Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧ : ದೇವದುರ್ಗ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು. ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದ್ದರಿಂತ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರ್ಕಾರ ಮಂಜೂರಾತಿ ನೀಡಲಿದೆ. ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು. ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ಶಾಲಾ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು. ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಸಿರಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ರಾಜ್ಯದ 90 ಸರ್ಕಾರಿ ಐಟಿಐ ಗಳಲ್ಲಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಬಗ್ಗೆ ಐಪಿಹೆಚ್‍ಎಸ್ ಮಾರ್ಗಸೂಚಿ ಹಾಗೂ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ…

Read More

ಬೆಳಗಾವಿ ಸುವರ್ಣ ವಿಧಾನಸೌಧ :- ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ…

Read More

ಬೆಳಗಾವಿ ಸುವರ್ಣಸೌಧ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ಸಿಬ್ಬಂದಿಗಳಿಗೆ ಅವರು ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ 30 ದಿನಗಳ ಹೆಚ್ಚುವರಿ ವೇತನವನ್ನು ಪಾವತಿಸಲು ಅವಕಾಶವಿರುತ್ತದೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಲಭ್ಯವಿರುವ ಪತ್ರಾಂಕಿತ ರಜಾ ವೇತನದ ಸೌಲಭ್ಯವೂ ಸೇರಿದಂತೆ ಸರ್ಕಾರಿ ನೌಕರರ ವಿಶೇಷ ಭತ್ಯೆಯ ಪರಿಷ್ಕರಣೆಯು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿರುತ್ತದೆ ಎಂದು ಗೃಹ ಸಚಿವರು ವಿವರಿಸಿದರು. https://kannadanewsnow.com/kannada/indigo-announces-vouchers-worth-rs-10000-for-affected-customers/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ನವದೆಹಲಿ: ಇಂಡಿಗೋ ಟಿಕೆಟ್ ರದ್ದತಿ ಮುಂದುವರೆದಂತೆ, ವಿಮಾನಯಾನ ಸಂಸ್ಥೆಯು ತನ್ನ ಗ್ರಾಹಕರಿಗೆ ಮರುಪಾವತಿಯ ಕುರಿತು ಅಧಿಕೃತವಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿತು. ತೊಂದರೆಗೊಳಗಾದ ಗ್ರಾಹಕರಿಗೆ 10,000 ಮೌಲ್ಯದ ವೋಚರ್ ಗಳನ್ನು ನೀಡುವುದಾಗಿ ಘೋಷಿಸಿದೆ.  ಈ ಪರಿಹಾರವು ಅಸ್ತಿತ್ವದಲ್ಲಿರುವ ಸರ್ಕಾರಿ ಮಾರ್ಗಸೂಚಿಗಳ ಅಡಿಯಲ್ಲಿ ಇಂಡಿಗೋ ವಿಮಾನದ ನಿರ್ಬಂಧದ ಸಮಯವನ್ನು ಅವಲಂಬಿಸಿ 5,000 ರಿಂದ 10,000 ರೂ.ಗಳವರೆಗೆ ಪರಿಹಾರವನ್ನು ನೀಡುವ ಬದ್ಧತೆಗೆ ಹೆಚ್ಚುವರಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಮ್ಮ ಗ್ರಾಹಕರ ಕಾಳಜಿಯು ನಮ್ಮ ಪ್ರಮುಖ ಆದ್ಯತೆಯಾಗಿದೆ. ಇದರ ಭಾಗವಾಗಿ, ಕಾರ್ಯಾಚರಣೆಯ ಅಡಚಣೆಯ ನಂತರ, ರದ್ದಾದ ವಿಮಾನಗಳಿಗೆ ಅಗತ್ಯವಿರುವ ಎಲ್ಲಾ ಮರುಪಾವತಿಗಳನ್ನು ಪ್ರಾರಂಭಿಸಲಾಗಿದೆ ಎಂದು ನಾವು ಖಚಿತಪಡಿಸಿದ್ದೇವೆ, ಅವುಗಳಲ್ಲಿ ಹೆಚ್ಚಿನವು ಈಗಾಗಲೇ ನಿಮ್ಮ ಖಾತೆಗಳಲ್ಲಿ ಪ್ರತಿಫಲಿಸಿವೆ. ಉಳಿದವು ಶೀಘ್ರದಲ್ಲೇ ಬರಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಯಾಣ ಪಾಲುದಾರ ವೇದಿಕೆಯ ಮೂಲಕ ಬುಕಿಂಗ್ ಮಾಡಿದ್ದರೆ, ನಿಮ್ಮ ಮರುಪಾವತಿಗೆ ಅಗತ್ಯ ಕ್ರಮಗಳನ್ನು ಸಹ ಪ್ರಾರಂಭಿಸಲಾಗಿದೆ. ನಮ್ಮ ವ್ಯವಸ್ಥೆಯಲ್ಲಿ ನಿಮ್ಮ ಸಂಪೂರ್ಣ ವಿವರಗಳು ನಮ್ಮಲ್ಲಿ ಇಲ್ಲದಿರಬಹುದು. ಆದ್ದರಿಂದ ನಾವು ನಿಮಗೆ ತಕ್ಷಣ…

Read More

ಅರುಣಾಚಲ ಪ್ರದೇಶ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 22 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ, ರಕ್ಷಣಾ ತಂಡಗಳು 13 ಶವಗಳನ್ನು ಪತ್ತೆಹಚ್ಚಿವೆ. ವಿವರಗಳ ಪ್ರಕಾರ, ಗುಡ್ಡಗಾಡು ಪ್ರದೇಶದ ಮೂಲಕ ಸಾಗುತ್ತಿದ್ದ ವಾಹನವು ನಿಯಂತ್ರಣ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ಪ್ರತಿಕ್ರಿಯೆ ತಂಡಗಳು ಸ್ಥಳದಲ್ಲಿ ಬದುಕುಳಿದವರನ್ನು ಹುಡುಕಲು ಮತ್ತು ಉಳಿದ ಬಲಿಪಶುಗಳನ್ನು ಹೊರತರಲು ಸ್ಥಳದಲ್ಲೇ ಇದ್ದವು. ಡಿಸೆಂಬರ್ 7 ರಂದು, ನಾಸಿಕ್‌ನ ಕಲ್ವಾನ್ ತಾಲ್ಲೂಕಿನ ಸಪ್ತಶ್ರಿಂಗ್ ಗರ್ ಘಾಟ್‌ನಲ್ಲಿ 600 ಅಡಿ ಆಳದ ಕಂದಕಕ್ಕೆ ಕಾರು ಬಿದ್ದ ನಂತರ ಆರು ಜನರು ಸಾವನ್ನಪ್ಪಿದರು. ಘಟನೆ ಸಂಜೆ 4 ಗಂಟೆಗೆ ನಡೆದಿದ್ದು, ಮೃತರನ್ನು ನಿಫಾದ್ ತಾಲ್ಲೂಕಿನ ಪಿಂಪಾಲ್‌ಗಾಂವ್ ಬಸ್ವಂತ್‌ನ ಸ್ಥಳೀಯರು ಎಂದು ಗುರುತಿಸಲಾಗಿದೆ. “ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಏಳು ಪ್ರಯಾಣಿಕರಿದ್ದ…

Read More

ಮಂಡ್ಯ: ಜಿಲ್ಲೆಯಲ್ಲಿ ಶೇಖರಿಸಿಟ್ಟಿದ್ದಂತ ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಕೊಬ್ಬರಿ ಸುಟ್ಟು ಕರಕಲಾಗಿದೆ. ಮಂಡ್ಯ ತಾಲ್ಲೂಕಿನ ಗುನ್ನಾಯಕನಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟುಕರಕಲಾಗಿದೆ. ಗ್ರಾಮಸ್ಥರಾದಂತ ಪ್ರಸನ್ನ ಎಂಬುವರಿಗೆ ಸೇರಿದ ಕೊಬ್ಬರಿ ಶೆಡ್ ಇದಾಗಿದೆ. ಸುತ್ತಮುತ್ತಲಿನ ಗ್ರಾಮದ ರೈತರಿಂದ ಕೊಬ್ಬರಿ ಖರೀದಿಸಿ ಶೇಖರಿಸಿದ್ದರು. ಗೋದಾಮಿನಲ್ಲಿ ಕೊಬ್ಬರಿ ಸಂಗ್ರಹಿಸಿಟ್ಟಿದ್ದರು. ಗೋದಾಮಿಗೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. 16 ಟನ್ ಕೊಬ್ಬರಿ, 6 ಟನ್ ಗ್ರೌಟ್ ಸುಟ್ಟು ಕರಕಲು ಆಗಿದೆ. ಈ ಘಟನೆಯಿಂದ 55 ಲಕ್ಷ ಮೌಲ್ಯದ ಕೊಬ್ಬರಿ ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸೋ ಕೆಲಸದಲ್ಲಿ ತೊಡಗಿದ್ದಾರೆ. https://kannadanewsnow.com/kannada/who-has-the-guts-to-change-siddaramaiah-minister-zameer-ahmed/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರೋದು ಪಕ್ಷದ ಹೈಕಮಾಂಡ್ ಗೆ ಮಾತ್ರವೇ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರವರೆಗೂ ಸಿದ್ಧರಾಮಯ್ಯ ಅವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/cm-siddaramaiah-spends-crores-of-rupees-on-helicopter-and-plane-travel/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More