Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿ, ಚುನಾವಣೆ ನಡೆಸದೇ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಹಾಲಿ ಸಮಿತಿಯು ಚುನಾವಣೆ ಈವರೆಗೆ ನಡೆಸಿಲ್ಲ. ಹೀಗಾಗಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಶ್ರೀ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಎಂ.ಡಿ ಆನಂದ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮೂರು ತಿಂಗಳ ಒಳಗಾಗಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡಲು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ದಿನಾಂಕ 11-07-2025ರಂದು ಆದೇಶ ಮಾಡಿದೆ. ಈ ಆದೇಶದ ಬಳಿಕ 71 ದಿನಗಳ ನಂತರ ದಿನಾಂಕ 20-09-2025ರಂದು ಮಹಾ ಸಭೆ ನಡೆಸಲಾಗಿದೆ. ಚುನಾವಣೆ ನಡೆಸಲು ಸಭೆಯಲ್ಲಿ ತೀರ್ಮಾನಿಸಿದರೂ ಕಾರ್ಯಪ್ರವೃತವಾಗದೇ ಕಾಲಹರಣ ಮಾಡಲಾಗಿದೆ ಎಂದು ಆರೋಪಿಸಿದರು. ಈ ಹಿನ್ನಲೆಯಲ್ಲಿ ದಿನಾಂಕ 14-10-2025ರಂದು ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ. ನಮ್ಮ ಅರ್ಜಿಯನ್ನು…
ಬೆಂಗಳೂರು: ಇಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಅಲ್ಲದೇ ಸಾಗರ ತಾಲ್ಲೂಕಿನ ಕಾನೂನು ಸಮಸ್ಯೆಗಳ ಬಗ್ಗೆ ಅವರೊಂದಿಗೆ ಚರ್ಚಿಸಿದರು. ಅಲ್ಲದೇ ಕೆಲ ಬೇಡಿಕೆ ಈಡೇರಿಸಲು ಮನವಿ ಮಾಡಿದರು. ಯಾವೆಲ್ಲ ಬೇಡಿಕೆ ಈಡೇರಿಸಲು ಮನವಿ ಗೊತ್ತಾ.? * ಸಾಗರ ನಗರದ ವ್ಯಾಪ್ತಿಯು ವಿಶಾಲವಾಗಿದ್ದು, ಹೆಚ್ಚಿನ ಜನಸಂದಣಿಯಿಂದ ಸುರಳಿತ ಸಂಚಾರ ವ್ಯವಸ್ಥೆಗಾಗಿ ಮತ್ತು ವಾಹನಗಳ ಅಪಘಾತ ಪ್ರಕರಣವನ್ನು ತಪ್ಪಿಸುವ ಸಲುವಾಗಿ ಸಾಗರ ಪಟ್ಟಣಕ್ಕೆ ಹೊಸದಾಗಿ ಟ್ರಾಫಿಕ್ ಪೋಲಿಸ್ ಠಾಣೆಯನ್ನು ಮಂಜೂರು ಮಾಡಲು ಕೋರಿದರು. * ಸಾಗರ ಪಟ್ಟಣದಿಂದ ದೂರವಿರುವ ತುಮರಿ-ಬ್ಯಾಕೊಡು ವ್ಯಾಪ್ತಿಯಲ್ಲಿ ಸಿಗಂಧೂರು ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ದಿನ ನಿತ್ಯ ಭೇಟಿ ನೀಡುತ್ತಿದ್ದು, ಕ್ಷೇತ್ರಕ್ಕೆ ಬರುವ ಪ್ರವಾಸಿಗಳ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ತುಮರಿ-ಬ್ಯಾಕೊಡು ಪ್ರದೇಶದಲ್ಲಿ ಹೊಸದಾಗಿ ಪೋಲಿಸ್ ಠಾಣೆ ಮಂಜೂರು ಮಾಡಲು ಮನವಿ ಮಾಡಿದರು. * ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ…
ನವದೆಹಲಿ: ರಿಲಯನ್ಸ್ ರೀಟೇಲ್ ನ ಅವಂತ್ರ ಎಂಬುದು ಸಮಕಾಲೀನ ಸೀರೆಗಳನ್ನು ಖರೀದಿಸಲು ಅತ್ಯುತ್ತಮವಾದ ತಾಣವಾಗಿದೆ. ಆಧುನಿಕ ಭಾರತೀಯ ಮಹಿಳೆಯರ ಆಯ್ಕೆಗೆ ಹೇಳಿ ಮಾಡಿಸಿದ ಸ್ಥಳ ಇದು. ಇದೀಗ ಹೊಸದಾಗಿ ಹಬ್ಬದ ಅಭಿಯಾನವನ್ನು ಅವಂತ್ರ ಶುರು ಮಾಡಿದ್ದು, ದೇಶದೆಲ್ಲೆಡೆ ಈಗ ಮನೆ ಮಾತಾಗಿರುವ ಚೆಲುವೆ, ಕಾಂತಾರ ಸಿನಿಮಾದ ರಾಜಕುಮಾರಿ ಹಾಗೂ ಬಹು ಭಾಷಾ ನಟಿ ರುಕ್ಮಿಣಿ ವಸಂತ್ ಅವರು ರಾಯಭಾರಿ ಆಗಿದ್ದಾರೆ. ಹಬ್ಬಗಳು ಬಂತೆಂದರೆ ಸಂಭ್ರಮ, ಅದರಲ್ಲೂ ಹೆಣ್ಣುಮಕ್ಕಳಿಗೆ ಮತ್ತೂ ವಿಶೇಷವಾದ ಸಂದರ್ಭ ಇದಾಗಿರುತ್ತದೆ. ಹೌದು, ಇವತ್ತಿನ ಮಹಿಳೆಯಲ್ಲಿ ಆತ್ಮವಿಶ್ವಾಸ ಕಾಣಬಹುದು. ತನ್ನ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ, ಗುರುತನ್ನು ತೆರೆದಿಡುವ ಹಾಗೂ ತನ್ನ ಭಾವನೆಯನ್ನು ಅಭಿವ್ಯಕ್ತಪಡಿಸುವುದಕ್ಕಾಗಿ ಹಬ್ಬದ ಋತುವಿನಲ್ಲಿ ಅವಂತ್ರಗಿಂತ ಮತ್ತೊಂದು ಉತ್ತಮ ಆಯ್ಕೆ ಬೇರಾವುದೂ ಇಲ್ಲ. ಹಬ್ಬದ ಸಂಭ್ರಮಕ್ಕೆ ಮಹಿಳೆಯರು ಹೇಗೆ ಇನ್ನೂ ಹೆಚ್ಚು ಸಂತಸವನ್ನು ಸೇರಿಸುತ್ತಾರೆ ಹಾಗೂ ಪ್ರತಿ ಕ್ಷಣವನ್ನೂ ಹೇಗೆ ವಿಶೇಷವಾಗಿಸುತ್ತಾರೆ ಮತ್ತು ಆ ಮೂಲಕ ಹಬ್ಬದ ಸಂದೇಶವನ್ನು ಹೇಗೆ ದಾಟಿಸುತ್ತಾರೆ ಎಂಬುದನ್ನು ತುಂಬ ಸೊಗಸಾಗಿ ತೆರೆದಿಡಲಾಗಿದೆ. ಈ ಅಭಿಯಾನವನ್ನು…
ಬೆಂಗಳೂರು: 2025-26ನೇ ಸಾಲಿಗೆ ರಾಜ್ಯದ ಪಿಜಿ ವೈದ್ಯಕೀಯ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಸೇರಲು ಆಸಕ್ತರಾದ ನೀಟ್ ಪಿಜಿ- 2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.17ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ ಪಾವತಿಸಲು ಅ.17ರ ಬೆಳಿಗ್ಗೆ 11ರವರೆಗೆ ಅವಕಾಶವಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಂಗಳವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿ.ಎಸ್ಸಿ.ನರ್ಸಿಂಗ್, ಫಾರ್ಮ, ಬಿಪಿಟಿ: ಯುಜಿಸಿಇಟಿ 2025ರ ಬಿ.ಎಸ್ಸಿ.ನರ್ಸಿಂಗ್, ಬಿ-ಫಾರ್ಮ, ಫಾರ್ಮ-ಡಿ ಮತ್ತು ಬಿಪಿಟಿ ಕೋರ್ಸುಗಳಿಗೆ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ (ಕನ್ಫರ್ಮೇಷನ್ ಸ್ಲಿಪ್) ಡೌನ್ ಲೋಡ್ ಮಾಡಿಕೊಂಡು ಅ.16ರ ಸಂಜೆ 5.30ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಇದಕ್ಕಾಗಿ ಅಭ್ಯರ್ಥಿಗಳು ಅ.16ರ ಸಂಜೆ 4ರೊಳಗೆ ಶುಲ್ಕ ಪಾವತಿಸಿ, ಸಂಜೆ 5ರೊಳಗೆ ಕನ್ಫರ್ಮೇಷನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದೂ ಅವರು ತಿಳಿಸಿದ್ದಾರೆ.…
ಬೆಂಗಳೂರು: ಕಾನೂನುಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲವಾದರೆ ಬಿಜೆಪಿ ಹಾಗೂ ಸಂಘಪರಿವಾರ, ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಹೆದರುತ್ತಿರುವುದೇಕೆ? ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಪ್ರಶ್ನಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಸಂಘ ಪರಿವಾರದ ಹೆಸರನ್ನು ಬಳಸಿ ಅತಿರೇಕದ ಟೀಕೆ ಮಾಡುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಅವರಿಗೆ ಬರೆದ ಪತ್ರ ಹಾಗೂ ಡಿಸಿಎಂ ಅವರು ಶಾಸಕರನ್ನು ಕರೆದದ್ದನ್ನು ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ನಿರಂತರ ಟೀಕೆ ಮಾಡುತ್ತಿದ್ದಾರೆ. ಅವರೆಲ್ಲರೂ ಸಂಘ ಪರಿವಾರದಲ್ಲಿ ಕಲಿತವರು. ಅವರು ಬಳಸುತ್ತಿರುವ ಭಾಷೆ ಅಲ್ಲೇ ಕಲಿತಿದ್ದಾರೆ. ಮುನಿರತ್ನ ಅವರಿಗೆ ಅಥಿಯಾದ ವಿಶ್ವಾಸ ಸಂಘಪರಿವಾರದ ಬಗ್ಗೆ ಇದೆ. ಹೀಗಾಗಿ ಅವರು ಸಂಘ ಪರಿವಾರದ ಚಡ್ಡಿ ಹಾಕಿರುವ ಫೋಟೋ ಇಲ್ಲ. ಅದನ್ನು ಹಾಕಬೇಕು ಎಂದು ತಿಳಿಸಿದರು. ಮಾಧ್ಯಮಗಳ ಮೂಲಕ ಪ್ರಚಾರ ಸಿಗಲಿ ಎಂದು ಮುನಿರತ್ನ ಅವರು ತಹ ಪ್ರಚಾರ ಮಾಡುತ್ತಲೇ ಬಂದಿದ್ದಾರೆ ಎಂದಿದ್ದಾರೆ. ಸಂಘ ಪರಿವಾರದಿಂದ ಬಿಜೆಪಿ ನಾಯಕರು ಸಭ್ಯತೆ ಕಲಿತಿದ್ದರೆ,…
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಬೆಂಗಳೂರು ಗ್ರಾಮಾಂತರ-1, ಚಿತ್ರದುರ್ಗ-1, ದಾವಣಗೆರೆ-2, ಹಾವೇರಿ-2, ಬೀದರ್-1, ಉಡುಪಿ-1, ಬಾಗಲಕೋಟೆ-1 ಮತ್ತು ಹಾಸನ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 14.10.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 48 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ಮಂಜುನಾಥ. ಜಿ, ವೈದ್ಯಾಧಿಕಾರಿಗಳು, ಹೆರಿಗೆ ಆಸ್ಪತ್ರೆ, ಮಲ್ಲಸಂದ್ರ, ಬೆಂಗಳೂರು. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.…
ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಎರಡು ದುರ್ಘಟನೆಗಳು ಸಂಭವಿಸಿವೆ. ಟ್ರ್ಯಾಕ್ಟರ್ ಟ್ರಿಲ್ಲರ್ ಹೊಡೆಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದರೇ, ಬೈಕ್-ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿಯ ಕಾಲು ಕಟ್ ಅಗಿರುವಂತ ದುರ್ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕನಿಗೆ ಗಂಭೀರ ಗಾಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬೆಳೆದಿದ್ದ ಗಿಡಗೆಂಟೆ, ಹುಲ್ಲು ಕ್ಲೀನ್ ಮಾಡಲು ಟ್ರ್ಯಾಕ್ಟರ್ ಹೊಡೆಯುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಪತ್ರೆಸಾಲಿನ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರ್ಯಾಕ್ಟರ್ ಗೆ ವಿದ್ಯುತ್ ಕಂಬದ ಸಮೀಪದಲ್ಲಿ ತುಂಡಾಗಿದ್ದಂತ ಗೈಗೆ ತಾಗಿದ ಪರಿಣಾಮ ವಿದ್ಯುತ್ ಪ್ರವಹಿಸಿ, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ವಾಹನದಿಂದ ಕೆಳಗೆ ಹಾರುವ ವೇಳೆಗೆ ವಿದ್ಯುತ್ ಶಾಕ್ ನಿಂದ ಅರುಣ್ ಕುಮಾರ್ ಕಾಲು, ಕೈ, ಎದೆಯ ಭಾಗವು ಸುಟ್ಟು ಹೋಗಿವೆ. ವಿದ್ಯುತ್ ಶಾಕ್ ಗೆ ಒಳಗಾದಂತ ಪತ್ರೆಸಾಲಿನ ಅರುಣ್ ಕುಮಾರ್(31) ಗೆ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸರ್ಕಾರವು ತುಟ್ಟಿಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಅನುಮೋದಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ನೌಕರರಿಗೆ ದಿನಾಂಕ 01-07-2025ರಿಂದ ಅನ್ವಯವಾಗುವಂತೆ ಶೇ.2ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮೋದಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಧನ್ಯವಾದಗಳು. ಮುಂದಿನ ಎರಡು, ಮೂರು ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳದ ಅಧಿಕೃತ ಆದೇಶವನ್ನು ಹೊರಡಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. https://kannadanewsnow.com/kannada/from-now-on-minors-will-be-required-to-have-parental-consent-to-use-instagram-meta-announcement/ https://kannadanewsnow.com/kannada/good-news-e%e2%82%b9-unveiled-by-rbi-now-no-need-for-internet-payment-in-one-click/
ನಿಮಗೆಲ್ಲರಿಗೂ ತಿಳಿದೇ ಇದೆ ಉಪ್ಪಿನ ಮಹತ್ವ ನಮ್ಮ ಹಿರಿಯರು ಉಪ್ಪಿನ ಮೇಲೆ ಒಂದು ಗಾದೆಯನ್ನೇ ಕಟ್ಟಿದ್ದಾರೆ ಅದೇನೆಂದರೆ ಸ್ನೇಹಿತರೇ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ಅಂತ ಅಲ್ವಾ ಸ್ನೇಹಿತರೇ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಈ ಗಾದೆಗೆ ತುಂಬಾನೇ ಅರ್ಥವಿದೆ ಅದಲ್ಲದೆ ನಾವು ಉಪ್ಪನ್ನು ನಮ್ಮ ಪ್ರತಿ ದಿನ ಆಹಾರದಲ್ಲಿ ಬಳಸುತ್ತೇವೆ…
ನವದೆಹಲಿ: ಇನ್ಸ್ಟಾಗ್ರಾಮ್ನಲ್ಲಿ ಹದಿಹರೆಯದವರು PG-13 ವಿಷಯಕ್ಕೆ ಮಾತ್ರ ಸೀಮಿತ, ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಇಂದು ಮೆಟಾ, ಇನ್ಸ್ಟಾಗ್ರಾಮ್ನಲ್ಲಿ ಹದಿಹರೆಯದವರು ಪೂರ್ವನಿಯೋಜಿತವಾಗಿ PG-13 ವಿಷಯಕ್ಕೆ ಸೀಮಿತವಾಗಿರುತ್ತಾರೆ ಮತ್ತು ಈ ಸೆಟ್ಟಿಂಗ್ಗಳನ್ನು ಹೊಂದಿಸಲು ಅವರಿಗೆ ಪೋಷಕರ ಅನುಮತಿ ಬೇಕಾಗುತ್ತದೆ ಎಂದು ಘೋಷಿಸಿತು. ಹೊಸ ನಿಯಮಗಳ ಅಡಿಯಲ್ಲಿ, ಹದಿಹರೆಯದ ಬಳಕೆದಾರರು ಚಲನಚಿತ್ರಗಳಲ್ಲಿ PG-13 ರೇಟಿಂಗ್ ಹೊಂದಿರುವ ವಿಷಯಕ್ಕೆ ಹೋಲಿಸಬಹುದಾದ ಫೋಟೋಗಳು ಮತ್ತು ವೀಡಿಯೊಗಳನ್ನು ಮಾತ್ರ ನೋಡುತ್ತಾರೆ. ಅಂದರೆ ಲೈಂಗಿಕತೆ, ಮಾದಕ ದ್ರವ್ಯಗಳು ಅಥವಾ ಅಪಾಯಕಾರಿ ಸಾಹಸಗಳ ಚಿತ್ರಣಗಳಿಲ್ಲ. ಈ ನವೀಕರಣವು ಬಲವಾದ ಭಾಷೆ, ಅಪಾಯಕಾರಿ ಸಾಹಸಗಳು ಅಥವಾ ಗಾಂಜಾ ಸಾಮಗ್ರಿಗಳ ಚಿತ್ರಗಳಂತಹ ಸಂಭಾವ್ಯ ಹಾನಿಕಾರಕ ನಡವಳಿಕೆಯನ್ನು ಪ್ರೋತ್ಸಾಹಿಸುವ ವಿಷಯವನ್ನು ಹೊಂದಿರುವ ಪೋಸ್ಟ್ಗಳನ್ನು ಮರೆಮಾಡುವುದು ಅಥವಾ ಶಿಫಾರಸು ಮಾಡದಿರುವುದು ಒಳಗೊಂಡಿದೆ ಎಂದು ಮೆಟಾ ಬ್ಲಾಗ್ ಪೋಸ್ಟ್ನಲ್ಲಿ ತಿಳಿಸಿದೆ. ಕಳೆದ ವರ್ಷ ಹದಿಹರೆಯದ ಖಾತೆಗಳನ್ನು ಪ್ರಾರಂಭಿಸಿದ ನಂತರದ ಅತ್ಯಂತ ಮಹತ್ವದ ನವೀಕರಣ ಎಂದು ಕಂಪನಿಯು ಈ ಬದಲಾವಣೆಯನ್ನು ವಿವರಿಸಿದೆ. ಈ ಮೂಲಕ ಇನ್ಮುಂದೆ ಹದಿಹರೆಯದವರು…














