Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ, ಹೆಸರುಕಾಳು ಖರೀದಿ ಆರಂಭಗೊಂಡಿದೆ. ಈ ಬಗ್ಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಇಂದಿನಿಂದಲೇ ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಸೂರ್ಯಕಾಂತಿ ಹೆಸರುಕಾಳು ಖರೀದಿ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1983123768391467195 https://kannadanewsnow.com/kannada/karnataka-media-academy-invites-applications-from-journalists-for-various-endowment-awards/ https://kannadanewsnow.com/kannada/attention-people-of-sagar-taluk-power-outages-in-these-areas-tomorrow-2/
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ವಿವಿಧ ಮಾಧ್ಯಮ ಸಂಸ್ಥೆಗಳು ದತ್ತಿನಿದಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದು, ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಅಭಿಮಾನಿ ಪ್ರಶಸ್ತಿʼ, ಮೈಸೂರಿನ ʼಮೈಸೂರು ದಿಗಂತʼ ಪತ್ರಿಕಾ ಸಂಸ್ಥೆಯು ʼ‘ಮಾನವೀಯ ಸಮಸ್ಯೆʼಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ ʼಮೈಸೂರು ದಿಗಂತ ಪ್ರಶಸ್ತಿʼ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ʼಅಭಿಮನ್ಯು ಪ್ರಶಸ್ತಿʼ, ಬೆಂಗಳೂರಿನ ʼಪ್ರಜಾ ಸಂದೇಶʼ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ ʼಪ್ರಜಾ ಸಂದೇಶ ದತ್ತಿ ಪ್ರಶಸ್ತಿʼಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ 10,000/- (ಹತ್ತು ಸಾವಿರ) ರೂ .ನಗದು ಬಹುಮಾನ ಒಳಗೊಂಡಿವೆ. ಆಸಕ್ತ ಪತ್ರಕರ್ತರು 2025ರ ಜನವರಿ 1 ರಿಂದ 2025ರ ಅಕ್ಟೋಬರ್ 25ರ ವರೆಗೆ ಪ್ರಕಟವಾಗಿರುವ ತಮ್ಮ…
ಶಿವಮೊಗ್ಗ: ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 29.10.2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 29.10.2025 ರ ಬುಧವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ದಿನಾಂಕ 29.10.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ಮತ್ತು ಎಫ್-17 ಎಸ್.ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ…
ಬೆಂಗಳೂರು: ರಾಜ್ಯದ ಬಡವರನ್ನು ಭಿಕ್ಷುಕರನ್ನಾಗಿ ಮಾಡುವ ಹೇಳಿಕೆಗಳನ್ನು ಕೊಟ್ಟು, ಮತಬ್ಯಾಂಕ್ ಮಾಡಿ ನೀವು ಲೂಟಿ ಮಾಡಲು ಈ ಸರಕಾರ ಉಳಕೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ನಾನು ಏಳೆಂಟು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಇಂಥ ಭ್ರಷ್ಟ ಸಿಎಂ ನೋಡಿಯೇ ಇಲ್ಲ ಎಂದು ತಿಳಿಸಿದರು. ಲೂಟಿಯಲ್ಲಿ ಸದಾ ತೊಡಗಿದ್ದಾರೆ ಎಂದು ಆರೋಪಿಸಿದರು. ಶಿವಕುಮಾರ್ ಸಿಎಂ ಆದರೆ ಕೆಪಿಸಿಸಿಗೆ ದೊಡ್ಡ ಬೀಗ ಹಾಕಬೇಕೆಂಬ ರಾಜಣ್ಣ ಹೇಳಿಕೆ ಕುರಿತು ಕೇಳಿದಾಗ, ಅದು ಅವರ ಪಕ್ಷದ ಒಳಗಿನ ವಿಚಾರ. ಈಗಲೂ ಇನ್ನೆರಡು ವರ್ಷದ ಬಳಿಕ ಅವರು ದೊಡ್ಡ ಬೀಗವನ್ನೇ ತರಬೇಕು. ಶಿವಕುಮಾರ್ ಮುಖ್ಯಮಂತ್ರಿ ಆದರೆ ಮಾತ್ರವಲ್ಲ; ಸಿದ್ದರಾಮಯ್ಯ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಇಳಿದು ಹೋಗುವಾಗ ಅವರು ಬೀಗ ತೆಗೆದುಕೊಟ್ಟೇ ಹೋಗಬೇಕು. ಈ ಸರಕಾರ, ಕಾಂಗ್ರೆಸ್ ಪಕ್ಷವನ್ನು ಇನ್ನು ಯಾರೂ ನಂಬುವುದಿಲ್ಲ ಎಂದು ನುಡಿದರು. ಹೈಕೋರ್ಟ್ ಸ್ಟೇ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅವರು…
ಬೆಂಗಳೂರು: ಪೇದೆ, ಪಿಎಸ್ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್ಆರ್ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್ಸ್ಪೆಕ್ಟರ್ ಹುದ್ದೆಯಿಂದ ಎಸ್ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು. ಪೇದೆ, ಪಿಎಸ್ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್ಆರ್ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್…
ಬೆಂಗಳೂರು: ಕ್ಯಾಪ್ ಧರಿಸಿದ ತಕ್ಷಣ ಎಷ್ಟು ಸ್ಮಾರ್ಟ್ ಆಗಿ ಕಾಣಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಆತ್ಮಸ್ಥೈರ್ಯ ಬಂದಿದೆ. ನಾವು ಕೂಡ ಅಧಿಕಾರಿಗಳಿಗೂ, ನಮಗು ಯಾವುದೇ ವ್ಯತ್ಯಾಸವಿಲ್ಲ ಎಂಬ ಆತ್ಮಸ್ಥೈರ್ಯ ನಿಮ್ಮಲ್ಲಿ ಮೂಡಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಕರ್ನಾಟಕ ಪೊಲೀಸರಿಗೆ ಆತ್ಮಸ್ಥೈರ್ಯವನ್ನು ಪಿ-ಕ್ಯಾಪ್ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ‘ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ’ ಹಾಗೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಉದ್ಘಾಟನೆ’ ಮತ್ತು ‘ಸನ್ಮಿತ್ರ ಬಿಡುಗಡೆ’ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂಡಿಯಾ ಜಸ್ಟೀಸ್ ರಿಪೋರ್ಟ್ ಪ್ರಕಾರ ಪೊಲೀಸ್ ಯಾವ ರೀತಿ ನಡೆದುಕೊಳ್ಳುತ್ತಿದೆ. ನಾಗರಿಕರಿಗೆ ನ್ಯಾಯ ಸಿಗುವುದು ಸೇರಿದಂತೆ ಕೆಲವು ಮಾನದಂಡಗಳನ್ನು ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾರೆ. ಕರ್ನಾಟಕ ನಂಬರ್ ಒಂದನೇ ಸ್ಥಾನದಲ್ಲಿದೆ ಎಂದರು. ಬ್ರಿಟೀಷರ ಕಾಲದಲ್ಲಿ ನಮ್ಮ ದೇಶದ ಪೊಲೀಸರಿಗೆ ಯಾವ ರೀತಿಯ ಸಮವಸ್ತ್ರ ಕೊಡುತ್ತಿದ್ದರು, ಯಾವ ರೀತಿಯಾಗಿ ನಡೆಸಿಕೊಳ್ಳುತ್ತಿದ್ದರು.…
ಬೆಂಗಳೂರು:- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷವಾಗಿ ದೇಶದಲ್ಲಿ ಉತ್ತಮ ಪೊಲೀಸ್ ವ್ಯವಸ್ಥೆ. ಈ ಬಗ್ಗೆ ನನಗೆ ಹೆಮ್ಮೆ ಇದೆ. ರಾಜ್ಯದಲ್ಲಿ 8,500 ಪೊಲೀಸ್ ಪೇದೆ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ‘ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ’ ಹಾಗೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಉದ್ಘಾಟನೆ’ ಮತ್ತು ‘ಸನ್ಮಿತ್ರ ಬಿಡುಗಡೆ’ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂಡಿಯಾ ಜಸ್ಟೀಸ್ ರಿಪೋರ್ಟ್ ಪ್ರಕಾರ ಪೊಲೀಸ್ ಯಾವ ರೀತಿ ನಡೆದುಕೊಳ್ಳುತ್ತಿದೆ. ನಾಗರಿಕರಿಗೆ ನ್ಯಾಯ ಸಿಗುವುದು ಸೇರಿದಂತೆ ಕೆಲವು ಮಾನದಂಡಗಳನ್ನು ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾರೆ. ಕರ್ನಾಟಕ ನಂಬರ್ ಒಂದನೇ ಸ್ಥಾನದಲ್ಲಿದೆ ಎಂದರು. ಬ್ರಿಟೀಷರ ಕಾಲದಲ್ಲಿ ನಮ್ಮ ದೇಶದ ಪೊಲೀಸರಿಗೆ ಯಾವ ರೀತಿಯ ಸಮವಸ್ತ್ರ ಕೊಡುತ್ತಿದ್ದರು, ಯಾವ ರೀತಿಯಾಗಿ ನಡೆಸಿಕೊಳ್ಳುತ್ತಿದ್ದರು. ಸ್ವಾತಂತ್ರ್ಯ ಬಂದ ನಂತರ…
ಬೆಂಗಳೂರು: ತುಮಕೂರಿನಲ್ಲಿ ಕೋಪರೇಟಿವ್ ಸೊಸೈಟಿಯನ್ನು ಬ್ಯಾಂಕ್ ಮಾಡಬೇಕು ಎಂಬ ಪ್ರಯತ್ನ ಮಾಡಲಾಗುತ್ತಿದೆ. ಹೊಸ ಕಟ್ಟಡ ನಿರ್ಮಿಸುವ ಸಲುವಾಗಿ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಕ್ರೆಸೆಂಟ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಮ್ಮ ತಂದೆಯವರು 1994ರಲ್ಲಿ ಹರ್ತಿಕೋಟೆ ಕೋಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿದ್ದರು. ದಲಿತ ಸಮುದಾಯದಿಂದ ಸಂಸ್ಥೆ ಪ್ರಾರಂಭಿಸಿ ಸೇವೆ ಮಾಡಿಕೊಂಡು ಬರಲಾಗಿದೆ. ನಮ್ಮ ತಂದೆಯವರು ತೀರಿಕೊಂಡ ನಂತರ, ನಾನೇ ಅದರ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. 3500 ಜನ ಸದಸ್ಯರಿದ್ದಾರೆ. ಕೋಆಪರೇಟಿವ್ ಸೊಸೈಟಿಯನ್ನು ಬ್ಯಾಂಕ್ ಮಾಡಬೇಕೆಂಬ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರದಿಂದ ಜಾಗ ಕೊಟ್ಟಿದ್ದಾರೆ. ಆ ಜಾಗದಲ್ಲಿ ಹೊಸ ಕಟ್ಟಡ ಕಟ್ಟಬೇಕು. ಸಮಾಜ ಖ್ಯಾಣ ಇಲಾಖೆಯಿಂದ ಸಹಾಯ ಆಗಬಹುದು ಎಂಬ ನಿಟ್ಟಿನಲ್ಲಿ ಹೆಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಲು, ಸೊಸೈಟಿಯ ನಿರ್ದೇಶಕರು ಮತ್ತು ಸದಸ್ಯರು ಸಮಯ ತೆಗೆದುಕೊಂಡಿದ್ದರು. ನಾನು ಕೋಆಪರೇಟಿವ್ ಅಧ್ಯಕ್ಷನಾಗಿ, ಮನವಿ…
ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು. ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ: ಸಿಎಂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 27ಎ ಅನ್ವಯ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳಊರು ಈ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದಂತ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ಮುಂದಿನ ಮೂರು ತಿಂಗಳ ಅವಧಿಗೆ ಅಥವಾ ಕಲಂ 25ರ ವಿಚಾರಣೆ ಪೂರ್ಣಗೊಳ್ಳುವವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ. ಈ ಆದೇಶವನ್ನು ಉಚ್ಚ ನ್ಯಾಯಾಲಯದ ರಿಟ್ ಅರ್ಜಿಯ ಅನುಸಾರ ನೀಡಿರುವ ಮಧ್ಯಂತರ ಆದೇಶದಂತೆ ನ್ಯಾಯಾಲಯದ ಗಮನಕ್ಕೆ ತಂದು ನ್ಯಾಯಾಲಯವು ನೀಡುವ ನಿರ್ದೇಶನದ ನಂತ್ರ ಈ ಆದೇಶವನ್ನು ಅನುಷ್ಠಾನಗೊಳಿಸುವುದು ಎಂದಿದ್ದಾರೆ. ಉಚ್ಚ ನ್ಯಾಲಾಯವು ಈ ಪ್ರಕರಣದಲ್ಲಿ ನೀಡುವ ನಿರ್ದೇಶನದಂತೆ ಆಡಳಿತಾಧಿಕಾರಿಯು ಸಂಘದ ಪ್ರಭಾರವನ್ನು ವಹಿಸಿಕೊಂಡು,…












