Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ. ಈ ಸಂಬಂಧ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಡಿಐಜಿಪಿ(ಆಡಳಿತದ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕೆಎಸ್ ಪಿ (ಡಿಪಿ) ನಿಯಮಗಳು 1965/89ರ ನಿಯಮ-5ರನ್ವಯ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತಿನಲ್ಲಿರಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ. ಇನ್ನೂ ಅಮಾನತುಗೊಂಡಿದ್ದಂತ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಶಸ್ತ್ರ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಸಹಾಯಕ ಕಮಾಂಡೆಂಟ್ ವೈಜ್ಯನಾಥ್ ಕಲ್ಯಾಣಿ ರೇವೂರ ಹಾಗೂ ಪಿಐ ಆನಂದ ಮೇತ್ರಿ ಎಂಬುವರನ್ನು ಕಾರ್ಯಕಾರ್ಯೇತರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು ಬೆಂಗಳೂರಿನ ಐಎಸ್ ಡಿಗೆ ಸ್ಥಳ ನಿಯುಕ್ತಿಗೊಳಿಸಿದ್ದರೇ, ಶಾಂತಕುಮಾರ್ ಅವರನ್ನು ಹಾಸನದ ಪಿಟಿಎಸ್ ಗೆ, ವೈಜ್ಯನಾಥ್ ಕಲ್ಯಾಣಿ ರೇವೂರ ಅವರನ್ನು ಮಂಗಳೂರಿನ ಕೆ ಎಸ್ ಆರ್ ಪಿ ಯ 7ನೇ ಪಡೆಗೆ ಹಾಗೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ಅಲ್ಲಲ್ಲಿ ಮಳೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಳೆಹಾನಿ ಕುರಿತು ಮಾಹಿತಿ ಪಡೆದರು. ಈ ವೇಳೆ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಹೆಚ್ಚು ಜಾಗೃತೆ ವಹಿಸಬೇಕು. ಡೆಂಗ್ಯೂ ಪ್ರಕರಣಗಳು ಸಾಗರ ತಾಲ್ಲೂಕಿನಲ್ಲಿ ಹೆಚ್ಚಳವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿದರು. ಸಾಗರ ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಶಾಲೆಗಳ ಬಗ್ಗೆ ಹೆಚ್ಚು ಗಮನ ಹರಿಸಿ, ಕೆಲವು ಪ್ರದೇಶಗಳಲ್ಲಿ ಮಕ್ಕಳು ಕಾಲುಸಂಕ ದಾಟಿಕೊಂಡು ಶಾಲೆಗೆ ಹೋಗುತ್ತಾರೆ. ಅಂತಹ ಸ್ಥಳಗಳ ಬಗ್ಗೆ ಹೆಚ್ಚಿನ ಗಮನ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಹತ್ತಿರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನರ ಭದ್ರತೆಗೆ ಪ್ರಥಮ ಆದ್ಯತೆ ನೀಡಬೇಕಾದ ರಾಜ್ಯ ಸರ್ಕಾರ, ತನ್ನ ಜನವಿರೋಧಿ ನಿರ್ಲಕ್ಷ್ಯ ನೀತಿಯನ್ನೇ ಕಾಯಕವಾಗಿ ಮಾಡಿಕೊಂಡ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಅಧಿಕಾರದ ಕುರ್ಚಿಗೆ ಅಂಟಿಕೊಂಡಿರುವ ಈ ಸರ್ಕಾರ, ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಇತರರ ಮೇಲೆ ತನ್ನ ತಪ್ಪನ್ನು ಹೊರಿಸಲು ಪ್ರಯತ್ನಿಸಿದೆ. ಆದರೆ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಾಗೂ ಮಾನ್ಯ ಗೃಹಸಚಿವರಾದ ಡಾ. ಜಿ. ಪರಮೇಶ್ವರ ಅವರು ಘಟನೆಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. https://TWITTER.com/NswamyChalavadi/status/1934638737570599300
ಬಳ್ಳಾರಿ : ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಅರ್ಹ ಮಕ್ಕಳಿಂದ ಪ್ರಸ್ತಕ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಆರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅನ್ಲೈನ್ ಮೂಲಕ https://awards.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. 2025 ನೇ ಜುಲೈ 31 ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಸಾಧನೆ ಮಾಡಿರುವ ಎಲ್ಲಾ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ದೂ.08392-241373 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ…
ಸ್ವೀಡನ್ : ಕರ್ನಾಟಕವನ್ನು ಶುದ್ಧ ಇಂಧನ ಸಂಚಾರ (ಕ್ಲೀನ್ ಮೊಬಿಲಿಟಿ) ಮತ್ತು ವಿದ್ಯುತ್ಚಾಲಿತ ವಾಹನ (ಇವಿ) ತಯಾರಿಕೆಯ ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಹೂಡಿಕೆದಾರರ ಗಮನ ಸೆಳೆಯಲು ಸ್ವೀಡನ್ನ ಗೋಥೆನ್ಬರ್ಗ್ನಲ್ಲಿ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ರೋಡ್ಷೋ ನಡೆಸಿತು. ಇದೇ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳನ್ನು ತ್ವರಿತವಾಗಿ ಜಾರಿಗೊಳಿಸಲು ಹಾಗೂ ಜಾಗತಿಕ ಹೂಡಿಕೆದಾರರನ್ನು ಆಕರ್ಷಿಸಲು ನಡೆಯಲಿರುವ 10 ದಿನಗಳ ಅಂತರರಾಷ್ಟ್ರೀಯ ರೋಡ್ಷೋಗಳಲ್ಲಿ ಸಚಿವ ಪಾಟೀಲ ಅವರು ಭಾಗವಹಿಸಲಿದ್ದಾರೆ. ಸ್ವೀಡನ್ ನಂತರ ಕರ್ನಾಟಕದ ನಿಯೋಗವು ಸಚಿವ ಪಾಟೀಲ ಅವರ ನೇತೃತ್ವದಲ್ಲಿ ಡೆನ್ಮಾರ್ಕ್ನಲ್ಲಿಯೂ ರೋಡ್ಷೋ ನಡೆಸಲಿದೆ. ಇಲ್ಲಿ ನಡೆಯುತ್ತಿರುವ ಇವಿಎಸ್38 ಶೃಂಗಸಭೆಯು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಬಳಕೆ ಹೆಚ್ಚಳ ಮತ್ತು ಅತ್ಯಾಧುನಿಕ ವಾಹನ ತಯಾರಿಕೆಯ ತಂತ್ರಜ್ಞಾನಗಳ ಮೇಲೆ ಗಮನ ಕೇಂದ್ರೀಕರಿಸಿದ ಪ್ರಮುಖ ಜಾಗತಿಕ ಸಮ್ಮೇಳನವಾಗಿದೆ. ಶೃಂಗಸಭೆಯ ಸಂದರ್ಭದಲ್ಲಿ ನಡೆದ…
ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಗೊಂಡಿದ್ದಾರೆ. ದಿನಾಂಕ 15-06-2025 ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ಗೌರವಾಧ್ಯಕ್ಷರಾಗಿ ಪ್ರೊ.ಎಚ್.ಎಂ.ಪರಮೇಶ್ವರಯ್ಯ, ಉಪಾಧ್ಯಕ್ಷರಾಗಿ ಡಾ.ಮಾನಸ, ಸಹಕಾರ್ಯದರ್ಶಿಯಾಗಿ ಸಿ.ಚಿಕ್ಕಣ್ಣ. ಖಜಾಂಚಿಯಾಗಿ ಆರ್.ಚಂದ್ರಶೇಖರಯ್ಯ, ನಿರ್ದೇಶಕರುಗಳಾಗಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಕಾ.ತ.ಚಿಕ್ಕಣ್ಣ, ಡಾ.ಬಿ.ಕೆ.ರವಿ, ಎಸ್.ನಾಗಣ್ಣ, ಬಾಬುರಾವ್, ಡಾ.ಮೈಲಹಳ್ಳಿ ರೇವಣ್ಣ, ಡಾ.ಪರಶುರಾಂ.ಸಿ.ಡಿ. ಡಾ.ವಾಣಿಶ್ರೀ ಅರುಣ್. ಸೌಜನ್ಯ ಪರಮೇಶ್, ಶಂಕ ಹರ್ತಿಕೋಟೆ ಹಾಗೂ ಹೆಚ್.ಆರ್.ದಿನೇಶ್ ಆಯ್ಕೆಯಾಗಿದ್ದಾರೆ. https://kannadanewsnow.com/kannada/in-the-state-a-total-of-208-people-tested-positive-for-corona/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ. ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 103 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/lokayukta-police-blackmail-case-against-government-official-accused-ningappa-remanded-in-14-day-judicial-custody/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ಲೋಕಾಯುಕ್ತ ಪೊಲೀಸರಿಂದಲೇ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಮಾಡಿದಂತ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಜೂನ್.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಲೋಕಾಯುಕ್ತ ಕೋರ್ಟ್ ಆದೇಶಿಸಿದೆ. ಜಾಮೀನು ಕೋರಿ ಪೊಲೀಸ್ ಸಿಬ್ಬಂದಿ ನಿಂಗಪ್ಪ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದರು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಆರೋಪಿ ಪೊಲೀಸ್ ಸಿಬ್ಬಂದಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. https://kannadanewsnow.com/kannada/bellary-district-school-education-departments-progress-conducted-by-minister-madhu-bangarappa-here-are-the-main-highlights/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯು ಸಹ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ಸರ್ಕಾರಕ್ಕೆ ನೀವು ನೀಡುವ ಕೊಡುಗೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕು. ಹಂತ-ಹAತವಾಗಿ ಅದನ್ನು ಕಾರ್ಯರೂಪಕ್ಕೆ ತರಬೇಕು. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಡಿಪಾಯ ಹಾಕಿದಂತಾಗುತ್ತದೆ. ಕೊನೆಯ ಸಮಯದಲ್ಲಿ ಗೊಂದಲದಲ್ಲಿ ಅನುಷ್ಠಾನಗೊಳಿಸುವುದಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಕ್ಕಳಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸವಾಗಬೇಕು. ಅಧಿಕಾರಿಗಳು ಶಾಲೆಗಳನ್ನು ದತ್ತು ರೀತಿಯಲ್ಲಿ ಕಾಳಜಿ ವಹಿಸಬೇಕು. ಇದರಿಂದ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ ಮತ್ತು ಒಳ್ಳೆಯ ಫಲಿತಾಂಶವು ಲಭಿಸುತ್ತದೆ ಎಂದರು.…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್, ಜೂನ್ 25 ರಂದು ಬ್ರಿಡ್ಜ್ಟೌನ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ಪ್ರಾರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಲಂಡನ್ನ ಲಾರ್ಡ್ಸ್ನಲ್ಲಿ ನಡೆದ 2025 ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 36 ವರ್ಷದ ಆಟಗಾರನಿಗೆ ಉಂಟಾದ ಬೆರಳಿನ ಗಾಯದಿಂದಾಗಿ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ಆ ಪಂದ್ಯದಲ್ಲಿ ಅವರು ಐದು ವಿಕೆಟ್ಗಳಿಂದ ಸೋತರು. 2025 ರ ಡಬ್ಲ್ಯೂಟಿಸಿ ಫೈನಲ್ ಪಂದ್ಯದ ಮೂರನೇ ದಿನದಂದು, ಆಸ್ಟ್ರೇಲಿಯಾ 281 ರನ್ಗಳ ಒಟ್ಟು ಮೊತ್ತವನ್ನು ರಕ್ಷಿಸುತ್ತಿದ್ದಾಗ, ಮಿಚೆಲ್ ಸ್ಟಾರ್ಕ್ ಟೆಂಬಾ ಬವುಮಾ ಅವರ ಬ್ಯಾಟ್ನ ಹೊರಗಿನ ಅಂಚಿಗೆ ಹೊಡೆದರು, ಸ್ಟೀವ್ ಸ್ಮಿತ್ ಹೆಲ್ಮೆಟ್ ಧರಿಸಿ ಮೊದಲ ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ, ಅದನ್ನು ಹಿಡಿಯಲು ಸಾಧ್ಯವಾಗಲಿಲ್ಲ. ಈ ಸಂಪೂರ್ಣ ಸರಣಿಯಲ್ಲಿ, ಚೆಂಡು ಅವರ ಬಲಗೈಯ ಕಿರುಬೆರಳಿಗೆ ತಗುಲಿತು,…













