Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಬಳಿಯಲ್ಲಿ ನಿರ್ಮಿಸುತ್ತಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರವು ತಡೆ ನೀಡಿಲ್ಲ. ಬದಲಾಗಿ ವರದಿಯೊಂದನ್ನು ಸಲ್ಲಿಸಬೇಕಿರುವ ಕಾರಣ ಮುಂದೂಡಿಕೆ ಮಾಡಿರುವುದಾಗಿ ಕೆಪಿಸಿಎಲ್ ಇಇ ವಿಜಯ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಸ್ಥಳ ಪರಿಶೀಲನೆ ಮಾಡಿ ವರದಿಯನ್ನು ನೀಡಬೇಕಿದೆ. ಆದರೇ ಅನಿವಾರ್ಯ ಕಾರಣದಿಂದಾಗಿ Sub-comittee of NBWL ಸ್ಥಳ ಪರಿಶೀಲನೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಯೋಜನೆ ಮುಂದೂಡಿಕೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದರು. ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡಿ, ವರದಿಯನ್ನು ತಯಾರಿಸಿ MoEF ಗೆ ಸಲ್ಲಿಸಿದರೇ, ಯೋಜನೆ ಗೆ ಅಗತ್ಯವಿರುವ ಅನುಮತಿ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಲಿದೆ. ಎಂಓಎಫ್ ಗೆ ವರದಿಯನ್ನು ಸಲ್ಲಿಸಿದರೇ ಸದ್ಯ ತಾತ್ಕಾಲಿಕವಾಗಿ ಮುಂದೂಡಿರುವಂತ ಯೋಜನೆಯು, ಮತ್ತೆ…
ಬೆಂಗಳೂರು: ಮಿಕೊ ಎಫ್ಎಂಎಸ್ಸಿಐ ರಾಷ್ಟ್ರೀಯ ರೊಟಾಕ್ಸ್ ಕಾರ್ಟಿಂಗ್ ಚಾಂಪಿಯನ್ಶಿಪ್ನ 5 ಹಾಗೂ 6ನೇ ಸುತ್ತು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರಿನವರೇ ಆದ ಇಶಾನ್ ಮಾದೇಶ್ ಹಿರಿಯರ ವಿಭಾಗದಲ್ಲಿ ಅಮೋಘ ಗೆಲುವು ಸಾಧಿಸಿದರು. ಇನ್ನು, ಮುಂಬೈನ ಕಿಯಾನ್ ಶಾ (ರಾಯೊ ರೇಸಿಂಗ್) ಕಿರಿಯರ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರಿ ಗಮನ ಸೆಳೆದರು. ರಾಯೊ ರೇಸಿಂಗ್ ತಂಡವನ್ನು ಪ್ರತಿನಿಧಿಸುವ, ಮುಂಬೈನವರೇ ಆದ ಕೃಷ್ ಗುಪ್ತಾ ಆಕರ್ಷಕ ಪ್ರದರ್ಶನದೊಂದಿಗೆ ಹಿರಿಯರ ವಿಭಾಗದ ಕೊನೆ 2 ಸುತ್ತುಗಳಲ್ಲಿ ಕ್ರಮವಾಗಿ 3 ಹಾಗೂ 2ನೇ ಸ್ಥಾನ ಗಳಿಸಿದರು. ಈ ಫಲಿತಾಂಶಗಳ ಸಹಾಯದಿಂದ ಕಿಯಾನ್ ಹಾಗೂ ಕೃಷ್ ಇಬ್ಬರೂ, ತಮ್ಮ ತಮ್ಮ ವಿಭಾಗಗಳಲ್ಲಿ ಒಟ್ಟಾರೆ 2ನೇ ಸ್ಥಾನ ಗಳಿಸಿ ಸಂಭ್ರಮಿಸಿದರು. 5 ಹಾಗೂ 6ನೇ ಸುತ್ತುಗಳನ್ನು ಒಟ್ಟಿಗೆ ನಡೆಸಿದ ಕಾರಣ, ರೇಸರ್ಗಳ ಫಿಟ್ನೆಸ್ ಹಾಗೂ ಮಾನಸಿಕ ಸದೃಢತೆ ತೀವ್ರ ಪರೀಕ್ಷೆಗೆ ಒಳಪಟ್ಟಿತು. ಕಿರಿಯರ ವಿಭಾಗದ ಅರ್ಹತಾ ಸುತ್ತು, ಕಿಯಾನ್ ಪಾಲಿಗೆ ನಿರೀಕ್ಷಿತ ಫಲಿತಾಂಶ ತಂದುಕೊಡಲಿಲ್ಲ. ಪೋಲ್ ಪೊಸಿಷನ್ ಪಡೆದ ಚೆನ್ನೈನ…
ಹರಿಯಾಣ: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿಗೆ ಪ್ರತಿಷ್ಠಿತ ರಾಷ್ಡ್ರೀಯ ಪ್ರಶಸ್ತಿ -2025 ರ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪ್ರಶಸ್ತಿಯ ಗೌರವ ಸಂದಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ನೀಡಿದ್ದು, THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ ಎಂದಿದೆ. ಕೆಎಸ್ಆರ್ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’ – ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್* ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ…
ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು ಸೆನೆಟ್ನಲ್ಲಿ 27 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಪರಿಚಯಿಸಿದೆ, ಇದು ದೇಶದ ಮಿಲಿಟರಿ ಕಮಾಂಡ್ ರಚನೆ ಮತ್ತು ಸಾಂವಿಧಾನಿಕ ಚೌಕಟ್ಟಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸುತ್ತದೆ. ಮಸೂದೆಯ ಬಗ್ಗೆ ಡಾನ್ ಪ್ರಕಾರ, ಶನಿವಾರ ಮಂಡಿಸಲಾದ ವ್ಯಾಪಕ ಶ್ರೇಣಿಯ ಮಸೂದೆಯು ಜಂಟಿ ಮುಖ್ಯಸ್ಥರ ಸಮಿತಿ (CJCSC) ಅಧ್ಯಕ್ಷರ ಕಚೇರಿಯನ್ನು ರದ್ದುಗೊಳಿಸಲು ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥರ (CDF) ಹೊಸ ಹುದ್ದೆಯನ್ನು ಪರಿಚಯಿಸಲು ಪ್ರಯತ್ನಿಸುತ್ತದೆ, ಇದು ಸೇನಾ ಮುಖ್ಯಸ್ಥರನ್ನು ಪಾಕಿಸ್ತಾನದ ಸಶಸ್ತ್ರ ಪಡೆಗಳ ಮೇಲ್ಭಾಗದಲ್ಲಿ ಪರಿಣಾಮಕಾರಿಯಾಗಿ ಇರಿಸುತ್ತದೆ. ಪ್ರಸ್ತಾವಿತ ತಿದ್ದುಪಡಿಯು ಸಶಸ್ತ್ರ ಪಡೆಗಳ ನಿಯಂತ್ರಣ ಮತ್ತು ಆಜ್ಞೆಯನ್ನು ನಿಯಂತ್ರಿಸುವ ಪಾಕಿಸ್ತಾನದ ಸಂವಿಧಾನದ 243 ನೇ ವಿಧಿಯನ್ನು ಪುನಃ ಬರೆಯುತ್ತದೆ. ಹೊಸ ವ್ಯವಸ್ಥೆಯಡಿಯಲ್ಲಿ, ಪಾಕಿಸ್ತಾನದ ಸೇನಾ ಮುಖ್ಯಸ್ಥರು (COAS) ಏಕಕಾಲದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಾರೆ, ಸೇನಾ ಮುಖ್ಯಸ್ಥರನ್ನು ಮೂರು ಸೇವೆಗಳ ಸಾಂವಿಧಾನಿಕವಾಗಿ ಗುರುತಿಸಲ್ಪಟ್ಟ ಮುಖ್ಯಸ್ಥರನ್ನಾಗಿ ಮಾಡುತ್ತಾರೆ – ಸೈನ್ಯ, ನೌಕಾಪಡೆ ಮತ್ತು ವಾಯುಪಡೆ, ಡಾನ್ ವರದಿ ಮಾಡಿದೆ. ದೇಶದ ರಾಷ್ಟ್ರಪತಿಗಳು…
ಬೆಂಗಳೂರು: ಕಾರವಾರ ಕ್ಷೇತ್ರದ ಶಾಸಕ ಸತೀಶ್ ಕೆ ಸೈಲ್ ಮತ್ತು ಇತರರು ಭಾಗಿಯಾಗಿರುವ ಕಬ್ಬಿಣದ ಅದಿರು ಅಕ್ರಮ ರಫ್ತಿಗೆ ಸಂಬಂಧಿಸಿದಂತೆ, 2002 ರ ಹಣ ಅಕ್ರಮ ತಡೆ ಕಾಯ್ದೆ (Provisions of the Prevention of Money Laundering Act -PMLA) ನಿಬಂಧನೆಗಳ ಅಡಿಯಲ್ಲಿ 21 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (Directorate of Enforcement -ED) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಅವರ ಆಸ್ತಿಗಳನ್ನು ಗೋವಾದ ಮೆಸರ್ಸ್ ಶ್ರೀ ಮಲ್ಲಿಕಾರ್ಜುನ್ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ (ಎಸ್ಎಂಎಸ್ಪಿಎಲ್) ಮೂಲಕ ಹೊಂದಿದ್ದಾರೆ ಮತ್ತು ಕಾನೂನು ಜಾರಿ ಸಂಸ್ಥೆ ಸಲ್ಲಿಸಿದ ಎಲ್ಇಎ ಚಾರ್ಜ್ಶೀಟ್ ಪ್ರಕಾರ, ಅರಣ್ಯ ಇಲಾಖೆಯ ಅಧಿಕಾರಿಗಳು ಮಾರ್ಚ್ 15, 2010 ರಂದು ಬೇಲೆಕೇರಿ ಬಂದರಿಗೆ ಭೇಟಿ ನೀಡಿದ್ದರು ಮತ್ತು ಬಂದರು ಪ್ರದೇಶದೊಳಗೆ ಸಂಗ್ರಹವಾಗಿರುವ ದೊಡ್ಡ ಪ್ರಮಾಣದ ಕಬ್ಬಿಣದ ಅದಿರನ್ನು ಕಂಡುಹಿಡಿದರು. ಅವರ ವಿಚಾರಣೆಯಲ್ಲಿ ಒಂದು ಭಾಗವು ಗಣಿ…
ದಾವಣಗೆರೆ : ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಮಾತನಾಡಿ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು. ಅವರು ಇಂದು ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು. ನ್ಯಾಯಾಲಯದ ಆದೇಶದ ಮೇರೆಗೆ ತಾಲ್ಲೂಕು ಮತ್ತು ಜಿಲ್ಲಾ…
ಕೂಡ್ಲಿಗಿ : “ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಶಿವಕುಮಾರ್ ಅವರು ಭಾನುವಾರ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಬೇರೆ ಪಕ್ಷದವರು ಈಗ ಜನರ ಕಲ್ಯಾಣದ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ. ಕರುನಾಡಿನ ಜನರ ಸೇವೆಯನ್ನು ಉತ್ತಮ ಸರ್ಕಾರ ಮುನ್ನಡೆಸುತ್ತಿದೆ. ಭವಿಷ್ಯದಲ್ಲಿ ಇದಕ್ಕಿಂತ ಉತ್ತಮ ಆಡಳಿತ ನೀಡುತ್ತೇವೆ. 2028 ಕ್ಕೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ನಿಮ್ಮ ಸೇವೆ ಮಾಡಲಿದೆ” ಎಂದರು. ಏಳನೇ ಗ್ಯಾರಂಟಿಯಾಗಿ ಕೆರೆಗಳಿಗೆ ನೀರು…
ನವದೆಹಲಿ: ಮುಕೇಶ್ ಅಂಬಾನಿ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ, ಕೋಟ್ಯಂತರ ರೂಪಾಯಿಯ ದೇಣಿಗೆಯನ್ನು ಘೋಷಣೆ ಮಾಡಿದ್ದಾರೆ. ಒಟ್ಟು ಮೂರು ತೀರ್ಥಕ್ಷೇತ್ರಗಳಿಗೆ ಭೇಟಿ ಕೊಟ್ಟಿದ್ದಾರೆ. ಮೊದಲಿಗೆ ಅಂಬಾನಿ ಅವರು ನಾಥದ್ವಾರಕ್ಕೆ ಭೇಟಿ ನೀಡಿ, ಅಲ್ಲಿ ಶ್ರೀನಾಥಜಿಯವರ ಭೋಗ್ ಆರತಿ ದರ್ಶನ ಪಡೆದು ಮತ್ತು ಗುರು ಶ್ರೀ ವಿಶಾಲ್ ಬಾವಾ ಸಾಹೇಬ್ ಅವರಿಂದ ಆಶೀರ್ವಾದ ಪಡೆದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ನಾಥದ್ವಾರದಲ್ಲಿ ಆಧುನಿಕ, ಸುಸಜ್ಜಿತ “ಯಾತ್ರಿ ಏವಂ ವರಿಷ್ಠ ಸೇವಾ ಸದನ” (ಯಾತ್ರಿಕರು ಮತ್ತು ಹಿರಿಯ ನಾಗರಿಕ ಸೇವಾ ಕೇಂದ್ರ) ಸ್ಥಾಪನೆಯನ್ನು ಘೋಷಿಸಿದರು ಮತ್ತು ಶ್ರೀ ನಾಥದ್ವಾರ ದೇವಾಲಯಕ್ಕೆ ರೂ. 15 ಕೋಟಿ ದೇಣಿಗೆ ನೀಡಿದರು. ಈ ಸೇವಾ ಸದನದಲ್ಲಿ 100ಕ್ಕೂ ಹೆಚ್ಚು ಕೊಠಡಿ ಇದ್ದು, ವೃದ್ಧ ವೈಷ್ಣವರು ಮತ್ತು ಭೇಟಿ ನೀಡುವ ಭಕ್ತರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಗೌರವಾನ್ವಿತ ವಸತಿ ಸೌಕರ್ಯವನ್ನು ಒದಗಿಸುತ್ತದೆ. ಇದು 24 ಗಂಟೆಗಳ ವೈದ್ಯಕೀಯ ಘಟಕ, ನರ್ಸಿಂಗ್ ಮತ್ತು ಭೌತಚಿಕಿತ್ಸೆಯ ಸೇವೆಗಳು, ಸತ್ಸಂಗ ಮತ್ತು ಪ್ರವಚನ…
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಧಾರವಾಡ: ವಾಯವ್ಯ ಸಾರಿಗೆಯಲ್ಲಿ ಜನಪರ, ಕಾರ್ಮಿಕ ಸ್ನೇಹಿ ಹಲವು ಉಪಕ್ರಮಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. 1. ಧಾರವಾಡ ನೂತನ ನಗರ ಬಸ್ ನಿಲ್ದಾಣ ಉದ್ಘಾಟನೆ 2. ಹುಬ್ಬಳ್ಳಿಯ ನವೀಕೃತ ಕೇಂದ್ರ ಬಸ್ ನಿಲ್ದಾಣದ ಉದ್ಘಾಟನೆ 3. ಅಪಘಾತ/ ಅಪರಾಧ ರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭ 4. ಅನುಕಂಪ ಆಧಾರದಲ್ಲಿ ಕುಟುಂಬದವರಿಗೆ ನೇಮಕಾತಿ ಆದೇಶ ವಿತರಣೆ 5. ಹೊಸ ಬಸ್ಸುಗಳ ಸೇರ್ಪಡೆ 6. ನಗದು ರಹಿತ ಸೇವೆಗಾಗಿ ನೂತನ ಸ್ಮಾರ್ಟ್ ETM (Electronic ticket machine) ಅನುಷ್ಠಾನ 7. ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂದವರಿಗೆ ರೂ.1 ಕೋಟಿ ವಿಮಾ ಚೆಕ್ ವಿತರಣೆ. 8. ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮೃತ ಅವಲಂಬಿಥಿಗೆ ರೂ.5 ಲಕ್ಷ ವಿಮಾ ಚೆಕ್ ವಿತರಣೆ 9. ನೌಕರರು ನಿಧನರಾದ ಪ್ರಕರಣಗಳಲ್ಲಿ ( ಅಪಘಾತ ಹೊರತುಪಡಿಸಿ) ಮೃತರ ಅವಲಂಬಿತರಿಗೆ ತಲಾ ರೂ.6.00 ಲಕ್ಷ ವಿತರಣೆ 10. SBI ರವರಿಂದ Cash…














