Author: kannadanewsnow09

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಕೀಚಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನೇ ಅತ್ಯಾಚಾರ ಎಸಗಿದ್ದಾನೆ. ಈ ಪೈಶಾಚಿಕ ಕೃತ್ಯದಿಂದಾಗಿ ಅಪ್ರಾಪ್ತ ಬಾಲಕಿ 2 ತಿಂಗಳ ಗರ್ಭಿಣಿಯಾಗುವಂತೆ ಆಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ಓದುತ್ತಿರುವ ಅಪ್ರಾಪ್ತೆಯ ಮೇಲೆ 8ನೇ ತರಗತಿ ಓದುತ್ತಿರುವಂತ ಅಪ್ರಾಪ್ತ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ. ಅಪ್ರಾಪ್ತ ಬಾಲಕಿ, ಅಪ್ರಾಪ್ತ ಬಾಲಕ ಇಬ್ಬರೂ ವಸತಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಅಪ್ರಾಪ್ತೆಯ ತಂದೆ ಪೊಲೀಸರಿಗೆ ಅಪ್ರಾಪ್ತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಇಳಕಲ್ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. https://kannadanewsnow.com/kannada/the-accused-of-sexual-assault-on-a-minor-girl-has-been-sentenced-to-20-years-in-prison-and-a-fine-of-75000/ https://kannadanewsnow.com/kannada/itr-filing-due-date-extended/

Read More

ಶಿವಮೊಗ್ಗ: ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 75000 ದಂಡವನ್ನು ಶಿವಮೊಗ್ಗ ನ್ಯಾಯಾಲಯದ ವಿಧಿಸಿ ಆದೇಶಿಸಿದೆ. 2022ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ವ್ಯಕ್ತಿಯೊಬ್ಬ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ್ದಾನೆಂದು ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಮಾಳೂರು ಪೊಲೀಸ್ ಠಾಣೆಯಲ್ಲಿ ಕಲಂ 376(2)(ಎನ್),‌ 366, 363 ಐಪಿಸಿ ಕಾಯ್ದೆ ಹಾಗೂ ಕಲಂ 06 ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖಾಧಿಕಾರಿ ಮಾಳೂರು ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ಬಗ್ಗೆ ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದಂತ ಶ್ರೀಧರ್ ಹೆಚ್. ಆರ್ ವಾದ ಮಂಡಿಸಿದ್ದು. ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1  ಪ್ರಕರಣದ ವಿಚಾರಣೆ ನಡೆಸಿ, ಆರೋಪಿಯ ವಿರುದ್ಧ…

Read More

ಮೈಸೂರು: ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್‌.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ: ರದ್ದುಪಡಿಸಿದ ರೈಲುಗಳು ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು. ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು. ರೈಲು…

Read More

ಬೆಂಗಳೂರು: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಗುತ್ತಿಗೆ ವೈದ್ಯರಿಗೆ ನೇರ ನೇಮಕಾತಿ ವೇಳೆ ಕೃಪಾಂಕ ನೀಡುವಂತೆ, ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಕೆಲ ಮಾನದಂಡಗಳನ್ನು ಅಳವಡಿಸುವಂತೆ ಪತ್ರದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಎಂ ಮೇಟಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಈ ಕೆಳಕಂಡ ಮಾನದಂಡಗಳನ್ನು ಅಳವಡಿಸುವಂತೆ ಮನವಿ 1. ಸ್ನಾತಕೋತ್ತರ ವ್ಯಾಸಂಗದ ಅವಧಿಯಲ್ಲಿ ನೀಡಿದ ಬಾಂಡ್ ಅವಧಿಯನ್ನು ಮುಂದಿನ ದಿನಗಳಲ್ಲಿ (Prospective) ಪರಿಗಣಿಸುವುದು. 2. ಯಾವುದೇ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಮುಗಿಸಿ ಕನಿಷ್ಟ 10 ವರ್ಷ ಕಾರ್ಯನಿರ್ವಹಿಸಿದ ಹಾಗೂ ಜೇಷ್ಠತೆಯ ಆಧಾರದ ಮೇಲೆ ಜಿಲ್ಲಾ ಶಸ್ತ್ರಚಿಕಿತ್ಸಕರು/ಮೇಲ್ದರ್ಜೆಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಹುದ್ದೆಗಳಿಗೆ ಪರಿಗಣಿಸುವುದು. 3. ಆಡಳಿತಾತ್ಮಕ ಹುದ್ದೆಗಳಿಗೆ ತಾವೇ ನಿಗಧಿಪಡಿಸಿದ ಮಾನದಂಡದಂತೆ 3 ವರ್ಷ/4 ವರ್ಷ…

Read More

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಹೋರಾತ್ರ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬಾತನಿಗೆ 15 ದಿನಗಳ ಸಿವಿಲ್ ಸೆರೆವಾಸದ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಹೋರಾತ್ರಾ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬುವರು ನೀಡಿದ್ದಾಗಿ ಬೆಂಗಳೂರಿನ 11ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಶೀನಪ್ಪ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ನಿರ್ಬಂಧಕಾಜ್ಞೆ ಉಲ್ಲಂಘಿಸಿ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬುದಾಗಿ ಉಲ್ಲೇಖಿಸಲಾಗಿತ್ತು. ಅವಹೇಳನಕಾರಿ ಹೇಳಇಕೆ ನೀಡದಂತೆ ಕೋರ್ಟ್ ನಿರ್ಬಂಧಿಸಿತ್ತು. ವೀಡಿಯೋ ಡಿಲೀಟ್ ಮಾಡುವಂತೆ ಆದೇಶಿಸಿದ್ದರೂ ಪಾಲಿಸಿರಲಿಲ್ಲ. ಕೋರ್ಟ್ ಆದೇಶ ಅವಗಣನೆ ಮಾಡಿದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿದೆ. 15 ದಿನಗಳ ಸೆರೆವಾಸದ ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. https://kannadanewsnow.com/kannada/ganesh-festival-celebration-background-dc-orders-a-ban-on-firecrackers-across-bengaluru-south-district/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ನಿನ್ನೆ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದಂತ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮತ್ತೂರಿನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದು ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕಾರ್ ಅವರು ಆದೇಶಸಿದ್ದು, ಗಣೇಶ ಹಬ್ಬದ ಆಚರಣೆಯ ವೇಳೆಯಲ್ಲಿ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮತ್ತೂರಿನಲ್ಲಿ ನಿನ್ನೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಅಲ್ಲದೇ ಆರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪಟಾಕಿ ನಿಷೇಧಿಸಿ ಆದೇಶಿಸಿದ್ದಾರೆ. https://kannadanewsnow.com/kannada/bjp-leaders-are-directly-responsible-for-the-defection-maddur-mla-k-m-uday/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಮಂಡ್ಯ : ದೇಶದಲ್ಲಿ ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಕಿಡಿಕಾರಿದರು. ಮದ್ದೂರು ತಾಲೂಕಿನ ನೀಲಕಂಠನಹಳ್ಳಿ, ಕೆ.ಹಾಗಲಹಳ್ಳಿ ಹಾಗೂ ಭೀಮನಕೆರೆ ಗ್ರಾಮಗಳಲ್ಲಿ ಶನಿವಾರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಹಿಂದೆ ಗ್ರಾಮಗಳಲ್ಲಿ ಸರ್ವ ಧರ್ಮದವರೆಲ್ಲ ಸೇರಿ ಅನ್ಯೋನ್ಯತೆ ಹಾಗೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದರು. ಆದರೆ ಈಗ ಜಾತಿಗಳನ್ನು ಗುರುತಿಸುವ ಮೂಲಕ ಇವರು ಇಂತಹ ಜಾತಿ, ಇಂತಹ ಪಂಗಡದವರು ಸೀಮಿತವಾಗಿದ್ದಾರೆ ಎಂದು ದೇಶದಲ್ಲಿ ಬಿಜೆಪಿಯವರು ವಿಷ ಬೀಜ ಬಿತ್ತುವ ಮೂಲಕ ಅನಗತ್ಯವಾಗಿ ಜಾತೀಯತೆ ಸೃಷ್ಟಿಸುತ್ತಿರುವ ಪರಿಣಾಮವೇ ದೇಶದಲ್ಲಿ ಮತಾಂತರಕ್ಕೆ ಬಿಜೆಪಿ ನಾಯಕರೇ ನೇರ ಕಾರಣರಾಗುತ್ತಿದ್ದಾರೆ ಎಂದು ಶಾಸಕ ಉದಯ್ ಕಿಡಿಕಾರಿದರು. ಇನ್ನು ದಸರಾ ಉದ್ಘಾಟನೆಯ ಅಪಸ್ವರದ ಬಗ್ಗೆ ಮಾತನಾಡಿ, ಭಾನು ಮುಷ್ತಾಕ್ ಅವರು ಭಾರತದ ಪ್ರಜೆ, ಸಣ್ಣ ಸಣ್ಣ ವಿಚಾರಗಳಿಗೂ ಜಾತಿ, ಧರ್ಮ ತರುವುದು ಸರಿಯಲ್ಲ. ದೇವಾಲಯಗಳಿಗೆ ಯಾರು ಬೇಕಾದರೂ ಹೋಗಬಹುದು. ನಮ್ಮನ್ನು ಕೂಡ ಪ್ರೀತಿಯಿಂದ ಹಬ್ಬ ಹಾಗೂ ಸಮಾರಂಭಗಳಿಗೆ ಬಾಂಧವರು ಚರ್ಚ್, ಮಸೀದಿಗೆ…

Read More

ನೋಯ್ಡಾ: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಇಂದು ನೋಯ್ಡಾದಲ್ಲಿ ಮೊಬೈಲ್ ಸಾಧನಗಳಿಗಾಗಿ ಭಾರತದ ಮೊದಲ ಟೆಂಪರ್ಡ್ ಗ್ಲಾಸ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಅಮೆರಿಕದ ʻಕಾರ್ನಿಂಗ್ ಇನ್ಕಾರ್ಪೊರೇಟೆಡ್ʼ ಸಹಯೋಗದೊಂದಿಗೆ ʻಆಪ್ಟಿಮಸ್ ಎಲೆಕ್ಟ್ರಾನಿಕ್ಸ್ʼ ಸಂಸ್ಥೆಯು ಈ ಘಟಕವನ್ನು ಸ್ಥಾಪಿಸಿದೆ ಮತ್ತು ಜಾಗತಿಕವಾಗಿ ಗುರುತಿಸಲ್ಪಟ್ಟ ಬ್ರಾಂಡ್ “ಇಂಜಿನೀಯರ್ಡ್ ಬೈ ಕಾರ್ನಿಂಗ್” ಅಡಿಯಲ್ಲಿ ಉತ್ತಮ ಗುಣಮಟ್ಟದ ಟೆಂಪರ್ಡ್ ಗ್ಲಾಸ್ ಅನ್ನು ಉತ್ಪಾದಿಸುತ್ತದೆ. ಉತ್ಪನ್ನಗಳನ್ನು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪೂರೈಸಲಾಗುವುದು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಟೆಂಪರ್ಡ್ ಗ್ಲಾಸ್,  ಮೊಬೈಲ್ ಫೋನ್ ಗಳಿಗೆ ಪ್ರಮುಖ ಪರಿಕರವಾಗಿದ್ದು, ಅದರ ದೇಶೀಯ ಉತ್ಪಾದನೆಯು ʻಮೇಕ್ ಇನ್ ಇಂಡಿಯಾʼ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಯಶಸ್ಸಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದರು. ಹಂತ ಹಂತವಾಗಿ, ಚಿಪ್ಸ್, ಕವರ್ ಗ್ಲಾಸ್ ಗಳು, ಲ್ಯಾಪ್ ಟಾಪ್ ಮತ್ತು ಸರ್ವರ್ ಘಟಕಗಳು ಸೇರಿದಂತೆ ಮೊಬೈಲ್ ಫೋನ್ ಗಳಲ್ಲಿ ಬಳಸುವ ಪ್ರತಿಯೊಂದು ಬಿಡಿಭಾಗವನ್ನೂ ಭಾರತ ತಯಾರಿಸುತ್ತದೆ, ಆ ಮೂಲಕ ಎಲೆಕ್ಟ್ರಾನಿಕ್ಸ್…

Read More

ಬೆಳಗಾವಿ: ಸುಮಾರು 145 ಕೋಟಿ ರೂ. ಮೌಲ್ಯದ ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ ಅಂದಾಜು 45 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದ (ಡಿಜಿಜಿಐ), ಬೆಳಗಾವಿ ವಲಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಾಥಮಿಕ ಶೋಧಗಳ ಪ್ರಕಾರ , ನಕಲಿ ದಾಖಲೆಗಳನ್ನು ಬಳಸಿಕೊಂಡು ಸುಸಜ್ಜಿತ ಗುಂಪೊಂದು ನಕಲಿ ಜಿ ಎಸ್ ಟಿ ನೋಂದಣಿಗಳನ್ನು ಸೃಷ್ಟಿಸಿ ನಕಲಿ ಐಟಿಸಿಯನ್ನು ಪಡೆದುಕೊಂಡು ರವಾನಿಸುವ ಚಟುವಟಿಕೆಯಲ್ಲಿ ನಿರತವಾಗಿತ್ತು. ಶೋಧದ ಸಮಯದಲ್ಲಿ ಆರೋಪಿ ಯಿಂದ ಅಧಿಕಾರಿಗಳು ಮೊಬೈಲ್ ಫೋನ್, ನಕಲಿ ದಾಖಲೆಗಳು, ನಕಲಿ ಆಧಾರ್ ಕಾರ್ಡುಗಳು ಮತ್ತು ನಕಲಿ ಸಂಸ್ಥೆಗಳ ಸೈನ್ ಬೋರ್ಡ್ ನ ಛಾಯಾಚಿತ್ರಗಳು ಸೇರಿದಂತೆ ಹಲವಾರು ದಾಖಲೆಗಳು ಮತ್ತು  ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಇನ್ವಾಯ್ಸ್ ಗಳು ಮತ್ತು ಇ-ವೇ ಬಿಲ್ ಗಳನ್ನು ರಚಿಸಲು ನೈಜ ವ್ಯಾಪಾರ ಕಾರ್ಯಾಚರಣೆಗಳಿಲ್ಲದ ಶೆಲ್ ಕಂಪನಿಗಳನ್ನು ಬಳಕೆ ಮಾಡಿಕೊಂಡಿರುವುದು ಈ ವೇಳೆ ಬೆಳಕಿಗೆ ಬಂದಿದೆ. ಹಾಗೇಯೇ ಆರೋಪಿಯ 26 ನಕಲಿ ಜಿ.ಎಸ್.ಟಿ.…

Read More

ಬೆಂಗಳೂರು: ಸ್ವಾತಂತ್ರ್ಯ ಭಾರತವನ್ನು ಹೇಗೆ ಇಟ್ಟುಕೊಳ್ಳಬೇಕು. ಗಳಿಸಿದ ಸ್ವಾತಂತ್ರ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಯುವಜನತೆ ಯೋಚನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನೇತಾಜಿ ಸುಭಾಶ್‌ಚಂದ್ರ ಬೋಸ್ ಟ್ರಸ್ಟ್, ಸನ್‌ಸ್ಟಾರ್ ಪಬ್ಲಿಷರ್ಸ್ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಈ.ರಾಧಾಕೃಷ್ಣ ಅವರು ಅನುವಾದಿಸಿರುವ ನೇತಾಜಿ ಸುಭಾಶ್‌ಚಂದ್ರ ಬೋಸ್‌ ರವರ ‘ಒಂದು ಅಪೂರ್ಣ ಆತ್ಮಕಥೆ’, ‘ಭಾರತೀಯ ಹೋರಾಟ’, ‘ಅಸಾಮಾನ್ಯ ದಿನಚರಿ’ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಶ್‌ಚಂದ್ರ ಬೋಸ್ ಸೇರಿದಂತೆ ಹಲವರು ಸ್ವಾತಂತ್ರ್ಯ ತಂದುಕೊಟ್ಟಿರುವ ಬಗ್ಗೆ ಮುಂದಿನ ಪೀಳಿಗೆ ಹೇಗೆ ಯೋಚಿಸುತ್ತಿದೆ ಎಂಬುದು ಮುಖ್ಯವಾಗಿದೆ. ಇಲ್ಲವಾದರೆ ದೇಶಕ್ಕೆ ಸ್ವಾತಂತ್ರ್ಯ ಹಾಗೆಯೇ ಬಂದಿದೆ ಎಂಬ ಭಾವನೆ ಅವರಲ್ಲಿ ಬರುತ್ತದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಗಳಿಸಲು ಏನು ಬೇಕಾದರು ತ್ಯಾಗ ಮಾಡುತ್ತೇನೆ. ಬ್ರಿಟೀಷರನ್ನು ದೇಶದಿಂದ ತೊಲಗಿಸಿ, ದೇಶಕ್ಕೆ ಎಷ್ಟು ಬೇಗ ಸ್ವಾತಂತ್ರ್ಯವನ್ನು ತಂದುಕೊಡಬೇಕು ಎಂಬ ಉದ್ದೇಶದ ಇಚ್ಛಾಶಕ್ತಿಯನ್ನು ನೇತಾಜಿ ಅವರು ಹೊಂದಿದ್ದರು.…

Read More