Author: kannadanewsnow09

ಬೆಂಗಳೂರು: ದಿನಾಂಕ 30.08 2025 (ಶನಿವಾರ) 09:00 ಗಂಟೆಯಿಂದ 18:00 ಗಂಟೆಯವರೆಗೆ 66kV DG-3 & 66kV DG-4 ಮಾರ್ಗಗಳಲ್ಲಿ 66/11KV ಮಾನ್ಯತಾ S/s ನಿಂದ ಹೆಣ್ಣೂರು ನಗರದ S/s ಬಳಿಯ CTT ವರೆಗೆ DG-4 ಲೈನ್‌ನ ಟವರ್ ಸಂಖ್ಯೆ 18 ರಿಂದ ಟವರ್ ಸಂಖ್ಯೆ 23 ರವರೆಗೆ 1088 ಮೀಟರ್ HTLS ಕಂಡಕ್ಟರನ್ನು ಎಳೆಯಲು, KPTCL ನಿಂದ ಲೈನ್ ಕ್ಲಿಯರ್ ಅನ್ನು ಪಡೆದುಕೊಂಡಿರುವುದರಿಂದ, ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್‌ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ…

Read More

ಬೆಂಗಳೂರು: ರಾಜ್ಯದಲ್ಲಿರುವ ಜಲಮೂಲಗಳ ಸಮಗ್ರ ನಿರ್ವಹಣೆ ಹಾಗೂ ನೀರಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರುವ ನಿಟ್ಟಿನಲ್ಲಿ ಉಪಗ್ರಹ ದತ್ತಾಂಶ ಹಾಗೂ ಎಐ ತಂತ್ರಜ್ಞಾನ ಆಧಾರಿತ ಡಿಜಿಟಲ್‌ ವಾಟರ್‌ ಸ್ಟಾಕ್‌ ಯೋಜನೆ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಣೆಯನ್ನು ನೀಡಿರುವ ಅವರು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಂತರ್ಜಲದ ಮಟ್ಟ ಕುಸಿತಗೊಂಡಿರುವ ಹಾಗೆಯೇ, ನೀರಿನ ಲಭ್ಯತೆ ಅಸಮರ್ಪಕವಾಗಿರುವ ಸಂಧರ್ಭದಲ್ಲಿ ದೇಶದಲ್ಲೆ ಮೊದಲ ಬಾರಿಗೆ, ಕರ್ನಾಟಕ ಸರ್ಕಾರ ‘ಡಿಜಿಟಲ್ ವಾಟರ್ ಸ್ಟಾಕ್’ (DWS) ಎಂಬ ನೂತನ ತಂತ್ರಜ್ಞಾನ ಆಧಾರಿತ ನೀರಿನ ನಿರ್ವಹಣಾ ವೇದಿಕೆಯನ್ನು ಅನುಷ್ಠಾನಗೊಳಿಸುತ್ತಿದೆ. ಕರ್ನಾಟಕ ಟ್ಯಾಂಕ್ ಸಂರಕ್ಷಣಾ ಮತ್ತು ಅಭಿವೃದ್ಧಿ ಪ್ರಾಧಿಕಾರ (KTCDA) ಈ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಲಿದ್ದು, ರಾಜ್ಯದ ಕೆರೆಗಳು ಮತ್ತು ಇನ್ನಿತರ ಜಲಮೂಲಗಳನ್ನು ಡಿಜಿಟಲ್ ವಾಟರ್ ಸ್ಟಾಕ್ (DWS) ಚಟುವಟಿಕೆ ಅಡಿಯಲ್ಲಿ ಸಮರ್ಪಕವಾಗಿ ಸರ್ವೇ ಸೇರಿದಂತೆ ಮೇಲ್ವಿಚಾರಣೆ ಹಾಗೂ ಅವುಗಳನ್ನು ಸಮರ್ಪಕವಾಗಿ…

Read More

ಬೆಂಗಳೂರು: ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತಂತೆ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಪ್ರಶ್ನಿಸಿ ಜಾಗೃತ ಕರ್ನಾಟಕ, ಜಾಗೃತ ಭಾರತ ಸಂಸ್ಥೆಯಿಂದ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲೋಕಸಭೆ ಸ್ಪೀಕರ್ ಹಾಗೂ ರಾಹುಲ್ ಗಾಂಧಿ ಪ್ರತಿವಾದಿಯನ್ನಾಗಿಸಲಾಗಿತ್ತು. 1926 ರಿಂದ 1947ರವರೆಗಿನ ಮಹಾತ್ಮ ಗಾಂಧಿ ಆತ್ಮಚರಿತ್ರೆ ಲಭ್ಯವಿಲ್ಲ. ಈ ಬಗ್ಗೆ ಪ್ರತಿವಾದಿಗಳು ಬೆಳಕು ಚೆಲ್ಲಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿತ್ತು. ಇಂತಹ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ ನ್ಯಾಯಪೀಠವು, ಪಿಐಎಲ್ ವಿಚಾರಣೆಗೆ ಅರ್ಹವಾಗಿಲ್ಲವೆಂದು ವಜಾಗೊಳಿಸಿದೆ. https://kannadanewsnow.com/kannada/court-orders-to-remand-mla-veerendra-pap-pi-to-custody-for-another-6-days/ https://kannadanewsnow.com/kannada/good-news-for-the-people-of-sagar-taluk-doctors-have-been-appointed-to-these-9-hospitals/

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಖಾಲಿ ಇದ್ದಂತ 9 ಆಸ್ಪತ್ರೆಗಳಿಗೆ ಒಂದು ವರ್ಷ ಗ್ರಾಮೀಣ ಸೇವೆಯಡಿ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆರೋಗ್ಯಾಧಿಕಾರಿ ಆದೇಶದ ಮಾಡಿದ್ದು, ತಾಲ್ಲೂಕಿನಲ್ಲಿ ಒಂದು ವರ್ಷ ಗ್ರಾಮೀಣ ಸೇವೆ ವೈದ್ಯರು ಕೌನ್ಸೆಲಿಂಗ್ ಮುಖಾಂತರ ಸ್ಥಳ ಆಯ್ಕೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ ಎಂದಿದ್ದಾರೆ. ಸಾಗರ ತಾಲ್ಲೂಕಿನ ಯಾವ ಆಸ್ಪತ್ರೆಗೆ ಯಾವ ವೈದ್ಯರ ನೇಮಕ? ಇಲ್ಲಿದೆ ಲೀಸ್ಟ್ ಡಾ.ನಿತಿನ್ ದೀಪ್, ನಗರ ಆರೋಗ್ಯ ಕೇಂದ್ರ ಸುಭಾಷ್ ನಗರ, ಸಾಗರ ಡಾ.ಮಧುರ, ನಮ್ಮ ಕ್ಲಿನಿಕ್, ನೆಹರು ನಗರ, ಸಾಗರ ಡಾ.ಎಂ.ಡಿ ಹನೀಫ್, ಸಮುದಾಯ ಆರೋಗ್ಯ ಕೇಂದ್ರ, ಆನಂದಪುರ ಡಾ.ರೀಟಾ ಗ್ಲೋರಿ ಕೆ.ವಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಗಲ್ ಡಾ.ಪ್ರಸನ್ನ ಕುಮಾರ್, ಪ್ರಾಥಮಿಕ ಆರೋಗ್ಯ ಕೇಂದ್ರ, ಬ್ಯಾಕೋಡು ಡಾ.ಅಮಿತಾ ಮಡಿವಾಳರ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರವಂತೆ ಡಾ.ವಿನಿತ್.ಬಿ, ಪ್ರಾಥಮಿಕ…

Read More

ಬೆಂಗಳೂರು: ಆನ್ ಲೈನ್ ಹಾಗೂ ಆಪ್ ಲೈನ್ ಗ್ಯಾಬ್ಲಿಂಗ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಬಂಧಿತ ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಬಂಧಿಸುವಾಗ ಆರೋಪಿ ವಿರುದ್ಧ ಯಾವ ಕೇಸ್ ಗಳನ್ನ ಉಲ್ಲೇಖಿಸಿದ್ದೀರಿ? ಎಂಬುದಾಗಿ ಇಡಿ ಅಧಿಕಾರಿಗಳಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು. 2011ರ ಕೇಸ್ ರದ್ದಾಗಿದೆ. 2016ರ ಸಿಬಿಐ ಕೇಸ್ ಸಹ ಕ್ಲೋಸ್ ಆಗಿದೆ. ಯಾವ ಪ್ರಕರಣ ಆಧರಿಸಿ ಇಸಿಐಆರ್ ದಾಖಲಿಸಿದ್ದೀರಿ ಎಂಬುದಾಗಿ ಇಡಿ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಮೂರ್ತಿಗಳು ಕೇಳಿದರು. ಈ…

Read More

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಪಾಲ್ಸ್ ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಯತ್ನಕ್ಕೆ ಮುಂದಾಗಿದ್ದಾನೆ. ಆದರೇ ಆ ವ್ಯಕ್ತಿಯನ್ನು ಮನವೊಲಿಸಿದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್ ಹೆಚ್.ಎನ್ ಅವರು, ಆತ್ಮಹತ್ಯೆ ಯತ್ನದಿಂದ ಪಾರು ಮಾಡಿ, ಬದುಕಿನ ಪಾಠ ಮಾಡಿದ್ದಾರೆ. ಅಲ್ಲದೇ ಜೀವದ ಅಮೂಲ್ಯತೆಯ ಬಗ್ಗೆ ತಿಳಿಹೇಳಿ, ಊರಿಗೆ ಮರಳಿಸುವಂತ ಕೆಲಸವನ್ನು ಮಾಡಿದ್ದಾರೆ. ಆಟೋ ಚಾಲಕ ಸುಳಿವು ಕಳೆದ ಆಗಸ್ಟ್.25, 2025ರಂದು ಮಧ್ಯಾಹ್ನ 1.30ರ ಸುಮಾರಿಗೆ ಆಟೋ ಚಾಲಕ ಶಿಯಾಬ್ ಎಂಬುವರು ಜೋಗ್ ಫಾಲ್ಸ್ ರೌಂಡ್ಸ್ ನಲ್ಲಿದ್ದಂತ ಪೊಲೀಸರಿಗೆ ಒಬ್ಬ ವ್ಯಕ್ತಿ ಜೋಗ್ ಫಾಲ್ಸ್ ಅಪಾಯಕಾರಿ ಸ್ಥಳಗಳ ಬಗ್ಗೆ ವಿಚಾರಿಸಿದಂತ ಮಾಹಿತಿಯನ್ನು ನೀಡಿದ್ದಾರೆ. ಆತ ಆತ್ಮಹತ್ಯೆಗೆ ಮುಂದಾಗಿರುವಂತ ಸುಳಿವು ಅದರೊಂದಿಗೆ ಪೊಲೀಸರಿಗೆ ಸಿಕ್ಕಿದೆ. ಕೂಡಲೇ ಅಲರ್ಟ್ ಆದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್.ಹೆಚ್.ಎನ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. 20 ದಿನಗಳ ಹಿಂದೆಯೇ ಮನೆ ಬಿಟ್ಟಿದ್ದ ವ್ಯಕ್ತಿ ಆ ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತ ಸಾಲದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆಯನ್ನು ಬೆಂಗಳೂರು ಮೂಲದ ಬಟ್ಟೆ…

Read More

ಮಂಗಳೂರು: ಇಲ್ಲಿನ ಕರ್ನಾಟಕ-ಕೇರಳ ಗಡಿ ಭಾಗವಾಗಿರುವಂತ ತಲಪಾಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಹಿಂದೆ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಆ ಭಯಾನಕ ಬೆಚ್ಚಿ ಬೀಳಿಸುವಂತ ವೀಡಿಯೋ ಕೆಳಗಿದೆ ನೋಡಿ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬ್ರೇಕ್ ಫೇಲ್ ಆದಂತ ಪರಿಣಾಮ, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದಂತ ಜನರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದಂತ ಬಾಲಕಿ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದಾರೆ. ಈ ಭೀಕರ ಅಪಘಾತದಲ್ಲಿ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರೇ, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.…

Read More

ಬೆಂಗಳೂರು: ನಾಳೆ ರಾಜ್ಯಾಧ್ಯಂತ ಗಾಂಧಿ ಮತ್ತು ನೋಟು ಚಿತ್ರ ಬಿಡುಗಡೆಯಾಗಲಿದೆ. ಇದೊಂದು ಮಕ್ಕಳ ಚಿತ್ರದ ಜೊತೆಗೆ, ಕುಟುಂಬ ಸಮೇತರಾಗಿ ನೋಡುವಂತ ಸಿನಿಮಾವಾಗಿದೆ. ತಪ್ಪದೇ ಎಲ್ಲರೂ ಹೋಗಿ ಚಿತ್ರವನ್ನು ನೋಡಿ, ತಂಡವನ್ನು ಹಾರೈಸುವಂತೆ ಗೀತರಚನಾಕಾರ ಡಾ.ವಿ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ. ಇಂದು ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾಳೆ ಗಾಂಧಿ ಮತ್ತು ನೋಟು ಚಿತ್ರ ತೆರೆಕಾಣದಲಿದೆ. ಇದೊಂದು ನೋಟಿನ ಮೇಲೆ ಗಾಂಧಿ ಚಿತ್ರ ಇರಬೇಕೇ ಬೇಡವೇ ಎನ್ನುವಂತ ಕಥಾಹಂತರವನ್ನು ಒಳಗೊಂಡಿದೆ. ಸಂಭಾಷಣಾಕಾರ ಗುರುಪ್ರಸಾದ್ ಅವರು ಕತೆಯನ್ನು ಚೆನ್ನಾಗಿ ನೋಡುಗರನ್ನು ಸೆಳೆಯುವಂತೆ ಹೆಣೆದಿದ್ದಾರೆ. ಶಾರ್ಟ್ ಫಿಲ್ಮ್ ಅನ್ನು ಬಿಗ್ ತೆರೆಗೆ ತಂದಿದ್ದಾರೆ ಎಂದರು. ತಮಾಷೆ, ಎಲ್ಲರಿಗೂ ಇಷ್ಟವಾಗುವಂತ ಕತೆಯಿದೆ. ಮಕ್ಕಳು ತುಂಬಾ ಇಷ್ಟ ಪಡುವಂತೆ ಚಿತ್ರವಿದು. ಮಲೆನಾಡು ಪ್ರದೇಶದಲ್ಲಿ, ಸಾಗರದ ಹಿನ್ನೀರು ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಇದರ ಪ್ರಮುಖ ಪಾತ್ರದಲ್ಲಿ ನನ್ನ ಮಗಳು ದಿವಿಜ ನಾಗೇಂದ್ರ ಪ್ರಸಾದ್ ನಟಿಸಿದ್ದಾಳೆ. ತಂದೆಯಾಗಿ ನನಗೆ ಮಗಳ ನಟನೆ ಬಗ್ಗೆ ಖುಷಿಯಿದೆ. ನಿಮಗೆಲ್ಲ ಮೆಚ್ಚುಗೆಯಾಗುವಂತಿದೆ.…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರರು ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆಂಬುದು ನಮಗೂ ಗೊತ್ತಿದೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ; ಇದು ಅಕ್ಷಮ್ಯ ಅಪರಾಧ ಎಂದು ವಿಶ್ಲೇಷಿಸಿದರು. ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ನಮಸ್ತೇ ಸದಾ ವತ್ಸಲೇ ಗೀತೆ ಹೇಳಿದರು. ತಕ್ಷಣ ದೆಹಲಿ ಹೈಕಮಾಂಡಿನ ಒತ್ತಡ ಬಂದು ಕ್ಷಮಾಪಣೆ ಕೇಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡಿನದು ಒಡೆದಾಳುವ ನೀತಿಯ ಸಂಸ್ಕøತಿ. ಹಾಗಾಗಿ ಕಾಂಗ್ರೆಸ್ ಸರಕಾರ…

Read More

ಬೆಳ್ತಂಗಡಿ: ಸುಳ್ಳು ದೂರು ಆರೋಪದಲ್ಲಿ ಯಾವುದೇ ಕ್ಷಣದಲ್ಲಾದರೂ ಸುಜಾತ ಭಟ್ ಅವರನ್ನು ಎಸ್ಐಟಿ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ವಿರುದ್ಧ ಸುಳ್ಳು ದೂರು ಆರೋಪ ಕೇಳಿ ಬಂದಿತ್ತು. ಸುಳ್ಳು ಸಾಕ್ಷಿ ಸೃಷ್ಟಿ ಆರೋಪದಲ್ಲಿ ಅವರನ್ನು ಎಸ್ಐಟಿ ಬಂಧಿಸಲಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಳ್ತಂಗಡಿಯ ಎಸ್ಐಟಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸುಜಾತಾ ಭಟ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡಿದ್ದರು. ಎಲ್ಲವೂ ಸುಳ್ಳು ಹೇಳಿರೋದಾಗಿ ತಪ್ಪೊಪ್ಪಿಕೊಂಡಿದ್ದರು. ಅನನ್ಯಾ ಭಟ್ ಎಂಬ ಮಗಳು ಇಲ್ಲ ಎಂಬುದಾಗಿಯೂ ಸುಜಾತಾ ಭಟ್ ಎಸ್ಐಟಿ ಮುಂದೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ದೂರುದಾರೆ ಸುಜಾತಾ ಭಟ್ ಅವರನ್ನು ಎಸ್ಐಟಿ ಪ್ರಕರಣದಲ್ಲಿ ಸುಳ್ಳು ದೂರು ನೀಡಿದ್ದರಿಂದ ಬಂಧಿಸೋ ಸಾಧ್ಯತೆ ಇದೆ. https://kannadanewsnow.com/kannada/actor-anirudh-met-cm-siddaramaiah-discussion-about-the-opening-of-vishnuvardhans-tomb/ https://kannadanewsnow.com/kannada/mangaluru-five-killed-in-bus-auto-rickshaw-collision-at-ullal-talapady/

Read More