Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದಿನೇ ದಿನೇ ಬೆಂಗಳೂರು ವಿಸ್ತಾರಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂಬುದಾಗಿ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿತ್ತು. ಈ ಬೆನ್ನಲ್ಲೇ ಐದು ಪಾಲಿಕೆಗಳಾಗಿ ವಿಂಗಡಣೆ ಮಾಡಿ, ಆಡಳಿತ ನಡೆಸೋದಕ್ಕೆ ಆದೇಶಿಸಿದೆ. ಸೆಪ್ಟೆಂಬರ್.2ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿಗೊಳ್ಳಲಿದೆ. ರಾಜ್ಯ ಸರ್ಕಾರದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ರಚನೆ ಮಾಡಲಾಗಿತ್ತು. ಈ ಪ್ರಾಧಿಕಾರದ ಆಡಳಿತ ಸೆಪ್ಟೆಂಬರ್.2ರಿಂದ ಜಾರಿಯಾಗಲಿದೆ. ಹೀಗಾಗಿ ಇನ್ಮುಂದೆ ಬಿಬಿಎಂಪಿ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ನಡೆಸಲಿದೆ. ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಯನ್ನಾಗಿ ಬೆಂಗಳೂರನ್ನು ವಿಂಗಡಿಸಲಾಗಿದೆ. ಐದು ಪಾಲಿಕೆಗಳ ಕಚೇರಿ ಎಲ್ಲೆಲ್ಲಿ ಬರಲಿವೆ ಎನ್ನುವ ಮಾಹಿತಿ ಬಿಡುಗಡೆ ಮಾಡಲಾಗಿದೆ. ಜೊತೆಗೆ ಆ ಐದು ಪಾಲಿಕೆಗೆ ಆಡಳಿತವನ್ನು ವಿಕೇಂದ್ರೀಕರಿಸಿ, ಅಧಿಕಾರಿ, ಸಿಬ್ಬಂದಿ ಹಂಚಿಕೆ ಮಾಡಿ ಆದೇಶಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆಗಳಿಗೆ 10 ತಾತ್ಕಾಲಿಕ ಕಚೇರಿಗಳ ಗುರುತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಾರ್ಪೋರೇಷನ್ ಸರ್ಕಲ್ ಕೇಂದ್ರ ಕಚೇರಿ…
ಬೆಂಗಳೂರು : “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಅರಸು ಅಸೋಸಿಯೇಷನ್ ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ. ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು” ಎಂದು ಕೊಂಡಾಡಿದರು. “ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಇವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ…
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗಲಿಂದ ಪ್ರಾರಂಭವಾಗಲಿದೆ ಎನ್ನುವಂತ ದಿನಾಂಕವನ್ನು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗ ಪ್ರಾರಂಭವಾಗಲಿದೆ ಎನ್ನುವಂತ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಕನ್ನಡದ ಬಿಗ್ ಬಾಸ್ ಸೀಸನ್ 12 ಮೊದಲ ಪ್ರೊಮೋ ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮ ಯಾವಾಗ ಪ್ರಾರಂಭವಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿತ್ತು. ಇದಕ್ಕೆ ನಟ ಸುದೀಪ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್.28ಕ್ಕೆ ಪ್ರಾರಂಭ ಆಗಲಿದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಇಂದು ಮೈಸೂರಲ್ಲಿ ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ನಟ ಸುದೀಪ್ ಭಾಗಿಯಾಗಿದ್ದರು. ಈ ವೇಳೆ ಅವರು ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗ ಪ್ರಾರಂಭವಗಲಿದೆ ಎನ್ನುವ ಮಾಹಿತಿಯನ್ನು ರಿವೀಲ್ ಮಾಡಿದರು. ಸೆಪ್ಟೆಂಬರ್.28ಕ್ಕೆ ಕಿರುತೆರೆಯ ಖ್ಯಾತ ಬಿಗ್ ಬಾಸ್ ಸೀಸನ್ 12 ಆರಂಭಗೊಳ್ಳಲಿದೆ. ಈ ಬಾರಿಯೂ ಅವರೇ ನಿರೂಪಣೆ ಮಾಡಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/indian-origin-microsoft-techie-found-dead-at-work-family-warns-against-overwork/…
ದಾವಣಗೆರೆ: ರಾಜ್ಯಾಧ್ಯಂತ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸಿಸ್ಟಮ್ ಬಳಕೆ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ನಿಯಮ ಮೀರಿ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಡಿಜೆ ಬಳಸಿದ್ದಕ್ಕೆ, ಜಪ್ತಿ ಮಾಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಹಿನ್ನಲೆಯಲ್ಲಿ ಡಿಜೆ ಸೌಂಡ್ ಸಿಸ್ಟಮ್ ಜಪ್ತಿ ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನ ಬಸವನಾಳ ಗೊಲ್ಲರಹಟ್ಟಿಯಲ್ಲಿ ಡಿಜೆ ಜಪ್ತಿ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಾಧ್ಯಂತ ಗಣೇಶ ಮೆರವಣಿಗೆ ವೇಳೆ ಜಿಡೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಲಾಗಿತ್ತು. ಡಿಸಿ ಜಿ.ಎಂ ಗಂಗಾಧರಸ್ವಾಮಿ ಆದೇಶಿಸಿದ್ದರು. ಈ ನಿಯಮ ಉಲ್ಲಂಘಿಸಿದ್ದರಿಂದ ಡಿಜೆ ಸಿಸ್ಟಮ್ ಜಪ್ತಿ ಮಾಡಲಾಗಿದೆ. ಇನ್ನೂ ಡಿಜೆಟಿ ಸಿಸ್ಟಂ ಮಾಲೀಕ, ಗಣೇಶ ಉತ್ಸವ ಸಮಿತಿಯವರು ಸೇರಿದಂತೆ ಮೂವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಡಿಜೆ ಸೌಂಡ್ ಸಿಸ್ಟಮ್ ಬಳಸಿ ಗ್ರಾಮಸ್ಥರಿಗೆ ತೊಂದರೆ ನೀಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. https://kannadanewsnow.com/kannada/indian-origin-microsoft-techie-found-dead-at-work-family-warns-against-overwork/ https://kannadanewsnow.com/kannada/controversy-over-banu-mushtaqs-selection-to-inaugurate-mysore-dasara-cm-siddaramaiah-gives-this-clarification/
ಮೈಕ್ರೋಸಾಫ್ಟ್ ಕಾರ್ಪ್ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಕ್ಯಾಲಿಫೋರ್ನಿಯಾದ ಕಂಪನಿಯ ಮೌಂಟೇನ್ ವ್ಯೂ ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರತದ ಇಂದೋರ್ನ 35 ವರ್ಷದ ಪ್ರತೀಕ್ ಪಾಂಡೆ ಎಂದು ಗುರುತಿಸಲಾಗಿದ್ದು, ಆಗಸ್ಟ್ 19 ರ ಸಂಜೆ ಕಚೇರಿಗೆ ಪ್ರವೇಶಿಸಿದಾಗ ಆಗಸ್ಟ್ 20 ರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದರು. ಅಧಿಕಾರಿಗಳು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿ “ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ನಡವಳಿಕೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ” ಎಂದು ವರದಿ ಮಾಡಿದ್ದಾರೆ. ಬ್ಲೂಮ್ಬರ್ಗ್ ವರದಿಯ ಪ್ರಕಾರ, ಪ್ರಕರಣವನ್ನು ಕ್ರಿಮಿನಲ್ ತನಿಖೆಯಾಗಿ ಪರಿಗಣಿಸಲಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೆಲಸದ ಒತ್ತಡದ ಬಗ್ಗೆ ಕುಟುಂಬವು ಕಳವಳ ವ್ಯಕ್ತಪಡಿಸುತ್ತದೆ ಸಂಬಂಧಿಗಳು ತಂತ್ರಜ್ಞಾನ ಕಂಪನಿಗಳು ಉದ್ಯೋಗಿಗಳನ್ನು ತೀವ್ರ ಕೆಲಸದ ಬೇಡಿಕೆಗಳಿಂದ ರಕ್ಷಿಸಲು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಪಾಲೊ ಆಲ್ಟೊ ಡೈಲಿ ಪೋಸ್ಟ್ನೊಂದಿಗೆ ಮಾತನಾಡಿದ ಪಾಂಡೆ ಅವರ ಚಿಕ್ಕಪ್ಪ ಮನೋಜ್ ಪಾಂಡೆ, “ಪ್ರತಿಕ್ ತುಂಬಾ ಸಂತೋಷದಾಯಕ, ಕಠಿಣ ಪರಿಶ್ರಮಿ…
ಮೈಸೂರು : ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ…
ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಜೆಡಿಎಸ್ ನಿಂದ ಧರ್ಮ ಸತ್ಯ ಯಾತ್ರೆ ಕೈಗೊಳ್ಳಲಾಗಿದೆ. ಇಂತಹ ಧರ್ಮ ಸತ್ಯ ಯಾತ್ರೆ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳವನ್ನು ತಲುಪಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಜೆಡಿಎಸ್ ನ ಧರ್ಮ ಸತ್ಯ ಯಾತ್ರೆ ತಲುಪಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಯಾತ್ರೆ ನಡೆಯುತ್ತಿದೆ. ಧರ್ಮಸ್ಥಳದ ಮುಖಮಂಟಪದಿಂದ ಜೆಡಿಎಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಶಾಸಕ ಎ ಮಂಜು, ಹೆಚ್.ಟಿ ಮಂಜು, ಸಿಎಸ್ ಬಾಲಕೃಷ್ಣ, ಸುರೇಶ್ ಗೌಡ, ಪರಿಷತ್ ಸದಸ್ಯ ಭೋಜೇಗೌಡ ಮತ್ತಿತರರು ಈ ಧರ್ಮ ಸತ್ಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. https://kannadanewsnow.com/kannada/the-schedule-for-the-air-show-during-the-world-famous-mysuru-dasara-has-been-fixed/ https://kannadanewsnow.com/kannada/mysore-dasara-is-a-religion-transcending-and-caste-transcending-festival-banu-mushtaq-inaugurated-it-cm-siddaramaiah/
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿತ್ತು. ಈ ಬೆನ್ನಲ್ಲೇ ಯಾವ ದಿನದಂದು ಮೈಸೂರ ದಸರಾ ಸಂದರ್ಭದಲ್ಲಿ ಏರ್ ಶೋ ನಡೆಯಲಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ ಎಂದರು. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ…
ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಒಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೆ ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬುಕರ್ ಪ್ರಶಸ್ತಿ ಪಡೆದ ಸಾಹಿತಿಗಳು…
ನವದೆಹಲಿ: ಒಡಿಶಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉತ್ತೇಜಿಸುವ ಮಹತ್ವದ ಕ್ರಮವಾಗಿ, ಭಗವಾನ್ ಜಗನ್ನಾಥನ ರಥಯಾತ್ರೆಯ ಮೂರು ಪವಿತ್ರ ಚಕ್ರಗಳನ್ನು ಸಂಸತ್ತಿನ ಸಂಕೀರ್ಣದಲ್ಲಿ ಅಳವಡಿಸಲಾಗುವುದು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅಲ್ಲಿ ದೇವಾಲಯ ಆಡಳಿತವು ಪ್ರಸ್ತಾವನೆಯನ್ನು ಮಂಡಿಸಿತು. ಬಿರ್ಲಾ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡರು, ಇದು ದೇವಾಲಯ ಮತ್ತು ರಾಷ್ಟ್ರ ಎರಡಕ್ಕೂ ಐತಿಹಾಸಿಕ ಕ್ಷಣವಾಗಿದೆ. ಲೋಕಸಭಾ ಸ್ಪೀಕರ್ ಪುರಿ ದೇವಸ್ಥಾನಕ್ಕೆ ಭೇಟಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪುರಿ ಸಂಸದ ಸಂಬಿತ್ ಪಾತ್ರ ಅವರೊಂದಿಗೆ ಈ ಪ್ರಸ್ತಾವನೆಯನ್ನು ಚರ್ಚಿಸಲಾಯಿತು. ಭೇಟಿಯ ಸಮಯದಲ್ಲಿ, ಶ್ರೀ ಜಗನ್ನಾಥ ದೇವಸ್ಥಾನ ಆಡಳಿತ (SJTA) ಚಕ್ರಗಳನ್ನು ಅಳವಡಿಸುವ ಕಲ್ಪನೆಯನ್ನು ಮಂಡಿಸಿತು, ಅದನ್ನು ಬಿರ್ಲಾ ತಕ್ಷಣ ಒಪ್ಪಿಕೊಂಡರು. SJTA ಯ ಮುಖ್ಯ ಆಡಳಿತಾಧಿಕಾರಿ ಅರಬಿಂದ ಪಾಧೀ…






