Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಐದು ಗ್ರಹಗಳಾದ ಇಂದಿನ ಯುವ ಪೀಳಿಗೆಯಲ್ಲಿ ತೀವ್ರ ಜೀವನಶೈಲಿಯ ಬದಲಾವಣೆಗಳನ್ನು ತಂದಿವೆ, ಇದು ವ್ಯಸನ, ಒಂಟಿತನ, ಖಿನ್ನತೆ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಿದೆ ಎಂದು ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್ಕೆಸಿಸಿಐ) ವತಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಡಾ. ಮಂಜುನಾಥ್, ಈ ‘ಐದು ಗ್ರಹ’ಗಳಿಂದಾಗಿ ಯುವ ಪೀಳಿಗೆ ಹೃದಯ ನಾಳೀಯ ಕಾಯಿಲೆಗಳಿಗೆ ತುತ್ತಾಗುವ ಆತಂಕಕಾರಿ ಸಂಗತಿಗಳು ಹೊರಬರುತ್ತಿವೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವಜನತೆಯನ್ನು ಇನ್ಸ್ಟಾಗ್ರಾಂ ರೀಲ್ಸ್ ಗಳು ಸೆಳೆಯುತ್ತವೆ. ಹೆಚ್ಚೆಚ್ಚು ರೀಲ್ಸ್ ಮಾಡುವುದು, ರೀಲ್ಸ್ ನೋಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಾಮಾಜಿಕ ಮಾಧ್ಯಮ ಬಳಕೆಯನ್ನು ಜನತೆಯಲ್ಲಿ ನಿಯಂತ್ರಿಸುವ ಅವಶ್ಯಕತೆಯಿದೆ, ಅದರಲ್ಲೂ ವಿಶೇಷವಾಗಿ ವೇಗವಾಗಿ ಹರಡುತ್ತಿರುವ ನಕಾರಾತ್ಮಕ ವಿಷಯಗಳನ್ನು ತಡೆಯಬೇಕಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪರಿಶೀಲಿಸದ ಮಾಹಿತಿಗಳು ತುಂಬಾ ಇರುತ್ತವೆ, ಇದು ಸಾಮಾಜಿಕ ರಚನೆಯನ್ನು ತೊಂದರೆಗೊಳಿಸುವುದಲ್ಲದೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆ ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನವಾಗಿದೆ. ಇದು ಜನವಿರೋಧಿ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆಯ ಹೆಸರಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಎಲ್ಲ ಜಾತಿಗಳ ಜನರು ಮತಾಂತರವನ್ನು ವಿರೋಧಿಸಿದ್ದಾರೆ. ಕುರುಬ, ಬ್ರಾಹ್ಮಣ, ವಿಶ್ವಕರ್ಮ ಹೀಗೆ ಎಲ್ಲ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಹೆಸರು ತರಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕ್ರೈಸ್ತರಾಗಿದ್ದು, ಅವರನ್ನು ಮೆಚ್ಚಿಸಲು ಈ ರೀತಿ ಮಾಡಲಾಗಿದೆ. ಯಾರಾದರೂ ಪಾಕಿಸ್ತಾನದವನು, ಸಂವಿಧಾನ ನಂಬಲ್ಲ ಎಂದು ಹೇಳಿದರೆ, ಅದನ್ನು ಹಾಗೆಯೇ ಬರೆದುಕೊಳ್ಳುತ್ತಾರೆಯೇ? ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ, ಅದರಲ್ಲಿ ಜಾತಿಗಳ ಹೆಸರನ್ನು ಏಕೆ ಉಲ್ಲೇಖಿಸುತ್ತಾರೆ? ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ಮಾರ್ಗದರ್ಶನದಲ್ಲಿ ಹಿಂದೂಗಳನ್ನು ಒಡೆಯುತ್ತಿದ್ದಾರೆ ಎಂದರು. ಇದನ್ನು ವಿರೋಧ ಮಾಡುತ್ತಿರುವ ಸಚಿವರು ರಾಜೀನಾಮೆ ಕೊಟ್ಟು ಬರಲಿ. ಕೇವಲ ಹೇಳಿಕೆ ಕೊಟ್ಟು ನಾಟಕವಾಡುವುದು ಬೇಡ. ಹೀಗೆ ಮಾಡಿದರೆ ಜಾತಿ ಸಮುದಾಯದವರು ಸಚಿವರನ್ನು ಕ್ಷಮಿಸುವುದಿಲ್ಲ. ಮತಾಂತರವನ್ನು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ನಾಳೆ ಜಾರಿಗೆ ಬರಲಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸುಧಾರಣೆಗಳನ್ನು ಭಾರತದ ಆರ್ಥಿಕತೆಗೆ ಉತ್ತೇಜನ ನೀಡುವ “ಮುಂದಿನ ಪೀಳಿಗೆಯ ಸುಧಾರಣೆ” ಎಂದು ಬಣ್ಣಿಸಿದ್ದಾರೆ. ನಾಳೆಯಿಂದ ಎರಡು ಹಬ್ಬಗಳು ಪ್ರಾರಂಭವಾಗಲಿವೆ ಎಂದು ಅವರು ಹೇಳಿದರು: ನವರಾತ್ರಿ ಮತ್ತು ಜಿಎಸ್ಟಿ ಬಚತ್ ಉತ್ಸವ (ಜಿಎಸ್ಟಿ ಉಳಿತಾಯ ಹಬ್ಬ). https://twitter.com/ANI/status/1969727335072182502 “ನವರಾತ್ರಿಯ ಮೊದಲ ದಿನದಿಂದ, ದೇಶವು ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಪ್ರಮುಖ ಹೆಜ್ಜೆ ಇಡುತ್ತಿದೆ. ನಾಳೆಯಿಂದ ಸೂರ್ಯೋದಯದೊಂದಿಗೆ, ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ಜಾರಿಗೆ ತರಲಾಗುವುದು. ‘ಜಿಎಸ್ಟಿ ಬಚತ್ ಉತ್ಸವ’ ಕೂಡ ಪ್ರಾರಂಭವಾಗಲಿದೆ, ಇದು ನಿಮ್ಮ ಉಳಿತಾಯವನ್ನು ಹೆಚ್ಚಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು. https://twitter.com/ANI/status/1969727963165073653 “ಈ ಸುಧಾರಣೆಯು ಬೆಲೆಗಳನ್ನು ಕಡಿಮೆ ಮಾಡುವ ಬಗ್ಗೆ ಮಾತ್ರವಲ್ಲ, ಹೊಸ ಅವಕಾಶಗಳನ್ನು ಸೃಷ್ಟಿಸುವ ಬಗ್ಗೆ. ನಮ್ಮ ಮಧ್ಯಮ ವರ್ಗದ ಉಳಿತಾಯ ಹೆಚ್ಚಾಗುತ್ತದೆ, ನಮ್ಮ ಯುವಕರು ಪ್ರಯೋಜನ ಪಡೆಯುತ್ತಾರೆ ಮತ್ತು ಇಡೀ ಆರ್ಥಿಕತೆಯು ವೇಗವನ್ನು ಪಡೆಯುತ್ತದೆ” ಎಂದು…
ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಚಾಟಿಸಲಾಗಿದೆ. ಅವರನ್ನು ಉಚ್ಚಾಟಿಸಲು ಟ್ರಸ್ಟ್ ಅಧ್ಯಕ್ಷರು, ಸದಸ್ಯರು ನಿರ್ಧರಿಸಿದ್ದಾರೆ. ಇಂದು ಪಂಚಮಸಾಲಿ ಟ್ರಸ್ಟಿನ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಚಾಟನೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಸದಸ್ಯರು ನಿರ್ಣಯ ಕೈಗೊಂಡಿದ್ದಾರೆ.
ನವದೆಹಲಿ: ಜಿಎಸ್ಟಿ 2.0 ಮತ್ತು ಆದಾಯ ತೆರಿಗೆ ಕಡಿತದ ಮೂಲಕ ಜನರಿಗೆ 2.5 ಲಕ್ಷ ಕೋಟಿ ರೂ. ಉಳಿತಾಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ದೇಶದ ಜನತೆ ಉದ್ದೇಶಿಸಿ ಮಾತನಾಡುತ್ತಿರುವಂತ ಅವರು, ಜಿಎಸ್ಟಿ 2.0 ಜಾರಿಗೆ ಬರುವ ಒಂದು ದಿನ ಮೊದಲು, ಭಾನುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ ಲಕ್ಷಾಂತರ ಕಂಪನಿಗಳು ಮತ್ತು ಜನರು ತೆರಿಗೆ ಮತ್ತು ಸುಂಕಗಳ ಜಾಲದಿಂದಾಗಿ ತೊಂದರೆಗಳನ್ನು ಎದುರಿಸಿದ್ದಾರೆ ಎಂದು ಹೇಳಿದರು. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿಯಲ್ಲಿ ತೆರಿಗೆ ಸುಧಾರಣೆಗಳು ವ್ಯವಹಾರ ಮಾಡುವುದನ್ನು ಸುಲಭಗೊಳಿಸುತ್ತವೆ ಮತ್ತು ಹೂಡಿಕೆಯನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. “ಕಳೆದ ಹನ್ನೊಂದು ವರ್ಷಗಳಲ್ಲಿ, ದೇಶದಲ್ಲಿ 25 ಕೋಟಿ ಜನರು ಬಡತನವನ್ನು ಸೋಲಿಸಿದ್ದಾರೆ. ಬಡತನದಿಂದ ಹೊರಬಂದು, ನವ-ಮಧ್ಯಮ ವರ್ಗ ಎಂದು ಕರೆಯಲ್ಪಡುವ 25 ಕೋಟಿ ಜನರ ದೊಡ್ಡ ಗುಂಪು ಇಂದು ದೇಶದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈ ನವ-ಮಧ್ಯಮ ವರ್ಗವು ತನ್ನದೇ ಆದ ಆಕಾಂಕ್ಷೆಗಳು ಮತ್ತು…
ನವದೆಹಲಿ: ನಾಳೆಯಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ನಾನು ನಿಮಗೆ ನನ್ನ ಶುಭಾಶಯಗಳನ್ನು ಕೋರುತ್ತೇನೆ. ನವರಾತ್ರಿಯ ಮೊದಲ ದಿನದಿಂದ ದೇಶವು ಆತ್ಮನಿರ್ಭರ ಭಾರತದತ್ತ ಮಹತ್ವದ ಹೆಜ್ಜೆ ಇಡುತ್ತಿದೆ. ನಾಳೆ, ನವರಾತ್ರಿಯ ಮೊದಲ ದಿನ, ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳು ಸೂರ್ಯೋದಯದೊಂದಿಗೆ ಜಾರಿಗೆ ಬರಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ದೇಶದ ಜನತೆ ಉದ್ದೇಶಿಸಿ ಮಾತನಾಡಿದಂತ ಅವರು, ತ್ಯೋಹಾರೋ ಕೆ ಇಸ್ ಮೌಸಮ್ ಮೇ ಸಬ್ಕಾ ಮುಹ್ ಮೀಠಾ ಹೋಗಾ. ದೇಶ್ ಕೆ ಹರ್ ಪರಿವಾರ್ ಕಿ ಖುಷಿಯಾ ಬಧೇಗಿ… ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳು ಮತ್ತು ‘ಬಚತ್ ಉತ್ಸವ’ಕ್ಕಾಗಿ ದೇಶಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದರು. https://twitter.com/ANI/status/1969727335072182502 ಈ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ, ವ್ಯವಹಾರವನ್ನು ಸರಳಗೊಳಿಸುತ್ತವೆ. ಹೂಡಿಕೆಯನ್ನು ಹೆಚ್ಚು ಆಕರ್ಷಕವಾಗಿಸುತ್ತವೆ ಮತ್ತು ಅಭಿವೃದ್ಧಿಯ ಓಟದಲ್ಲಿ ಪ್ರತಿಯೊಂದು ರಾಜ್ಯವನ್ನು ಸಮಾನ ಪಾಲುದಾರರನ್ನಾಗಿ ಮಾಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. https://twitter.com/ANI/status/1969727963165073653 ಭಾರತವು 2017…
ನವದೆಹಲಿ: ನಾಳೆ ಮಹತ್ವದ ಹೆಜ್ಜೆ ಇಡಲಿದ್ದೇವೆ. ನಾಳೆ ನವರಾತ್ರಿಯ ಮೊದಲ ದಿನವೇ ಆತ್ಮನಿರ್ಭಾರ ಭಾರತದತ್ತ ದೇಶ ದಾಪುಗಾಲಿಡಲಿದೆ. ನಾಳೆಯ ನವರಾತ್ರಿ ಮೊದಲ ದಿನದಿಂದ ಜಿಎಸ್ ಟಿ ಉತ್ಸವ ಆರಂಭವಾಗಲಿದೆ ಎಂಬುದಾಗಿ ಪ್ರಧಾ ನರೇಂದ್ರ ಮೋದಿ ತಿಳಿಸಿದ್ದಾರೆ. ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿರುವಂತ ಅವರು, ಜಿಎಸ್ಟಿಯಿಂದ ನಿಮ್ಮಲೆಲ್ಲರ ಉಳಿತಾಯ ಶುರುವಾಗಲಿದೆ. ಎಲ್ಲಾ ವರ್ಗದ ಜನರಿಗೂ ಉಳಿತಾಯದ ಉತ್ಸವ ಆರಂಭವಾಗಲಿದೆ. ನಿಮ್ಮ ನೆಚ್ಚಿನ ವಸ್ತುಗಳನ್ನು ಖರೀದಿ ಮಾಡಲು ಸಹಾಯವಾಗಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಜಿಎಸ್ಟಿ ಬಚತ್ ಉತ್ಸವ ನಾಳೆಯಿಂದ ಜಾರಿಗೆ ಬರಲಿದ್ದು, ಇದು ಜನರ ಉಳಿತಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ನವರಾತ್ರಿಯ ಮೊದಲ ದಿನದಿಂದ ದೇಶವು ಆತ್ಮನಿರ್ಭರ ಭಾರತದತ್ತ ಮತ್ತೊಂದು ಪ್ರಮುಖ ಹೆಜ್ಜೆ ಇಡುತ್ತಿದೆ. ನಾಳೆಯಿಂದ ಸೂರ್ಯೋದಯದೊಂದಿಗೆ ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ಜಾರಿಗೆ ತರಲಾಗುವುದು. ‘ಜಿಎಸ್ಟಿ ಬಚತ್ ಉತ್ಸವ’ ಕೂಡ ಪ್ರಾರಂಭವಾಗಲಿದೆ. ಇದು ನಿಮ್ಮ ಉಳಿತಾಯವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಮಡಿಕೇರಿ: ಜೀವ ಉಳಿಸಲು ರೋಗಿಯನ್ನು ಆಂಬುಲೆನ್ಸ್ ಮೂಲಕ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಬ್ರೇಕ್ ಫೇಲ್ ಆಗಿತ್ತು. ಆದರೇ ಆ ಚಾಲಕ ಮಾತ್ರ ಅದನ್ನು ಲೆಕ್ಕಿಸದೇ ತನ್ನ ಜೀವನನ್ನೇ ಪಣವಾಗಿಟ್ಟು ಗರ್ಭಿಣಿ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿ, ನೆರವಾಗಿದ್ದಾರೆ. ಆಂಬುಲೆನ್ಸ್ ವಾಹನ ಬ್ರೇಕ್ ಫೇಲ್ ಆದರೂ ತನ್ನ ಜೀವವನ್ನು ಲೆಕ್ಕಿಸದ ಚಾಲಕನೊಬ್ಬ ಮಡಿಕೇರಿಯಿಂದ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ದು ಸೇಫ್ ಆಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಷ್ಟೇ ಅಲ್ಲದೇ ದಾರಿ ಮಧ್ಯದಲ್ಲಿ ತಲೆಗೆ ಬೆಟ್ಟು ಬಿದ್ದು ಗಾಯಗೊಂಡಿದ್ದಂತ ವ್ಯಕ್ತಿಯೊಬ್ಬನನ್ನು ಬಿಳಿಕೆರೆಯಿಂದ ಹುಣಸೂರು ಆಸ್ಪತ್ರೆಗೆ ಸಾಗಿಸಿ ಸಾಹಸ ಮೆರೆದಿದ್ದಾನೆ. ಚಾಲಕ ಬಿಎಸ್ ವೆಂಕಟೇಶ್ (ಕಿಶೋರ್ ಪೂಜಾರಿ) ಅವರ ಕಾರ್ಯಕ್ಕೆ ಜನತೆ ಮೆಚ್ಚುಗೆ ವ್ಯಪಡಿಸಿದ್ದಾರೆ. ಕಿಶೋರ್ ಪೂಜಾರಿ ಮಡಿಕೇರಿ ತಾಲ್ಲೂಕು ಜಿಲ್ಲಾಸ್ಪತ್ರೆಯಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದಂತ ಇವರು, ಕೋವಿಡ್ ವೇಳೆ ಮೃತದೇಹಗಳನ್ನು ಅಂತ್ಯ ಸಂಸ್ಕಾರ ನೆರವೇರಿಸಲು ನೆರವಾಗಿದ್ದರು. ಇದೀಗ ಬ್ರೇಕ್ ಫೇಲ್ ಆದರೂ ಗರ್ಭಿಣಿ ಮಹಿಳೆಯನ್ನು ಸರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿ ಮೆಚ್ಚುಗೆ ಗಳಿಸಿದ್ದಾರೆ. https://kannadanewsnow.com/kannada/the-work-of-closing-the-potholes-on-the-road-that-flowed-through-bangalore/ https://kannadanewsnow.com/kannada/social-and-educational-survey-caste-survey-to-begin-tomorrow-answering-these-questions-is-mandatory/
ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 20-09-2025 ರಂದು 4 ವಿಭಾಗಗಳಲ್ಲಿ 9.45 ಕಿ.ಮೀ ಉದ್ದದ ರಸ್ತೆ ವ್ಯಾಪ್ತಿಯಲ್ಲಿ 178 ಗುಂಡಿಗಳು, 2,332 ಚ.ಮೀ. ವಿಸ್ತೀರ್ಣದ ಪ್ಯಾಚ್ ವರ್ಕ್, ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ. ಸಿಎಂ ಸಿದ್ಮುಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ದಿನಾಂಕ: 20-09-2025 ರಂದು ನಡೆದ ಸಭೆಯಲ್ಲಿ ಬೆಂಗಳೂರು ನಗರದಲ್ಲಿ ಗುಂಡಿ ಮುಕ್ತ ರಸ್ತೆಗಳನ್ನಾಗಿಸಲು ಆದೇಶಿಸಿದಿದಂತೆ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ ದಿನಾಂಕ: 20-09-2025 ರಂದು ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯ 4 ವಿಭಾಗಗಳಲ್ಲಿ 9.45 ಕಿ.ಮೀ ಉದ್ದದ ರಸ್ತೆ ವ್ಯಾಪ್ತಿಯಲ್ಲಿ 178 ಗುಂಡಿಗಳು, 2,332 ಚ.ಮೀ. ವಿಸ್ತೀರ್ಣದ ಪ್ಯಾಚ್ ವರ್ಕ್ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದರು. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಉಳಿದ ಸ್ಥಳಗಳಲ್ಲಿ ತ್ವರಿತ ಗತಿಯಲ್ಲಿ ಗುಂಡಿಗಳನ್ನು…
ಬೆಂಗಳೂರು: ನಗರದಲ್ಲಿ ಶಾಂಕಿಂಗ್ ಕೃತ್ಯ ಎನ್ನುವಂತೆ ತಂದೆಯ ಆಸ್ತಿಗಾಗಿ ಪುತ್ರನೊಬ್ಬ ಸ್ನೇಹಿತನೊಂದಿಗೆ ಸೇರಿಕೊಂಡು ಅಪ್ಪನನ್ನೇ ಕೊಲೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಆಸ್ತಿಯ ಆಸೆಗಾಗಿ ಸ್ನೇಹಿತನೊಂದಿಗೆ ಸೇರಿದಂತ ಪುತ್ರನೊಬ್ಬ ತಂದೆಯನ್ನು ಕೊಲೆ ಮಾಡಿರುವಂತ ಕೃತ್ಯವು ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ಬಯಲಾಗಿದೆ. ಬೆಂಗಳೂರಿನ ದಾಸರಹಳ್ಳಿಯ ಕೆಂಪೇಗೌಡ ನಗರದ ಉದ್ಯಮಿ ಮಂಜಣ್ಣ ಎಂಬುವರೇ ಪುತ್ರನಿಂದ ಕೊಲೆಯಾದಂತ ದುರ್ದೈವಿಯಾಗಿದ್ದಾರೆ. ಪುತ್ರ ಮನೋಜ್ ಹಾಗೂ ಸ್ನೇಹಿತ ಸೇರಿಕೊಂಡು ಆಸ್ತಿಯ ಆಸೆಗಾಗಿ ತಂದೆಯನ್ನು ಕೊಲೆಗೈದಿರೋದು ತಿಳಿದು ಬಂದಿದೆ. ಕಳೆದ ಸೆಪ್ಟೆಂಬರ್ 2ರಂದು ದಾಸರಹಳ್ಳಿಯ ಕೆಂಪೇಗೌಡ ನಗರದಲ್ಲಿ ಉದ್ಯಮಿ ಮಂಜಣ್ಣ ಅವರು ಮನೆಯಲ್ಲಿ ಮಲಗಿದ್ದಂತ ಜಾಗದಲ್ಲೇ ಸಾವನ್ನಪ್ಪಿದ್ದರು. ಮಂಜಣ್ಣ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಮನೆಯವರು ಅಂತ್ಯಕ್ರಿಯೆ ನೆರವೇರಿಸಿದ್ದರು. ಮಂಜಣ್ಣ ಅವರ ಮರಣೋತ್ತರ ವರದಿ ಬಂದಿದ್ದು, ಅದರಲ್ಲಿ ಮಂಜಣ್ಣನನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಮೃತ ಮಂಜಣ್ಣ ಬಾಗಲಗುಂಟೆಯಲ್ಲಿ ಐದಾರು ಬಿಲ್ಡಿಂಗ್, ನಾಲ್ಕೈದು ಸೈಟ್, ಒಂದು ವುಡ್ ವರ್ಕ್ ಫ್ಯಾಕ್ಟರಿ ಹೊಂದಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದರು. ದೊಡ್ಡ…






