Author: kannadanewsnow09

ತುಮಕೂರು: ಕುಂಕುಮ ಇಡುವ ವೇಳೆಯಲ್ಲಿ ಅನುಚಿತವಾಗಿ ವರ್ತನೆ ತೋರಿದಂತ ಆರೋಪದಡಿ ಅರ್ಚಕರೊಬ್ಬರಿಗೆ ಹಿಗ್ಗಾಮುಗ್ಗಾ ಥಳಿಸಿದಂತ ಘಟನೆ ತುಮಕೂರಿನ ದೇವರಾಯನ ದುರ್ಗದಲ್ಲಿ ನಡೆದಿದೆ. ತುಮಕೂರು ಹೊರವಲಯದ ದೇವರಾಯನದುರ್ಗದಲ್ಲಿ ಕುಂಕುಮ ಇಡುವಂತ ವೇಳೆಯಲ್ಲಿ ಅನುಚಿತವಾಗಿ ವರ್ತನೆ ಮಾಡಿದಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಕುಟುಂಬಸ್ಥರು ದೇವಸ್ಥಾನದ ಆವರಣದಲ್ಲೇ ಅರ್ಚಕ ನಾಗಭೂಷಣ ಆಚಾರ್ಯಗೆ ನಾಲ್ವರಿಂದ ಹಲ್ಲೆ ಮಾಡಲಾಗಿದೆ. ದೇವಸ್ಥಾನಕ್ಕೆ ಬಂದಿದ್ದಂತ ಮಹಿಳೆಯರು, ಯುವಕರಿಂದ ಅರ್ಚಕ ನಾಗಭೂಷಣ ಆಚಾರ್ಯ ಅವರನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಅರ್ಚಕ ಕೈ ಮುಗಿದ್ರು, ಬೇಡಿದ್ರು ಕೋಲು, ಕೈಯಿಂದ ಥಳಿಸಲಾಗಿದೆ. ಮೂರು ನಾಲ್ಕು ದಿಗಳ ಹಿಂದೆ ನಡೆದಿರುವಂತ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರ್ಚಕ ನಾಗಭೂಷಣ್ ಆಚಾರ್ಯ ಅವರನ್ನು ಥಳಿಸುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. https://kannadanewsnow.com/kannada/expose-the-facade-of-the-misinformation-about-dharmasthala-through-sit-investigation-bring-the-truth-to-light-minister-ramalinga-reddy/ https://kannadanewsnow.com/kannada/big-news-when-the-time-comes-deputy-chief-minister-dk-shivakumar-will-become-cm-minister-chaluvarayaswamys-statement/

Read More

ಬೆಂಗಳೂರು: SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಲಿದೆ. ಸತ್ಯ ಬಯಲಿಗೆ ಬರಲಿದೆ ಎಂಬುದಾಗಿ ಮುಜರಾಯಿ ಮತ್ತು ಸಾರಿಗೆ ಸಚಿವ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಧರ್ಮಸ್ಥಳ ಕ್ಷೇತ್ರದ ಮತ್ತು ಧರ್ಮಾಧಿಕಾರಿಗಳ ಪರ ವಿರೋಧ‌ ಹಾಗೂ ಅಪಪ್ರಚಾರ ನನಗೆ ತಿಳಿದಿರುವಂತೆ ಸುಮಾರು ಏಳೆಂಟು ವರುಷಗಳಿಂದ ನಡೆಯುತ್ತಾ ಬಂದಿದೆ. ಬಿ.ಜೆ.ಪಿ ಅಧಿಕಾರದಲ್ಲಿದ್ದ ಅವಧಿಯಿಂದಲೂ ನಡೆಯುತ್ತಲೇ ಬಂದಿದೆ ಎಂದಿದ್ದಾರೆ. ಬಿ.ಜೆ.ಪಿ.ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ‌ರವರು ಈಗ ಧರ್ಮ ರಕ್ಷಣೆಗೆ ಕರೆ ನೀಡಿದ್ದಾರೆ. ಇವರ ತಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದರು, ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದರು, ವಿಪಕ್ಷ ನಾಯಕರಾದ ಅಶೋಕ್ ಅವರು ಹಿರಿಯ ಮಂತ್ರಿಗಳಾಗಿದ್ದರು, ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದರು ಆಗ ಇವರಾರು ಒಂದೇ ಒಂದು ಮಾತು ಆಡಲಿಲ್ಲ. ಅಪಪ್ರಚಾರ ಹೋಗಲಾಡಿಸಿ ಷಡ್ಯಂತ್ರ ಬಯಲಿಗೆಳೆಯಲು‌ ಯಾವುದೇ ಕ್ರಮ‌ ಇವರಿಂದ ಆಗಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಮತ್ತು ಗೃಹ ಸಚಿವ ಪರಮೇಶ್ಚರ್ ಅವರು SIT ರಚಿಸಿರುವ ಉದ್ದೇಶ, ಸತ್ಯ ಹೊರ…

Read More

ಸೆಪ್ಟೆಂಬರ್ ತಿಂಗಳು ಖಗೋಳ ದೃಷ್ಟಿಕೋನದಿಂದ ಬಹಳ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿ ಎರಡು ದೊಡ್ಡ ಗ್ರಹಣಗಳು ಒಂದೇ ತಿಂಗಳಿನಲ್ಲಿ ಸಂಭವಿಸಲಿದೆ. ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಮತ್ತು ಸೂರ್ಯಗ್ರಹಣ ಸೆಪ್ಟೆಂಬರ್ 21 ರಂದು. ಮತ್ತೊಂದು ವಿಶೇಷವೆನೆಂದರೆ ಎರಡೂ ಗ್ರಹಣಗಳೂ ಭಾರತದಲ್ಲಿ ಗೋಚರಿಸುತ್ತವೆ, ಆದ್ದರಿಂದ ಧಾರ್ಮಿಕ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ ಅವುಗಳ ಪ್ರಾಮುಖ್ಯತೆ ಇನ್ನಷ್ಟು ಹೆಚ್ಚಾಗಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ,…

Read More

ಬೆಂಗಳೂರು: ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತೆ ಹುಬ್ಬಳ್ಳಿಯ ಜಯಶ್ರೀ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.25ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ. ಕಳೆದ ಎರಡೂವರೆ ದಶಕಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಜಯಶ್ರೀ ಅವರು ಇತ್ತೀಚೆಗೆ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದು, 3.50ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು. ಆರ್ಥಿಕವಾಗಿ ಸಂಷ್ಟದಲ್ಲಿದ್ದ ಪತ್ರಕರ್ತೆ ಜಯಶ್ರೀ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಮೇರೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲಾಗಿದೆ. ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧನ್ಯವಾದಗಳನ್ನು ಸಲ್ಲಿಸಿದೆ. https://kannadanewsnow.com/kannada/isro-successfully-tests-integrated-airdrop/

Read More

ನವದೆಹಲಿ: ಗಗನಯಾನ ಕಾರ್ಯಾಚರಣೆಗಳಿಗಾಗಿ ಪ್ಯಾರಾಚೂಟ್ ಆಧಾರಿತ ಡಿಕ್ಲೀರೇಶನ್ ಸಿಸ್ಟಮ್‌ನ ಅಂತ್ಯದಿಂದ ಕೊನೆಯವರೆಗೆ ಪ್ರದರ್ಶನಕ್ಕಾಗಿ ಇಸ್ರೋ ಮೊದಲ ಇಂಟಿಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (ಐಎಡಿಟಿ-01) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಪರೀಕ್ಷೆಯು ಇಸ್ರೋ, ಭಾರತೀಯ ವಾಯುಪಡೆ, ಡಿಆರ್‌ಡಿಒ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಕರಾವಳಿ ಕಾವಲು ಪಡೆಯ ಜಂಟಿ ಪ್ರಯತ್ನವಾಗಿದೆ. https://twitter.com/isro/status/1959528237484376542 https://kannadanewsnow.com/kannada/sufficient-emphasis-on-the-development-of-mandyas-nagamangala-kopa-hobli-minister-n-chaluvarayaswamy/

Read More

ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಹೋಬಳಿ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತಗಳಿಕೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಕೊಪ್ಪ ಹೋಬಳಿಯ ಮೂಡ್ಯ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ವೇಳೆ ಮುಖಂಡರೊಂದಿಗೆ ಮಾತುಕತೆ ನಡೆಸಿದ ಸಚಿವರು ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯ ಅಭಿವೃದ್ಧಿಗೆ ನಾನು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುತ್ತಿದ್ದೇನೆ. ಆದರೆ, ಚುನಾವಣೆಯಲ್ಲಿ ಮಾತ್ರ ನನಗೆ ಈ ಭಾಗದಿಂದ ಮತಗಳು ನನ್ನ ನಿರೀಕ್ಷೆಗೆ ತಕ್ಕಂತೆ ಬರುತ್ತಿಲ್ಲ‌ ಎಂದು ಮುಖಂಡರೊಂದಿಗೆ ವ್ಯಥೆಪಟ್ಟರು. ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 2 ವರ್ಷಗಳಲ್ಲೇ ನಾಗಮಂಗಲ ವಿಧಾನ ಸಭಾ ಕ್ಷೇತ್ರದಲ್ಲಿ 1200 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಲ್ಲಿ ಕೊಪ್ಪ ಹೋಬಳಿಯ…

Read More

ಮಂಡ್ಯ : ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಶ್ರೀ ಧರ್ಮಸ್ಥಳದ ಪಾವಿತ್ರ್ಯವನ್ನು ಎತ್ತಿ ಹಿಡಿಯುವ ಸಲುವಾಗಿ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾನುವಾರ ಹೇಳಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮೂಡ್ಯ, ಕೊಪ್ಪ, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಸೌಜನ್ಯ ಎಂಬ ಯುವತಿಯ ಸಾವಿನ ಪ್ರಕರಣವನ್ನಿಟ್ಟುಕೊಂಡು ಕೆಲ ಕಿಡಿಗೇಡಿಗಳು ಹಲವು ವರ್ಷಗಳಿಂದ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದ ಆದೇಶದ ಮೇರೆಗೆ ಎಸ್.ಐ.ಟಿ ತಂಡವನ್ನು ರಚಿಸಿ ಸಮಗ್ರ ತನಿಖೆ ನಡೆಸಿದ ಪರಿಣಾಮ ಸತ್ಯಾಂಶ ಹೊರ ಬಂದಿದೆ. ಶ್ರೀ ಕ್ಷೇತ್ರದ ಮೇಲೆ ಇದ್ದಂತ ಕಳಂಕ ಈಗ ಮುಕ್ತವಾಗಿದೆ. ಹೀಗಾಗಿ ಬಿಜೆಪಿ ನಾಯಕರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದರು. ಬಿಜೆಪಿ ಸರ್ಕಾರವಿದ್ದಾಗಲೇ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಗ ಆರ್.ಅಶೋಕ್ ಉಪ ಮುಖ್ಯಮಂತ್ರಿ, ಗೃಹ ಸಚಿವರಾಗಿದ್ದರು.…

Read More

ಮಂಡ್ಯ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ. ಇಷ್ಟು ವರ್ಷ ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದೇ ಅಪರಾಧ ಎಂಬುದಾಗಿ ಸಚಿವ ಎನ್ ಚಲುವರಾಯಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಈಗ ಕಾನೂನಿನ ಕ್ರಮ ಆಗಬೇಕು ಅಂತಿದ್ದಾರೆ. ಹತ್ತಾರು ವರ್ಷದಿಂದ ಧರ್ಮಸ್ಥಳದ ಬಗ್ಗೆ ಅನೇಕರು ಮಾತನಾಡುತ್ತಿದ್ರು. ಆಗ ಬಿಜೆಪಿಯವರು ಎಲ್ಲಿ ಹೋಗಿದ್ರು ಎಂಬುದಾಗಿ ಪ್ರಶ್ನಿಸಿದರು. ಬಿಜೆಪಿ ಅವಧಿಯಲ್ಲೇ ತನಿಖೆ ಮಾಡಿ ಕ್ರಮಕೈಗೊಳ್ಳಬೇಕಿತ್ತು. ಬಿಜೆಪಿ ಸರ್ಕಾರ ಇದ್ದಾಗ ನಾವು ಅವರ ಕೈಯನ್ನು ಹಿಡಿದುಕೊಂಡಿದ್ವ? ತಿರುಪತಿ ಬಿಟ್ಟರೇ ಧರ್ಮಸ್ಥಳಕ್ಕೆ ಅತ್ಯಂತ ಹೆಚ್ಚು ಭಕ್ತರು ಇದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ನಡುವಳಿಕೆಯೇ ಇದಕ್ಕೆಲ್ಲ ಕಾರಣ ಎಂದರು. ನಾವು ಎಸ್ಐಟಿ ರಚಿಸಿದಾಗ ಯಾರೂ ಕೂಡ ಬೇಡ ಎನ್ನಲಿಲ್ಲ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೂತಿದ್ದರು. ಎಸ್ಐಟಿ ರಚನೆ ಬಳಿಕ ಲಾಭ ಪಡೆಯಲು ಬಿಜೆಪಿ ಯತ್ನಿಸಿತು ಎಂಬುದಾಗಿ ಕಿಡಿಕಾರಿದರು.

Read More

ಬೆಂಗಳೂರು: ಅಕ್ರಮ ಆನ್ ಲೈನ್ ಹಾಗೂ ಆಪ್ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಇಡಿ ಬಂಧಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಆಗಸ್ಟ್.28ರವರೆಗೆ ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದರು. ಅಕ್ರಮ ಹಣ ವರ್ಗಾವಣೆ ಪತ್ತೆಯಾದ ಹಿನ್ನಲೆಯಲ್ಲಿ ಸಿಕ್ಕಿಂನಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಲಾಗಿತ್ತು. ಇಂದು ಇಡಿ ಅಧಿಕಾರಿಗಳಿಂದ 35ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಸೈಯದ್ ಬಿ ರೆಹಮಾನ್ ಅವರು ಆಗಸ್ಟ್.28ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

Read More

ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವಲ್ಲಿ ಬಲಾಡ್ಯ ಪರಿಶಿಷ್ಟ ಸಮುದಾಯಗಳನ್ನು ಓಲೈಸುವ ಭರದಲ್ಲಿ ದುರ್ಬಲ ಅಲೆಮಾರಿ ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದೆ ಎಂದು ಅಖಿಲ ಕರ್ನಾಟಕ ಡಾ|| ಬಾಬು ಜಗಜೀವನರಾಂ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎನ್.ಆರ್.ಚಂದ್ರಶೇಖರ್ ಗಂಭೀರ ಆರೋಪ ಮಾಡಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತಾನೇ ರಚನೆ ಮಾಡಿದ್ದ ನ್ಯಾ|| ನಾಗಮೋಹನ್ ದಾಸ್ ವರದಿಯ ಅಂಶಗಳಿಗೆ ತಿಲಾಂಜಲಿ ನೀಡಿದೆ. ಈಗಾಗಲೇ ಇರುವ ವರದಿಗಳನ್ನು ಅಲ್ಲಗಳೆದು ತಾನಾಗಿಯೇ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿ ವರದಿ ನೀಡಲು ಹೇಳಿತ್ತು. ಆಯೋಗವು ಒಳ ಮೀಸಲಾತಿಗೆ ಸಂಬಂಧಿಸಿದ ವರದಿ ನೀಡುವಾಗ 59 ಅಲೆಮಾರಿ ಸಮುದಾಯ ಗಳನ್ನು ಒಂದು ಗುಂಪು ಮಾಡಿ ಶೇ 1 ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ಈ ಗುಂಪನ್ನೇ ರದ್ದು ಮಾಡಿ ಬಲಿಷ್ಠ ಅಸ್ಪೃಶ್ಯ ಜಾತಿಗಳೊಂದಿಗೆ ದುರ್ಬಲ ಅಲೆಮಾರಿಗಳನ್ನು ಸೇರ್ಪಡೆ ಮಾಡಿ ಅನ್ಯಾಯ ಮಾಡಿದೆ ಎಂದು…

Read More