Author: kannadanewsnow09

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ 15-06-2025ರಂದು ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವಂತ ಘಟನೆ ಸಂಬಂಧ ಸ್ಷಷ್ಟನೆ ನೀಡುವಂತೆ ಸೂಚಿಸಿದ್ದಾರೆ. ಇನ್ನೂ ಘಟನೆಯ ಸಂಬಂಧ ಕಾಂತಾರ ಚಾಪ್ಟರ್-1 ಚಿತ್ರತಂಡವು ಮೂರು ದಿನಗಳಲ್ಲಿ ತಹಶೀಲ್ದಾರರ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಈಗ ಕಾಂತಾರಾ ಚಾಪ್ಟರ್ -1 ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಅಂದಹಾಗೇ ನೀರಲ್ಲಿ ಬೋಡ್ ಬಳಸಿ ಚಿತ್ರೀಕರಿಸಿದಂತ ಆರೋಪ ಕಾಂತಾರ ಚಾಪ್ಟರ್-1 ಚಿತ್ರತಂಡದ ಮೇಲಿದೆ. ಈ ರೀತಿಯ ಚಿತ್ರೀಕರಣಕ್ಕೆ ತಹಶೀಲ್ದಾರ್, ಜಿಲ್ಲಾಡಳಿತದ ಅನುಮತಿಯನ್ನು ಪಡೆಯಬೇಕಿತ್ತು. ಆದರೇ ಚಿತ್ರತಂಡವು ಅನುಮತಿ ಪಡೆಯದೇ ಚಿತ್ರೀಕರಣ ನಡೆಸಿದ್ದಂತ ವೇಳೆಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/today-103-unauthorized-bike-taxi-seizures-in-bangalore-rto-additional-commissioner-information/…

Read More

ಬೆಂಗಳೂರು: ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಇಂದಿನಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಅನಧಿಕೃತ ಎಂಬುದಾಗಿ ಆದೇಶಿಸಿದೆ. ಕಾನೂನಡಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ. ಹೀಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರದ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದರು. ವೈಟ್ ಬೋರ್ಡ್ ವಾಹನವನ್ನು ಕಮರ್ಷಿಯಲ್ ಸೇವೆಗೆ ಬಳಸಲು ಅವಕಾಶವಿಲ್ಲ. ವೈಟ್ ಬೋರ್ಟ್ ಬೈಕ್ ಅಲ್ಲದೇ ಕಾರನ್ನು ಬಳಸುವಂತಿಲ್ಲ. ಈ ಹಿಂದಯೇ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ಒಂದು…

Read More

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು ಸವಾರ ಹಲ್ಲೆ ಮಾಡಿದ್ದಲ್ಲ, ಯುವತಿಯೇ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಸಂಬಂಧ ಕೇಸ್ ದಾಖಲಾಗಿತ್ತು. ಯುವತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ವಿರುದ್ಧ ಬಿಎನ್ಎಸ್ ಕಾಯ್ದೆಯ 352, 115(2), 79ರಡಿ ಕೇಸ್ ದಾಖಲಾಗಿದೆ. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದಂತ ದೃಶ್ಯಾವಳಿಯಲ್ಲಿ ಯುವತಿಯ ಕಳ್ಳಾಟ ಬಯಲಾಗಿದೆ. ಸಿಸಿಟಿವಿಯಲ್ಲಿ ಯುವತಿ ಹಲ್ಲೆ ಮಾಡ್ತಿರೋ ದೃಶ್ಯ ಸೆರೆಯಾಗಿದೆ. ಆದರೇ ಯುವತಿ Rapido ಬೈಕ್ ಸವಾರನೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂಬುದಾಗಿ ಆರೋಪಿಸಿದ್ದಳು. ಸಿಸಿಟಿವಿ ದೃಶ್ಯಾವಳಿಯಲ್ಲಿ ಕೆಳಗೆ ಇಳಿದ ತಕ್ಷಣವೇ ಸುಹಾಸ್ ಮೇಲೆ ಯುವತಿ ಶ್ರೇಯಾ ಹಲ್ಲೆ ಮಾಡಿರೋದು ದಾಖಲಾಗಿದೆ. ಮಾತಿಗೆ ಮಾತು…

Read More

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 06281 ಮೈಸೂರು – ಅಜ್ಮೀರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಹಾಗೂ ರೈಲು ಸಂಖ್ಯೆ 06282 ಅಜ್ಮೀರ್ – ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 23.06.2025 ಮತ್ತು 30.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ. ಬಿ) ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಉಂಟಾಗುವ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ…

Read More

ಗುಜರಾತ್: ಜೂನ್.12ರಂದು ಅಹಮದಾಬಾದಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ಓರ್ವ ಪ್ರಯಾಣಿಕ ಹೊರತುಪಡಿಸಿ 241 ಮಂದಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಬಚಾವ್ ಆಗಿ ಬಂದಂತ ಪ್ರಯಾಣಿಕರ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ. ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಹೊಸ ವೀಡಿಯೊ ಹೊರಬಿದ್ದಿದ್ದು, ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್, ಅಪಘಾತ ಸ್ಥಳದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಇದು ತೋರಿಸುತ್ತದೆ. ಆ ವೀಡಿಯೋ ಕೆಳಗಿದೆ ನೋಡಿ. https://twitter.com/TheGemsofX/status/1934460917225492849 ಅಂದಹಾಗೇ ಗುಜರಾತಿನ ಅಹಮದಾಬಾದಿನಲ್ಲಿ ನಡೆದಂತ ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ಬಳಿಕ ಈವರೆಗೆ 99 ಮೃತದೇಹಗಳ ಡಿಎನ್ಎ ಮ್ಯಾಚ್ ಆಗಿದ್ದು, ಕೆಲ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನೂ ಹಲವರ ಡಿಎನ್ಎ ಪರಿಶೀಲನೆಯನ್ನು ಮಾಡಲಾಗುತ್ತಿದೆ. https://kannadanewsnow.com/kannada/attention-bengaluru-citizens-on-june-19th-there-will-be-a-disruption-in-the-supply-of-cauvery-water-in-these-areas-of-the-city/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/

Read More

ಬೆಂಗಳೂರು: ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ…

Read More

ಬೆಂಗಳೂರು: ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ಲಭಿಸಿದೆ. ಬರೋಬ್ಬರಿ 1331.48 ಮೆಗಾವ್ಯಾಟ್ ಪವನ ವಿದ್ಯುತ್ ಸಾಮರ್ಥ್ಯ ಸಾಧಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು. https://twitter.com/KarnatakaVarthe/status/1934568439244624169 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ. ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ…

Read More

ನವದೆಹಲಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜ್ಯೂರಿಚ್ ನಿಂದ ದೆಹಲಿಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಜ್ಯೂರಿಚ್ ನಲ್ಲೇ ಲ್ಯಾಂಡಿಂಗ್ ಮಾಡಲಾಗಿದೆ. ಸ್ವಿಟ್ಜರ್ಲೆಂಡಿನ ಜ್ಯೂರಿಚ್ ನಿಂದ ದೆಹಲಿಗೆ ತೆರಳುತ್ತಿದ್ದಂತ ಏರ್ ಇಂಡಿಯಾ ವಿಮಾನ ಇದಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣ ಜ್ಯೂರಿಚ್ ನಲ್ಲೇ ಸೇಫ್ ಲ್ಯಾಂಡಿಂಗ್ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/from-today-google-pay-phone-pay-is-faster-what-changes-are-there-here-are-the-details/ https://kannadanewsnow.com/kannada/breaking-a-woman-who-questioned-rash-driving-in-bengaluru-was-attacked-by-a-cab-driver/

Read More

ನವದೆಹಲಿ: ಇಂದಿನಿಂದ ಗೂಗಲ್ ಪೇ, ಪೋನ್ ಪೇ ಮೂಲಕ ನೀವು ಮತ್ತಷ್ಟು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಹಾಗಾದ್ರೇ ಏನೆಲ್ಲಾ ಬದಲಾವಣೆ ಎನ್ನುವ ಬಗ್ಗೆ ಮುಂದೆ ಓದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ( NPCI) ಸಿಸ್ಟಮ್ ಅಪ್ ಗ್ರೇಡ್ ಮಾಡಲು ಆರಂಭಿಸಿದೆ. ಹೀಗಾಗಿ ಯುಪಿಐ ವಹಿವಾಟುಗಳನ್ನು ಪೂರ್ಣಗೊಳಿಸಲು ತೆಗೆದುಕೊಳ್ಳುವ ಸಮಯ ಇಂದಿನಿಂದ ಕಡಿಮೆಗೊಳಿಸಲಾಗಿದೆ. ಈ ಹಿಂದೆ ಏಪ್ರಿಲ್ 26, 2025ರಂದೇ ಸುತ್ತೋಲೆಯಲ್ಲಿ ಎಲ್ಲ ಸದಸ್ಯ ಬ್ಯಾಂಕ್, ಪೋನ್ ಪೇ, ಗೂಗಲ್ ಪೇ ಹಾಗೂ ಪೇಟಿಯಂ ಪ್ಲಾಟ್ ಫಾರ್ಮ್ ಗಳಿಗೆ ತಮ್ಮ ಸಿಸ್ಟಮ್ ಅಪ್ ಗ್ರೇಡ್ ಗೆ ಸೂಚಿಸಲಾಗಿತ್ತು. ಅದರಂತೆ ಮಾಡಲಾಗಿದ್ದು, ಹಣ ವರ್ಗಾವಣೆ, ಪರಿಶೀಲನೆ ಮತ್ತು ರಿವರ್ಸಲ್ ಗಳು ಸೇರಿದಂತೆ ವಿವಿಧ ವಹಿವಾಟಿಗೆ 30 ಸೆಕೆಂಡ್ ತೆಗೆದುಕೊಳ್ಳುತ್ತಿದ್ದಂತ ಸಮಯವು ಈಗ 10 ರಿಂದ 15 ಸೆಕೆಂಡುಗಳಲ್ಲಿ ಮುಗಿಯಲಿದೆ. ಇನ್ನೂ ಮೊಬೈಲ್ ಸಂಖ್ಯೆ ಅಥವಾ ಯುಪಿಐ ಐಡಿಗಳನ್ನು 10 ಸೆಕೆಂಡ್ ಗಳಲ್ಲಿ ಪರಿಶೀಲಿಸಬಹುದು. ಅದೇಗೆಂದರೇ ನೀವು ಅಂಗಡಿಗೆ ಹೋಗಿ ವಸ್ತು ಖರೀದಿಸಿ ಕ್ಯೂ ಆರ್…

Read More

ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾAಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್‌ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ…

Read More