Author: kannadanewsnow09

ಭುವನೇಶ್ವರ : ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಯನ್ನು ಬಲಪಡಿಸಲು ರಿಲಯನ್ಸ್ ಫೌಂಡೇಶನ್ ಮತ್ತು ವಿಶ್ವಸಂಸ್ಥೆ (ಭಾರತ) ಒಡಿಶಾದಲ್ಲಿ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ವಿಷಯ ‘ತ್ವರಿತ ಕ್ರಮಕ್ಕೆ ಆರಂಭಿಕ ಎಚ್ಚರಿಕೆ – ಬಹು ವಿಪತ್ತು, ಬಹು ಮಧ್ಯಸ್ಥಗಾರರ ವಿಧಾನ: ಕರಾವಳಿ ಪರಿಸರ ವ್ಯವಸ್ಥೆಗಳಿಂದ ಕಲಿಕೆಗಳು’. ತಜ್ಞರು ಕರಾವಳಿ ಪರಿಸರ ವ್ಯವಸ್ಥೆಯ ಸೂಕ್ಷ್ಮತೆಗಳ ಬಗ್ಗೆ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಮುಖ್ಯ ಅತಿಥಿ, ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಶ್ರೀ ಸುರೇಶ್ ಪೂಜಾರಿ ಮಾತನಾಡಿ ‘ಮುಂಚಿತ ಎಚ್ಚರಿಕೆ ವ್ಯವಸ್ಥೆಯನ್ನು ಬಲಪಡಿಸಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಡಿಶಾ ಸರ್ಕಾರವು ವಿವಿಧ ಮಧ್ಯಸ್ಥಗಾರರ ಸಹಯೋಗದೊಂದಿಗೆ ನೈಸರ್ಗಿಕ ವಿಪತ್ತುಗಳ ಪರಿಣಾಮವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದರು. ರಿಲಯನ್ಸ್ ಫೌಂಡೇಶನ್‌ನ ಸಿಇಒ ಜಗನ್ನಾಥ್ ಕುಮಾರ್ ಮಾತನಾಡಿ, ‘ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ವಿಪತ್ತುಗಳ ಪರಿಣಾಮವನ್ನು ತಗ್ಗಿಸಲು ನಿಖರವಾದ ಎಚ್ಚರಿಕೆಗಳ ಅಗತ್ಯವಿದೆ. ಸಮುದಾಯಗಳನ್ನು ರಕ್ಷಿಸಲು ನಾವು ಹೊಸ ಎಚ್ಚರಿಕೆ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದ್ದೇವೆ’ ಎಂದು…

Read More

ಬೆಂಗಳೂರು: ನೆಲಮಂಗಲ ಬಳಿಯಲ್ಲಿ ಬೈಕ್ ಹಾಗೂ ಲಾರಿ ನಡುವಿನ ಅಪಘಾತದಲ್ಲಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೋಲಾರದ ಶ್ರೀನಿವಾಸಪುರದ ನಿವಾಸಿ ಜೀವನ್ ಹಾಗೂ ಆದಿತ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದಂತ ಲಾರಿಯೊಂದು ಬೈಕ್ ಹಿಂಬದಿಗೆ ಡಿಕ್ಕಿಯಾದ ನಂತ್ರ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತ್ರ ಲಾರಿ ಕೆಳಗೆ ಬೈಕ್ ಸಿಕ್ಕಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರರಾದಂತ ಜೀವನ್, ಆದಿತ್ಯ ಸ್ಥಳದಲ್ಲೇ ದುರ್ಮಣ ಹೊಂದಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-rural-people-of-karnataka-minister-dinesh-gundu-rao-says-telemedicine-tele-icu-services-are-being-planned/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್‌ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಈ ಕಾರಣಕ್ಕಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು. ಲೆಟ್ಸ್ ವೆಂಚರ್‌ನ ಸಂಸ್ಥಾಪಕಿ ಶಾಂತಿ ಮೋಹನ್ ಮಾತನಾಡಿ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮದ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳು ತಜ್ಞರೊಂದಿಗೆ ಸಂಪರ್ಕಿಸಿ ಮಾರ್ಗದರ್ಶನವನ್ನು ಪಡೆಯಲು ಹಾಗೂ ಆರ್ಥಿಕ ನೆರವು ಪಡೆಯಲು ಇದು ವೇದಿಕೆಯಾಗಿದೆ…

Read More

ಶಿವಮೊಗ್ಗ: ಸಾಗರದ ಡಿಎಫ್ಓ ಮೋಹನ್ ವಿನಾಕಾರಣ ನಮ್ಮ ಹೆಸರನ್ನು ಹೇಳುತ್ತಿದ್ದಾರೆ. ಈ ಮೂಲಕ ಒಬ್ಬರನ್ನೊಬ್ಬರನ್ನು ಎತ್ತಿ ಕಟ್ಟುವಂತ ಕೆಲಸ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ಒಂದು ವಾರದ ಒಳಗಾಗಿ ಸ್ಪಷ್ಟ ಪಡಿಸಿ, ಬಹಿರಂಗವಾಗಿ ಕ್ಷಮೆ ಕೇಳದೇ ಹೋದರೇ, ಎಸಿ, ಡಿಸಿ ಕಚೇರಿಯ ಮುಂದೆ ಪಕ್ಷಾತೀತವಾಗಿ ಪ್ರತಿಭಟನೆ ಮಾಡಲಾಗುತ್ತದೆ. ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಅಂತ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೂಡು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ಬಿಟ್ಟು ಕಿರುಕುಳ, ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಆದರೇ ಬಿಜೆಪಿಯವರು ಇದಕ್ಕೆಲ್ಲ ಬಗ್ಗಲಿಲ್ಲ. ಈಗ ಹೊಸ ರೀತಿಯಲ್ಲಿ ಕಿರುಕುಳ ಶುರು ಮಾಡಿದ್ದಾರೆ. ಆನಂದಪುರ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಸಾಗುವಾನಿ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ. ಗಾಡಿಯನ್ನು ಸೀಜ್ ಮಾಡಲಾಗಿದೆ. ಊರಿನ ಗ್ರಾಮಸ್ಥರು, ಕಾಂಗ್ರೆಸ್ ಮುಖಂಡರು ಆರ್ ಎಫ್ ಓ, ಡಿಎಫ್ಓ ಬಳಿಯಲ್ಲಿ ಹೋಗಿ ಮಾತುಕತೆ ನಡೆಸಿದ್ದಾರೆ.…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ನೈರುತ್ಯ ರೈಲ್ವೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೇ ಸಂಚಾರ ರದ್ದು, ನಿಯಂತ್ರಣ ಕೂಡ ಮಾಡಲಾಗಿದೆ. ರೈಲು ಸೇವೆಯಲ್ಲಿ ಬದಲಾವಣೆ ನಿಡವಂದ ಯಾರ್ಡ್ ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ: ರೈಲು ಸಂಚಾರ ರದ್ದು: ನವೆಂಬರ್ 23 ರಂದು ತುಮಕೂರು-ಬಾಣಸವಾಡಿ ಮೆಮು ವಿಶೇಷ ರೈಲು (ರೈಲು ಸಂಖ್ಯೆ 06512), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು (ರೈ.ಸಂ. 16239) ಮತ್ತು ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (ರೈ.ಸಂ.16240) ರೈಲುಗಳ ಸಂಚಾರವನ್ನು ರದ್ದು ಮಾಡಲಾಗುತ್ತಿದೆ. ರೈಲು ಸಂಚಾರ ಭಾಗಶಃ ರದ್ದು: ನವೆಂಬರ್ 23 ಮತ್ತು 24 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ಸೇವೆಯನ್ನು ದೊಡ್ಡಬೆಲೆ-ತುಮಕೂರು ನಡುವೆ ಮತ್ತು ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06576) ರೈಲು ಸೇವೆಯನ್ನು ತುಮಕೂರು-ದೊಡ್ಡಬೆಲೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ನವೆಂಬರ್ 23 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ…

Read More

ಬೆಂಗಳೂರು: ಪ್ರಾಥಮಿಕ ಕ್ಯಾನ್ಸರ್‌ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ಪತ್ತೆ ಹಚ್ಚಲು ಇದೇ ಮೊದಲ ಬಾರಿಗೆ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ಹಾಗೂ ಟ್ರುಕನ್ ಡಯಾಗ್ನೋಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಹಯೋಗದೊಂದಿಗೆ “ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌” ಟೆಸ್ಟ್‌ನನ್ನು ಸಂಶೋಧಿಸಿದೆ. ಈ ನೂತನ ಸಂಶೋಧನ ಸಹಯೋಗದಿಂದ ಕ್ಯಾನ್ಸರ್‌ ಬರುವ ಮುನ್ನ ಹಾಗೂ ಮರುಕಳಿಸುವ ಕ್ಯಾನ್ಸರ್‌ನನ್ನು ಪೂರ್ವದಲ್ಲಿಯೇ ನಿಖರವಾಗಿ ಪತ್ತೆ ಹಚ್ಚುವ ನಾವೆಲ್‌-ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಸಹಕಾರಿಯಾಗಲಿದೆ. ಇದಷ್ಟೇ ಅಲ್ಲದೆ, ಯಾವುದೇ ರೀತಿಯ ಕ್ಯಾನ್ಸರ್‌ ಆಗಿದ್ದರೂ ಅದಕ್ಕೆ ನಿಖರವಾದ ಹಾಗೂ ಪರಿಣಾಮಕಾರಿಯ ಚಿಕಿತ್ಸೆಯನ್ನು ಈ ನಾವೆಲ್‌ ಬಯೋಮಾರ್ಕರ್‌ ಡಯಾಗ್ನಾಸ್ಟಿಕ್‌ ಟೆಸ್ಟ್‌ ಮೌಲ್ಯೀಕರಿಸಲಿದೆ. ಈ ಸಹಭಾಗಿತ್ವದ ಅಡಿಯಲ್ಲಿ, ಟ್ರುಕನ್ ಅಭಿವೃದ್ಧಿಪಡಿಸಿದ ಹೊಸ ಕ್ಯಾನ್ಸರ್ ರೋಗನಿರ್ಣಯ ಪರೀಕ್ಷೆಗಳ ಮೇಲೆ ಹೆಚ್ಚು ಮೌಲ್ಯಮಾಪನದ ಅಧ್ಯಯನ ನಡೆಸಲು HCG ಮತ್ತು ಟ್ರುಕನ್ ಒಟ್ಟಾಗಿ ಕೆಲಸ ಮಾಡಲಿವೆ. ಈ ಪರೀಕ್ಷೆಗಳು ಮುಂದಿನ-ಪೀಳಿಗೆಗೆ ಹೆಚ್ಚು ಉಪಯುಕ್ತವಾಗಲಿದ್ದು, ನೋವೆಲ್‌ ಬಯೋಮಾರ್ಕರ್-ಚಾಲಿತ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಸುಧಾರಿತ ತಂತ್ರಗಳನ್ನು ಬಳಸಿಕೊಳ್ಳುತ್ತವೆ. ಪ್ರಾಥಮಿಕ ಮತ್ತು ಮರುಕಳಿಸುವ/ಮೆಟಾಸ್ಟಾಟಿಕ್ ಕ್ಯಾನ್ಸರ್ ಪತ್ತೆಹಚ್ಚುವಿಕೆಯನ್ನು ಸಕ್ರಿಯಗೊಳಿಸಲು, ಪೂರ್ವ-ಚಿಕಿತ್ಸೆಯ ಮುನ್ಸೂಚನೆ…

Read More

ಬೆಂಗಳೂರು: ನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಒಂದರಲ್ಲಿ ಅಗ್ನಿ ಅವಘಟ ಉಂಟಾಗಿದೆ. ಈ ಬೆಂಕಿ ಅವಘಡದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಓರ್ವ ಯುವತಿ ಸಜೀವ ದಹನವಾಗಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಬೆಂಕಿ ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ. ಈ ಬೆಂಕಿಯಲ್ಲಿ ಓರ್ವ ಯುವತಿ ಸಜೀವ ದಹನವಾಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-good-news-for-the-people-from-now-on-the-state-government-will-free-the-surgery-of-the-clerks/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ  ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗಾಗಿ ಉಚಿತವಾಗಿ ನೀಡಲು ನಿರ್ಧರಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ತುರ್ತು ಅಲ್ಲದ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳಿಗೆ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಬಹುದು. ಎರಡನೆಯ ಅಭಿಪ್ರಾಯವು ರೋಗಿಗಳಿಗೆ ಅವರ ರೋಗನಿರ್ಣಯ ಮತ್ತು ಚಿಕಿತ್ಸಾ ಆಯ್ಕೆಗಳ ಕುರಿತು ಹೆಚ್ಚುವರಿ ದೃಷ್ಟಿಕೋನವನ್ನು ಒದಗಿಸುತ್ತದೆ.  ಸಂಪೂರ್ಣ ಮಾಹಿತಿಯ ಆಧಾರದ ಮೇಲೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ. ಕ್ಲಿಷ್ಟಕರ ಪ್ರಕರಣಗಳಲ್ಲಿ ಮತ್ತೊಬ್ಬ ವೈದ್ಯರು/ಶಸ್ತ್ರಚಿಕಿತ್ಸಕರು ರೋಗನಿರ್ಣಯವನ್ನು ದೃಡೀಕರಿಸಬಹುದು ಅಥವಾ ನಿರಾಕರಿಸಬಹುದು ಹಾಗೂ ಪರ್ಯಾಯ ಚಿಕಿತ್ಸಾ ವಿಧಾನವನ್ನು ಸೂಚಿಸಬಹುದು. ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಶಸ್ತ್ರಚಿಕಿತ್ಸಕರು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿರಬಹುದು, ಇದು ರೋಗಿಗಳಿಗೆ ಶಸ್ತ್ರಚಿಕಿತ್ಸೆಯಿಂದ ಉಂಟಾಗುವ ತೊಡಕುಗಳು ಮತ್ತು ಚೇತರಿಕೆಯ ಸವಾಲುಗಳನ್ನು ಪೂರ್ಣ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಎರಡನೇ ಅಭಿಪ್ರಾಯವು ಶಸ್ತ್ರಚಿಕಿತ್ಸೆಯಲ್ಲದ ಇತರೆ ಚಿಕಿತ್ಸಾ ವಿಧಾನಗಳನ್ನು ಸೂಚಿಸಬಹುದು. ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆಗಳು ಸಾಮಾನ್ಯವಾಗಿ ವಿಭಿನ್ನ ಅಥವಾ ಹೆಚ್ಚು ವಿಶೇಷ ಗಮನವನ್ನು ಹೊಂದಿರುವ  ತಜ್ಞ ವೈದ್ಯರುಗಳಿಂದ ಸುಧಾರಿತ…

Read More

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಳೆ ನಡೆಯಲು ಉದ್ದೇಶಿಸಿದ್ದಂತ ಮದ್ಯ ಮಾರಾಟ ಪ್ರತಿಭಟನೆಯನ್ನು ಕೈಬಿಡಲಾಗಿದೆ. ಹಾಗಾದ್ರೆ ಇಂದಿನ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಪ್ರಮುಖ ಹೈಲೈಟ್ಸ್ *ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. *ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು. *ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು. *ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು. ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ…

Read More