Author: kannadanewsnow09

ಕಲಬುರ್ಗಿ: ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಸಹಕಾರದೊಂದಿಗೆ ಸರ್ಕಾರ ರಚಿಸಲು ಮುಂದಾಗಿದ್ದರು ಎಂಬುದಾಗಿ ಶಾಸಕ ಬಸಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರೊಂದಿಗೆ ರಹಸ್ಯ ಸಭೆಯನ್ನು ನಡೆಸಿದ್ದರು. ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಮುಂದಾಗಿದ್ದರು ಎಂದರು. ಡಿ.ಕೆ ಶಿವಕುಮಾರ್, ವಿಜಯೇಂದ್ರ ಮಾತುಕತೆಯ ಸಂದರ್ಭದಲ್ಲಿ ಡಿಕೆಶಿ ಮುಖ್ಯಮಂತ್ರಿ, ವಿಜಯೇಂದ್ರ ಉಪಮುಖ್ಯಮಂತ್ರಿ ಆಗುವಂತೆ ಚರ್ಚೆ ನಡೆದಿತ್ತು. ಆದರೇ ಡಿಕೆ ಶಿವಕುಮಾರ್ ಅವರ ಹಿಂದೆ ಹೆಚ್ಚಿನ ಸಂಖ್ಯೆಯ ಶಾಸಕರು ಇರಲಿಲ್ಲ. ಹೀಗಾಗಿ ಸುಮ್ಮನಾಗಿದ್ದಾರೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. https://kannadanewsnow.com/kannada/the-neglect-of-former-public-representatives-is-the-reason-for-many-problems-in-the-maddur-constituency-mla-k-m-uday/ https://kannadanewsnow.com/kannada/take-precautions-to-prevent-unfortunate-incidents-in-mandya-minister-chaluwarayaswamy-directs-police/

Read More

ಮಂಡ್ಯ: ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪೊಲೀಸ್ ಜವಾಬ್ದಾರಿಯಾಗಿದೆ ಆದ್ದರಿಂದಲೇ ನಾಗಮಂಗಲದ ಮಸೀದಿ ಮುಂದೆ ಸಾಗುವ ಕೆಲವು ಗಣಪತಿ ವಿಗ್ರಹಗಳ ಮೆರವಣಿಗೆಗೆ ನಿರ್ಭಂಧ ಹೇರಲಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ಮೊದಲಿನಿಂದಲೂ ನಾಗಮಂಗಲದ ಮಸೀದಿ ಮುಂದೆ ಸಾಗುತ್ತಿದ್ದ ಕೆಲವು ಗಣಪತಿ ಮೆರವಣಿಗೆಗೆ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೊಸದಾಗಿ ಪ್ರತಿಷ್ಠಾಪಿಸಲಾದ ಗಣೇಶ ವಿಗ್ರಹಗಳ ಮಸೀದಿ ದಾರಿಯಲ್ಲಿ ಹೋಗಲು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಕ್ಯಾಬಿನೆಟ್ ನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಶಾಸಕರಿಗೂ ಗಣಪತಿ ಪ್ರತಿಷ್ಠಾಪನೆ ಮತ್ತು ಮೆರವಣಿಗೆಯ ಕುರಿತು ಒತ್ತಡದಿಂದ ತೀರ್ಮಾನ ತೆಗೆದುಕೊಳ್ಳಬೇಡಿ ಹಾಗೂ ಯಾವುದೇ ಅಹಿತಕರ ಘಟನೆ ಉಂಟಾಗದಂತೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುತ್ತದೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲೂ ಸಹ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

ಮಂಡ್ಯ : ಮದ್ದೂರು ಕ್ಷೇತ್ರದಲ್ಲಿ ನೀರಾವರಿ, ರಸ್ತೆ ಹಾಗೂ ಮೂಲಭೂತ ಸೌಲಭ್ಯದಿಂದ ಜನತೆ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಕ್ಷೇತ್ರವನ್ನಾಳಿದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗಂಭೀರ ಆರೋಪ ಮಾಡಿದರು. ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 4 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಭೂತ ಸೌಲಭ್ಯ ಕಲ್ಪಿಸಿ ಕೊಡುವಲ್ಲಿ ಹಿಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಹೀಗಾಗಿ ನನ್ನ ಅಧಿಕಾರದ ಅವಧಿಯಲ್ಲಿ ಜನಪ್ರತಿನಿಧಿಗಳ ಚರ್ಚಿಸಿ ಹಂತ ಹಂತವಾಗಿ ಸಮಸ್ಯೆಗಳನ್ನು ಬಗಹರಿಸುತ್ತಿದ್ದೇನೆ ಎಂದರು. ಹಿಂದುಳಿದ ವರ್ಗ ಬಡತನ, ತಾರತಮ್ಯ ಮತ್ತು ಕಳಪೆ ಸಾಮಾಜಿಕ ಸ್ಥಾನಮಾನಗಳನ್ನು ಎದುರಿಸುತ್ತಿವೆ. ಹೀಗಾಗಿ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 30-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 54 ಸಾವಿರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 10,355 ಪಶ್ಚಿಮ ವಲಯ: 2,974 ದಕ್ಷಿಣ ವಲಯ: 32,742 ಬೊಮ್ಮನಹಳ್ಳಿ ವಲಯ: 1,984 ದಾಸರಹಳ್ಳಿ ವಲಯ: 156 ಮಹದೇವಪುರ ವಲಯ: 955 ಆರ್.ಆರ್.ನಗರ ವಲಯ: 2,871 ಯಲಹಂಕ ವಲಯ: 2,616 ಒಟ್ಟು: 54,653 https://kannadanewsnow.com/kannada/nikhil-kumaraswamy-did-not-travel-to-dharmasthala-for-political-reasons/ https://kannadanewsnow.com/kannada/our-government-does-not-look-at-caste-the-development-of-all-castes-is-our-goal-cm-siddaramaiah/

Read More

ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದರು. ಚಾತುವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ನಾವು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕ ಸಬಲರಾಗಬೇಕು. ಈ ಉದ್ದೇಶದಿಂದಲೇ ನಾನು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆವು ಎಂದು…

Read More

ಧರ್ಮಸ್ಥಳ: ಜೆಡಿಎಸ್ ರಾಜಕೀಯಕ್ಕಾಗಿ ಧರ್ಮಸ್ಥಳ ಸತ್ಯ ಯಾತ್ರೆಯನ್ನು ಮಾಡಿಲ್ಲ. ಮಂಜುನಾಥ, ಅಣ್ಣಪ್ಪ ಸ್ವಾಮಿ ಭಕ್ತರು ದೇಶವ್ಯಾಪಿ ಇದ್ದಾರೆ. ಇದೀಗ ಕ್ಷೇತ್ರದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಇದನ್ನು ಆಲೋಚನೆ ಮಾಡೋದಕ್ಕೂ ಸಾಧಅಯವಿಲ್ಲ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಧರ್ಮಸ್ಥಳ ಸತ್ಯ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು ಮಂಜುನಾಥನ ಮುಂದೆ ದುಷ್ಟಶಕ್ತಿ ಉಳಿಯಲು ಸಾಧ್ಯವಿಲ್ಲ. ಮಂಜುನಾಥನ ಭಕ್ತರು ಮನೆಯಲ್ಲಿ ಕೈಕಟ್ಟಿ ಕೂರಲು ಸಾಧ್ಯವಿಲ್ಲ. ತಾಳ್ಮೆ ಒಂದು ಹಂತಕ್ಕಷ್ಟೇ ಸರಿ ಎಂದರು. ಪೂಜ್ಯರ ಕುಟುಂಬಕ್ಕೆ ಊಹಿಸಲು ಆಗದಷ್ಟು ನೋವಾಗಿದೆ. ತಾಳ್ಮೆ ಕಳೆದುಕೊಳ್ಳದೇ ಸಮಾಧಾನದಿಂದಲೇ ವರ್ತಿಸಿದ್ದಾರೆ. ಈ ಪ್ರಕರಣದ ಹಿಂದೆ ಕಾಣದ ಕೈಗಳು ಇವೆ ಎಂಬುದಾಗಿ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ವಿದೇಶದಿಂದ ಹಣ ಹೂಡಿಕೆ ಮಾಡಿ ವೀಡಿಯೋ ಮಾಡಿದ್ರು. ಪೂಜ್ಯರ ಕುಟುಂಬಕ್ಕೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಧರ್ಮಸ್ಥಳದ ಮೇಲೆ ನಡೆದ ಷಡ್ಯಂತ್ರ ಬಯಲಾಗಬೇಕು. ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂಬುದಾಗಿ ಆಗ್ರಹಿಸಿದರು. https://kannadanewsnow.com/kannada/pakistan-confirms-india-tour-for-junior-hockey-world-cup-amid-tense-ties/ https://kannadanewsnow.com/kannada/ganesh-immersion-procession-schedule-leads-to-heart-attack-a-person-collapses-and-dies-while-dancing/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವಾರಗಟ್ಟಲೆ ಊಹಾಪೋಹಗಳು ಮತ್ತು ಉದ್ವಿಗ್ನತೆಗಳನ್ನು ತೊಡೆದುಹಾಕಿ, ಪಾಕಿಸ್ತಾನದ 21 ವರ್ಷದೊಳಗಿನವರ ಹಾಕಿ ತಂಡವು ಭಾರತ ಆಯೋಜಿಸಲಿರುವ ಮುಂಬರುವ FIH ಜೂನಿಯರ್ ವಿಶ್ವಕಪ್‌ನಲ್ಲಿ ಭಾಗವಹಿಸುವುದನ್ನು ದೃಢಪಡಿಸಿದೆ. ಈ ವರ್ಷದ ಆರಂಭದಲ್ಲಿ ಏಷ್ಯಾ ಕಪ್‌ನಿಂದ ಹಿಂದೆ ಸರಿದ ನಂತರ, ನವೆಂಬರ್ 28 ರಿಂದ ಡಿಸೆಂಬರ್ 10 ರವರೆಗೆ ಚೆನ್ನೈ ಮತ್ತು ಮಧುರೈನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಸ್ಪರ್ಧಿಸಲು ಪಾಕಿಸ್ತಾನ ತನ್ನ ಸಿದ್ಧತೆಯನ್ನು ಪುನರುಚ್ಚರಿಸಿದೆ ಎಂದು ಹಾಕಿ ಇಂಡಿಯಾ ಪ್ರಧಾನ ಕಾರ್ಯದರ್ಶಿ ಭೋಲನಾಥ್ ಸಿಂಗ್ ಆಗಸ್ಟ್ 30, 2025 ರಂದು ಘೋಷಿಸಿದರು. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಈ ಘೋಷಣೆ ಹೊರಬಿದ್ದಿದೆ. ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷದ ಹಿನ್ನೆಲೆಯಲ್ಲಿ ಭದ್ರತಾ ಕಾಳಜಿಗಳನ್ನು ಉಲ್ಲೇಖಿಸಿ ಪಾಕಿಸ್ತಾನವು ಈ ಹಿಂದೆ ನಡೆಯುತ್ತಿರುವ ಏಷ್ಯಾ ಕಪ್‌ನಿಂದ ಹೊರಗುಳಿದಿತ್ತು. ಆದರೂ, ನಿರ್ಣಾಯಕವಾಗಿ, ದ್ವಿಪಕ್ಷೀಯ ಕ್ರೀಡಾ ಸಂಬಂಧಗಳು ಮಿತಿಯಿಂದ ಹೊರಗುಳಿದಿದ್ದರೂ, ಬಹುಪಕ್ಷೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆಯು ಒಲಿಂಪಿಕ್ ಚಾರ್ಟರ್ ಸೇರಿದಂತೆ ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿರುತ್ತದೆ ಎಂದು ಭಾರತ ಸರ್ಕಾರ…

Read More

ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಹೀಗಾಗಿ ವ್ಯಕ್ತಿಯೊಬ್ಬ ಡ್ಯಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಉಂಟಾಗಿದೆ. ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದಾಗಿ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬೋದಗೂರು ಗ್ರಾಮದಲ್ಲಿ 40 ವರ್ಷದ ಲಕ್ಷ್ಮೀಪತಿ ಎಂಬಾತ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/minister-chaluwaraya-swamy-announced-the-congress-candidate-for-the-mandya-dcc-bank-management-board-election/ https://kannadanewsnow.com/kannada/horrific-accident-in-hassan-two-bike-riders-died-on-the-spot-after-a-collision-with-a-car/

Read More

ಮಂಡ್ಯ: ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿಯವರು ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರು. ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ತಾಲೂಕಿನ ಅಭ್ಯರ್ಥಿ ಸತೀಶ್, ಮಳವಳ್ಳಿ ಅಭ್ಯರ್ಥಿ ಶಾಸಕ ಪಿಎಂ ನರೇಂದ್ರಸ್ವಾಮಿ, ನಾಗಮಂಗಲ ಕ್ಷೇತ್ರದಿಂದ ಸಚಿನ್ ಚಲುವರಾಯಸ್ವಾಮಿ, ಕೆ ಆರ್ ಪೇಟೆಯಿಂದ ಅಂಬರೀಶ್, ಮದ್ದೂರು ತಾಲ್ಲೂಕು ವಿಎಸ್ಎಸ್ಎನ್ ಕ್ಷೇತ್ರದಿಂದ ಪಿ.ಸಂದರ್ಶ್, ಹಾಲು ಉತ್ಪಾದಕರ ಸಹಕಾರ ಸಂಘಗಳ ಮದ್ದೂರು. ಮಳವಳ್ಳಿ ಮತ್ತು ಮಂಡ್ಯ ತಾಲೂಕು ವ್ಯಾಪ್ತಿಯ ಕ್ಷೇತ್ರ ಕ್ಕೆ ತೈಲೂರು ಚಲುವರಾಜು, ಜಿಲ್ಲೆಯ ಬಳಕೆದಾರರ ಕ್ಷೇತ್ರದಿಂದ ಹಾಲಹಳ್ಳಿ ಅಶೋಕ್, ಜಿಲ್ಲೆಯ ಕೈಗಾರಿಕಾ ಕ್ಷೇತ್ರದಿಂದ ಜೋಗಿಗೌಡ, ಜಿಲ್ಲೆಯ ಟಿಎಪಿಸಿಎಂಎಸ್ ಕ್ಷೇತ್ರದಿಂದ ದಿನೇಶ್, ಹಾಗೂ ಮನಮುಲ್ ಮಿಲ್ಕ್ ಡಿವಿಜನ್ ಕ್ಷೇತ್ರದಿಂದ ಚೆಲುವರಾಜು, ಮಿಲ್ಕ್ ಸಬ್ ಡಿವಿಷನ್ ಕ್ಷೇತ್ರದಿಂದ ವಿಜಯಾನಂದ ಮೂರ್ತಿ, ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಪಾಂಡವಪುರ ಮತ್ತು ಶ್ರೀರಂಗಪಟ್ಟಣ ಕ್ಷೇತ್ರದ ಅಭ್ಯರ್ಥಿ…

Read More

ಹಾಸನ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಬೈಕಿಗೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಶಂಕರೇಗೌಡ(53) ಹಾಗೂ ಶ್ರೀನಿವಾಸಮೂರ್ತಿ(55) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/cancellation-control-and-rescheduling-of-these-trains-from-the-mysore-division/ https://kannadanewsnow.com/kannada/dharmasthala-case-burude-chinnayya-2-phone-sujata-bhatt-a-mobile-sit-seize/

Read More