್ರಯ, ಆಹಾರ ಅಥವಾ ಅವರ ಸ್ಥಿತಿಯ ಬಗ್ಗೆ ಸ್ಪಷ್ಟತೆ ಇಲ್ಲದೆ ಅತಂತ್ರದಲ್ಲಿ ಸಿಲುಕಿದ್ದಾರೆ ಎಂದು ಮೂಲಗಳು ಸೂಚಿಸುತ್ತವೆ. ಪಾಕಿಸ್ತಾನದ ಕಡೆಯಿಂದ ಹಠಾತ್ ಮತ್ತು ವಿವರಿಸಲಾಗದ ನಿರಾಕರಣೆಯ ಕಳವಳಗಳ ನಡುವೆ ಅಟ್ಟಾರಿ ಪೋಸ್ಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಘಟನೆಯು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು, ಹಲವರು ಇದನ್ನು ಪಾಕಿಸ್ತಾನಕ್ಕೆ ಮುಜುಗರ ಎಂದು ಕರೆದಿದ್ದಾರೆ. ಪಾಕಿಸ್ತಾನದ ನಿಲುವಿಗೆ ವಿರುದ್ಧವಾಗಿ, ಭಾರತ ಸರ್ಕಾರವು ಮುಂದಿನ ಸೂಚನೆ ಬರುವವರೆಗೆ ಪಾಕಿಸ್ತಾನಿ ನಾಗರಿಕರು ಅಟ್ಟಾರಿ-ವಾಘಾ ಗಡಿಯ ಮೂಲಕ ಮನೆಗೆ ಮರಳಲು ಅವಕಾಶ…

Read More

ಅಸ್ಸಾಂ: ನಮ್ಮ ಹೋರಾಟ ಮುಗಿದಿಲ್ಲ. ಒಬ್ಬನೇ ಒಬ್ಬ ಭಯೋತ್ಪಾದಕನನ್ನು ದೇಶದಲ್ಲಿ ಬಿಡುವುದಿಲ್ಲ. ಹುಡುಕಿ ಹುಡುಕಿ ಉಗ್ರರನ್ನು ಮಟ್ಟ ಹಾಕುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಬಹುದೊಡ್ಡ ಸಂದೇಶವನ್ನು ನೀಡಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು “ಯುದ್ಧವನ್ನು ಗೆದ್ದಿದ್ದಾರೆ” ಎಂದು ಭಾವಿಸಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದರು. ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ಹೋರಾಟ ಇನ್ನೂ ಮುಗಿದಿಲ್ಲ. ನಮ್ಮ 27 ಜನರನ್ನು ಕೊಂದ ನಂತರ ಅವರು ಯುದ್ಧವನ್ನು ಗೆದ್ದಿದ್ದಾರೆ ಎಂದು ಅವರು (ಭಯೋತ್ಪಾದಕರು) ಭಾವಿಸಬಾರದು. ನಾವು ಉಗ್ರರನ್ನು ಹುಡುಕಿ ಹುಡುಕಿ ಹೊಡೆದುರುಳಿಸುವುದಾಗಿ ಅವರು ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು. ಪಹಲ್ಗಾಮ್‌ನಲ್ಲಿ ನಾಗರಿಕರನ್ನು ಕೊಂದ ಪ್ರತಿಯೊಬ್ಬ ಭಯೋತ್ಪಾದಕನನ್ನು ಹುಡುಕಿ ಶಿಕ್ಷಿಸಲಾಗುವುದು ಎಂದು ಶಾ ಹೇಳಿದರು.  ನರೇಂದ್ರ ಮೋದಿ ಸರ್ಕಾರ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುತ್ತದೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತದೆ ಎಂದು ಹೇಳಿದರು. https://twitter.com/AmitShah/status/1917910515398988034 ಕಳೆದ ವಾರ, ಬಿಹಾರದ ಮಧುಬನಿಯಲ್ಲಿ ನಡೆದ…

Read More

ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ ,  ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ…

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. “ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ” ಎಂದು ಅವರು ಹೇಳಿದರು. ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು…

Read More

ಬೆಂಗಳೂರು: ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ಚಲಿಸುವ ಮಾಲ್ಗುಡಿ ಎಕ್ಸ್ ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಪರಿಷ್ಕೃತ ಸಮಯವು ಮೇ 5, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ರೈಲು ಸಂಖ್ಯೆ 20623 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮಾಲ್ಗುಡಿ ಡೈಲಿ ಎಕ್ಸ್ ಪ್ರೆಸ್ ಇನ್ನು ಮುಂದೆ ಅಶೋಕಪುರಂನಿಂದ ಬೆಳಿಗ್ಗೆ 08.30ರ ಬದಲು 10 ನಿಮಿಷ ಮುಂಚಿತವಾಗಿ, ಅಂದರೆ 08.20ಕ್ಕೆ ಹೊರಡಲಿದೆ. ಈ ರೈಲು ಮೈಸೂರು ಜಂಕ್ಷನ್ಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ 08.30ಕ್ಕೆ ಆಗಮಿಸಿ, 08.35ಕ್ಕೆ ನಿರ್ಗಮಿಸಲಿದೆ. ನಂತರ, ಈ ರೈಲು ಪಾಂಡವಪುರಕ್ಕೆ 08.54ಕ್ಕೆ ಆಗಮಿಸಿ 08.55ಕ್ಕೆ, ಮಂಡ್ಯಕ್ಕೆ 09.11ಕ್ಕೆ ಆಗಮಿಸಿ 09.12ಕ್ಕೆ, ಮದ್ದೂರಿಗೆ 09.26ಕ್ಕೆ ಆಗಮಿಸಿ 09.27ಕ್ಕೆ, ಚನ್ನಪಟ್ಟಣಕ್ಕೆ 09.42ಕ್ಕೆ ಆಗಮಿಸಿ 09.43ಕ್ಕೆ, ರಾಮನಗರಂ ನಿಲ್ದಾಣಕ್ಕೆ 09.52ಕ್ಕೆ ಆಗಮಿಸಿ 09.53ಕ್ಕೆ, ಬಿಡದಿಗೆ 10.05ಕ್ಕೆ ಆಗಮಿಸಿ 10.06ಕ್ಕೆ ಮತ್ತು ಕೆಂಗೇರಿಗೆ 10.22ಕ್ಕೆ ಆಗಮಿಸಿ 10.23ಕ್ಕೆ ನಿರ್ಗಮಿಸಲಿದೆ. ಅಂತಿಮವಾಗಿ, ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣವನ್ನು ಬೆಳಿಗ್ಗೆ…

Read More