Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಪೂರ್ವ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಸುಮಾರು ಒಂದು ಡಜನ್ ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ದಟ್ಟವಾದ ಮಂಜಿನಿಂದಾಗಿ ಸರಣಿ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದಾಗಿ ಹಲವಾರು ವಾಹನಗಳು ಅಪಘಾತಕ್ಕೆ ಈಡಾಗಿರುವುದಾಗಿ ಹೇಳಿದ್ದಾರೆ. ಸರಣಿ ಅಪಘಾತದಿಂದ ಹಲವರಿಗೆ ಗಾಯ ಚಕ್ರಸೈನ್‌ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಜನನಿಬಿಡ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆ ಉಂಟಾಗಿದೆ. ಗೋಚರತೆ ಕಡಿಮೆ ಇರುವ ಪರಿಸ್ಥಿತಿಯಲ್ಲಿ ಚಾಲಕರು ಪ್ರತಿಕ್ರಿಯಿಸಲು ಕಷ್ಟಪಟ್ಟ ಕಾರಣ ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡವು. ಅಪಘಾತದಲ್ಲಿ ಮಹಿಳೆ ಸೇರಿದಂತೆ ಹಲವಾರು ವ್ಯಕ್ತಿಗಳು ಗಾಯಗೊಂಡರು. ಅವರಿಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು ಮತ್ತು ಅವರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. https://twitter.com/vani_mehrotra/status/1999727076107255891 ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ ಸರಣಿ ಅಪಘಾತದ ನಂತರ, ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತು. ಪೊಲೀಸರು, ಟೋಲ್ ಪ್ಲಾಜಾ ನಿರ್ವಹಣೆಯೊಂದಿಗೆ ತ್ವರಿತ ಕ್ರಮ ಕೈಗೊಂಡು ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಲು ಕ್ರೇನ್‌ಗಳನ್ನು ನಿಯೋಜಿಸಿದರು. ಸಾಮಾನ್ಯ…

Read More

ನವದೆಹಲಿ: ಇಸ್ರೋ ಡಿಸೆಂಬರ್ 15 ರಂದು ಶ್ರೀಹರಿಕೋಟಾದಿಂದ ಬ್ಲೂಬರ್ಡ್ -6 ಎಂಬ ದೊಡ್ಡ ಅಮೇರಿಕನ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಉಪಗ್ರಹವು ತುಂಬಾ ಭಾರವಾಗಿದ್ದು, ಇದು ಭಾರತವು ಇದುವರೆಗೆ ಎತ್ತಿರುವ ಅತಿದೊಡ್ಡ ವಾಣಿಜ್ಯ ಉಪಗ್ರಹಗಳಲ್ಲಿ ಒಂದಾಗಿದೆ. ಈ ಮಿಷನ್ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಬೆಳೆಯುತ್ತಿರುವ ಬಾಹ್ಯಾಕಾಶ ಪಾಲುದಾರಿಕೆಯನ್ನು ತೋರಿಸುತ್ತದೆ. ಎರಡೂ ದೇಶಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಿಷನ್ ಇಸ್ರೋದ ಶಕ್ತಿಶಾಲಿ LVM3 ಉಡಾವಣಾ ವಾಹನ ಅಥವಾ ರಾಕೆಟ್ ಅನ್ನು ಬಳಸುತ್ತದೆ. ಈ ರಾಕೆಟ್ ಬ್ಲೂಬರ್ಡ್ -6 ಅನ್ನು ಹೊತ್ತೊಯ್ಯುತ್ತದೆ ಮತ್ತು ಅದನ್ನು ಕಡಿಮೆ-ಭೂಮಿಯ ಕಕ್ಷೆಯಲ್ಲಿ ಇರಿಸುತ್ತದೆ, ಅಂದರೆ ವೇಗದ ಸಂವಹನಕ್ಕಾಗಿ ಭೂಮಿಗೆ ಹತ್ತಿರದಲ್ಲಿದೆ. ಕಡಿಮೆ ಭೂಮಿಯ ಕಕ್ಷೆ ಎಂದರೆ ಉಪಗ್ರಹಗಳು ಸಮುದ್ರ ಮಟ್ಟದಿಂದ ಸುಮಾರು 160 ರಿಂದ 2,000 ಕಿಲೋಮೀಟರ್ ಎತ್ತರದಲ್ಲಿ ಭೂಮಿಗೆ ಹತ್ತಿರ ಹಾರುತ್ತವೆ. ಇದು ವೇಗವಾದ ಸಂಕೇತಗಳು, ತ್ವರಿತ ಡೇಟಾ ವರ್ಗಾವಣೆ ಮತ್ತು ನೆಲದ ಕೇಂದ್ರಗಳಿಂದ ಸುಲಭ ನಿಯಂತ್ರಣವನ್ನು ಅನುಮತಿಸುತ್ತದೆ. ಉಪಗ್ರಹವು…

Read More

ಬೆಂಗಳೂರು: ಕಾಂಗ್ರೆಸ್ ನಾಯಕರಿಂದಲೇ ‘ಕೈ’ಪಕ್ಷದ ದಲಿತ ವಿರೋಧಿ ಧೋರಣೆ ಬಟಾಬಯಲು ಮಾಡಲಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, “ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲ ನಿಗಮ, ಮಂಡಳಿಗಳ ಸಾಧನೆ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಪರಿಶಿಷ್ಟರ ಹಣ ದೋಚುವುದು ಸರಾಗವಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಶ್ರೀ ಸುಧಾಮ ದಾಸ್ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ಅವರ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ನಾಯಕ ಸದನದಲ್ಲೇ ಸರ್ಕಾರದ ದಲಿತ ವಿರೋಧಿ ನೀತಿಗಳ ಬಗ್ಗೆ ಆರೋಪ ಮಾಡಿರುವುದು ನಾಚಿಕೆಗೇಡು ಎಂದು ವಾಗ್ಧಾಳಿ ನಡೆಸಿದ್ದಾರೆ. ಈ ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ, ಒಂದು…

Read More

ಶಿವಮೊಗ್ಗ: ಡಿ.17ರಂದು ಬುಧವಾರದಂದು ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಸಾಗರ ಬಂದ್ ಮಾಡುವುದಾಗಿ ಸಾಗರ ಜಿಲ್ಲೆ ಹೋರಾಟ ಸಮಿತಿಯ ತಿ.ನಾ ಶ್ರೀನಿವಾಸ್ ಘೋಷಿಸಿದ್ದಾರೆ. ಈ ಕುರಿತು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರ ಜಿಲ್ಲೆ ಮಾಡಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಡಿಸೆಂಬರ್.17ರಂದು ಸಾಗರ ಬಂದ್ ಮಾಡುವುದಾಗಿ ತಿಳಿಸಿದರು. ಸಾಗರ ತಾಲ್ಲೂಕು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ರಸ್ತೆ ಅಗಲೀಕರಣ ಆದಷ್ಟು ಸಾಗರದಲ್ಲಿ ಆಗಿಲ್ಲ. ಸೊರಬ ರಸ್ತೆ ಅಗಲೀಕರಣ ನೆನೆಗುದಿಗೆ ಬಿದ್ದಿದೆ. ಯುಜಿಡಿ ಕಾಮಗಾರಿ 16 ವರ್ಷದಿಂದ ಸರಿಯಾಗಿ ನಡೆಯುತ್ತಿಲ್ಲ. ಜೋಗ ಕಾಮಗಾರಿ ಕುಂಟುತ್ತಾ ಸಾಗಿದೆ. ಸಾಗರ ತಾಲ್ಲೂಕಿನ ಅಭಿವೃದ್ಧಿಗೆ ಕಾಣದ ಕೈಗಳಿಂದ ತಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ನಮ್ಮ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗ ಕರೆದೊಯ್ಯಲು ಹಿಂದೇಟು…

Read More

ಮಂಡ್ಯ: ಜಿಲ್ಲೆಯಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡಲು ಮುಂದಾಗದ ಪರಿಸ್ಥಿತಿ ಇದೆ. ಈ ಸಂದರ್ಭದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋದಕ್ಕೆ ಪ್ರೋತ್ಸಾಹಿಸೋದಕ್ಕೆ ಸರ್ಕಾರದ ಮುಂದೆ ಈ ಬೇಡಿಕೆಯನ್ನು ಇರಿಸಿ, ಬಿಜೆಪಿ, ರೈತ ಸಂಘಟನೆಗಳು ವಿನೂತನ ಪ್ರತಿಭಟನೆಯನ್ನು ಮಾಡಿದರು. ಅಲ್ಲದೇ ಡಿಸಿ ಮೂಲಕ ತಮ್ಮ ಬೇಡಿಕೆ ಈಡೇರಿಕೆಗಾಗಿ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಮಂಡ್ಯ ಬಿಜೆಪಿಯಿಂದ ವಿನೂತನ ಹೋರಾಟವನ್ನು ನಡೆಸಲಾಯಿತು. ಅವಿವಾಹಿತ ರೈತ ಯುವಕರ ಪರ ಮಂಡ್ಯ ಬಿಜೆಪಿ ಟೀಂ ನಿಂತಿತು. ಮಂಡ್ಯ ಡಿಸಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ಹೆಣ್ಣು ಸಿಗದ ಯುವಕರಿಂದ ಮಠಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯ ಮಾಡಿತು. ರೈತ ಮಕ್ಕಳ ಪರ ಬಿಜೆಪಿಯಿಂದ ರಾಜ್ಯ ಸರ್ಕಾರಕ್ಕೆ ವಿಶೇಷ ಮನವಿ ಮಾಡಲಾಯಿತು. ಕೈಯಲ್ಲಿ ತಾಂಬೂಲ ಹಿಡಿದು, ವಧುವಿನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿ ಡಿಸಿ ಕಚೇರಿಗೆ ಬಂದು ಅಣಕು ಪ್ರದರ್ಶನ ನೀಡಲಾಯಿತು. ಮಂಡ್ಯದ ಡಿಸಿ ಕಚೇರಿ ಬಳಿ ಬಿಜೆಪಿ…

Read More

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವರಾದ ರಹೀಂ ಖಾನ್‌ ಅವರ ಉತ್ತರಿಸಿದರು. ಕಳೆದ 2022ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರಿಗೆ ಎಸ್‍ಎಫ್‍ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿತ್ತು. ಆದರೆ ಸ್ಥಳೀಯ ಸಂಸ್ಥೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು. ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ. 40 ರಷ್ಟು ಸರ್ಕಾರದಿಂದ ಹಾಗೂ ಶೇ. 60 ರಷ್ಟು ನಗರ ಸ್ಥಳೀಯ ಸಂಸ್ಥೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿರುತ್ತದೆ ಎಂದರು. https://twitter.com/KarnatakaVarthe/status/1999410679032480069

Read More

ಬೆಳಗಾವಿ ಸುವರ್ಣಸೌಧ : ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭ ಶಾಸಕರಾದ ರಮೇಶ್ ಬಾಬು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಭೂ ಕಬಳಿಕೆದಾರರಿಗೆ ನೀಡುವ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ. ಈ ಅಕ್ರಮದಲ್ಲಿ ಕೆಲ ಅಧಿಕಾರಿಗಳು ಭಾಗಿರುವುದು ವಿಷಾದನೀಯ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಸುಮಾರು 98 ಜನರಿಗೆ ರೈತರ ಹೆಸರಿನಲ್ಲಿ ಸಾಗುವಳಿ ಚೀಟಿ ನೀಡಿರುವ ಪ್ರಕರಣ ಇಲಾಖೆ ಗಮನದಲ್ಲಿದೆ. ಈ ನಕಲಿ ಸಾಗುವಳಿ ಚೀಟಿ ಮೇಲೆ ಖಾತೆಗೆ ಅರ್ಜಿ ಸಲ್ಲಿಸಿದ ಭೂ ಕಬಳಿಕೆದಾರರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲು ಮಾಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು. “ರೈತರ ಹೆಸರಲ್ಲಿ ನಕಲಿ ಭೂ ಸಾಗುವಳಿ ಚೀಟಿ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಮಾಡುವುದಾಗಿ ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರ ಲಿಖಿತ ಉತ್ತರ ನೀಡಿದರು. ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26…

Read More

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು,  ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. 2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ…

Read More

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಹೊಸದಾಗಿ ಮುಖ; ಇಂಜಿನಿಯರ್ ಹಾಗೂ ಅಧೀಕ್ಷಕ ಇಂಜಿನಿಯರ್ ಕಛೇರಿಗಳನ್ನು ಸೃಜಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025 ರಂದು ಜರುಗಿದ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಮೇಕೆದಾಟು ಯೋಜನೆಯನ್ನು ಯಾವುದೇ ಅಡೆತಡೆ ಇಲ್ಲದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರಸ್ಥಾನವನ್ನಾಗಿಸಿ, ಅಲ್ಲಿ ಒಂದು ಪ್ರತ್ಯೇಕ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವಲಯ ಕಛೇರಿಯನ್ನು ಮತ್ತು ಅಧೀಕ್ಷಕ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವೃತ್ತ ಕಛೇರಿಯನ್ನು ಸೃಜಿಸಿ ಕಾರ್ಯನಿರ್ವಹಿಸಲು ಸೂಕ್ತ ಕ್ರಮವಹಿಸುವಂತೆ ನಿರ್ಣಯಿಸಲಾಗಿರುತ್ತದೆ. ದಿನಾಂಕ: 10.12.2025 ರ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕಾವೇರಿ ನೀರಾವರಿ ನಿಗಮ ನಿಯಮಿತ ಇವರು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿ, ಮಾನ್ಯ ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025ರ ಸಭೆಯ ನಿರ್ಣಯದಂತೆ…

Read More