Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರ ಕನ್ನಡ : “ನಮ್ಮ ವಿರುದ್ಧ ಹೋರಾಟ ಮಾಡಿದ, ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ?. ಇನ್ನು ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ. ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ” ಎಂದು ತಿಳಿಸಿದರು. ದೇವಾಲಯದ ಅರ್ಚಕರು ತಾವು ಸಿಎಂ ಆಗಬೇಕು ಎಂದು ಪೂಜೆ…
ಅಮೇರಿಕಾ: ಯುಎಸ್ ಸಮಯ ಮಾರ್ಚ್ 26 ರ ಮುಂಜಾನೆ ಬಾಲ್ಟಿಮೋರ್ನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಅಜಿಯಂಟ್ ಕಂಟೈನರ್ ಹಡಗು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸೇತುವೆಯ ಹೆಚ್ಚಿನ ಭಾಗವು ಪಟಾಪ್ಸ್ಕೊ ನದಿಗೆ ಕುಸಿದಿದೆ. ಈ ವೇಳೆಯಲ್ಲಿ 22 ಭಾರತೀಯ ಸಿಬ್ಬಂದಿಗಳು ಹಡಗಿನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಎಸ್ಓಎಸ್ ಉಳಿಸಿದ್ದೇಗೆ ಅಂತ ಮುಂದೆ ಓದಿ. ಅಪಘಾತಕ್ಕೆ ಕೆಲವೇ ಕ್ಷಣಗಳ ಮೊದಲು, ಹಡಗಿನ 22 ಸದಸ್ಯರ ಭಾರತೀಯ ಸಿಬ್ಬಂದಿ ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ಕಳುಹಿಸಿದರು. ಇದು “ಅನೇಕ ಜೀವಗಳನ್ನು ಉಳಿಸಿತು”. ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಮೇರಿಲ್ಯಾಂಡ್ ಗವರ್ನರ್ ಸಿಬ್ಬಂದಿಯ ಜೀವ ಉಳಿಸುವ ಕ್ರಮವನ್ನು ಶ್ಲಾಘಿಸಿದ್ದಾರೆ. ಸೇತುವೆ ಕುಸಿತದ ಬಗ್ಗೆ ನಮಗೆ ಇಲ್ಲಿಯವರೆಗೆ ತಿಳಿದಿರುವ ವಿಷಯಗಳು ಇಲ್ಲಿವೆ… ಹಡಗು ಸೇತುವೆಗೆ ಏಕೆ ಡಿಕ್ಕಿ ಹೊಡೆದಿತು? ಅದು ಇನ್ನೂ ತಿಳಿದುಬಂದಿಲ್ಲ. ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಸಿಂಗಾಪುರ ಧ್ವಜ ಹೊಂದಿರುವ 948 ಅಡಿ ಉದ್ದದ ಸರಕು ಹಡಗು ಡಾಲಿ ಬಾಲ್ಟಿಮೋರ್ ಬಂದರಿನಿಂದ ಶ್ರೀಲಂಕಾಕ್ಕೆ…
ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಈ ಪ್ರಮುಖ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ…
ನವದೆಹಲಿ: ಆನ್ಲೈನ್ ಫುಡ್ ಅಗ್ರಿಗೇಟರ್ ಜೊಮಾಟೊ ಲಿಮಿಟೆಡ್ನ ಷೇರುಗಳು ಬುಧವಾರದ ವಹಿವಾಟಿನಲ್ಲಿ ಸತತ ಐದನೇ ಅವಧಿಗೆ ಬಲವಾದ ಮೇಲ್ಮುಖ ಚಲನೆಯನ್ನು ಮುಂದುವರಿಸಿವೆ. ವರ್ಷದಿಂದ ವರ್ಷಕ್ಕೆ 50% ಏರಿಕೆಯಾದಂತೆ ಆಗಿದೆ. ಷೇರು ಶೇಕಡಾ 3.48 ರಷ್ಟು ಏರಿಕೆಯಾಗಿ ಹೊಸ ದಾಖಲೆಯ ಗರಿಷ್ಠ 188.95 ರೂ.ಗೆ ತಲುಪಿದೆ. ಈ ಬೆಲೆಯಲ್ಲಿ, ಇದು ವರ್ಷದಿಂದ ವರ್ಷಕ್ಕೆ (ವೈಟಿಡಿ) ಆಧಾರದ ಮೇಲೆ ಸುಮಾರು 50 ಪ್ರತಿಶತದಷ್ಟು ಲಾಭವನ್ನು ಗಳಿಸಿದೆ. ಒಂದು ವರ್ಷದಲ್ಲಿ ಶೇಕಡಾ 270 ರಷ್ಟು ಏರಿಕೆ ಮಾಡುವ ಮೂಲಕ ಕೌಂಟರ್ ಮಲ್ಟಿಬ್ಯಾಗರ್ ಆದಾಯವನ್ನು ನೀಡಿದೆ. ವಿಶ್ಲೇಷಕರು ಹೆಚ್ಚಾಗಿ ಕೌಂಟರ್ ನಲ್ಲಿ ಸಕಾರಾತ್ಮಕ ಅಭಿಪ್ರಾಯಗಳನ್ನು ಹಂಚಿಕೊಂಡರು. “ಹಿಡುವಳಿದಾರರು ಹೂಡಿಕೆ ಮಾಡುವುದನ್ನು ಮುಂದುವರಿಸಬಹುದು. ಹೊಸ ಹೂಡಿಕೆಗಾಗಿ, ಕುಸಿತಕ್ಕಾಗಿ ಕಾಯಿರಿ” ಎಂದು ಜಿಯೋಜಿತ್ ಫೈನಾನ್ಶಿಯಲ್ನ ಹಿರಿಯ ಉಪಾಧ್ಯಕ್ಷ ಗೌರಂಗ್ ಶಾ ಬಿಸಿನೆಸ್ ಟುಡೇ ಟಿವಿಗೆ ತಿಳಿಸಿದರು. “ಜೊಮಾಟೊ ಷೇರುಗಳಲ್ಲಿ ನಡೆಯುತ್ತಿರುವ ರ್ಯಾಲಿ 220 ರೂ.ಗಳವರೆಗೆ ವಿಸ್ತರಿಸಬಹುದು. ನಷ್ಟವನ್ನು 150 ರೂ.ಗೆ ಉಳಿಸಿಕೊಳ್ಳಿ” ಎಂದು ಸೆಬಿ ನೋಂದಾಯಿತ ವಿಶ್ಲೇಷಕ ಮಿತೇಶ್ ಪಾಂಚಾಲ್…
ನವದೆಹಲಿ: ಈ ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಏಳು ಪ್ರಮುಖ ನಗರಗಳಲ್ಲಿ ವಸತಿ ಮಾರಾಟವು ಶೇಕಡಾ 14 ರಷ್ಟು ಏರಿಕೆಯಾಗಿದೆ. ಅನರಾಕ್ ಪ್ರಕಾರ, ಬೇಡಿಕೆ ಬಲವಾಗಿ ಮುಂದುವರೆದಿದೆ. ಮುಂಬೈ ಮೆಟ್ರೋಪಾಲಿಟನ್ ಪ್ರದೇಶ (ಎಂಎಂಆರ್), ಪುಣೆ, ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ವಸತಿ ಆಸ್ತಿಗಳ ಮಾರಾಟ ಹೆಚ್ಚಾಗಿದೆ, ಆದರೆ ದೆಹಲಿ-ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್), ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಇದು ಕುಸಿದಿದೆ. ರಿಯಲ್ ಎಸ್ಟೇಟ್ ಸಲಹೆಗಾರ ಅನರಾಕ್ ಬುಧವಾರ ದೇಶದ ಅಗ್ರ ಏಳು ವಸತಿ ಮಾರುಕಟ್ಟೆಗಳಲ್ಲಿ ಮಾರಾಟ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಅಂಕಿಅಂಶಗಳ ಪ್ರಕಾರ, ಈ ವರ್ಷದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅಗ್ರ ಏಳು ನಗರಗಳಲ್ಲಿನ ವಸತಿ ಮಾರಾಟವು ಶೇಕಡಾ 14 ರಷ್ಟು ಏರಿಕೆಯಾಗಿ 1,30,170 ಕ್ಕೆ ತಲುಪಿದೆ. 1.5 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯ ಐಷಾರಾಮಿ ಮನೆಗಳ ಬೇಡಿಕೆಯಲ್ಲಿ ಗಮನಾರ್ಹ ಹೆಚ್ಚಳದ ಮಧ್ಯೆ ಈ ತ್ರೈಮಾಸಿಕವು ಕಳೆದ ದಶಕದಲ್ಲಿ ಅತಿ ಹೆಚ್ಚು ಮಾರಾಟವನ್ನು ದಾಖಲಿಸಿದೆ ಎಂದು ಅನಾರಾಕ್ ಅಧ್ಯಕ್ಷ ಅನುಜ್ ಪುರಿ ಹೇಳಿದ್ದಾರೆ. ಎಂಎಂಆರ್…
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಆದ್ರೇ ಇಂದು ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವರ್ಗಾವಣೆಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಇಂದು ಡಿ ಕೆ ಶಿವಕುಮಾರ್…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್ ಗಾಂಧಿ ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ ಚಾಳಿ ಮನೆಮಂದಿಗೆ ಎನ್ನುವಂತೆ ಆ ಚಾಳಿ ಎಲ್ಲ ಕಾಂಗ್ರೆಸ್ ನಾಯಕರಿಗೆ ಬಂದಿದೆ. ಚಾಯ್ವಾಲ, ಚೌಕಿದಾರ್ ಚೋರ್, ಮೋದಿಗೆ ಪರಿವಾರ ಇಲ್ಲ ಹೀಗೆ ಅನೇಕ ಟೀಕೆಗಳನ್ನು ಮಾಡಿದಾಗ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಸಚಿವ ಶಿವರಾಜ ತಂಗಡಗಿ ಹಾಗೂ ಇತರೆ ಮುಖಂಡರು ಸೋಲಿನ ಹತಾಶೆಯಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದರು. ಸಚಿವ ಶಿವರಾಜ ತಂಗಡಗಿ ಬಿಜೆಪಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ ಹೊಡೆಯಿರಿ ಎನ್ನುತ್ತಿದ್ದು, ಈಗ ಮೋದಿಗೆ ಹೇಳುತ್ತಿದ್ದಾರೆ.…
ಬೆಂಗಳೂರು: ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಚೇರಿಯಲ್ಲಿ ಇಂದು ಕಾಂಗ್ರೆಸ್ ಇಬ್ಬರು ಎಂಎಲ್ಸಿಗಳಿಂದ ಹೈಡ್ರಾಮಾವೇ ನಡೆಯಿತು. ಸಭಾಪತಿಗಳ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಎಂಎಲ್ಸಿಗಳಿಬ್ಬರು ರಾಜೀನಾಮೆ ಪತ್ರ ತೋರಿಸಿ, ಕೊಡದೆ ಪ್ರಹಸನವನ್ನೇ ನಡೆಸಿದ್ದಾರೆ. ಇಂದು ವಿಧಾನಸೌಧದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಪರಿಷತ್ ಸದಸ್ಯರಾದಂತ ನಜೀರ್ ಅಹ್ಮದ್ ಹಾಗೂ ನಂಜೇಗೌಡ ಅವರು, ರಾಜೀನಾಮೆ ಪತ್ರವನ್ನು ಸಲ್ಲಿಸೋದಕ್ಕೆ ಮುಂದಾದರು. ಈ ವೇಳೆ ಮದ್ಯಪ್ರವೇಶಿಸಿದಂತ ಸಚಿವ ಬೈರತಿ ಸುರೇಶ್ ಅವರು, ಇಬ್ಬರು ಕಾಂಗ್ರೆಸ್ ಎಂಎಲ್ಸಿಗಳನ್ನು ಮನವೊಲಿಸಿದರು. ರಾತ್ರಿ ಮುಖ್ಯಮಂತ್ರಿ, ಡಿಸಿಎಂ ಮಂಗಳೂರಿನಿಂದ ವಾಪಾಸ್ ಆಗುತ್ತಿದ್ದಾರೆ. ಅವರು ಬಂದ ನಂತ್ರ ಮೂವರು ಶಾಸಕರೊಂದಿಗೆ ಮಾತನಾಡುತ್ತಾರೆ ಎಂದರು. ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ನನ್ನ ಭೇಟಿಯಾಗೋದಾಗಿ ಸಮಯ ಪಡೆದಿದ್ದರು. ಬಂದು ಭೇಟಿಯಾದ್ರು. ಆದ್ರೇ ಸಚಿವ ಬೈರತಿ ಸುರೇಶ್ ಕೂಡ ಬಂದು ಅವರನ್ನು ಮನವೊಲಿಕೆ ಮಾಡಿದ್ರು. ನಾನು ನಿಮ್ಮ ಲೆಟರ್ ಹೆಡ್ ನಲ್ಲಿ ಕೈಯಲ್ಲಿ ಬರೆದು ರಾಜೀನಾಮೆ ಪತ್ರ ಕೊಡಿ ಅಂತ ಹೇಳಿದೆ. ಅವರು…
ಬೆಂಗಳೂರು: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿಧಾನಸಭಾ ಉಚ ಚುನಾವಣೆಯನ್ನು ಚುನಾವಣಾ ಆಯೋಗವು ಘೋಷಣೆ ಮಾಡಿತ್ತು. ಹೀಗೆ ಘೋಷಣೆ ಮಾಡಲಾಗಿದ್ದಂತ ಸುರಪುರ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ರಾಜುಗೌಡ ನಾಯಕ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಶಾಸಕ ರಾಜಾವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದಂತ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗದಿಂದ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಮೇ.7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ಅಂದೇ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಕೂಡ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರನಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಇಂದು ಬಿಜೆಪಿಯಿಂದ ರಾಜುಗೌಡ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಮೇ ನಲ್ಲಿ ನಡೆದಿದ್ದಂತ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಗೆಲುವು ಸಾಧಿಸಿದ್ದರು. ಆದ್ರೇ ಅವರು ಅಕಾಲಿಕ ನಿಧನಹೊಂದಿದ್ದರು. ಅವರ ನಿಧನದಿಂದ ತೆರವಾದಂತ…
ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ” ಲೋಕಸಭೆ ಚುನಾವಣೆ ತಯಾರಿ ಹೇಗಿದೆ ಎಂದು ಕೇಳಿದಾಗ, “ನಾನೀಗ ಮಂಜುನಾಥನ ಸನ್ನಿಧಿಯಲ್ಲಿ ಇದ್ದೇನೆ. ಧರ್ಮಸ್ಥಳ ಹಾಗೂ ಮಂಜುನಾಥನ ಶಕ್ತಿಯನ್ನು “ಮಾತು ಬಿಡದ ಮಂಜುನಾಥ” ಎಂದೇ ಬಣ್ಣಿಸುತ್ತಾರೆ. ಅದೇ ರೀತಿ ನಾವು ಕೂಡ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಬಿಡದೆ ಪಾಲಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ, ಜನರ ಮಧ್ಯೆ ಹೋಗಿ ನಮಗೆ ಮತ್ತಷ್ಟು ಹೆಚ್ಚಿನ ಶಕ್ತಿ ಕೊಡಿ ಎಂದು ಮತ…