Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು. ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಗೇಶ್ವರ ನಗರದ ಮೇಲ್ಸೇತುವೆ ಬಳಿ ನೀರಿನ ಹರಿವು ಹಾಗೂ ರಾಜಕಾಲುವೆ ವೀಕ್ಷಣೆ ಮಾಡಿ “ನೀರು ಹರಿವಿಗೆ ತೊಂದರೆ ಏಕೆ ಉಂಟಾಗಿದೆ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. “ಕಾಮಗಾರಿಗಳು ನಡೆದ ನಂತರ ಕಟ್ಟಡ ತ್ಯಾಜ್ಯಗಳನ್ನು ಸ್ಥಳದಲ್ಲೇ ಏಕೆ ಬಿಡಲಾಗಿದೆ? ಕೂಡಲೇ ಎಲ್ಲಾ ಕಡೆ ಸ್ವಚ್ಚಗೊಳಿಸಿ” ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಇಡೀ ಪ್ರದೇಶದಲ್ಲಿ ಒಂದು ಸುತ್ತು ಬಂದ ಡಿಸಿಎಂ ಶಿವಕುಮಾರ್ ಅವರು “ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಚಗೊಳಿಸಬೇಕು” ಎಂದು ಹೇಳಿದರು.…
ಬೆಂಗಳೂರು : “ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ತುಂಗಭದ್ರಾ ಅಣೆಕಟ್ಟಿನ ಪರಿಸ್ಥಿತಿ ಬಗ್ಗೆ ಕೇಳಿದಾಗ, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪೆನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು. ಈ ಘಟನೆಗೆ ಯಾರನ್ನಾದರೂ ಹೊಣೆ ಮಾಡಿದ್ದೀರಾ ಎಂದು ಕೇಳಿದಾಗ, “ಅಧಿಕಾರಿಗಳನ್ನು ಹೊಣೆ ಮಾಡುವುದಕ್ಕಿಂತ ಆಣೆಕಟ್ಟು ಉಳಿಸಿ, ರೈತರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ. ಆನಂತರ ಅಧಿಕಾರಿಗಳ ವಿಚಾರ ನೋಡೋಣ. ಮೊದಲು ಸಮಸ್ಯೆ ಬಗೆಹರಿಸುವುದು ಮುಖ್ಯ. ಇದು 70 ವರ್ಷಗಳ ಹಳೆಯ ಅಣೆಕಟ್ಟು. ಅದರ ಸರಪಳಿ ಕಟ್ ಆಗಿದೆ. ಬೇರೆ ಕಡೆಗಳಲ್ಲಿ ಎರಡು ಅವಕಾಶವಿರುತ್ತದೆ. ರೈತರಿಗೆ ನೀರು ಉಳಿಸುವುದಕ್ಕಾಗಿ ಗೇಟ್ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಅಣೆಕಟ್ಟಿನಲ್ಲಿ ನೀರು ಕಡಿಮೆಯಾಗದ…
ಬೆಂಗಳೂರು: ಆಗಸ್ಟ್.15ರ ಮುನ್ನಾದಿನವೇ ಲಾಲ್ ಬಾಗ್ ಪ್ಲವರ್ ಶೋ ಕಳೆಗಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಕೂಡ ಸಾಥ್ ನೀಡಿದೆ. ನಮ್ಮ ಮೆಟ್ರೋ ರೈಲು ನಿಗಮವು ಲಾಲ್ ಬಾಗ್ ಪ್ಲವರ್ ಶೋಗೆ ತೆರಳಲು ರಿಟರ್ ಜರ್ನಿ ಪೇಪರ್ ಟಿಕೆಟ್ ವಿತರಣೆಯ ವ್ಯವಸ್ಥೆ ಮಾಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಲಾಲ್ಬಾಗ್ ನಲ್ಲಿ ಆಯೋಜಿಸಲಾಗಿರುವ ತೋಟಗಾರಿಕಾ ಫಲಪುಷ್ಪ ಪ್ರದರ್ಶನದ ಹಿನ್ನಲೆಯಲ್ಲಿ, ನಮ್ಮ ಮೆಟ್ರೋ ದಿನಾಂಕ 15, 17 ಮತ್ತು 18ನೇ ಆಗಸ್ಟ್, 2024 ರಂದು ಲಾಲ್ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ತ್ವರಿತ ಪ್ರಯಾಣಕ್ಕಾಗಿ ಬೆಳಿಗ್ಗೆ 10.00 ರಿಂದ ರಾತ್ರಿ 08.00 ರವರೆಗೆ ಟೋಕನ್ಗಳ ಬದಲಿಗೆ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳನ್ನು ರೂ 30/- ನಗದು ಮುಖಾಂತರ ವಿತರಿಸಲಾಗುತ್ತದೆ ಎಂದಿದೆ. ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳು ಖರೀದಿಸಿದ ದಿನದಂದು ಲಾಲ್ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ ಎಂದು ತಿಳಿಸಿದೆ. ಸಾರ್ವಜನಿಕರು ಟೋಕನ್, ಕಾರ್ಡ್, ಕ್ಯೂಆರ್ ಟಿಕೆಟ್ಗಳ…
ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ…
ನವದೆಹಲಿ: ಭಾರತದಲ್ಲೂ ಬಾಂಗ್ಲಾದೇಶದಂತೆ ರಾಜಕೀಯ ಅಸ್ತಿರತೆ, ಹಿಂಸಾಚಾರದಂತ ಘಟನೆಗಳು ಉದ್ಭವಿಸಬಹುದು ಎನ್ನಲಾಗುತ್ತಿತ್ತು. ಆದರೇ ರಾಷ್ಟ್ರವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ವಿದೇಶಿ ಹಸ್ತಕ್ಷೇಪಗಳನ್ನು ತಡೆಯುವಲ್ಲಿ ಭಾರತ ಮುಂಜಾಗ್ರತ ಕ್ರಮವಹಿಸಿದೆ. ಹೀಗಾಗಿ ಬಾಂಗ್ಲಾದಂತಹ ಪರಿಸ್ಥಿತಿಯನ್ನು ತಡೆಯುವಲ್ಲಿ ಯಶಸ್ವಿಯಾಗಲಿದೆ. ಅದು ಹೇಗೆ ಎನ್ನುವ ಪುಲ್ ಡೀಟೆಲ್ಸ್ ಮುಂದೆ ಓದಿ. ನೆರೆಯ ಬಾಂಗ್ಲಾದೇಶದಲ್ಲಿ ಅಶಾಂತಿ ಉಂಟಾಗಿ, ಪ್ರಧಾನಿ ಸ್ಥಾನಕ್ಕೂ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶವನ್ನೇ ತೊರೆದು ಹೋಗಿದ್ದಾರೆ. ಈ ಮಾದರಿಯಲ್ಲೇ ಭಾರತದಲ್ಲೂ ಅಶಾಂತಿಗೆ ವಿದೇಶದ ಬಾಹ್ಯ ಶಕ್ತಿಗಳು ಪ್ರಚೋದನೆಯ ಯತ್ನವು ನಡೆದಿತ್ತು. ಆದರೇ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸುರಕ್ಷಿತ ತಾಣವಾಗಿ ಉಳಿಯುವಂತೆ ಮಾಡಿದೆ. ಬಾಂಗ್ಲಾದೇಶದಲ್ಲಿ ಅಶಾಂತಿ ತೀವ್ರಗೊಳ್ಳುತ್ತಿದ್ದಂತೇ, ಮುನ್ನೆಚ್ಚರಿಕೆ ವಹಿಸಿದಂತ ಕೇಂದ್ರ ಸರ್ಕಾರವು, ಭಾರತ-ಬಾಂಗ್ಲಾದೇಶದ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಿತು. ಇದಕ್ಕಾಗಿ ಗಡಿ ಭದ್ರತಾ ಪಡೆ( ಬಿಎಸ್ಎಫ್) ಎಡಿಜಿ ಮತ್ತು ಭಾರತೀಯ ಸೇನೆಯ ಪೂರ್ವ ಕಮಾಂಡ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಕೇಂದ್ರ ಗೃಹಸಚಿವ ಅಮಿತ್…
ಹಾಸನ: ಜಿಲ್ಲೆಯಲ್ಲಿ ಇಂದು ಮಳೆಯ ಜೊತೆಗೆ ಸಿಡಿಲು ಬಡಿದ ಪರಿಣಾಮ, 12 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಇಂದು ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಸೇರಿದಂತೆ 15 ಜನರಿಗೆ ಗಾಯವಾಗಿದೆ. ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/sakleshpur-ballupet-landslide-10-more-trains-cancelled/ https://kannadanewsnow.com/kannada/big-twist-in-muda-scam-siddaramaiahs-letter-seeking-site-goes-viral/
ಬೆಂಗಳೂರು: ಈಗಾಗಲೇ ಸಕಲೇಶಪುರ – ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ. ರದ್ದುಗೊಂಡ ರೈಲುಗಳು 1. ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ ರೈಲು ದಿನಾಂಕ 12.08.2024 ಮತ್ತು 13.08.2024 ರಂದು ರದ್ದಾಗಿದೆ. 2. ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ದಿನಾಂಕ 13.08.2024 ರಂದು ರದ್ದಾಗಿದೆ 3. ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ ರೈಲು 12.08.2024 ಮತ್ತು 13.08.2024 ರಂದು ರದ್ದಾಗಿದೆ. 4. ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್…
ಪ್ಯಾರಿಸ್: ಒಲಿಂಪಿಕ್ಸ್ ಮುಕ್ತಾಯ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ವ್ಯಕ್ತಿಯೊಬ್ಬರು ಪ್ಯಾರಿಸ್ ಹೆಗ್ಗುರುತನ್ನು ಏರುತ್ತಿರುವುದು ವಿಚಿತ್ರ ಘಟನೆಯೊಂದರಲ್ಲಿ ಕಂಡುಬಂದಿದೆ. ಘಟನೆಯ ಬಗ್ಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ ಫ್ರೆಂಚ್ ಪೊಲೀಸರು ಐಫೆಲ್ ಟವರ್ ಸುತ್ತಮುತ್ತಲಿನ ಪ್ರದೇಶವನ್ನು ಸ್ಥಳಾಂತರಿಸಿದ್ದಾರೆ. ಶರ್ಟ್ ಲೆಸ್ ವ್ಯಕ್ತಿ ಮಧ್ಯಾಹ್ನ 330 ಮೀಟರ್ (1,083 ಅಡಿ) ಎತ್ತರದ ಗೋಪುರವನ್ನು ಏರುತ್ತಿರುವುದು ಕಂಡುಬಂದಿದೆ. ಅವರು ತಮ್ಮ ಆರೋಹಣವನ್ನು ಎಲ್ಲಿ ಪ್ರಾರಂಭಿಸಿದರು ಎಂಬುದು ಸ್ಪಷ್ಟವಾಗಿಲ್ಲ, ಆದರೆ ಸ್ಮಾರಕದ ಎರಡನೇ ವಿಭಾಗವನ್ನು ಅಲಂಕರಿಸುವ ಒಲಿಂಪಿಕ್ ಉಂಗುರಗಳ ಮೇಲೆ, ಮೊದಲ ವೀಕ್ಷಣಾ ಡೆಕ್ ಮೇಲೆ ಅವರು ಕಾಣಿಸಿಕೊಂಡರು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳಲ್ಲಿ ಬರಿ ಎದೆಯ ಆರೋಹಿ ಒಲಿಂಪಿಕ್ ಉಂಗುರಗಳನ್ನು ಸ್ಕರ್ಟ್ ಮಾಡಿ ಹಗ್ಗಗಳಿಲ್ಲದೆ ಮೇಲಕ್ಕೆ ಹೋಗುವುದನ್ನು ತೋರಿಸಿದೆ. https://twitter.com/svsnewsagency/status/1822643733977854048 ಒಂದು ವೀಡಿಯೊದಲ್ಲಿ, ನಗುತ್ತಿರುವ ಪರ್ವತಾರೋಹಿಯನ್ನು ಪೊಲೀಸರು ವೀಕ್ಷಣಾ ವೇದಿಕೆಯಿಂದ ಕರೆದೊಯ್ಯುವಾಗ “ರಕ್ತಸಿಕ್ತ ಬೆಚ್ಚಗಿನ, ಇನ್ನಿಟ್?” ಎಂದು ಹೇಳುವುದನ್ನು ಕೇಳಬಹುದು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸರು ಸಂದರ್ಶಕರನ್ನು ಪ್ರದೇಶದಿಂದ ದೂರ ಕರೆದೊಯ್ದರು. ಎರಡನೇ ಮಹಡಿಯಲ್ಲಿ…
ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು. ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು. ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ…
ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ( bhagyalakshmi bond scheme) ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು. ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.…