Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸೆಪ್ಟೆಂಬರ್.22ರ ನಾಳೆಯಿಂದ ವಿವಾದದ ನಡುವೆಯೂ ಸಾಮಾಜಿ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ವಿವಾದಕ್ಕೆ ಕಾರಣವಾಗಿದ್ದಂತ ಕ್ರಿಶ್ಚಿಯನ್ ಗೆ ಮತಾಂತರ ಆದ 33 ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆ ನಡೆಸುವ ನಿರ್ಧಾರದಿಂದ ಕೈ ಬಿಟ್ಟಿದೆ. ಹೀಗಾಗಿ ಮತಾಂತರ ಆಗಿದ್ದರೇ ಆ ಧರ್ಮವೇ ಫಿಕ್ಸ್ ಆದಂತೆ ಆಗಿದೆ. ಇಂದು ಹಿಂದುಳಿದ ವರ್ಗಗಳ ಆಯೋಗವು ಈ ಮಾಹಿತಿ ನೀಡಿದ್ದು, ಗೊಂದಲಕ್ಕೆ ಕಾರಣವಾದಂತ 33 ಜಾತಿಗಳನ್ನು ಸಾರ್ವಜನಿಕರ ಸಲಹೆಯ ಮೇರೆಗೆ ಕೈಬಿಡಲಾಗಿದೆ. ನಾಳೆಯಿಂದ ಆರಂಭಗೊಳ್ಳುವಂತ ಜಾತಿ ಗಣತಿ ಸಮೀಕ್ಷೆಯ ಪಟ್ಟಿಯಲ್ಲಿ ಆ ಜಾತಿಗಳು ಇರೋದಿಲ್ಲ. ಇಚ್ಚೆ ಇರೋರು ಅವುಗಳನ್ನು ಸ್ವಇಚ್ಚೆಯಿಂದ ಬರೆಸಬಹುದು ಎಂದಿದೆ. ಇನ್ನೂ ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯಿಸಲಿದೆ. ಮೂಲ ಜಾತಿ ಅವರಿಗೆ ಅನ್ವಯಿಸೋದಿಲ್ಲ. ಸಮೀಕ್ಷೆಯ ನಂತ್ರ ಯಾವ ಜಾತಿ ಯಾವ ಕೆಟಗರಿಯಲ್ಲಿ ಬರುತ್ತದೆ ಎಂಬುದಾಗಿ ತಜ್ಞರ ತಂಡವು ನಿರ್ಧರಿಸಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/a-shocking-act-in-the-state-a-sinful-mother-who-threw-her-newborn-girl-into-a-drain-to-die/ https://kannadanewsnow.com/kannada/a-masked-woman-who-placed-slippers-on-the-ganapati-idol-in-hassan-has-been-arrested/
ಅಮಾವಾಸ್ಯೆಯಂದು ಲಕ್ಷ್ಮಿ ದೇವಿಯ ಮುಂದೆ ಈ 1 ಮಾತು ಹೇಳಿ. ನಿಮ್ಮ ಮನೆ ಮತ್ತು ಮನೆಯ ಛಾವಣಿಗೆ ಕೋಟಿಗಟ್ಟಲೆ ಹಣ ಸುರಿಯುತ್ತದೆ. ನಗದು ಹರಿವನ್ನು ಹೆಚ್ಚಿಸಲು ಮತ್ತು ಸಾಲವನ್ನು ಕಡಿಮೆ ಮಾಡಲು ಹಲವು ಪರಿಹಾರಗಳಿವೆ. ನಾವು ಹಲವು ಪರಿಹಾರಗಳನ್ನು ಪ್ರಯತ್ನಿಸಿದ್ದೇವೆ. ನಾನು ಎಷ್ಟೇ ಪ್ರಯತ್ನಿಸಿದರೂ ನನ್ನ ಸಾಲ ಮಾಯವಾಗಿಲ್ಲ. ನನ್ನ ಆದಾಯವನ್ನು ಹೆಚ್ಚಿಸಿದ ಇತಿಹಾಸ ನನಗಿಲ್ಲ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ…
ಬೆಂಗಳೂರು: ಸರಳೀಕೃತ ಜಿಎಸ್ಟಿಯನ್ನು ಸ್ವಾಗತಿಸಿ ಬಿಜೆಪಿ ವತಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯು ನಾಳೆ (ಸೆ.22) ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ಸ್ವಾತಂತ್ರ್ಯ ಪಡೆದ ನಂತರ ದೇಶ ಕಂಡ ಕ್ರಾಂತಿಕಾರಿ ಆರ್ಥಿಕ ಸುಧಾರಣೆ ಇದಾಗಿದೆ. ದೀಪಾವಳಿ ಹಬ್ಬಕ್ಕೆ ಮರೆಯಲಾಗದ ಬೋನಸ್ ಎಂದು ಬಣ್ಣಿಸಲಾದ ಕ್ರಾಂತಿಕಾರಕ ಜಿ.ಎಸ್.ಟಿ ಸುಧಾರಣೆಗಳು ನಾಡಹಬ್ಬ ನವರಾತ್ರಿಯ ಮೊದಲನೇ ದಿನ ಸೆಂಪ್ಟೆಂಬರ್ 22ರಂದು ಜಾರಿಗೆ ಬರಲಿದೆ. ಇಲ್ಲಿಯವರೆಗೆ ಚಾಲ್ತಿಯಲ್ಲಿದ್ದ 5%, 12%, 18% ಮತ್ತು 28% ಎಂಬ 4 ಶ್ರೇಣಿಗಳ ತೆರಿಗೆ ನೀತಿಯನ್ನು 5% ಮತ್ತು 18% ಎಂಬ ಎರಡು ಶ್ರೇಣಿಗಳಿಗೆ ಇಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ 12% ತೆರಿಗೆ ದರದಲ್ಲಿದ್ದ 99% ಸರಕುಗಳಿಗೆ 5% ತೆರಿಗೆ ಅನ್ವಯವಾಗುತ್ತದೆ. ಅಂತೆಯೇ ಈ ಹಿಂದೆ 28% ತೆರಿಗೆ ದರದಲ್ಲಿದ್ದ 90% ಸರಕುಗಳಿಗೆ 18% ತೆರಿಗೆ ಅನ್ವಯವಾಗುತ್ತದೆ. ತೆರಿಗೆ ದರದಲ್ಲಿನ ಇಳಿಕೆ ಎಷ್ಟು ಗೊತ್ತೇ? 1%-2%…
ನವದೆಹಲಿ: “ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ ವೀರಶೈವ ಲಿಂಗಾಯತರ ಸಂಖ್ಯೆ ಕಡಿಮೆ ತೋರಿಸುವ ಸಾಧ್ಯತೆ ಇದೆ” ಎಂಬ ರಂಭಾಪುರಿ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಕೇಳಿದಾಗ, “ಕಳೆದ ಸಮೀಕ್ಷೆ ನಡೆಸಿ 10 ವರ್ಷ ಕಳೆದಿರುವ ಕಾರಣ, ಮರುಸಮೀಕ್ಷೆ ಮಾಡಲಾಗುತ್ತಿದೆ. ಈ ಬಾರಿ ಮಾಹಿತಿ ನೀಡಲು ಎಲ್ಲಾ ಸಮಾಜದವರಿಗೂ ಸಂಪೂರ್ಣ ಅವಕಾಶ ನೀಡಿದ್ದೇವೆ. ಎಲ್ಲಾ ಸಮಾಜದವರು ಈ ಸಮೀಕ್ಷೆ ವಿಚಾರದಲ್ಲಿ ಜಾಗೃತರಾಗಿ, ತಪ್ಪದೇ ಭಾಗವಹಿಸಬೇಕು” ಎಂದರು. “ಕರ್ನಾಟಕದ 7 ಕೋಟಿ ಕನ್ನಡಿಗರು, ಪ್ರಪಂಚದ ಯಾವುದೇ ದೇಶದಲ್ಲಿರುವ…
ಬಾಗಲಕೋಟೆ: ಕೂಡಲ ಸಂಗಮನದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯಂಜಯಶ್ರೀಗಳನ್ನು ಉಚ್ಚಾಟಿಸಲಾಗಿದೆ. ಈ ಬೆನ್ನಲ್ಲೇ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ನಡೆದಂತ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗವನ್ನು ಸಿಬ್ಬಂದಿಗಳು ಹಾಕಿದ್ದಾರೆ. ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ. ಇನ್ನೂ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸಿದ ಬಳಿಕ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಶ್ರೀಗಳು ಸಿಡಿ ಎಲ್ಲೆಲ್ಲಿ ಹೋಗಿವೆ ಅವೆಲ್ಲವನ್ನೂ ಹೊರ ತೆಗೆಯುವೆ. ಸ್ವಾಮೀಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಲ್ಲವನ್ನೂ ಹೊರತೆಗೆಯುವೆ. ನಮ್ಮ ಹತ್ತಿರ ಎಲ್ಲಾ ದಾಖಲೆ ಇವೆ. ಟೈಂ ಬಂದಾಗ ಹೊರಗೆ ಎಳೆಯುವೆ ಎಂಬುದಾಗಿ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಹಾಗೂ ಅಖಿಲ ಭಾರತ ಪಂಚಮಸಾಲಿ…
ಹಾಸನ: ಜಿಲ್ಲೆಯ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಹಾಕಿದ್ದು ಓರ್ವ ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮುಸುಕುಧಾರಿ ಮಹಿಳೆಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಹಾಸನದ ಬೇಲೂರಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿಹಾರವನ್ನು ಹಾಕಿದ್ದು ಹಿಂದೂಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗೆ ಮಾಡಿದ್ದು ಮುಸುಕುಧಾರಿ ಮಹಿಳೆ ಎಂಬುದಾಗಿ ತಿಳಿದು ಬಂದಿತ್ತು. ಇಂತಹ ಮಹಿಳೆಯನ್ನು ಹಾಸನದ ಗುಡ್ಡೇನಹಳ್ಳಿಯ ಲೀಲಮ್ಮ ಎಂಬುದಾಗಿ ಗುರುತಿಸಲಾಗಿದೆ. ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದಂತ ಮುಸುಕುಧಾರಿ ಮಹಿಳೆಯನ್ನು ಪಿಎಸ್ಐ ಸುರೇಶ್ ಹಾಗೂ ಶೋಭಾ ನೇತೃತ್ವದ ತಂಡವು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ. ಅಂದಹಾಗೇ ಇಂದು ಮಹಾಲಯ ಅಮವಾಸ್ಯೆ ಪ್ರಯುಕ್ತ ಬೇಲೂರಿನ ಶ್ರೀ ವಿದ್ಯಾ ಗಣಪತಿ ದೇವಸ್ಥಾನಕ್ಕೆ ಲೀಲಮ್ಮ ತೆರಳಿದ್ದರು. ಈ ವೇಳೆ ಗಣೇಶ ಮೂರ್ತಿಗೆ ಚಪ್ಪಲಿಹಾರ ಹಾಕಿ ವಿಕೃತಿ ಮೆರೆದಿದ್ದರು. https://kannadanewsnow.com/kannada/aliens-are-now-listening-to-our-words-nasa-study/ https://kannadanewsnow.com/kannada/from-tomorrow-gst-2-0-will-be-implemented-across-the-country-which-is-cheaper-here-is-the-complete-list/
ದೇವಿಯನ್ನು ನವರಾತ್ರಿಯಂದು ನವದುರ್ಗೆಯಾಗಿ ಒಂಭತ್ತು ನಾಮ ರೂಪಗಳಲ್ಲಿ ಆರಾಧಿಸುತ್ತಾರೆ. ಮೊದಲನೆಯ ದಿನದಿಂದ ಕೊನೆಯ ದಿನದವರೆಗೂ ಪಾಲಿಸುವ ಆರಾಧನೆಯ ಕ್ರಮವು ಹೀಗಿರುತ್ತದೆ. *೧. ಶೈಲಪುತ್ರಿ ಪರ್ವತರಾಜನ ಮಗಳಾದ ಶೈಲಪುತ್ರಿ ನಂದಿಯ ಮೇಲೆ ಕುಳಿತು ತ್ರಿಶೂಲ ಖಡ್ಗಗಳನ್ನು ಹಿಡಿದು ಆರಾಧಕರಿಗೆ ಸಕಲ ಮನೋರಥ ಅನುಗ್ರಹಿಸುತ್ತಾಳೆ. *೨. ಬ್ರಹ್ಮಚಾರಿಣಿ ಶಿವನನ್ನು ಒಲಿಸಲು ಪಾರ್ವತಿ ತೀವ್ರ ತಪಸ್ಸನ್ನು ಕೈಗೊಂಡಳು. ಜಪಮಾಲಾ, ಕಮಂಡಲುಧಾರಿಯಾದ ಬ್ರಹ್ಮಚಾರಿಣಿ ಸಾಧಕರಿಗೆ ಬ್ರಹ್ಮಜ್ಞಾನವನ್ನು ಕರುಣಿಸುತ್ತಾಳೆ. *೩. ಚಂದ್ರಘಂಟಾ ಶಿವನನ್ನು ವರಿಸಿದ ನಂತರ, ದುರ್ಗೆ ತಂಪಾದ ಚಂದ್ರನಂತೆ ಪ್ರಕಾಶಮಾನಳಾಗುತ್ತಾಳೆ. ದಶಾಭುಜಗಳುಳ್ಳ ಸಿಂಹವಾಹಿನಿ ಪರಮ ಶಾಂತಿ ಮತ್ತು ಕಲ್ಯಾಣಗಳನ್ನು ನೀಡುತ್ತಾಳೆ. ಸಾಧಕರ ಸಂಶಯ ನಿವಾರಣೆ, ಪಾಪವಿಮೋಚನೆ ಮತ್ತು ವಿಘ್ನ ನಿರ್ಮೂಲನೆ ಇವಳ ಪ್ರಥಮ ಕರ್ತವ್ಯಗಳು. *೪. ಕುಷ್ಮಾಂಡಾ ಆನಂದಭರಿತ ದೇವಿಯ ಮಂದಸ್ಥಿತದಿಂದ ಸೃಜನಿಸಿತು. ದಶಾಭುಜಳಾದ ಕುಷ್ಮಾಂಡಾ ರೋಗ ದುಃಖಗಳನ್ನು ನಿವಾರಿಸಿ, ಆರೋಗ್ಯ, ಬಾಗ್ಯ, ದೀರ್ಘಾಯಸ್ಸು, ಸರ್ವ ಖ್ಯಾತಿಗಳನ್ನು ಪ್ರಸಾದಿಸುತ್ತಾಳೆ. *೫. ಸ್ಕಂದಮಾತಾ ಸುಬ್ರಹ್ಮಣ್ಯನ ತಾಯಿ. ಚತುರ್ಭುಜ ಸಿಂಹವಾಹಿನಿ ಯಾದ ದೇವಿಯ ಮಡಿಲಲ್ಲಿ ಸ್ಕಂದ ವಿರಾಜಿಸುತ್ತಿದ್ದಾನೆ. ಈ ರೂಪವನ್ನು…
ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಮತ್ತು ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದ ಪ್ರಕಾರ, ಅನ್ಯಲೋಕದ ನಾಗರಿಕತೆಗಳು ಭೂಮಿಯ ಬಾಹ್ಯಾಕಾಶ ಸಂವಹನಗಳನ್ನು ಪತ್ತೆಹಚ್ಚಲು ಸಾಧ್ಯವಾಗಬಹುದು ಎಂದಿದೆ. ವಿಜ್ಞಾನಿಗಳು ಮಂಗಳ ರೋವರ್ಗಳು ಅಥವಾ ಕಕ್ಷೆಗಾಮಿಗಳಂತಹ ಬಾಹ್ಯಾಕಾಶ ನೌಕೆಗಳಿಗೆ ಆಜ್ಞೆಗಳನ್ನು ಕಳುಹಿಸಿದಾಗ, ಎಲ್ಲಾ ರೇಡಿಯೋ ಸಿಗ್ನಲ್ಗಳು ಹೀರಲ್ಪಡುವುದಿಲ್ಲ ಎಂದು ಅಧ್ಯಯನವು ಸೂಚಿಸುತ್ತದೆ. ಈ ಸಂಕೇತಗಳ ಒಂದು ಭಾಗವು ಬಾಹ್ಯಾಕಾಶದ ಮೂಲಕ ಪ್ರಯಾಣಿಸುತ್ತಲೇ ಇರುತ್ತದೆ, ಬಹುಶಃ ಶಾಶ್ವತವಾಗಿ ಎಂದಿದೆ. ಮಾನವರು ಪ್ರಧಾನವಾಗಿ ಮಂಗಳನಂತಹ ಇತರ ಗ್ರಹಗಳನ್ನು ಅಧ್ಯಯನ ಮಾಡಲು ನಾವು ಕಳುಹಿಸಿದ ಬಾಹ್ಯಾಕಾಶ ನೌಕೆ ಮತ್ತು ಶೋಧಕಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ” ಎಂದು ಈ ಸಂಶೋಧನೆಯನ್ನು ಬೆಂಬಲಿಸುವ ನಾಸಾ ಅನುದಾನದ ವಿಜ್ಞಾನ ಪ್ರಧಾನ ತನಿಖಾಧಿಕಾರಿ ಮತ್ತು ಪ್ರಬಂಧದ ಮೊದಲ ಲೇಖಕ ಪೆನ್ ಸ್ಟೇಟ್ ಎಬರ್ಲಿ ಕಾಲೇಜ್ ಆಫ್ ಸೈನ್ಸ್ನಲ್ಲಿ ಖಗೋಳಶಾಸ್ತ್ರ ಮತ್ತು ಖಗೋಳ ಭೌತಶಾಸ್ತ್ರದ ಪದವಿ ವಿದ್ಯಾರ್ಥಿ ಪಿಂಚೆನ್ ಫ್ಯಾನ್ ಹೇಳಿದರು. ಆದರೆ ಮಂಗಳನಂತಹ ಗ್ರಹವು ಸಂಪೂರ್ಣ ಪ್ರಸರಣವನ್ನು ನಿರ್ಬಂಧಿಸುವುದಿಲ್ಲ, ಆದ್ದರಿಂದ ಈ ಅಂತರಗ್ರಹ…
ನವದೆಹಲಿ: ಜಿಎಸ್ಟಿ 2.0 ಜಾರಿಗೆ ಬರುವ ಒಂದು ದಿನ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಯ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ ಎಂದು ಭಾನುವಾರ ಪ್ರತಿಪಾದಿಸಿದರು, ಜನರು ‘ಸ್ವದೇಶಿ’ ಉತ್ಪನ್ನಗಳನ್ನು ಉತ್ತೇಜಿಸುವಂತೆ ಒತ್ತಾಯಿಸಿದರು. ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಪ್ರಧಾನಿಯವರು ತಮ್ಮ ‘ಸ್ವದೇಶಿ’ ಅಭಿಯಾನದಲ್ಲಿ ಭಾಗವಹಿಸಲು ಮತ್ತು ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರಗಳನ್ನು ವಿನಂತಿಸಿದರು. “ನವರಾತ್ರಿಯ ಮೊದಲ ದಿನದಂದು, ದೇಶವು ಆತ್ಮನಿರ್ಭರ ಭಾರತಕ್ಕಾಗಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆ ಇಡಲಿದೆ. ನಾಳೆ ಸೂರ್ಯೋದಯದೊಂದಿಗೆ, ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳು ಜಾರಿಗೆ ಬರಲಿವೆ. ‘ಜಿಎಸ್ಟಿ ಬಚಾತ್ ಉತ್ಸವ (ಉಳಿತಾಯ ಹಬ್ಬ)’ ನಾಳೆ ಪ್ರಾರಂಭವಾಗುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು. ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಇವುಗಳ ಅಡಿಯಲ್ಲಿ, ಎಲೆಕ್ಟ್ರಾನಿಕ್ಸ್, ಆಹಾರ ಮತ್ತು ಆಟೋಮೊಬೈಲ್ಗಳು ಸೇರಿದಂತೆ ಹಲವಾರು ವಸ್ತುಗಳು ಮತ್ತು ಉತ್ಪನ್ನಗಳ ಬೆಲೆಗಳು ಕಡಿಮೆಯಾಗಲಿವೆ. ಹಾಗಾಗಿ, GST 2.0…
ಶಿವಮೊಗ್ಗ: ಮದ್ಯ ವೆಸನದಿಂದ ಸಮಾಜದಲ್ಲಿ ಅಗೌರವವೇ ವಿನಹ ಯಾರೂ ಗೌರವ ಕೊಡುವುದಿಲ್ಲ. ಮದ್ಯ ಸೇವನೆಯನ್ನು ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕು ಕಟ್ಟಿಕೊಳ್ಳಿ ಎಂಬುದಾಗಿ ಶಿರಸಿ ವಿಭಾಗದ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರು, ಹಾಲಿ ಸದಸ್ಯರು ಹಾಗೂ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಹಕ್ರೆ ಮದ್ಯವರ್ಜನ ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ 1981ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮದ್ಯ ವೆಸನದಿಂದ ಕುಟುಂಬಗಳು ಬೀಗಿದೆ ಬರುತ್ತಿವೆ. ನೆಮ್ಮದಿ ಹಾಳಾಗುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ.ಹೇಮಾಪತಿ ವಿ ಹೆಗ್ಗಡೆ ಮದ್ಯವರ್ಜನ ಶಿಬಿರ ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಕುಡಿತದ ಚಟವನ್ನು ಬಿಟ್ಟು ಸಮಾಜದಲ್ಲಿ ತಲೆ ಎತ್ತುವಂತೆ ಬದುಕಬೇಕು. ಉತ್ತಮ ಜೀವನವನ್ನು ಇಲ್ಲಿಂದ ಹೊರಗೆ ತೆರಳಿದ ಮೇಲೆ ಕಟ್ಟಿಕೊಳ್ಳಬೇಕು. ಇಂದು ನೀವೆಲ್ಲರೂ ಕುಡಿತ…







