Author: kannadanewsnow09

ಕೆಎನ್ಎನ್ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ, ಭಾರತೀಯ ಕ್ರಿಕೆಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಟಿ20ಐ ಮತ್ತು ಟೆಸ್ಟ್‌ಗಳಿಂದ ನಿವೃತ್ತರಾದ ನಂತರ, 2027 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮುಂದಿನ ಏಕದಿನ ವಿಶ್ವಕಪ್‌ಗೆ ಬಿಸಿಸಿಐ ರೋಹಿತ್ ಮತ್ತು ವಿರಾಟ್ ಕೊಹ್ಲಿ ಅವರನ್ನು ಪರಿಗಣಿಸುತ್ತಿಲ್ಲ ಎಂದು ಹಲವಾರು ವರದಿಗಳು ಬರುತ್ತಿವೆ. ಆದಾಗ್ಯೂ, ಹಿರಿಯ ಆಟಗಾರರು ಮತ್ತು ಭಾರತೀಯ ಕ್ರಿಕೆಟ್ ಮಂಡಳಿಯಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ರೋಹಿತ್ ಶರ್ಮಾ 2027 ರ ಏಕದಿನ ವಿಶ್ವಕಪ್ ಆಡುವ ಸಾಧ್ಯತೆಗಳಿದ್ದರೂ, ಅವರ ನಿವೃತ್ತಿಯ ನಂತರವೂ 50 ಓವರ್‌ಗಳ ಸ್ವರೂಪದಲ್ಲಿ ಭಾರತ ತಂಡವನ್ನು ಮುನ್ನಡೆಸಬಲ್ಲ ಆಟಗಾರನ ಅಗತ್ಯವಿದೆ. ಪ್ರಸ್ತುತ, ಸೂರ್ಯಕುಮಾರ್ ಯಾದವ್ ಭಾರತೀಯ ಟಿ20ಐ ತಂಡದ ನಾಯಕರಾಗಿದ್ದರೆ, ಶುಭ್‌ಮನ್ ಗಿಲ್ ಹೊಸದಾಗಿ ಟೆಸ್ಟ್ ನಾಯಕರಾಗಿ ನೇಮಕಗೊಂಡಿದ್ದಾರೆ. ಇದಲ್ಲದೆ, ಗಿಲ್ ಪ್ರಸ್ತುತ ಟಿ20ಐ ಮತ್ತು ಏಕದಿನ ಪಂದ್ಯಗಳಲ್ಲಿ ಉಪನಾಯಕರಾಗಿದ್ದಾರೆ, ಇದು ಪರೋಕ್ಷವಾಗಿ ಯುವ ಸ್ಟಾರ್ ಬ್ಯಾಟರ್ ಭವಿಷ್ಯದಲ್ಲಿ ಭಾರತದ ಎಲ್ಲಾ ಸ್ವರೂಪದ…

Read More

ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಈ ಮೂಲಕ ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್ ನೀಡಿದೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಧರ್ಮಸ್ಥಳ ಪೊಲೀಸರು ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೂ ಅವರ ಮನೆಗೆ ತೆರಳಿದ್ದರು. ಅವರು ನಾಪತ್ತೆಯಾಗಿದ್ದಾಗಿ ತಿಳಿದು ಬಂದಿತ್ತು. ಈ ಬೆನ್ನಲ್ಲೇ ಸಮೀರ್ ಎಂ.ಡಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಮಂಗಳೂರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ಬಂಧನದ ಭೀತಿಯಲ್ಲಿದ್ದಂತ ಯೂಟ್ಯೂಬರ್ ಸಮೀರ್…

Read More

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ರಚನೆಯಡಿಯಲ್ಲಿ 12 ಪ್ರತಿಶತ ಮತ್ತು 28 ಪ್ರತಿಶತ ಸ್ಲ್ಯಾಬ್‌ಗಳನ್ನು ತೆಗೆದುಹಾಕುವ ಕೇಂದ್ರದ ಪ್ರಸ್ತಾವನೆಗಳಿಗೆ ಸಚಿವರ ಗುಂಪು (ಜಿಒಎಂ) ತನ್ನ ಬೆಂಬಲವನ್ನು ನೀಡಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಗುರುವಾರ ಹೇಳಿದ್ದಾರೆ. “12 ಪ್ರತಿಶತ ಮತ್ತು 28 ಪ್ರತಿಶತದ ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ರದ್ದುಗೊಳಿಸುವ ಭಾರತ ಸರ್ಕಾರದ ಎರಡು ಪ್ರಸ್ತಾವನೆಗಳನ್ನು ನಾವು ಬೆಂಬಲಿಸಿದ್ದೇವೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಡೆದ ಸಚಿವರ ಗುಂಪಿನ (ಜಿಒಎಂ) ಸಭೆಯಲ್ಲಿ ಭಾಗವಹಿಸಿದ ನಂತರ ಚೌಧರಿ ಹೇಳಿದರು. ಎಲ್ಲಾ ರಾಜ್ಯಗಳು ಚರ್ಚೆಗಳಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದ್ದರೂ, ಕೆಲವು ರಾಜ್ಯಗಳು ಕೆಲವು ಅವಲೋಕನಗಳನ್ನು ನೀಡಿದ್ದವು ಎಂದು ಅವರು ಹೇಳಿದರು. “ಕೇಂದ್ರವು ಮಾಡಿದ ಪ್ರಸ್ತಾವನೆಗಳ ಕುರಿತು ಎಲ್ಲರೂ ಸಲಹೆಗಳನ್ನು ನೀಡಿದ್ದಾರೆ. ಕೆಲವು ರಾಜ್ಯಗಳು ಕೆಲವು ಅವಲೋಕನಗಳನ್ನು ಹೊಂದಿವೆ. ಇದನ್ನು ಜಿಎಸ್‌ಟಿ ಮಂಡಳಿಗೆ ಉಲ್ಲೇಖಿಸಲಾಗಿದೆ. ಮಂಡಳಿಯು ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಚೌಧರಿ ಹೇಳಿದರು. ಚೌಧರಿ ಅವರ ಪ್ರಕಾರ, ಎರಡು ಸ್ಲ್ಯಾಬ್‌ಗಳನ್ನು…

Read More

ಮಂಡ್ಯ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಅವರ ಮೊದಲ ಪತ್ನಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಆತನ ಮುಖವಾಡವನ್ನು ಬಟಾ ಬಯಲು ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮಾಸ್ಕ್ ಮ್ಯಾನ್ ಅವರ ಮೊದಲ ಪತ್ನಿ ನಾನಾಗಿದ್ದೇನೆ. 1999ರಲ್ಲಿ ಮದುವೆಯಾಗಿ ನಾನು, ಅವರು 7 ವರ್ಷಗಳ ಕಾಲ ಜೊತೆಗಿದ್ದೆವು. ನನಗೆ ಒಂದು ಹೆಣ್ಣು, ಒಂದು ಗಂಡು ಮಗುವಿದೆ ಎಂದರು. ಮಾಸ್ಕ್ ಮ್ಯಾನ್ ನಮ್ಮ ಜೊತೆಗೆ ಇದ್ದಂತ ಸಂದರ್ಭದಲ್ಲಿ ಆತ ಬಳಿಯಲ್ಲಿ ಒಳ್ಳೆಯ ತನ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದನು. ನನಗೆ ಹೊಡೆದು ಚಿತ್ರಹಿಂಸೆ ಕೊಡ್ತಿದ್ದನು ಎಂಬುದಾಗಿ ಆರೋಪಿಸಿದರು. ವಿಚ್ಚೇದನದ ವೇಳೆ ಜೀವನಾಂಶ ವಿಚಾರವಾಗಿ ಸುಳ್ಳು ಹೇಳಿದ್ದನು. ನಾನು ಕೆಲಸ ಮಾಡುತ್ತಿಲ್ಲ ಎಂಬುದಾಗಿ ಕೋರ್ಟ್ ಗೆ ಸುಳ್ಳು ಹೇಳಿದ್ದನು. ಅಲ್ಲೂ ಕೂಡ ನಮಗೆ ನ್ಯಾಯ ಸಿಗಲಿಲ್ಲ ಎಂಬುದಾಗಿ ಮಾಸ್ಕ್ ಮ್ಯಾನ್ ಮೊದಲ ಪತ್ನಿ ತಿಳಿಸಿದ್ದಾರೆ. ನನ್ನ, ನನ್ನ ಮಕ್ಕಳನ್ನು ನನ್ನ ತಾಯಿಯೇ ಸಾಕಿದಳು. ಮದುವೆ ಬಳಿಕ ಧರ್ಮಸ್ಥಳದಲ್ಲಿಯೇ ನಾವು 7 ವರ್ಷ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿ ಜಾಹೀರಾತು ಸಂ.1/2020 ದಿನಾಂಕ:14-02-2020 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಹೆಚ್ಚುವರಿ 2ನೇ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 12-06-2025ರಂದು ಪ್ರಕಟಿಸಲಾಗಿತ್ತು. ಮೇಲ್ಕಂಡ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಉಲ್ಲೇಖ-01 ರನ್ವಯ ಪ್ರಕಟಿಸಲಾದ ಅಂತಿಮ ಆಯ್ಕ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ ವರದಿ ಮಾಡಿಕೊಳ್ಳದ 143 ಅಭ್ಯರ್ಥಿಗಳ ಸ್ಥಾನದಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ನಿಗಮದ ಕೇಂದ್ರ ಕಛೇರಿ, ಶಾಂತಿ ನಗರ, ಬೆಂಗಳೂರು-27 ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್-ಸೈಟ್ ಆದ www.ksrtcjobs.Karnataka.gov.in ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ದಿನಾಂಕ: 23-08-2025 ರಂದು ಬೆಳಿಗ್ಗೆ 10.00 ಗಂಟೆಗೆ ನಿಗಮದ ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು-27 ಇಲ್ಲಿ ನಡೆಸುವ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮೆರಿಟ್ ಆಧಾರದ ಮೇಲೆ ವಿಭಾಗ /ಘಟಕಗಳಿಗೆ ನೇರವಾಗಿ ನಿಯೋಜನೆ ಮಾಡಲಾಗುವುದು. ವಿಶೇಷ ಸೂಚನೆ: ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಎಸ್.ಎಂ.ಎಸ್ ಕಳುಹಿಸಲಾಗಿದೆ. ಕೌನ್ಸಿಲಿಂಗ್‌ಗೆ ಹಾಜರಾಗದ ಅಭ್ಯರ್ಥಿಗಳನ್ನು ಖಾಲಿ ಉಳಿದ ಸ್ಥಾನಗಳಿಗೆ ನಿಗಮದ…

Read More

ನವದೆಹಲಿ: ರೈಲ್ವೆ ರಕ್ಷಣಾ ಪಡೆ (Railway Protection Force – RPF) ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ರೈಲಿನಿಂದ ಹೊರಗೆ ಎಸೆಯಲು ಪ್ರಯತ್ನಿಸಿರುವ ಆಘಾತಕಾರಿ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಕ್ಲಿಪ್ ಅನ್ನು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದಾರೆ. ಆರ್‌ಪಿಎಫ್ ಅಧಿಕಾರಿ ಯುವ ಪ್ರಯಾಣಿಕನನ್ನು ಸಾಮಾನುಗಳೊಂದಿಗೆ ರೈಲಿನಿಂದ ಹೊರಗೆ ಎಸೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. https://twitter.com/nehal076/status/1957694734937338231 ವೀಡಿಯೊದಲ್ಲಿ, ಯುವಕನೊಬ್ಬ ಆರ್‌ಪಿಎಫ್ ಸಿಬ್ಬಂದಿಗೆ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು. ಅಧಿಕಾರಿಯು ಕಪಾಳಮೋಕ್ಷ ಮಾಡಿದಾಗ “ಕ್ಷಮಿಸಿ ಸರ್” ಎಂದು ಹೇಳುತ್ತಿದ್ದಾರೆ. ಈ ಘಟನೆ ಚಲಿಸುವ ರೈಲಿನಲ್ಲಿ ನಡೆದಂತೆ ಕಂಡುಬಂದರೂ, ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ಕೊನೆಯಲ್ಲಿ, ಇತರ ಪ್ರಯಾಣಿಕರು ಆರ್‌ಪಿಎಫ್ ಸಿಬ್ಬಂದಿಯನ್ನು ಎದುರಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. https://twitter.com/rpfnr_/status/1957712509110018110 https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/

Read More

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು. ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ…

Read More

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ…

Read More

ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯಾಧ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಆ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಎಂಬುವರು ಬೆಳ್ತಂಗಡಿ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ಹೊಸ ದೂರು ಸಲ್ಲಿಸಿದ್ದಾರೆ. 2018ರಲ್ಲಿ ಉಜಿರೆಯಲ್ಲಿ ಬಿಲ್ಲರೋಡಿ ಎಂಬಲ್ಲಿ ಶವ ಹೂತ ಆರೋಪ ಮಾಡಿದ್ದಾರೆ. ಸೋಂಪ ಯಾನೆ ಬಾಲಕೃಷ್ಣಗೌಡ ಎಂಬುವರ ಶವ ಹೂತ ಬಗ್ಗೆ ದೂರಿನಲ್ಲಿ ಆರೋಪಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಕೊಲೆ ಮಾಡಿ ಶವ ಹೂತಿರುವ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದು, ಜೆಸಿಬಿ…

Read More