Author: kannadanewsnow09

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ…

Read More

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ ನಿರ್ಮಾಣ ಹಾಗೂ ರಕ್ಷಣಾ ಭೂಮಿ ತೋಟಗಾರಿಕೆ ಕೆಲಸ (ಪ್ರಥಮ ಹಂತ – 5.34 ಏಕರೆ) ಒಟ್ಟು 3 ಕಿ.ಮೀ ಉದ್ದದಲ್ಲಿ ಪ್ರಾರಂಭಿಸಲಾಗಿದೆ. 2015ರ ಮಾಸ್ಟರ್ ಪ್ಲಾನ್‌ನಲ್ಲಿ, ಈಜಿಪುರ ಸಿಗ್ನಲ್ (ಶ್ರೀನಿವಾಗಿಲು) ಯಿಂದ ಸರಜಾಪುರ ಮೈನ್ ರಸ್ತೆ (ಓಆರ್‌ಆರ್) ವರೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿತ್ತು. ಇದು ಪೂರ್ವ ಬೆಂಗಳೂರು ಮತ್ತು ಓಆರ್‌ಆರ್, ಹೆಚ್‌ಎಸ್‌ಆರ್ ನಡುವೆ ಸಂಪರ್ಕ ಕಲ್ಪಿಸಲು ಉದ್ದೇಶಿತವಾಗಿತ್ತು. ಆದರೆ…

Read More

ಬೆಂಗಳೂರು: ಇಂದು ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಿಂದ ಒಟ್ಟು 280 ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ), ಮುಖ್ಯ ಭದ್ರತಾ ಮತ್ತು ಜಾಗ್ರತಾಧಿಕಾರಿ, ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ ) ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆಂಪೇಗೌಡ ಬಸ್ ನಿಲ್ದಾಣ, ವಿಭಾಗೀಯ ನಿಯಂತ್ರಣಾಧಿಕಾರಿ‌ ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಚಾಲಕ ನಿರ್ವಾಹಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ವಿತರಿಸುವ ಮೂಲಕ ಶುಭ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಡುವೆಯೂ ಶಿಕ್ಷಕರು ಜಾತಿಗಣತಿ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಾಗಾದ್ರೇ ಈವರೆಗೆ ಎಷ್ಟು ಮನೆಗಳ ಸರ್ವೆ ಮಾಡಲಾಗಿದೆ ಎಂಬ ಬಗ್ಗೆ ಅಂಕಿ ಅಂಶ ಮುಂದಿದೆ ಓದಿ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ ಏರಿಯೆಲ್ಲ ಶಿಕ್ಷಕರು ಸಮೀಕ್ಷೆ ನಡೆಸುತ್ತಿರುವುದು ವರದಿಯಾಗಿದೆ. ಸರ್ವರ್ ಸಮಸ್ಯೆ ಕಾರಣಕ್ಕಾಗಿ ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಿಕೆ ಮಾಡುವಂತೆಯೂ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಎಲ್ಲದರ ನಡುವೆ ಜಾತಿಗಣತಿ ಕಾರ್ಯ ನಡೆಸಲಾಗುತ್ತಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಹಿತಿಯಂತೆ ಈವರೆಗೆ 1,78,186 ಮನೆಗಳ ಸರ್ವೆಯನ್ನು ಸಿಬ್ಬಂದಿಗಳು ನಡೆಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/two-gram-panchayat-members-caught-in-lokayukta-trap-for-accepting-bribe-in-davangere/ https://kannadanewsnow.com/kannada/important-information-from-bescom-for-griha-jyoti-beneficiaries/

Read More

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿಯನ್ನು ನಡೆಸಿ ಇಬ್ಬರು ಗ್ರಾಮ ಪಂಚಾಯ್ತಿ ಸದಸ್ಯರನ್ನು ರೆಡ್ ಹ್ಯಾಂಡ್ ಹಿಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಈ ಇಬ್ಬರು ಗುತ್ತಿಗೆದಾರ ಜಾವೇದ್ ನಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುತ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚ ಪಡೆಯಲು ಸಹಾಯ ಮಾಡ್ತಿದ್ದ ಮಧ್ಯವರ್ತಿ ಮಂಜುನಾಥ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ ಎಸ್ ಕೌಲಾಪುರ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ಚನ್ನಗಿರಿಯ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/bjp-has-not-even-put-up-a-small-pillar-or-built-a-flyover-in-bengaluru-dks/ https://kannadanewsnow.com/kannada/important-information-from-bescom-for-griha-jyoti-beneficiaries/

Read More

ಬೆಂಗಳೂರು: “ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ರಸ್ತೆಗುಂಡಿ ಮುಚ್ಚಲು ಆಗದವರು ಟನಲ್ ರಸ್ತೆ ಮಾಡಲು ಹೊರಟಿದ್ದಾರೆ ಎನ್ನುವ ಆರ್. ಅಶೋಕ್ ಅವರ ಟೀಕೆಯ ಬಗ್ಗೆ ಕೇಳಿದಾಗ, “ಅವರು ಕೇಂದ್ರದಿಂದ ಬೆಂಗಳೂರಿಗೆ ಒಂದೇ ಒಂದು ರೂಪಾಯಿ ಅನುದಾನ ಕೊಡಿಸಿದ್ದಾರೆಯೇ? ಬಿಜೆಪಿಯವರು ಏನೇನೂ ಮಾಡಿಲ್ಲ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿರುಗೇಟು ನೀಡಿದರು. “ಎಲ್ಲೆಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆಯೋ ಅಲ್ಲಿಗೆ ಆಯಾಯ ಕ್ಷೇತ್ರದ ಶಾಸಕರು ತೆರಳಿ ಪರಿಶೀಲನೆ ನಡೆಸಲಿ. ಅವರುಗಳೇ ಪರಿಶೀಲನೆ ನಡೆಸಿ ಗುಂಡಿಗಳನ್ನು ಮುಚ್ಚಿಸಿಕೊಳ್ಳಲಿ. ಅಧಿಕಾರಿಗಳು ಅವರಿಗೂ ಗೌರವ ನೀಡುತ್ತಾರೆ. ನಾವು…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ನಾಳೆಯ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ. https://kannadanewsnow.com/kannada/important-information-from-bescom-for-griha-jyoti-beneficiaries/ https://kannadanewsnow.com/kannada/backward-class-leaders-decide-to-support-cm-siddaramaiah-for-caste-census-survey/

Read More

ಬೆಂಗಳೂರು: ಸಂವಿಧಾನ ಬದ್ಧವಾಗಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಂಬಲವಾಗಿ ನಿಲ್ಲಲು ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಚಿವರು, ವಿಧಾನಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಬಹುಮತದ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು. ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮುಖಂಡರ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಸ್ತುತವಾಗಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಯಲ್ಲಿ ಹಿಂದುಳಿದ ವರ್ಗದ ಸಮಸ್ಯೆ ಜನರು ಸಕ್ರಿಯವಾಗಿ ಭಾಗವಹಿಸಬೇಕು ಹಾಗೂ ಅದನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲಾಯಿತು. ಸಮೀಕ್ಷೆ ಸಂವಿಧಾನ ಬದ್ಧವಾದ ಹಕ್ಕು ಹಿಂದುಳಿದ ಜಾತಿಗಳು ಆರ್ಥಿಕವಾಗಿ ರಾಜಕೀಯ ವಾಗಿ ಶೈಕ್ಷಣಿಕ…

Read More

ತುಮಕೂರು : ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ‘ಕುಸುಮ್‌ ಸಿ’ಯೋಜನೆಗೆ ಭೂಮಿ ಗುತ್ತಿಗೆ ನೀಡುವ ಮೂಲಕ ರೈತರು ಬೆಂಬಲ ನೀಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌ ಶಿವಶಂಕರ್‌ ಗುರುವಾರ ಮನವಿ ಮಾಡಿದ್ದಾರೆ. ಸೇವಾ ಪರ್ವ ಆಚರಣೆ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದ ಬನ್ವಾರಾದಲ್ಲಿ ಕುಸುಮ್‌ ಸಿ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ದೃಶ್ಯ ಮಾಧ್ಯಮದ ಮೂಲಕ ಇಂಧನ ಇಲಾಖೆ ಮತ್ತು ತುಮಕೂರು ಜಿಲ್ಲಾ ಆಡಳಿತದ ಸಂಯುಕ್ತಾಶ್ರಯದಲ್ಲಿ ತುಮಕೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೇರ ಪ್ರಸಾರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು,”ಪಿಎಂ ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ ಮುಖ್ಯವಾಗಿ ಬಯಲು ಸೀಮೆ ಭಾಗದ ರೈತರಿಗೆ ವರದಾನವಾಗಿದೆ. ಯೋಜನೆ ಜಾರಿಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಆದರೆ, ಅದಕ್ಕೆ ಭೂಮಿ ಕೊರತೆ ಇದೆ. ಹೀಗಾಗಿ ಸ್ಥಳೀಯ ಶಾಸಕರು ಆಸಕ್ತಿ ವಹಿಸಿ ಯೋಜನೆ ಅನುಷ್ಠಾನಗೊಳಿಸಲು ಸಹಕರಿಸಿದರೆ…

Read More

ಬೆಂಗಳೂರು : ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಜಾರಿಗೆ ತರಲು ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಅಭಿವೃದ್ಧಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಕೌಶಲ್ಯ ನೀತಿಯ ಪ್ರಮುಖ ಅಂಶಗಳು • ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿ ನನ್ನ…

Read More