Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ: ಹುಬ್ಬಳ್ಳಿಯ ನಿವಾಸಿ ರಾಕೇಶ ಮೆನಸಿಣಕಾಯಿ ಮೈಸೂರು ಎನ್ನುವವರು ದಿ:13/03/2022 ರಂದು ರೂ.98,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. ಇದರಿಂದ ದೂರುದಾರರಿಗೆ ವಾಹನವನ್ನು ರಿಪೇರಿ ಮಾಡಿಸಲು ಕಷ್ಟವಾಗಿರುತ್ತದೆ. ಎದುರುದಾರರ ಇಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ: 20/09/2024 ರಂದು ದೂರನ್ನು ಸಲ್ಲಿಸಿದ್ದರು. ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ.…
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧ ಶತಮಾನ ಎಂಬ ವಿಷಯದ ಬಗ್ಗೆ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರವು ಸೆಪ್ಟಂಬರ್ನಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2ನೇ ಮಹಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಚೇರಿ ಅಥವಾ ದೂ.080-22211730, 29601730, 22106460 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/heavy-rain-backdrop-tomorrow-dc-has-announced-a-holiday-for-schools-in-5-taluks-of-chikkamagaluru-district/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಗಾಯುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ 27-06-2025ರ ನಾಳೆ ರಜೆ ನೀಡಲಾಗಿದೆ ಎಂದಿದ್ದಾರೆ. ನಾಳೆ ಕೊಪ್ಪ, ಕಳಸ, ಮೂಡಿಗೆರೆ, ಶೃಂಗೇರಿ, ನರಸಿಂಹರಾಜಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಇರಲಿದೆ. ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸಲು ಸೂಚಿಸಿದ್ದಾರೆ. https://kannadanewsnow.com/kannada/invitation-to-apply-for-guest-lecturer-and-non-teaching-positions/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಬಳ್ಳಾರಿ : ನಗರದ ಕಂಟೋನ್ಮೆAಟ್ನ ಐಶ್ವರ್ಯ ಕಾಲೋನಿಯ(ಐಟಿಐ ಕ್ಯಾಂಪಸ್) ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಸಂಸ್ಥೆಯಲ್ಲಿ ಅತಿಥಿ ಬೋಧಕ, ಬೋಧಕೇತರ ಹುದ್ದೆಗಳ ನೇಮಕಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್, ಎಲೆಕ್ಟಿçಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಬಿಇ (ಬಿಟೆಕ್) ಅಥವಾ ಡಿಪ್ಲೋಮಾ ಅನುಭವವಿರುವ ತಲಾ ಒಬ್ಬ ಅತಿಥಿ ಬೋಧಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9972320076, 9620057086 ಗೆ ಸಂಪರ್ಕಿಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/development-of-urdu-schools-on-the-kps-model-in-karnataka-minister-zameer-ahmed/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
12 ವರ್ಷಗಳ ನಂತರ ಗುರು ಮಿಥುನ ರಾಶಿಯಲ್ಲಿ ಉದಯಿಸುತ್ತಿದ್ದಾನೆ. ಗುರುವಿನ ಉದಯವು ಮಿಥುನ ಮತ್ತು ಧನು ರಾಶಿ ಸೇರಿದಂತೆ 5 ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರುತ್ತದೆ. ಈ ರಾಶಿಚಕ್ರ ಚಿಹ್ನೆಗಳ ವ್ಯವಹಾರವು ವೇಗಗೊಳ್ಳುತ್ತದೆ ಮತ್ತು ಇವರ ಉದ್ಯೋಗದಲ್ಲಿ ಹೊಸ ಅವಕಾಶಗಳ ಸಾಧ್ಯತೆ ಹೆಚ್ಚಾಗುತ್ತದೆ. ವಾಸ್ತವವಾಗಿ, ಗುರುವು ತನ್ನ ಸ್ನೇಹಿತ ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಸಾಗುವಾಗ ಉದಯಿಸುತ್ತಿದ್ದಾನೆ. ಶುಭ ಸ್ಥಿತಿಯಲ್ಲಿರುವ ಗುರು ಗ್ರಹದ ಉದಯವು ಬಹಳ ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಗುರುವಿನ ಉದಯದೊಂದಿಗೆ ಯಾವ 5 ರಾಶಿಗಳಿಗೆ ಶುಭವಾಗಲಿದೆ ಎಂಬುದು ಇಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ಬೆಂಗಳೂರು: ರಾಜ್ಯದಲ್ಲಿ ಕೆಪಿಎಸ್ ಮಾದರಿಯಲ್ಲೇ ಉರ್ದು ಶಾಲೆಗಳನ್ನು ಅಭಿವೃದ್ಧಿ ಮಾಡುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. https://twitter.com/KarnatakaVarthe/status/1938214553671843900
ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದಾರೆ. 2023ರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದಂತ 2000 ಚಾಲಕ ಕಂ ನಿರ್ವಾಹಕರ ಹುದ್ದಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿತ್ತು. ಆ ಬಳಿಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಲ್ಲಿ 1000 ಚಾಲಕರನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಭರ್ತಿ ಮಾಡಿಕೊಳ್ಳಬೇಕಿದೆ. 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಬರೋಬ್ಬರಿ 57,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 2023ರ ಅಧಿಸೂಚನೆಯ ನೇಮಕಾತಿಗೆ 2025ರಲ್ಲಿ 1000 ಚಾಲಕರನ್ನು ನೇಮಕ ಮಾಡಿಕೊಂಡಿದ್ದರೇ, ಇನ್ನೂ 1000 ಹುದ್ದೆ ಬಾಕಿ ಇವೆ. ಅವುಗಳನ್ನು ಚಾಲಕ ಕಂ ನಿರ್ವಾಹಕರನ್ನು ಮಾತ್ರವೇ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇಂದಿಗೆ ಚಾಲಕ ಕಂ ನಿರ್ವಾಹಕರ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಗಣೆ ಟ್ರಸ್ಟ್ (ರಿ) ಅಧ್ಯಕ್ಷರು, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯೆ ಹಾಗೂ ಉಪನ್ಯಾಸಕಿ ಡಾ. ಜಿಕೆ. ಪ್ರೇಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಸಂಸದ ಪಿ. ಕೋದಂಡರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದಂತ ಸಣ್ಣ ಚಿತ್ತಯ್ಯ ಅವರು ಕಛೇರಿ ಉದ್ಘಾಟಿಸಲಿದ್ದಾರೆ. ಹಂಪಿ ವಿವಿ ಸಿಂಡಿಕೇಟ್ ಸದಸ್ಯ ಹಾಗೂ ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಮತ್ತು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ವೆಂಕಟೇಶಯ್ಯ ನೆಲ್ಲುಕುಂಟೆ ಅವರು ಗ್ರಂಥಾಲಯ ಲೋಕಾರ್ಪಣೆ ಮಾಡಲಿದ್ದು, ಕೃತಿಕಾ, ಡಾ. ವಿ. ಭಾಗ್ಯಲಕ್ಷ್ಮಿ,…
ಮೈಸೂರು: ಪ್ರಯಾಣಿಕರ ಅನುಕೂಲತೆ ಮತ್ತು ಸ್ಮಾರ್ಟ್ ನಿಲ್ದಾಣ ಯೋಜನೆಗೆ ಬೆಂಬಲ ನೀಡುವ ಉದ್ದೇಶದಿಂದ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆಯಾದ ‘ಮಾರ್ಗದರ್ಶಕ್’ ಅನ್ನು ಮೈಸೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದೆ. ಆಧುನಿಕ ಹಾಗೂ ಬಳಕೆದಾರ ಸ್ನೇಹಿ ಈ ವ್ಯವಸ್ಥೆಯನ್ನು ಇಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್ ಅವರಿಂದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ‘ಮಾರ್ಗದರ್ಶಕ್’ ಮೂಲಕ ಪ್ರಯಾಣಿಕರು ಗೂಗಲ್ ಮ್ಯಾಪ್ ಬಳಸುವ ರೀತಿಯಲ್ಲಿ ನಿಲ್ದಾಣದ ಒಳಾಂಗಣವನ್ನು ಸುಲಭವಾಗಿ ಸಂಚರಣೆ ಮಾಡಬಹುದು. ‘ಮಾರ್ಗದರ್ಶಕ್’ದ ಪ್ರಮುಖ ವೈಶಿಷ್ಟ್ಯಗಳು: * 24/7 ಸ್ವಯಂ ಸೇವೆ: ಮಾಹಿತಿಗಾಗಿ ಯಾರನ್ನೂ ಕೇಳುವ ಅಗತ್ಯವಿಲ್ಲ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಸಂಚರಣೆ ಮಾಡಬಹುದು. * ತಿರುವು ಸಂಚರಣೆ: ನಿಮ್ಮ ಸ್ಥಳದಿಂದ ಪ್ಲಾಟ್ಫಾರ್ಮುಗಳು, ಮೆಟ್ಟಿಲು ಸೇವೆಗಳು, ಕುಡಿಯುವ ನೀರಿನ ಕೇಂದ್ರಗಳು, ನಿರೀಕ್ಷಣಾ ಕೊಠಡಿಗಳು, ಆಹಾರ ಮಳಿಗೆಗಳು ಮುಂತಾದ ಸ್ಥಳಗಳ ದಿಕ್ಕುಗಳನ್ನು ತಿಳಿಯಬಹುದು. * ಬಹುಭಾಷೆ: ನಿಮ್ಮ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ದಿನಾಂಕ: 27.06.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ’ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್.27ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಾಗರ / ಪಟ್ಟಣ ವ್ಯಾಪ್ತಿಯ ಎಫ್- ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-11 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಏಫ್-2 ಮಾಲೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ. ಇನ್ನೂ ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಪನೆ, ಮಾಲೆ, ಭೀಮನೇರಿ,…













