Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕಷ್ಟಪಟ್ಚು ದುಡಿದ ಯಾರದ್ದೋ ಮನೆ-ಆಸ್ತಿಯನ್ನು ನಕಲಿ ದಾಖಲೆ ಸೃಷ್ಟಿಸಿ ಇನ್ಯಾರೋ ಕಬಳಿಸುವುದನ್ನು ತಪ್ಪಿಸಲು ಹಾಗೂ ಪ್ರತಿಯೊಬ್ಬರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬಬೇಕು ಎಂಬ ಏಕೈಕ ಉದ್ದೇಶದಿಂದಲೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಭಾನುವಾರ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನದಲ್ಲಿ ಮಾತನಾಡಿದ ಅವರು, “ಪೇಪರ್ ಖಾತಾ ಚಾಲ್ತಿಯಲ್ಲಿದ್ದ ಸಂದರ್ಭದಲ್ಲಿ ಯಾರು ಬೇಕಾದರೂ ನಕಲಿ ಖಾತಾ ಸೃಷ್ಟಿಸುವ ಅಪಾಯ ಇತ್ತು. ನಕಲಿ ಖಾತೆಗಳ ಮೂಲಕ ಭೂ ಮಾಫಿಯಾದವರು ಹಲವರ ಆಸ್ತಿಗಳನ್ನು ಲಪಟಾಯಿಸಿರುವ ಉದಾಹರಣೆಗಳೂ ಸಾಕಷ್ಟಿವೆ” ಎಂದರು. “ಮಧ್ಯಮ ವರ್ಗದ ಜನ ಕಷ್ಟಪಟ್ಟು ದುಡಿದು ನಗರ ಭಾಗದಲ್ಲಿ ಆಸ್ತಿ ಖರೀದಿಸಿದರೆ, ಅದನ್ನ ಮತ್ಯಾರೋ ನಕಲಿ ದಾಖಲೆ ಸೃಷ್ಟಿಸಿ ಕಬಳಿಸುವುದನ್ನು ಸರ್ಕಾರ ನೋಡುತ್ತಾ ಕೂರಲಾಗದು. ಅಲ್ಲದೆ, ಇಂತಹ ಸಂದರ್ಭದಲ್ಲಿ ಆಸ್ತಿ ಮಾಲೀಕರ ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಅಥವಾ ಮಾರಾಟ ಮಾಡಲು ಮಧ್ಯವರ್ತಿಗಳಿಗೆ ಲಕ್ಷಗಟ್ಟಲೆ ಹಣ ನೀಡಬೇಕಾದ ದುಸ್ಥಿತಿ ಇತ್ತು. ಇದೇ ಕಾರಣಕ್ಕೆ…
ಬೆಂಗಳೂರು: “ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ಕೇವಲ ಮತಕ್ಕೆ ರಾಜಕಾರಣ ಮಾಡಿದವರಲ್ಲ. ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ” ಎಂದು ಹೇಳಿದರು. “ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ…
ಮೈಸೂರು: ಸೆಪ್ಟೆಂಬರ್ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ತುರ್ತು ಪರಿಸ್ಥಿತಿ ಹೇರಿಕೆಗೆ 50 ವರ್ಷ ಸಂದ ಪ್ರಯುಕ್ತ, ಮೈಸೂರಿನ ವಿಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಅಪಾಯಕಾರಿ, ಆದರೆ ಅಧಿಕಾರದಲ್ಲಿ ಇಲ್ಲವಾದರೆ ಇನ್ನಷ್ಟು ಅಪಾಯಕಾರಿ ಎಂದು ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಎಂದು ಹೇಳುತ್ತಾರೆ. ಆದರೆ ಇದೇ ಕಾಂಗ್ರೆಸ್ನವರು ತುರ್ತು ಪರಿಸ್ಥಿತಿ ಹೇರಿದ್ದರು. ಆಗಿನಂತೆ ಈಗ ಯಾವ ಪತ್ರಿಕೆ ಮುಚ್ಚಿದ್ದಾರೆ, ನ್ಯಾಯಾಂಗದ ಮೇಲೆ ಎಲ್ಲಿ ಒತ್ತಡ ಹೇರಿದ್ದಾರೆ, ಯಾವಾಗ ಚುನಾವಣೆ ಮುಂದೂಡಿದ್ದಾರೆ ಎಂದು ತಿಳಿಸಲಿ ಎಂದರು. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಇವರು ಮಕ್ಕಳು ಚುನಾವಣೆಯಲ್ಲಿ ನಿಲ್ಲುವುದನ್ನು ಯಾರೂ ತಡೆದಿಲ್ಲ. ವಿದೇಶಕ್ಕೆ ಹೋಗಿ…
BIG NEWS: ಡಿಸೆಂಬರ್ ಬಳಿಕ ಮಧ್ಯಂತರ ಚುನಾವಣೆ ಬರುತ್ತೆ, ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚನೆ: ಕಾರಜೋಳ ಭವಿಷ್ಯ
ಚಿತ್ರದುರ್ಗ: ಕರ್ನಾಟಕದಲ್ಲಿ ಡಿಸೆಂಬರ್ ನಂತ್ರ ಯಾವುದೇ ಸಂದರ್ಭದಲ್ಲೂ ಮಧ್ಯಂತರ ಚುನಾವಣೆ ಬರಲಿದೆ. ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನ ಗೆದ್ದು ಸರ್ಕಾರ ರಚಿಸಲಿದೆ ಎಂಬುದಾಗಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂಬುದಾಗಿ ಭವಿಷ್ಯ ನುಡಿದರು. 2028ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ಬರುತ್ತದೆ ಎಂಬುದಾಗಿ ನಾನು ಹೇಳೋದಿಲ್ಲ. ಆದರೇ ಡಿಸೆಂಬರ್ ವೇಳೆಗೆ ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣೆ ಬರಬಹುದು. ಬಿಜೆಪಿಯು 150 ಶಾಸಕರೊಂದಿಗೆ ಸರ್ಕಾರ ರಚಿಸುವ ಭರವಸೆ ಇದೆ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ಒಂದೇ ಒಂದು ಅಭಿವೃದ್ಧಿ ಕೆಲಸವನ್ನೇ ಮಾಡಿಲ್ಲ. ಜನರು ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂಬುದಾಗಿ ತಿಳಿಸಿದರು. ಮತ್ತೊಂದೆಡೆ ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಕೂಡ ಕೆಲವೇ ದಿನಗಳಲ್ಲಿ ಈ ಸರ್ಕಾರ ಪತನವಾಗುತ್ತದೆ. 2026ರಲ್ಲೇ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂಬುದಾಗಿಯೂ ಭವಿಷ್ಯ ನುಡಿದಿದ್ದಾರೆ. ವಿಪಕ್ಷ…
ಬೆಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರಗಳ ಅಡಿಯಲ್ಲಿ ರೈತರಿಗೆ ಆದಾಯ ಹೆಚ್ಚಿಸಿಕೊಳ್ಳೋದಕ್ಕಾಗಿ ವಿವಿಧ ತರಬೇತಿಗಳನ್ನು ನೀಡಲಾಗುತ್ತದೆ. ಉಚಿತ ತರಬೇತಿಗೆ ರೈತರಾದಂತ ನೀವು ಅರ್ಜಿ ಸಲ್ಲಿಸೋದು ಮರೆಯಬೇಡಿ. ರೈತ ಮತ್ತು ರೈತ ಮಹಿಳೆಯರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಕೋಳಿ ಸಾಕಾಣಿಕೆ ಕುರಿತಂತೆ ತರಬೇತಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ನೀಡಲಾಗುತ್ತದೆ. ಶುದ್ಧ ಹಾಲು ಉತ್ಪಾದನೆ, ಮಾಂಸ, ಮೊಟ್ಟೆ ಉತ್ಪಾದನೆ, ಜಾನುವಾರ ಉತ್ಪನ್ನಗಳ ಮೌಲ್ಯವರ್ಧನೆ, ಪ್ರಾಣಿ ಕಲ್ಯಾಣ ಯೋಜನೆಗಳು, ಕೊಟ್ಟಿಗೆಗಳ ನೈರ್ಮಲೀಕರಣ, ಜಾನುವಾರುಗಳಲ್ಲಿ ಬೆದೆ ಗುರುತಿಸುವಿಕೆ, ತಳಿ ಸಂವರ್ಧನಾ ಕ್ರಮಗಳು, ಸುಧಾರಿತ ಮೇವುಗಳ ಮಹತ್ವ ಮತ್ತು ನಿರ್ವಹಣೆ, ಸಮತೋಲನ ಆಹಾರ ತಯಾರಿಕೆ, ಜಾನುವಾರ ರೋಗಗಳ ನಿಯಂತ್ರಣ, ಜಂತುಹುಳು ನಿವಾರಣೆ ಇತ್ಯಾದಿಗಳ ಬಗ್ಗೆ ರೈತರಿಗೆ ತರಬೇತಿಯನ್ನು ಆ ಮೂಲಕ ಅರಿವು ಮೂಡಿಸುವಂತ ಕೆಲಸ ಮಾಡಲಾಗುತ್ತದೆ. ಯಾರಿಗೆ ತರಬೇತಿ ನೀಡಲಾಗುವುದು? ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ರೈತರಿಗೆ, ಜಾನುವಾರು ಮಾಲೀಕರಿಗೆ, ಉದ್ಯಮಿಗಳಿಗೆ, ನಿರುದ್ಯೋಗಿ…
ಮೈಸೂರು: ಮಲೆ ಮಹದೇಶ್ವರ ವನ್ಯ ಜೀವಿಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣರಾದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ. ಹೂಗ್ಯಂ ವಲಯದ ಮೀಣ್ಯಂ ಸಮೀಪದ ಗಾಜನೂರು ಗಸ್ತ್ ಎಂಬ ಪ್ರದೇಶದಲ್ಲಿ ವಿಷಪ್ರಾಶನ ಮಾಡಿ ರಾಷ್ಟ್ರೀಯ ಪ್ರಾಣಿಯಾದ ಐದು ಹುಲಿಗಳ ಸಾವಿಗೆ ಕಾರಣವಾದ ವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿದ್ದರ ಪರಿಣಾಮ ಮೂವರನ್ನು ಬಂಧಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ತೇಜಸ್ವಿ ಹೇಳಿದ್ದಾರೆ. ಹುಲಿಯನ್ನು ಕೊಂದವರಿಗೆ ನಮ್ಮ ದೇಶದಲ್ಲಿ ಏಳು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬೇಕೆಂದು ಕಾನೂನು ಇದೆ, ಆದರೆ ಐದು ಹುಲಿಗಳ ಸಾವಿಗೆ ಕಾರಣವಾದ ವರಿಗೆ ಗಲ್ಲು ಶಿಕ್ಷೆಗೆ ಒಳಪಡಿಸುವುದು ಸೂಕ್ತ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. https://kannadanewsnow.com/kannada/twist-in-the-case-of-the-girl-becoming-pregnant-by-the-son-of-a-bjp-leader-the-victim-gave-birth-to-a-male-child/ https://kannadanewsnow.com/kannada/breaking-the-psi-injured-in-an-accident-in-bangalore-may-have-succumbed-to-treatment/
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿಗೆ. ಬಿಜೆಪು ಮುಖಂಡನ ಪುತ್ರ ಕೃಷ್ಣ ಜೆ ರಾವ್ ನಿಂದ ಗರ್ಭವತಿಯಾಗಿದ್ದಂತ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಎಂಬುವರಿಂದ ಗರ್ಭವತಿಯಾಗಿರುವುದಾಗಿ ಸಂತ್ರಸ್ತ ಯುವತಿಯೊಬ್ಬಳು ದೂರು ನೀಡಿದ್ದಳು. ಈ ದೂರು ಆಧರಿಸಿ ಪ್ರಕರಣ ಕೂಡ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದಾರೆ. ಯುವಕ ಕೃಷ್ಣ ಜೆ ರಾವ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪವನ್ನು ಸಂತ್ರಸ್ತ ಯುವತಿ ಮಾಡಿದ್ದಳು. ಹೈಸ್ಕೂಲ್ ನಲ್ಲಿ ಓದುತ್ತಿದ್ದಾಗವೇ ಕೃಷ್ಣ, ಸಂತ್ರಸ್ತೆ ನಡುವೆ ಪ್ರೇಮಾಂಕುರವಾಗಿತ್ತಂತೆ. ಇಂತಗ ಕೃಷ್ಣ ತನ್ನ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು. ಅಕ್ಟೋಬರ್.11, 2024ರಂದು ದೈಹಿಕ ಸಂಪರ್ಕ ಬೆಳೆಸಿದ್ದನು. ಹೀಗಾಗಿ ತಾನು ಗರ್ಭವತಿಯಾಗಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದರು. ಇಂತಹ…
ಪಂಜಾಬ್: ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್ಮನ್ ಸಾವನ್ನಪ್ಪುವ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪಂಜಾಬ್ನ ಫಿರೋಜ್ಪುರದಿಂದ ಬಂದ ಈ ವೀಡಿಯೊ, ಬ್ಯಾಟ್ಸ್ಮನ್ ಎಸೆತವನ್ನು ಎದುರಿಸಲು ಸಿದ್ಧರಾಗುವುದರೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಅದನ್ನು ಸಿಕ್ಸರ್ಗೆ ಹೊಡೆಯುತ್ತದೆ. ಆದಾಗ್ಯೂ, ತನ್ನ ಶಾಟ್ ಅನ್ನು ಪೂರ್ಣಗೊಳಿಸಿದ ನಂತರ, ಅವನು ಪಿಚ್ನ ಮಧ್ಯಕ್ಕೆ ನಡೆದು ಅಲ್ಲಿ ಮೊಣಕಾಲುಗಳ ಮೇಲೆ ಬಿದ್ದು ಕುಸಿದು ಬೀಳುತ್ತಾನೆ. ಅವನು ಪ್ರಜ್ಞಾಹೀನನಾಗಿರುವುದನ್ನು ನೋಡಿ, ಉಳಿದ ಆಟಗಾರರು ಅವನ ಸಹಾಯಕ್ಕೆ ಧಾವಿಸಿ ಸಿಪಿಆರ್ ಮಾಡಲು ಪ್ರಯತ್ನಿಸುತ್ತಾರೆ. ಆದಾಗ್ಯೂ, ಅವನು ಪ್ರಜ್ಞೆ ಮರಳಿ ಪಡೆಯಲು ವಿಫಲನಾಗುತ್ತಾನೆ ಮತ್ತು ಹೃದಯಾಘಾತದಿಂದ ತಕ್ಷಣವೇ ಸಾವನ್ನಪ್ಪುತ್ತಾನೆ. ಮೃತನನ್ನು ಫಿರೋಜ್ಪುರದ ಡಿಎವಿ ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದ ಹರ್ಜೀತ್ ಸಿಂಗ್ ಎಂದು ಗುರುತಿಸಲಾಗಿದೆ. https://twitter.com/rabishpost/status/1939208057806037166 ಇದಕ್ಕೂ ಮೊದಲು, ಜೂನ್ 2024 ರಲ್ಲಿ, ಮುಂಬೈನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತು. ಅಲ್ಲಿ 42 ವರ್ಷದ ವ್ಯಕ್ತಿ ಕೂಡ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಸಾವನ್ನಪ್ಪಿದರು. ನಗರದ ಕಾಶ್ಮೀರ ಪ್ರದೇಶದ…
ನವದೆಹಲಿ: ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರ ಮಿಷನ್ ( National Livestock Mission Scheme -NLM) ಯೋಜನೆಯಡಿ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ಬರೋಬ್ಬರಿ 25 ಲಕ್ಷ ಸಬ್ಸಿಡಿಯನ್ನು ನೀಡಲಾಗುತ್ತದೆ. ಹಾಗಾದರೇ ರಾಷ್ಟ್ರೀಯ ಜಾನುವಾರು ಮಿಷನ್ ಬಗ್ಗೆ, ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು 2014-15ನೇ ಹಣಕಾಸು ವರ್ಷದಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಈ ವಲಯದ ಪ್ರಸ್ತುತ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು NLM ಯೋಜನೆಯನ್ನು F/Y 2021-22 ರಿಂದ ಪರಿಷ್ಕರಿಸಿ ಮರುಜೋಡಿಸಲಾಗಿದೆ. ರಾಷ್ಟ್ರೀಯ ಜಾನುವಾರು ಮಿಷನ್ (NLM) ನ ಪರಿಷ್ಕೃತ ಯೋಜನೆಯು ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಅಭಿವೃದ್ಧಿ, ಪ್ರತಿ ಪ್ರಾಣಿ ಉತ್ಪಾದಕತೆಯನ್ನು ಹೆಚ್ಚಿಸುವುದು ಮತ್ತು ಹೀಗೆ ಛತ್ರಿ ಯೋಜನೆ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಾಂಸ, ಮೇಕೆ ಹಾಲು, ಮೊಟ್ಟೆ ಮತ್ತು ಉಣ್ಣೆಯ ಉತ್ಪಾದನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಹೆಚ್ಚುವರಿ ಉತ್ಪಾದನೆಯು ದೇಶೀಯ ಬೇಡಿಕೆಗಳನ್ನು ಪೂರೈಸಿದ ನಂತರ ರಫ್ತು ಗಳಿಕೆಗೆ ಸಹಾಯ…
ಬೆಂಗಳೂರು: “ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ” ಎಂದು ಹೇಳಿದರು. ಆಶೋಕ್ ಬಳಿ ನಾನು ಹೋಗಿ ಭವಿಷ್ಯ ಕೇಳುವೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ” ಎಂದು ಛೇಡಿಸಿದರು. ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು…














