Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ : ನಾನು ಯಾವ ಗುಂಪಿನಲ್ಲಯೂ ಇಲ್ಲ. ನನ್ನದು ಕಾಂಗ್ರೇಸ್ ಗುಂಪು. ಪಕ್ಷದ ಹೈಕಮಾಂಡ್ ಏನನ್ನು ಸೂಚಿಸುತ್ತದೆಯೋ ಅದನ್ನು ಅನುಸರಿಸುತ್ತೇನೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ನಾನೊಬ್ಬ ಕಾಂಗ್ರೆಸ್ಸಿಗ. ಯಾವ ಬಣದ ಜೊತೆಯೂ ಗುರುತಿಸಿಕೊಳ್ಳುವುದಿಲ್ಲ. ನನಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಕೆಲಸ ಮಾಡಿ ಕೊಡುತ್ತಾರೆ. ಇಂತಹ ಹೊತ್ತಿನಲ್ಲಿ ಬಣದ ಹಿಂದೆ ಹೋಗುವುದಿಲ್ಲ ಎಂದು ಸ್ಟಷ್ಟಪಡಿಸಿದರು. ರಾಜ್ಯದಲ್ಲಿ ಕಾಂಗ್ರೇಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನ ಬೇಸರ ತರಿಸಿದೆ. ಕೇಂದ್ರ ನಾಯಕರು ತಕ್ಷಣ ಗೊಂದಲಕ್ಕೆ ಪರಿಹಾರ ಸೂಚಿಸಬೇಕು. ಪಕ್ಷದ ಜೊತೆ ಇದ್ದರೇ, ಹೈಕಮಾಂಡ್ ಮಾತಿಗೆ ಬದ್ದವಿದ್ದರೇ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಹಿಂದಿನಿಂದಲೂ ನಾನು ಹೈಕಮಾಂಡ್ ಮಾತಿಗೆ ಬದ್ದನಾಗಿದ್ದವನು ಎಂದು ಹೇಳಿದರು. ಕೆಲವರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುವುದು ತಪ್ಪಲ್ಲ. ಎಲ್ಲರಿಗೂ ಸಚಿವರಾಗಬೇಕು ಎನ್ನುವ…

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಮೀನುಗಾರರರ ಹಿತರಕ್ಷಣೆಗೆ ಬದ್ಧವಾಗಿದೆ. ಅವರಿಗಾಗಿ ಅಗತ್ಯ ಕ್ರಮ ಕೂಡ ಕೈಗೊಂಡಿದೆ. ಮೀನುಗಾರಿಕೆ ಉದ್ಯಮದ ಪುನಶ್ಚೇತನಕ್ಕೂ ಹೊಸ ಹೊಸ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಸಾಗರ ಶಾಸಕ  ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೊಳೆಬಾಗಿಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಶರಾವತಿ ಹಿನ್ನೀರಿಗೆ ಬಲಿತ ಮೀನುಮರಿಯನ್ನು ಬಿತ್ತನೆ ಮಾಡಿ ಮಾತನಾಡಿದಂತ ಅವರು, ಶರಾವತಿ ಹಿನ್ನೀರು ಪ್ರದೇಶದಲ್ಲಿ ಸುಮಾರು 87 ಲಕ್ಷ ಬಲಿತ ಮೀನಿನ ಮರಿಯನ್ನು ಬಿಡಲಾಗುತ್ತಿದೆ. ಶರಾವತಿ ಹಿನ್ನೀರಿನಲ್ಲಿ 67 ಲಕ್ಷ, ತಲಕಳಲೆ ಡ್ಯಾಂಗೆ 12 ಲಕ್ಷ ಮತ್ತು ಶಿರೂರು ಕೆರೆಗೆ 2 ಲಕ್ಷ ಬಲಿತ ಮರಿಗಳನ್ನು ಬಿತ್ತನೆ ಮಾಡಲಾಗುತ್ತಿದೆ. ಮುಂದಿನ ಆರರಿಂದ ಒಂದು ವರ್ಷದಲ್ಲಿ ಮೀನು ದೊಡ್ಡದಾಗುತ್ತದೆ. ಇದರ ಜೊತೆಗೆ ನದಿ ತಟದಲ್ಲಿ ಮೀನುಗಾರರ ಸಂಘದ ಜೊತೆ ಇಲಾಖೆ ವತಿಯಿಂದ ಮೀನು ಬೆಳೆಸುವ ಕೆಲಸವನ್ನು ಮಾಡಲಾಗುತ್ತಿದೆ. ಮೀನುಗಾರರಿಗೆ ಸಾಧನಾ ಸಲಕರಣೆಗಳಾದ ಬೋಟು, ಬಲೆ, ಉಕ್ಕಡ ಇನ್ನಿತರೆ ಕೊಡಲಾಗುತ್ತದೆ ಎಂದರು. ಮೀನುಗಾರರಿಗೆ…

Read More

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯಗೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಆರೋಪಿ ಚಿನ್ನಯ್ಯ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತುಗಳನ್ನು ವಿಧಿಸಿ ಬುರುಡೆ ಕೇಸಲ್ಲಿ ಆರೋಪಿ ಚಿನ್ನಯ್ಯಗೆ ಜಾಮೀನು ಮಾಡಿದೆ. ಹೀಗಾಗಿ ನಾಳೆ ಶಿವಮೊಗ್ಗ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ಇದೆ. https://kannadanewsnow.com/kannada/another-major-loot-in-the-state-after-the-bangalore-robbery/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/

Read More

ಚಿಕ್ಕಬಳ್ಳಾಪುರ: “ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಶಿಡ್ಲಘಟ್ಟದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಶಾಸಕರನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಖರೀದಿ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ. ಈಗ ಬಿಜೆಪಿಯವರು ತಮ್ಮ ಪ್ರವೃತ್ತಿಯನ್ನು ನೆನೆಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿದ ಮೇಲೆ ಅದೇ ನಮಗೆ…

Read More

ಹುಬ್ಬಳ್ಳಿ; ನಗರದಲ್ಲಿ ಇಡಿ ಅಧಿಕಾರಿಗಳೆಂದು ಚಿನ್ನದ ವ್ಯಾಪಾರಿಯನ್ನು ಬೆದರಿಸಿ ಬರೋಬ್ಬರಿ 3 ಕೋಟಿ ಲೂಟಿ ಮಾಡಿರುವಂತ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ದರೋಡೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಮಹಾ ಲೂಟಿ ನಡೆದಿದೆ. ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಮಾಡಲಾಗಿದೆ. ಕೇರಳದ ಚಿನ್ನಾಭರಣ ವ್ಯಾಪಾರಿ ಎಂ ಆರ್ ಸುದೀನ್ ಎಂಬುವರೇ ವಂಚನೆಗೆ ಒಳಗಾದಂತವರಾಗಿದ್ದಾರೆ. ಕಳೆದ ಗುರುವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ. ನವೆಂಬರ್.15ರಂದು ಕೆಲಸಗಾರ ವಿವೇಕ್ ಜೊತೆಗೆ ಸುದೀನ್ ಮಂಗಳೂರಿನಿಂದ ಹುಬ್ಬಳ್ಳಿಗೆ ಬಂದಾಗ ಈ ಘಟನೆ ನಡೆದಿದೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/

Read More

ಚಿಕ್ಕಬಳ್ಳಾಪುರ: “ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ” ಎಂದು ಹೇಳಿದರು. “ರಾಜ್ಯದ ಪ್ರತಿ ಮಹಿಳೆಯರು ಅವರ ಖಾತೆಗೆ ಹಣ ಬಂದಾಗಲೆಲ್ಲಾ ನಮ್ಮ ಸರ್ಕಾರವನ್ನು ನೆನಪಿಸಿಕೊಳ್ಳುತ್ತಾರೆ. ಯಾವುದೇ ಪುಣ್ಯ ಕ್ಷೇತ್ರಗಳಿಗೆ ಹೋದರೂ ನಮ್ಮ ಒಳಿತಿಗೆ ಪ್ರಾರ್ಥನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬಂದಾಗ ಮಹಿಳೆಯರು ಗೌರವದಿಂದ ಅವರಿಗೆ ನಮಿಸಿದರು.…

Read More

ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳದಿಂದ ಪತಿ ಸಾವನ್ನಪ್ಪಿದ ಘಟನೆಗಳು ಅನೇಕವು ದಾಖಲಾಗಿದ್ದವು. ಈ ಬೆನ್ನಲ್ಲೇ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ಪತಿಯ ಕಿರುಕುಳ, ಹಿಂಸೆಗೆ ಬೇಸತ್ತು ರೇಖಾ ಮಾಯಪ್ಪ ನಂದಿ(25) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವರದಕ್ಷಿಣೆ ತರುವಂತೆ ಪತಿ ಮಾಯಪ್ಪ ದಿನವೂ ಕಿರುಕುಳ ನೀಡುತ್ತಿದ್ದರಂತೆ. ಅವರ ಕಿರುಕುಳ, ಹಿಂಸೆ ಸಹಿಸಲಾರದೇ ಇಬ್ಬರು ಮಕ್ಕಳನ್ನು ಬಿಟ್ಟು ರೇಖಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೇ ರೇಖಾ ಪತಿ ಮಾಯಪ್ಪ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮಾರ್ಷಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಚಿತ್ರಹಿಂಸೆಯಿಂದ ರೇಖಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಬಳಿಕ ಮಾಯಪ್ಪ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/there-will-be-no-electricity-in-these-areas-of-bengaluru-tomorrow-from-10-am-to-5-pm/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.11.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನ.25ರ ನಾಳೆ ಬೆಂಗಳೂರಿನ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್., ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾದಲ್ಲಿ ಪವರ್ ಕಟ್ ಆಗಲಿದೆ. ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ…

Read More

ಯಾದಗಿರಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಇಷ್ಟೇ ವರ್ಷ ಆಗಿರಬೇಕು ಅಂತ ಟೈಮ್ ಫಿಕ್ಸ್ ಇಲ್ಲ. ಯಾವಾಗ ಸಿಎಂ ಬದಲಿಸಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ನಲ್ಲಿ ಇಂತಿಷ್ಟೇ ವರ್ಷ ಸಿಎಂ ಆಗಿರಬೇಕು ಅಂತಿಲ್ಲ. ಇಷ್ಟೇ ವರ್ಷ ಸಿಎಂ ಆಗಿರಬೇಕು ಅಂತ ಟೈಮ್ ಫಿಕ್ಸ್ ಇಲ್ಲ. ಯಾವಾಗ ಸಿಎಂ ಬದಲಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ ಎಂದರು. ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಯಾವುದೇ ಸಂದರ್ಭ ಇಲ್ಲ. ಸಿಎಂ ಬದಲಾಯಿಸುತ್ತೇವೆ ಎಂದು ಹೈಕಮಾಂಡ್ ಹೇಳಿದ್ಯಾ? ಸಿಎಂ ಬದಲಾವಣೆ ಚರ್ಚೆ ಇಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಹೇಳಿದ್ದಾರೆ ಎಂದರು. https://kannadanewsnow.com/kannada/why-shouldnt-i-become-cm-mla-basavaraja-rayareddy/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/

Read More

ಕೊಪ್ಪಳ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ವಿಚಾರ ಒಂದೆಡೆಯಾದರೇ, ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗಬಾರದು ಎಂಬುದಾಗಿ ಶಾಸಕ ಬಸವರಾಜ ರಾಯರೆಡ್ಡಿ ಧ್ವನಿ ಎತ್ತಿದ್ದಾರೆ. ಕೊಪ್ಪಳದ ಯಲಬುರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನ್ಯಾಕೆ ಸಿಎಂ ಆಗಬಾರದು? ಆದರೇ ಅದನ್ನ ಹೇಳಲು ಆಗಲ್ಲ. ಈಗ ಸಿದ್ಧರಾಮಯ್ಯ ಸಿಎಂ ಆಗಿದ್ದಾರೆ. ಸಿದ್ಧರಾಮಯ್ಯ ಬಜೆಟ್ ಸಿದ್ದತೆ ಮಾಡಲು ಸೂಚಿಸಿದ್ದಾರೆ. ಪಕ್ಷದಲ್ಲಿ ಸಿಎಂ ಆಗುವಂತ ನಾಯಕರು ಬಹಳ ಇದ್ದಾರೆ ಎಂದರು. ನನ್ನ ಪ್ರಕಾರ ಅಧಿಕಾರ ಹಂಚಿಕೆ ಚರ್ಚೆಯೇ ಅರ್ಥಹೀನ. ಸಿದ್ಧರಾಮಯ್ಯ ಐದು ವರ್ಷ ಇರ್ತಾರೆ. ಸಿಎಲ್ ಪಿ ಸಭೆಯಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾರೂ ಹೇಳಿಲ್ಲ. ನಮಗೆ ಆವಾಗಲೇ ಹೇಳಬೇಕಿತ್ತಲ್ವ ಎಂದು ಪ್ರಶ್ನಿಸಿದರು. ಒಬ್ಬ ಮುಖ್ಯಮಂತ್ರಿಯನ್ನು ಸಮ್ಮ ಸುಮ್ಮನೆ ತೆಗೆಯೋದಕ್ಕೆ ಆಗೋದಿಲ್ಲ. ಸಿಎಂ ತೆಗೆಯಬೇಕು ಅಂದ್ರೆ ಭ್ರಷ್ಚಾಚಾರ ಆರೋಪ ಇರಬೇಕು. ಇಲ್ಲವೇ ಸಿಎಂ ಜನ ವಿರೋಧಿ ಕೆಲಸವನ್ನು ಮಾಡಿರಬೇಕು. ಡಿಸಿಎಂ ಡಿ.ಕೆ ಎಲ್ಲೂ ಕೂಡ ಸಿಎಂ ಆಗುತ್ತೇನೆ ಅಂದಿಲ್ಲ. ಡಿಕೆ ಅಧ್ಯಕ್ಷರು, ಹೀಗಾಗಿ ಅವರ ಪರ ಬ್ಯಾಟ್…

Read More