Author: kannadanewsnow09

ಬೆಂಗಳೂರು: ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸೌಧದಲ್ಲಿಂದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರಿಂದ ವಿಷ್ಣುವರ್ಧನ್ ಸ್ಮಾರಕ ಕುರಿತಂತೆ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಲಸಂದ್ರ ಗ್ರಾಮದ ಸರ್ವೆ ನಂ.26 ರಲ್ಲಿ 62 ಎಕರೆ20 ಗುಂಟೆ ಪ್ರದೇಶವನ್ನು “ತುರಹಳ್ಳಿ ರಾಜ್ಯ ಅರಣ್ಯ” ಎಂದು ಘೋಷಸಿ ಮೈಸೂರು ಸರ್ಕಾರ 1935ರಲ್ಲಿ ಅಧಿಸೂಚನೆ ಹೊರಡಿಸಿತ್ತು. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಬರುವ ಮೊದಲು ಈ ಅರಣ್ಯ ಭೂಮಿಯ ಪೈಕಿ 20 ಎಕರೆ ಪ್ರದೇಶವನ್ನು ಖ್ಯಾತ ಚಿತ್ರನಟ ಟಿ.ಎನ್.ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಿಸುವ ಸಲುವಾಗಿ 1969 ಒಂದು ಎಕರೆಗೆ ರೂ.300/- ರಂತೆ ಒಟ್ಟು 6,000/- ರೂಗಳಿಗೆ 20 ಎಕರೆ ಪ್ರದೇಶವನ್ನು ಷರತ್ತುಬದ್ಧವಾಗಿ ಮಂಜೂರು…

Read More

ಪೋಲೆಂಡ್: ಕರ್ನಾಟಕದೊಂದಿಗೆ ತಂತ್ರಜ್ಞಾನ ವಲಯದಲ್ಲಿ ಸಹಯೋಗವನ್ನು ಬಲಪಡಿಸಲು ಪೋಲೆಂಡ್ನ ಉಪ ಪ್ರಧಾನಿ ಮತ್ತು ಡಿಜಿಟಲ್ ವ್ಯವಹಾರಗಳ ಸಚಿವ ಕ್ರಿಸ್ಟಾಫ್ ಗಾವ್ಕಾವ್ಸ್ಕಿ ಅವರನ್ನು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಂದು ಭೇಟಿಯಾದರು. ಪೋಲೆಂಡ್ ಪ್ರವಾಸದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಕ್ರಿಸ್ಟಾಫ್ ಗಾವ್ಕಾವ್ಸ್ಕಿ ಅವರನ್ನು ಭೇಟಿಯಾಗಿ ಕೌಶಲ್ಯ, AI ಮತ್ತು ನಾವೀನ್ಯತೆ, ಸೈಬರ್ ಭದ್ರತೆ, ಡಿಜಿಟಲ್ ಆಡಳಿತ ಹಾಗೂ ಇತರ ಉದಯೋನ್ಮುಖ ತಂತ್ರಜ್ಞಾನಗಳ ಸಹಯೋಗದ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರಲ್ಲದೆ, ಈ ಭೇಟಿ ತಮಗೆ ಸಂತಸ ತಂದುಕೊಟ್ಟಿದೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಪೋಲಿಷ್-ಭಾರತೀಯ ತಂತ್ರಜ್ಞಾನ ಸಹಕಾರದ ಕಾರ್ಯತಂತ್ರದ ಮೌಲ್ಯದ ಕುರಿತು ಒತ್ತು ನೀಡಿದ್ದು, ಈ ಮೂಲಕ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ 2025ರ ಚರ್ಚೆಗಳಿಗೆ ಭದ್ರ ಬುನಾದಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರಲ್ಲದೆ, ಭಾರತ ಮತ್ತು ಪೋಲೆಂಡ್ ನಡುವೆ ತಂತ್ರಜ್ಞಾನ ಹಾಗೂ ಡಿಜಿಟಲ್ ಸಹಯೋಗವನ್ನು ಮುಂದುವರಿಸಲು ತಾವು ಎದುರು ನೋಡುತ್ತಿರುವುದಾಗಿ…

Read More

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹೈಕೋರ್ಟ್ ವಕೀಲರಾದ ಲೋಕೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ.ಅಭಿಷೇಕ್ ಮನುಸಿಂ್ವ ಅವರ ಆದೇಶದ ಅನ್ವಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹಿರಿಯ ವಕೀಲ ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ.ಧನಂಜೇಯ ಅವರು ತಿಳಿಸಿದ್ದಾರೆ. ಲೋಕೇಶ್ ಅವರು ಹಾಸನ ಜಿಲ್ಲೆ ಅರಸೀಕೆರೆ ಮೂಲದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಯಾಗಿದ್ದು, ಹೈಕೋರ್ಟ್ ವಕೀಲರಾಗಿದ್ದಾರೆ. https://kannadanewsnow.com/kannada/invitation-to-apply-for-free-online-cuet-exam-preparatory-training/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಪತ್ರಿಕೋದ್ಯಮ ಸುಧೀರ್ಘ ಸೇವೆಗಾಗಿ ತುಮಕೂರು ವಿಶ್ವವಿದ್ಯಾನಿಲಯ ಕೊಡ ಮಾಡುವ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾಗಿರುವ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ(ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮವನ್ನು ಸೆ.1ರಂದು ಸೋಮವಾರ ಬೆಳಿಗ್ಗೆ 11ಕ್ಕೆ ಕೆಯುಡಬ್ಲೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ.ಮದನಗೌಡ ಅವರು ಅಭಿನಂದನಾ ನುಡಿ ನುಡಿಯಲಿದ್ದಾರೆ. ಗಿರೀಶ್ ಲಿಂಗಣ್ಣಗೆ ಸನ್ಮಾನ: ಇದೇ ಸಂದರ್ಭದಲ್ಲಿ ಸಂಶೋದಾನ್ಮಕ ಮತ್ತು ವೈಜ್ಞಾನಿಕ ವರದಿಗಳಿಗಾಗಿ ಕೆಯುಡಬ್ಲೂಜೆಯಲ್ಲಿ ದತ್ತಿ ನಿಧಿ ಪ್ರಶಸ್ತಿ ಸ್ಥಾಪನೆ ಮಾಡಿರುವ ಗಿರೀಶ್ ಲಿಂಗಣ್ಣ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/invitation-to-apply-for-free-online-cuet-exam-preparatory-training/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಉಚಿತ ಆನ್‌ಲೈನ್ CUET ಪರೀಕ್ಷಾ ಪೂರ್ವ ತರಬೇತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ CUET ಪರೀಕ್ಷೆಗೆ ಉಚಿತ ಆನ್‌ಲೈನ್ ತರಬೇತಿ ನೀಡುತ್ತಿದೆ, ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ. https://igccd.karnataka.gov.in ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು ​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಆಗಿದೆ. https://twitter.com/SWDGoK/status/1961710827901419908 https://kannadanewsnow.com/kannada/attention-to-the-sc-community-of-the-state-invitation-to-apply-for-ca-foundation-pre-examination-training/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಸಿಎ ಫೌಂಡೇಶನ್ ಪರೀಕ್ಷಾ ಪೂರ್ವ ಆನ್ ಲೈನ್ ತರಬೇತಿಗೆ ಸಮಾಜ ಕಲ್ಯಾಣ ಇಲಾಖಎಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದ ಪರಿಶಿಷ್ಟ ಜಾತಿಯ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ, ಅರ್ಜಿ ಸಲ್ಲಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ ಎಂದಿದೆ. ಈ ಕೆಳಗೆ ನೀಡಿರುವ ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು: https://igccd.karnataka.gov.in ​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಆಗಿದೆ. https://twitter.com/SWDGoK/status/1961760678651523139 https://kannadanewsnow.com/kannada/medical-and-dental-counseling-after-the-mc-result-kea/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶ ಹೊರಬಿದ್ದ ನಂತರ ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಈ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಸ್‌ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಯುಜಿಸಿಇಟಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಅವರಿಗೆ ಅನುಕೂಲ ಆಗಲಿ ಎನ್ನುವ ಕಾರಣಕ್ಕೆ ನಾಲ್ಕು ಛಾಯ್ಸ್‌ ಗಳ ಆಯ್ಕೆಗೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳನ್ನು ಹೊರತುಪಡಿಸಿ, ಇತರ ಎಲ್ಲ ಕೋರ್ಸ್‌ಗಳ ಪ್ರವೇಶ…

Read More

ತುಮಕೂರು: ಗುಬ್ಬಿ ರೈಲು ನಿಲ್ದಾಣದಲ್ಲಿ ಲಘು ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ತುಮಕೂರು ಜಿಲ್ಲೆಯ ಗುಬ್ಬಿ ರೈಲು ನಿಲ್ದಾಣದಲ್ಲಿ ಲೈಟ್ ರೋಡ್ ಓವರ್ ಬ್ರಿಡ್ಜ್ (ಆರ್‌ಒಬಿ) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯನ್ನು ₹20 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ವಿ.ಸೋಮಣ್ಣ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು “ಒಂದೇ ನಾಣ್ಯದ ಎರಡು ಮುಖಗಳಂತೆ” ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಪ್ರಸಕ್ತ ವರ್ಷದಲ್ಲಿ ಭಾರತ ಸರ್ಕಾರವು ಭಾರತೀಯ ರೈಲ್ವೆಗೆ ₹2.65 ಲಕ್ಷ ಕೋಟಿ ಮೀಸಲಿಟ್ಟಿದೆ, ಅದರಲ್ಲಿ ₹49,000 ಕೋಟಿಯನ್ನು ಕರ್ನಾಟಕ ರಾಜ್ಯದ ಯೋಜನೆಗಳಿಗೆ ನೀಡಲಾಗಿದೆ ಎಂದರು. ಗುಬ್ಬಿ ರೈಲು ನಿಲ್ದಾಣವನ್ನು ಅಮೃತ ಭಾರತ ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದು ಪ್ರಯಾಣಿಕರ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. ಈ…

Read More

ಬೆಂಗಳೂರು: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ. ಎಂ. ಎ. ಸಲೀಂ, ಐಪಿಎಸ್ (ಕೆಎನ್: 1993), ಪೊಲೀಸ್ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳು, ಬೆಂಗಳೂರು, ಕರ್ನಾಟಕ, ಬೆಂಗಳೂರು ಇವರನ್ನು ಕರ್ನಾಟಕ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಯ ಮುಖ್ಯಸ್ಥರು) ಹುದ್ದೆಗೆ ನೇಮಕ ಮಾಡಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್‌ನಲ್ಲಿ ಅಪೆಕ್ಸ್ ಸ್ಕೇಲ್, ಲೆವೆಲ್-17 ಅಂದರೆ ರೂ.2,25,000/- (ನಿಗದಿತ) ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/bmtc-bus-services-starting-from-today-to-nelamangala-bus-station-minister-ramalinga-reddy/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ. ಎಂ. ಎ. ಸಲೀಂ, ಐಪಿಎಸ್ (ಕೆಎನ್: 1993), ಪೊಲೀಸ್ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳು, ಬೆಂಗಳೂರು, ಕರ್ನಾಟಕ, ಬೆಂಗಳೂರು ಇವರನ್ನು ಕರ್ನಾಟಕ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಯ ಮುಖ್ಯಸ್ಥರು) ಹುದ್ದೆಗೆ ನೇಮಕ ಮಾಡಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್‌ನಲ್ಲಿ ಅಪೆಕ್ಸ್ ಸ್ಕೇಲ್, ಲೆವೆಲ್-17 ಅಂದರೆ ರೂ.2,25,000/- (ನಿಗದಿತ) ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/bmtc-bus-services-starting-from-today-to-nelamangala-bus-station-minister-ramalinga-reddy/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More