Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟೋದಕ್ಕೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನಲೆಯಲ್ಲೇ ಮನೆ ಮನೆಗೆ ಪೊಲೀಸ್ ಎನ್ನುವಂತ ವಿನೂತನ ಉಪಕ್ರಮವನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 27-06-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್‌ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಉಪಕ್ರಮದ ಪ್ರಮುಖ ಅಂಶಗಳು ಈ ಮುಂದಿನಂತಿವೆ ಎಂದಿದ್ದಾರೆ. ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರವು ಬಹುಮುಖವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ ಇಂದು ಅವರು ಸಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ. ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ಏರ್ಪಡಿಸುವುದು, ಪ್ರವಾಹ, ಭೂಕಂಪ, ಮಹಾಮಾರಿ ಮುಂತಾದ ವಿಪತ್ತು ಸಂದರ್ಭಗಳಲ್ಲಿ ರಕ್ಷಣಾತ್ಮಕ ಕಾರ್ಯಗಳಲ್ಲಿ ತೊಡಗುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯಗಳಾಗಿವೆ. ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಶಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸುವ…

Read More

ಬೆಂಗಳೂರು: ಮಂಡ್ಯದಲ್ಲಿ ಕಾವೇರಿ ಆರತಿ ನಡೆಸೋದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈಗಾಗಲೇ ಇದಕ್ಕಾಗಿ ಹಣವನ್ನು ಮಂಜೂರು ಮಾಡಲಾಗಿತ್ತು. ಎಲ್ಲಾ ಸಿದ್ಧತೆಗಳು ಕೂಡ ನಡೆಸಲಾಗುತ್ತಿತ್ತು. ಆದರೇ ಇದೀಗ ಹೈಕೋರ್ಟ್ ಕಾವೇರಿ ಆರತಿ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಈ ಸಂಬಂಧ ರೈತ ಸಂಘದಿಂದ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಕಾವೇರಿ ಆರತಿಯಿಂದ ಆಗಬಹುದಾದಂತ ಕೆ ಆರ್ ಎಸ್ ಅಣೆಕಟ್ಟಿಗೆ ಹಾನಿ, ಪರಿಸರ, ನದಿಗೆ ಅಪಾಯದ ಬಗ್ಗೆ ವಿವರಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ಸಂಬಂಧ 2 ವಾರಗಳಲ್ಲಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಹೀಗಾಗಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಂತೆ ಆಗಿದೆ. https://kannadanewsnow.com/kannada/good-news-good-news-for-farmers-from-the-state-government-pauti-account-movement-in-the-name-of-the-heirs-of-the-deceased/ https://kannadanewsnow.com/kannada/shocking-gang-rape-of-college-student-three-students-arrested/

Read More

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಮಾರಣಹೋಮವೇ ನಡೆದಿದೆ. ಬೀದಿಯಲ್ಲೇ ರಕ್ತಕಾರಿ ರಾತ್ರೋರಾತ್ರಿ ನಾಯಿಗಳು ಪ್ರಾಣಬಿಟ್ಟಿರುವಂತ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಕೆ ಆರ್ ಪುರಂ ಬಳಿಯ ಭಟ್ಟರಹಳ್ಳಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬೀದಿನಾಯಿಗಳು ರಾತ್ರೋ ರಾತ್ರಿ ರಕ್ತವಾಂದಿ ಮಾಡಿ ದಿಢೀರ್ ರಸ್ತೆಯಲ್ಲೇ ಸಾವನ್ನಪ್ಪಿದ್ದಾವೆ. ಸುಮಾರು ಐದಾರು ನಾಯಿಗಳು ಈ ರೀತಿಯಾಗಿ ಸಾವನ್ನಪ್ಪಿದ್ದು, ಸ್ಥಳೀಯರು ಒಂದು ಬೀದಿನಾಯಿಯನ್ನು ರಕ್ಷಣೆ ಮಾಡಿದ್ದಾರೆ. ರಸ್ತೆಯಲ್ಲೇ ನರಳಿ ನರಳಿ ಐದು ನಾಯಿಗಳು ಪ್ರಾಣ ಬಿಟ್ಟಿರೋದಾಗಿ ತಿಳಿದು ಬಂದಿದೆ. ಬೀದಿ ನಾಯಿಗಳಿಗೆ ಆಹಾರದಲ್ಲಿ ವಿಷ ಬೆರಸಿ ನೀಡಿದ್ದೇ, ಈ ರೀತಿಯಾಗಿ ಸಾಯೋದಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಪಶು ವೈದ್ಯರು ಸ್ಥಳಕ್ಕೆ ಧಾವಿಸಿ ಮಾದರಿ ಸಂಗ್ರಹಿಸಿದ್ದು, ನಾಯಿಗಳ ಸಾವಿಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

Read More

ಪ್ರಸ್ತುತ ಆಷಾಢ ನವರಾತ್ರಿ ನಡೆಯುತ್ತಿದೆ. ಇಂದು ಜೂನ್ 27 ರಂದು ಪ್ರಾರಂಭವಾದ ಆಷಾಢ ನವರಾತ್ರಿಯನ್ನು ಜುಲೈ 4 ರವರೆಗೆ 9 ದಿನಗಳ ಕಾಲ ಅತ್ಯಂತ ವೈಭವದಿಂದ ಆಚರಿಸಲಾಗುವುದು. ಈ ಒಂಬತ್ತು ದಿನಗಳಲ್ಲಿ ಚಾಮುಂಡಿಯನ್ನು ಯಾರು ಪ್ರಾಮಾಣಿಕವಾಗಿ ಪೂಜಿಸುತ್ತಾರೋ ಅವರ ಜೀವನದಲ್ಲಿ ಸಂತೋಷವು ಸ್ಥಿರವಾಗಿರುತ್ತದೆ. ಬಡತನ ದೂರವಾಗುತ್ತದೆ, ಶತ್ರು ಬಾಧೆಗಳು ದೂರವಾಗುತ್ತವೆ. ನಿಮಗೆ ಸಾಕಷ್ಟು ಹಣ ಸಿಗುತ್ತದೆ. ನಿಮಗೆ ಮನಸ್ಸಿನ ಶಾಂತಿ ಸಿಗುತ್ತದೆ. ಶತ್ರುಗಳಿಂದ ನಿಮಗೆ ಹೆಚ್ಚಿನ ಹಾನಿಯಾಗುವುದಿಲ್ಲ. ದುಷ್ಟ ಕಣ್ಣಿನಿಂದಾಗಿ ನಿಮಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಆದ್ದರಿಂದ, ಈ ಒಂಬತ್ತು ದಿನಗಳಲ್ಲಿ, ಚಾಮುಂಡಿಯನ್ನು ಪ್ರಾಮಾಣಿಕವಾಗಿ ಸ್ಮರಿಸಿ ಮತ್ತು ಸಾಧ್ಯವಾದಷ್ಟು ಪೂಜಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ. ಬೆಂಗಳೂರಿನ ವಿವಿ ಟವರ್ ನಲ್ಲಿ ವಿಶೇಷಾಧಿಕಾರಿಗಳು, ಸಕ್ಷಮ ಪ್ರಾಧಿಕಾರಿಗಳ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ತಹಶೀಲ್ದಾರ್ ಗ್ರೇಡ್-2 ಕಾವ್ಯಶ್ರೀ ಹೆಚ್ ಅವರನ್ನು ಬಾದಾಮಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆಯ ಗುಳೇದಗುಡ್ಡ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಮಹೇಶ್ ಭಗವಂತ ಗಸ್ತೆ ಅವರನ್ನು ಧಾರವಾಡದ ಹುಬ್ಬಳ್ಳಿ ನಗರ ತಹಶೀಲ್ದಾರ್ ಗ್ರೇಡ್-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಎಂ.ರೇಣುಕಾ ಅವರನ್ನು ಹಿರೇಕೆರೂರು ತಾಲ್ಲೂಕು ತಹಶೀಲ್ದಾರ್, ಕೆ.ರಾಘವೇಂದ್ರರಾವ್ ಅವರನ್ನು ಶಿರಹಟ್ಟಿ ತಾಲ್ಲೂಕು ತಹಶೀಲ್ದಾರ್ ಗ್ರೇಡ್-1 ಹುದ್ದೆ, ಡಾ.ಚಿಕ್ಕಪ್ಪ ನಾಯಕ ಅವರನ್ನು ಅಂಕೋಲಾ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಎಸ್ ಬಿ ಕೊಡಲಗಿ ಅವರನ್ನು ಪುತ್ತೂರು ತಾಲ್ಲೂಕು…

Read More

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಕಾರ್ಟೇ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ನಿರ್ದೇಶಕರ ಸಂಸ್ಥೆ (IOD) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪರಿಸರ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯ 26ನೇ ಅಂತಾರಾಷ್ಟ್ರೀಯ ಸಮ್ಮೇಳನ (ICEM) ದಲ್ಲಿ ಪ್ರಧಾನ ಭಾಷಣ ಮಾಡಿದ ಸಚಿವರು; ಇಂಗಾಲ ಹೊರಸುವಿಕೆ ತಡೆಯುವಲ್ಲಿ ದೊಡ್ಡ ಕೊಡುಗೆ ನೀಡಿರುವ ಕೈಗಾರಿಕೆ ಕಂಪನಿಗಳಿಗೆ ‘IOD ಗೋಲ್ಡನ್ ಪೀಕಾಕ್’ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಅಲ್ಲದೆ, ದೇಶದ ಪ್ರಗತಿ, ಆರ್ಥಿಕ ವೃದ್ಧಿಯಲ್ಲಿ ಕಾರ್ಪೊರೇಟ್ ಕಾರ್ಯತಂತ್ರದ ಮೂಲದಲ್ಲಿ ಗಂಭೀರ ಹಾಗೂ ದೂರಗಾಮಿ ಸುಸ್ಥಿರತೆಯನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ಉದ್ಯಮದ ನಾಯಕರಿಗೆ ಸಚಿವರು ಕರೆ ನೀಡಿದರು. ಜಾಗತಿಕ ಸಂಚಿತ ಹಸಿರುಮನೆ ಅನಿಲ ಹೊರಸೂಸುವಿಕೆಗೆ ಕೇವಲ 4% ಕೊಡುಗೆ ನೀಡುತ್ತಿದ್ದರೂ, ಭಾರತವು ತನ್ನ ಹವಾಮಾನ…

Read More

ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ. ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂಬುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿದ ಪ್ರಗತಿ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. • ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ. • ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. • ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಯಾಕೆ? •…

Read More

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಲಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು. ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು…

Read More

ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಕ್ಯಾತೆ ಗ್ರಾಮ ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ ಇಲ್ಲಿನ ಶಾಲಾ ವಿಭಾಗಕ್ಕೆ ಹಾಗೂ ಕಾಲೇಜು ವಿಭಾಗಕ್ಕೆ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ. ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು. ಶಾಲಾ ವಿಭಾಗ (ವೇತನ ಶ್ರೇಣೆ ರೂ 16,650, ಕಂಪ್ಯೂಟರ್ ಶಿಕ್ಷಕರು. ವಿದ್ಯಾರ್ಹತೆ ಬಿ.ಸಿ.ಎ, 01 ಹುದ್ದೆ, ಕಾಲೇಜು ವಿಭಾಗ (ವೇತನ ಶ್ರೇಣೆ – ರೂ 18.150). ಭೌತಶಾಸ್ತ್ರ (01 ಹುದ್ದೆ) ಮತ್ತು ರಸಾಯನಶಾಸ್ತ್ರ ಉಪನ್ಯಾಸಕರು(01 ಹುದ್ದೆ) ವಿದ್ಯಾರ್ಹತೆ ಎಂಎಸ್‍ಸಿ ಅಥವಾ ಬಿ.ಎಡ್ ಆಗಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾಂತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‍ಎಂಸಿ. ಕಾಲೇಜು ಹತ್ತಿರ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ 08272-225528, 96861386888 ಮತ್ತು ಪ್ರಾಂಶುಪಾಲರು ಡಾ.ಎ.ಪಿ.ಜೆ ಅಜ್ದುಲ್ ಕಲಾಂ ವಸತಿ ಶಾಲೆ,…

Read More

ಧಾರವಾಡ: 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ (ಖ-WಃಅIS) ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ. ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ ಗರಗ, ದುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ. ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿಮೆಣಸಿನಕಾಯಿ ಬೆಳೆಗೆ ರೂ. 6745 ಪ್ರತಿ ಹೆಕ್ಟೇರ್‍ಗೆ ಹಾಗೂ ಮಾವು ಬೆಳೆಗೆ ರೂ. 4000 ಪ್ರತಿ ಹೆಕ್ಟೇರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ಅಗಸ್ಟ್ 31, 2025 ರೊಳಗಾಗಿ ವಿಮಾ ಕಂತು ಪಾವತಿಸಬೇಕು. ಸದರಿ ಯೋಜನೆ ಅಡಿ ನೋಂದಾಯಿಸಿಕೊಳ್ಳಲು ಎಫ್‍ಐಡಿ ಹೊಂದಿರುವುದು ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ,…

Read More