Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ನವರೋಜಿ ನಗರದಲ್ಲಿ ಬುಧವಾರ ಎಂ ಎಸ್ ಟಿಸಿ (ಮೆಟಲ್ ಸ್ಕ್ರ್ಯಾಪ್ ಟ್ರೇಡ್ ಕಾರ್ಪೋರೆಷನ್ ಲಿಮಿಟೆಡ್) ನೂತನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಹ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದೇಶವಾಗಿದ್ದು, ಆ ನಿಟ್ಟಿನಲ್ಲಿ ನಾವು ವೇಗಗತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮೆಟಲ್ ಸ್ಕ್ರ್ಯಾಪ್ ಅನ್ನು ಪರಿಣಾಮಕಾರಿಯಾಗಿ ವಿಲೇವಾರಿ ಹಾಗೂ ಮರುಬಳಕೆ ಮಾಡುವ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು. 1964ರಲ್ಲಿ ಲೋಹ ತ್ಯಾಜ್ಯ ವ್ಯಾಪಾರ ಸಂಸ್ಥೆಯಾಗಿ ಸ್ಥಾಪನೆಯಾದ MSTC ಕೇಂದ್ರ ಸರಕಾರಿ ಸ್ವಾಮ್ಯದ ಮಿನಿರತ್ನ ಕಂಪನಿಯಾಗಿದೆ. ದೇಶದ ಅತ್ಯಂತ ವಿಶ್ವಾಸಾರ್ಹ ಡಿಜಿಟಲ್ ಹರಾಜು ವೇದಿಕೆಗಳಲ್ಲಿ ಒಂದಾಗಿದ್ದು, ISO-ಪ್ರಮಾಣೀಕೃತ…
ಬೆಂಗಳೂರು: ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಮಾಧ್ಯಮಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ ಯು) 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಭರ್ತಿಯಾಗದೆ ಉಳಿದಿರುವುದು ದೇಶದ ಅತಿದೊಡ್ಡ ದುರಂತ. ಕೇಂದ್ರ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಮಾಡಿದ ದ್ರೋಹವು ದೇಶಾದ್ಯಂತ ಕಾರ್ಮಿಕ ದಂಗೆಯನ್ನು ಹುಟ್ಟುಹಾಕಿದೆ; ಕಾರ್ಮಿಕ ಸಂಘಗಳು ಹಲವಾರು ಆರೋಪಗಳನ್ನು ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿವೆ. ಸಶಸ್ತ್ರ ಪಡೆಗಳಲ್ಲಿ ಸುಮಾರು 1.55 ಲಕ್ಷ ಹುದ್ದೆಗಳಿವೆ. ರೈಲ್ವೆ ಇಲಾಖೆಯಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಐಟಿಬಿಪಿ ಸೇರಿದಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) 85,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿವೆ. ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಸಾರ್ವಜನಿಕ ಸೇವಾ ಸಿಬ್ಬಂದಿಯ ತುರ್ತು ಅಗತ್ಯದ ಹೊರತಾಗಿಯೂ, ಭಾರತ…
ಗದಗ: ಜಿಲ್ಲೆಯಲ್ಲಿ ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಯುವಕ ದೇವಪ್ಪ ಆಲಿಯಾಸ್ ಮುತ್ತು ಹಾಗೂ 17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರಿಬ್ಬರ ಪ್ರೀತಿಯನ್ನು ಪೋಷಕರು ಒಪ್ಪಿರಲಿಲ್ಲ. ಅವರ ಪ್ರೀತಿಯನ್ನು ನಿರಾಕರಿಸಿದ ಕಾರಣ ಮನನೊಂದು ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದಂತ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ದೇವಪ್ಪ ಆಲಿಯಾಸ್ ಮುತ್ತು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. https://kannadanewsnow.com/kannada/increase-in-the-number-of-coaches-of-vande-bharat-express-train-between-kachiguda-and-yeshvantpur/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಹುಬ್ಬಳ್ಳಿ: ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಕ್ಷಿಣ ಮಧ್ಯ ರೈಲ್ವೆಯು ಕಾಚಿಗುಡ – ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್’ಪ್ರೆಸ್ (ಸಂಖ್ಯೆ 20703/20704) ರೈಲುಗಳಿಗೆ ಶಾಶ್ವತವಾಗಿ ಬೋಗಿಗಳನ್ನು ಹೆಚ್ಚಿಸಲು ನಿರ್ಧರಿಸಿರುವುದಾಗಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯು ತಿಳಿಸಿದೆ. ಪ್ರಸ್ತುತ, ಈ ವಂದೇ ಭಾರತ್ ರೈಲು 8 ಬೋಗಿಗಳೊಂದಿಗೆ ಸಂಚರಿಸುತ್ತಿದೆ. ಇನ್ನು ಮುಂದೆ, ಇದನ್ನು 16 ಬೋಗಿಗಳಿಗೆ ಖಾಯಂ ಆಗಿ ವಿಸ್ತರಿಸಲಾಗುವುದು. ಇದರಿಂದ ಈ ಜನಪ್ರಿಯ ರೈಲಿನ ಸಾಮರ್ಥ್ಯ ದ್ವಿಗುಣಗೊಳ್ಳಲಿದ್ದು, ಪ್ರಯಾಣಿಕರ ಪ್ರಯಾಣ ಇನ್ನಷ್ಟು ಆರಾಮದಾಯಕವಾಗಲಿದೆ. ಈ ಹೆಚ್ಚುವರಿ ವ್ಯವಸ್ಥೆಯು ಕಾಚಿಗುಡದಿಂದ (ರೈಲು ಸಂಖ್ಯೆ 20703) ಜುಲೈ 10, 2025 ರಿಂದ ಮತ್ತು ಯಶವಂತಪುರದಿಂದ (ರೈಲು ಸಂಖ್ಯೆ 20704) ಜುಲೈ 10, 2025 ರಿಂದ ಜಾರಿಗೆ ಬರಲಿದೆ. https://kannadanewsnow.com/kannada/two-officials-who-demanded-a-5-percent-bribe-for-the-work-bill-have-been-suspended/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಕಲಬುರ್ಗಿ: ಜಿಲ್ಲೆಯಲ್ಲಿ ಕಾಮಗಾರಿಯೊಂದರ ಬಿಲ್ ಪಾಸ್ ಮಾಡೋದಕ್ಕೆ ಶೇ.5ರಷ್ಟು ಲಂಚ ನೀಡುವಂತೆ ಬಹಿರಂಗವಾಗಿಯೇ ಕೇಳಿದಂತ ಇಬ್ಬರನ್ನು ಅಮಾನತುಗೊಳಿಸಿ ಕಲಬುರ್ಗಿ ಜಿಲ್ಲಾ ಪಂಚಾಯ್ತಿ ಸಿಇಒ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ. ಈ ಸಂಬಂಧ ಕಲಬುರ್ಗಿಯ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಿಧಿಕಾರಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದು, ಕಾಮಗಾರಿಯ ಬಿಲ್ ಗೆ 5 ಪರ್ಸೆಂಟ್ ಲಂಚ ಕೇಳಿದಂತ ಆರೋಪದಡಿ ಜೆಇ ಶ್ರೀಪಾದ್ ಕುಲಕರ್ಣಿ, ಪಿಡಿಒ ಮಂಜುಶ್ರೀ ಅವರನ್ನು ಅಮಾನತುಗೊಳಿಸಿದ್ದಾರೆ. ಅಂದಹಾಗೇ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಲಂಚ ಕೇಳಿದಂತ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಸೂಚಿಸಿದ್ದರು. ಈ ಸೂಚನೆಯ ಬೆನ್ನಲ್ಲೇ ಸಿಇಒ ಅವರು ಜೆಇ ಶ್ರೀಪಾದ್ ಕುಲಕರ್ಣಿ ಹಾಗೂ ಪಿಡಿಒ ಮಂಜುಶ್ರೀ ಅವರ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ, ಸಸ್ಪೆಂಡ್ ಮಾಡಲಾಗಿದೆ. https://kannadanewsnow.com/kannada/another-moral-police-raid-in-the-state-three-accused-arrested/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತೆ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಬೈಕಿನಲ್ಲಿ ತೆರಳುತ್ತಿದ್ದಾಗ ಅವರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಮೆರೆಯಲಾಗಿದೆ. ಸೊರಬದ ಕಾನು ಕೇರಿ ಗ್ರಾಮದ 19 ವರ್ಷದ ಯುವತಿಯೊಬ್ಬರು ಸಾಗರ ಶಾಹಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುತ್ತಿದ್ದರು. ಜುಲೈ.7ರಂದು ಹಿಂದೂ ಯುವಕನ ಬೈಕಿನಲ್ಲಿ ತೆರಳುತ್ತಿದ್ದಾಗ ಮಧ್ಯಾಹ್ನ 12 ಗಂಟೆಯ ಹಾಗೆ ಯಡವರಸೆ ರೈಲ್ವೆ ಗೇಟ್ ಬಳಿಯಲ್ಲಿ ಕಾರಿನಲ್ಲಿ ಬಂದಂತ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿ ಇದನ್ನು ಪ್ರಶ್ನಿಸಿದ್ದಾರೆ. ಹಿಂದೂ ಹುಡುಗನ ಜೊತೆಗೆ ಹೋಗುತ್ತೀಯ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಬೆರಳುಗಳನ್ನು ಹಿಡಿದು ತಿರುವಿ ಹಲ್ಲೆ ಮಾಡಿದ್ದಾರೆ. ಇದಲ್ಲದೇ ಬೈಕಿನಲ್ಲಿ ಇಬ್ಬರನ್ನೂ ಕೂರಿಸಿಕೊಂಡು ಎಲಗಡಲೆ ದರ್ಗಾಕ್ಕೆ ಕರೆದೊಯ್ದು, ಸ್ಪಂದನ ನಡೆಸಲಾಗಿದೆ. ಅಲ್ಲದೇ ಸಾಗರದ ರಾಮನಗರ ಮಸೀದಿಗೆ ಕರೆದುಕೊಂಡು ಹೋಗಿ ಇಬ್ಬರನ್ನು…
ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. ಸಂಪುಟ ಬದಲಾವಣೆಗಾಗಿ ಮುಖ್ಯಮಂತ್ರಿ ದೆಹಲಿ ಭೇಟಿ ನೀಡಿದ್ದಾರೆಯೇ ಎಂದು ಕೇಳಿದಾಗ, “ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ”…
ನವದೆಹಲಿ: “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದರು. “ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ…
ಬೆಂಗಳೂರು: ಪರಿಶಿಷ್ಟ ಜಾತಿಯ ಸಮೀಕ್ಷಾ ಕರ್ತವ್ಯದ ವೇಳೆಯಲ್ಲಿ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆ ನಡೆಸದೇ ಕಳ್ಳಾಟ ಮೆರೆದಿದ್ದಂತವರಿಗೆ ಅಮಾನತು ಶಿಕ್ಷೆ ವಿಧಿಸಲಾಗಿತ್ತು. ಹೀಗೆ ಬಿಬಿಎಂಪಿಯಿಂದ ವಿಧಿಸಿದ್ದಂತ ಐವರು ನೌಕರರ ಅಮಾನತು ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೌದು ಬಿಬಿಎಂಪಿಯ ಐವರು ನೌಕರರ ಅಮಾನತು ಆದೇಶವನ್ನು ಮುಖ್ಯ ಆಯುಕ್ತರು ಹಿಂಪಡೆದಿದ್ದಾರೆ. ಬಿಬಿಎಂಪಿಯ ಆರೋಗ್ಯಾಧಿಕಾರಿ ಶ್ರೀಜೇಶ್, ಕಿರಿಯ ಆರೋಗ್ಯ ಪರಿವೀಕ್ಷಕ ವಿಜಯ್ ಕುಮಾರ್, ಕಂದಾಯ ವಸೂಲಿದಾರರಾದ ಶಿವರಾಜ್ ಹಾಗೂ ಮಹಾದೇವ್ ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಅಂದಹಾಗೇ ಈ ಐವರು ಅಧಿಕಾರಿಗಳನ್ನು ಸಮೀಕ್ಷಾ ಕಾರ್ಯ ನಡೆಸದೇ ಸ್ಟಿಕ್ಕರ್ ಮಾತ್ರವೇ ಅಂಟಿಸಿ ಕಳ್ಳಾಟ ಮಾಡಿದ್ದ ಆರೋಪದಡಿ ಅಮಾತುಗೊಳಿಸಲಾಗಿತ್ತು. ಇದೀಗ ಆ ಆಮಾನತು ಆದೇಶವನ್ನು ಬಿಬಿಎಂಪಿಯ ಮುಖ್ಯ ಆಯುಕ್ತರು ಹಿಂಪಡೆದು ಆದೇಶಿಸಿದ್ದಾರೆ. https://kannadanewsnow.com/kannada/an-american-court-has-declared-baiju-ravindran-guilty-under-allegations-of-judicial-contempt/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಎಡ್-ಟೆಕ್ ದೈತ್ಯ BYJU’s ನ ಸಹ-ಸಂಸ್ಥಾಪಕ ಬೈಜು ರವೀಂದ್ರನ್ ಅವರನ್ನು ಜುಲೈ 7, ಸೋಮವಾರದಂದು ಅಮೆರಿಕದ ಡೆಲವೇರ್ ದಿವಾಳಿತನ ನ್ಯಾಯಾಲಯವು ನ್ಯಾಯಾಂಗ ನಿಂದನೆಯ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಜುಲೈ 1 ರಿಂದ ನ್ಯಾಯಾಲಯವು ಅವರ ಮೇಲೆ ದಿನಕ್ಕೆ USD 10,000 ಮೌಲ್ಯದ ನಾಗರಿಕ ನಿರ್ಬಂಧಗಳನ್ನು ವಿಧಿಸಿತು. ಡೆಲವೇರ್ ನ್ಯಾಯಾಲಯವು “ಅವರ ಮೇಲೆ ವೈಯಕ್ತಿಕ ನ್ಯಾಯವ್ಯಾಪ್ತಿಯನ್ನು” ಹೊಂದಿಲ್ಲ ಎಂದು ಬೈಜು ಸಮರ್ಥಿಸಿಕೊಂಡಿತ್ತು. ಆದಾಗ್ಯೂ, ಪ್ರಕರಣದಲ್ಲಿ ಸಾಲದಾತರು ಸಲ್ಲಿಸಿದ ಹೊಸ ಪುರಾವೆಗಳೊಂದಿಗೆ ನ್ಯಾಯಾಲಯವು ಬೇರೆ ರೀತಿಯಲ್ಲಿ ತೀರ್ಪು ನೀಡಿತು. ಈ ವರ್ಷದ ಏಪ್ರಿಲ್ನಲ್ಲಿ ಸಲ್ಲಿಸಲಾದ ಈ ನಿರ್ದಿಷ್ಟ ಪ್ರಕರಣವು, ಸಾಲ ವಂಚನೆ ಆರೋಪದ ವಿಷಯದಲ್ಲಿ ಬೈಜು ವಿರುದ್ಧ ಯುಎಸ್ನಲ್ಲಿ ಮೊದಲನೆಯದು. ಇದು ಅವರ ಪತ್ನಿ ದಿವ್ಯಾ ಗೋಕುಲ್ನಾಥ್ ಮತ್ತು ನಿಕಟ ಸಹಚರ ಅನಿತಾ ಕಿಶೋರ್ ಅವರ ಹೆಸರನ್ನು ಸಹ ಹೆಸರಿಸಿದೆ. ಪ್ರಾಥಮಿಕ ಪ್ರಕರಣದಲ್ಲಿ ಬೈಜು ಅವರ ಸಹೋದರ ರಿಜು ರವೀಂದ್ರನ್ ಅವರಿಗೆ ಜುಲೈ 1 ರಿಂದ ಪ್ರಾರಂಭವಾಗುವ ದಿನಕ್ಕೆ USD 10,000 ದಂಡದೊಂದಿಗೆ ಈಗಾಗಲೇ…











