Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಹಾಸನ ಜಿಲ್ಲೆಗೆ 3105.78 ಕೋಟಿ ರೂ. ಹಣ ಬಿಡುಗಡೆ ಆಗಿದ್ದು ಶೇ.99.5ರಷ್ಟು ಅನುಷ್ಠಾನಗೊಂಡಿರುವುದು ಶ್ಲಾಘನೀಯ ಎಂದು ಶಾಸಕರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ ಹಾಸನ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬುವುದರ ಜೊತೆಗೆ ರಾಜ್ಯದ ಆರ್ಥಿಕ ಪುನಶ್ಚೇತನಕ್ಕೂ ಸಹಕಾರಿಯಾಗಿದೆ ಎಂದರು. ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರುಗಳು ಮತ್ತು ಸದಸ್ಯರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರನ್ನು ಅಭಿನಂದಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ನೋಟು ಅಮಾನ್ಯ, ಅವೈಜ್ಞಾನಿಕ ಜಿಎಸ್ ಟಿ ನೀತಿ, ಕೋರೋನಾ ಸಮಯದಲ್ಲಿನ ಲಾಕ್ ಡೌನ್ ನಿಂದ ಜನರು ಆರ್ಥಿಕವಾಗಿ ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಜನರಲ್ಲಿ…
ನವದೆಹಲಿ: ಸೆಪ್ಟೆಂಬರ್ ಮೊದಲ ದಿನದಂದು ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರವಾಗಿ ಏರಿಕೆಯಾಗಿ ಆಗಸ್ಟ್ನಲ್ಲಿ ಕಂಡುಬಂದ ಬಲವಾದ ಆವೇಗವನ್ನು ವಿಸ್ತರಿಸಿದವು. ಬೆಳ್ಳಿ ಬೆಲೆಗಳು ಹೊಸ ಗರಿಷ್ಠ ಮಟ್ಟವನ್ನು ತಲುಪಿ, ಪ್ರತಿ ಕಿಲೋಗ್ರಾಂಗೆ ₹1,000 ರಷ್ಟು ಏರಿಕೆಯಾಗಿ ₹1,26,000 ಕ್ಕೆ ತಲುಪಿದವು, 100 ಗ್ರಾಂ ಚಿಲ್ಲರೆ ಮಾರಾಟ ₹12,600 ಕ್ಕೆ ತಲುಪಿತು. ಆಗಸ್ಟ್ನ ಕೊನೆಯ 10 ದಿನಗಳಲ್ಲಿ ಚಿನ್ನದ ಬೆಲೆ 100 ಗ್ರಾಂಗೆ ₹30,000 ಕ್ಕಿಂತ ಹೆಚ್ಚು ಏರಿಕೆಯಾಗಿದ್ದು, ಇತ್ತೀಚಿನ ತಿಂಗಳುಗಳಲ್ಲಿ ಅತ್ಯಂತ ಕಡಿದಾದ ರ್ಯಾಲಿಗಳಲ್ಲಿ ಒಂದಾಗಿದೆ. ಜಾಗತಿಕ ಬೆಲೆ ಏರಿಕೆಯೊಂದಿಗೆ ಬೇಡಿಕೆ ಹೆಚ್ಚಾದ ಕಾರಣ ಬೆಳ್ಳಿ ಕೂಡ ಹೊಸ ಗರಿಷ್ಠ ಮಟ್ಟವನ್ನು ತಲುಪಿತು. ಸೋಮವಾರ ಮಧ್ಯಾಹ್ನದ ವಹಿವಾಟಿನಲ್ಲಿ ಬೆಳ್ಳಿ ಗಣಿಗಾರ ಹಿಂದೂಸ್ತಾನ್ ಜಿಂಕ್ ಷೇರುಗಳು ಶೇ. 3.6 ರಷ್ಟು ಏರಿಕೆಯಾಗಿ ₹434.65 ಕ್ಕೆ ತಲುಪಿವೆ. ದಸರಾ ಮತ್ತು ದೀಪಾವಳಿಯೊಂದಿಗೆ ಮುಂಬರುವ ಹಬ್ಬದ ಋತುವಿನಲ್ಲಿ ಗ್ರಾಹಕರ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ಮತ್ತು ಬೆಲೆಗಳನ್ನು ತೇಲುವಂತೆ ಮಾಡುವ ನಿರೀಕ್ಷೆಯಿದೆ. ಸೆಪ್ಟೆಂಬರ್ 1 ರಂದು,…
ಬೆಂಗಳೂರು: ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಪೂಜಾಶ್ರೀ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ಹಿಂದೆ ನಂದೀಶ್ ಎಂಬಾತನ ಜೊತೆಗೆ ಪೂಜಾಶ್ರೀ ವಿವಾಹವಾಗಿದ್ದರು. ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಟಾರ್ಚನ್ ಕೊಡುತ್ತಿದ್ದರಿಂದ ಗೃಹಿಣಿ ಪೂಜಾಶ್ರೀ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/rohit-sharma-passes-yo-yo-and-bronco-fitness-tests/ https://kannadanewsnow.com/kannada/do-you-sleep-a-lot-this-danger-is-guaranteed/
ನವದೆಹಲಿ: ಆಗಸ್ಟ್ 31 ರಂದು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಯೋ-ಯೋ ಮತ್ತು ಬ್ರಾಂಕೊ ಫಿಟ್ನೆಸ್ ಪರೀಕ್ಷೆಗಳನ್ನು ನಡೆಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಅರ್ಶ್ದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಅವರು 2025 ರ ಏಷ್ಯಾ ಕಪ್ನಲ್ಲಿ ಭಾಗವಹಿಸುವ ಕೆಲವು ಹೆಸರುಗಳಾಗಿದ್ದವು. ಆದರೆ ನಿರ್ಣಾಯಕ ನಿಯೋಜನೆಗೆ ಮೊದಲು ಫಿಟ್ನೆಸ್ ಪರೀಕ್ಷೆಗೆ ತಮ್ಮ ಉಪಸ್ಥಿತಿಯನ್ನು ದಾಖಲಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಏಕದಿನ ಅಂತರರಾಷ್ಟ್ರೀಯ (ODI) ಸರಣಿಯನ್ನು ಆಡಲಿರುವ ಐಕಾನಿಕ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಫಿಟ್ನೆಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದರು. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಾರ, ಮುಂಬರುವ ನಿಯೋಜನೆಗಳಿಗೆ ತಂಡದ ಭಾಗವಾಗಲು ಪ್ರತಿಯೊಬ್ಬ ಒಪ್ಪಂದದ ಆಟಗಾರನು ಯೋ-ಯೋ, ಬ್ರಾಂಕೊ, DEXA ಸ್ಕ್ಯಾನ್ಗಳು ಮತ್ತು ರಕ್ತ ಪರೀಕ್ಷೆಗಳಲ್ಲಿ ಉತ್ತೀರ್ಣನಾಗುವುದು ಶಾಸನಬದ್ಧವಾಗಿದೆ. https://twitter.com/rohitjuglan/status/1962165700652605504 ಖ್ಯಾತ ಪತ್ರಕರ್ತ ರೋಹಿತ್ ಜುಗ್ಲಾನ್ ಪ್ರಕಾರ, ಎಲ್ಲಾ ಟೀಮ್ ಇಂಡಿಯಾ ಆಟಗಾರರು ಹೆಚ್ಚಿನ ಅಂಕಗಳೊಂದಿಗೆ ಫಿಟ್ನೆಸ್ ಪರೀಕ್ಷೆಗಳಲ್ಲಿ…
ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ ಎರಡು ದಿನಗಳ ಪ್ರವಾಸವನ್ನು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೈಗೊಂಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು. ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು. ಈ ಬಳಿಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿದಂತ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. https://kannadanewsnow.com/kannada/do-you-know-what-actor-kichcha-sudeep-said-about-coming-together-with-actor-darshan-again/ https://kannadanewsnow.com/kannada/water-release-from-the-supa-dam-at-any-moment-kptcls-final-warning-regarding-the-flood/
ಬೆಂಗಳೂರು : ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟವು ಸತತವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ. ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ದೂರ ದೂರವೇ ಆಗಿದ್ದಾರೆ. ಮತ್ತೆ ಒಂದಾಗುತ್ತಾರೆಯೇ ಎನ್ನುವುದು ಹಲವರ ಕುತೂಹಲವಾಗಿತ್ತು. ಈ ಬಗ್ಗೆ ನಟ ಕಿಚ್ಚ ಸುದೀಪ್ ಹೇಳಿದ್ದೇನು ಅಂತ ಮುಂದೆ ಓದಿ. ಇಂದು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ಜೈಲುಪಾಲು ಸೇರಿದ ವಿಚಾರವಾಗಿ ಮಾತನಾಡಿ, ಖಂಡಿತವಾಗಿ ನಟ ದರ್ಶನ್ ಸಿನಿಮಾಗೆ ಒಳ್ಳೆಯದಾಗಲಿ. ಅವರ ನೋವು ಅವರಿಗೆ ಇರುತ್ತದೆ. ಆ ಬಗ್ಗೆ ಮಾತನಾಡಿದ್ರೆ ತಪ್ಪಾಗುತ್ತದೆ. ಅವರದ್ದು ಏನೇ ಇದ್ರೂ ಕಾನೂನು ಇದೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದರು. ನಟ ದರ್ಶನ್, ಸುದೀಪ್ ಮತ್ತೆ ಒಂದಾಗುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಸೂರ್ಯನೊಬ್ಬ, ಚಂದ್ರನೊಬ್ಬ. ಎಲ್ಲಿರಬೇಕೋ ಅಲ್ಲಿದ್ದರೇ ಚೆಂದ. ನಾನು ದೂರವಾಗಿದ್ದಕ್ಕೆ ಬೇರಯವರಿಗೆ ಖುಷಿಯಾಗಿದ್ರೆ ಆಗಿರಲಿ ಬಿಡಿ. ನಾವ್ಯಾಕೆ ದೂರ ಆಗಿದ್ದೀವಿ ಎಂಬುದು ನಮಗೆ ಗೊತ್ತಿದೆ. ಅಷ್ಟೇ ಸಾಕು. ಬೇರೆಯವರು ಏನೇ ಮಾತನಾಡಿಕೊಂಡರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು. ಧ್ರುವ ಸರ್ಜಾ ನನ್ನ ತಮ್ಮನಿದ್ದಂತೆ. ಡಾಲಿ ನನಗೆ ಬಹಳ ಹತ್ತಿರದ ವ್ಯಕ್ತಿ. ಶಿವಣ್ಣರನ್ನು ತುಂಬಾ…
ಬೆಂಗಳೂರು: ಕೆಲವೊಮ್ಮ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ. ನಾನು ರಾಜಕೀಯಕ್ಕೆ ಬಂದ್ರು ಬದಲಾಗಲ್ಲ ಎಂಬುದಾಗಿ ನಟ ಕಿಚ್ಚ ಸುದೀಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ಜೈಲುಪಾಲು ಸೇರಿದ ವಿಚಾರವಾಗಿ ಮಾತನಾಡಿ, ಖಂಡಿತವಾಗಿ ನಟ ದರ್ಶನ್ ಸಿನಿಮಾಗೆ ಒಳ್ಳೆಯದಾಗಲಿ. ಅವರ ನೋವು ಅವರಿಗೆ ಇರುತ್ತದೆ. ಆ ಬಗ್ಗೆ ಮಾತನಾಡಿದ್ರೆ ತಪ್ಪಾಗುತ್ತದೆ. ಅವರದ್ದು ಏನೇ ಇದ್ರೂ ಕಾನೂನು ಇದೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದರು. ನಟ ದರ್ಶನ್, ಸುದೀಪ್ ಮತ್ತೆ ಒಂದಾಗುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಸೂರ್ಯನೊಬ್ಬ, ಚಂದ್ರನೊಬ್ಬ. ಎಲ್ಲಿರಬೇಕೋ ಅಲ್ಲಿದ್ದರೇ ಚೆಂದ. ನಾನು ದೂರವಾಗಿದ್ದಕ್ಕೆ ಬೇರಯವರಿಗೆ ಖುಷಿಯಾಗಿದ್ರೆ ಆಗಿರಲಿ ಬಿಡಿ. ನಾವ್ಯಾಕೆ ದೂರ ಆಗಿದ್ದೀವಿ ಎಂಬುದು ನಮಗೆ ಗೊತ್ತಿದೆ. ಅಷ್ಟೇ ಸಾಕು. ಬೇರೆಯವರು ಏನೇ ಮಾತನಾಡಿಕೊಂಡರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು. ಧ್ರುವ ಸರ್ಜಾ ನನ್ನ ತಮ್ಮನಿದ್ದಂತೆ. ಡಾಲಿ ನನಗೆ ಬಹಳ ಹತ್ತಿರದ ವ್ಯಕ್ತಿ. ಶಿವಣ್ಣರನ್ನು ತುಂಬಾ ಪ್ರೀತಿಸ್ತೀವಿ. ಸೋ ನಾವೆಲ್ಲ ಚೆನ್ನಾಗಿದ್ದೇವೆ. ಯಾರದ್ದೇ ಸಿನಿಮಾ ಬಂದರೂ ಖುಷಿ…
ಶಿವಮೊಗ್ಗ : ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ. ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್…
ಮೈಸೂರು: ಆಸ್ತಿ ವಿಚಾರಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಅಣ್ಣನನ್ನೇ ಕೊಂದಿರುವಂತ ಘಟನೆಯೊಂದು ಮೈಸೂರಲ್ಲಿ ನಡೆದಿದೆ. ಈ ಮೂಲಕ ರಾಜ್ಯದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಮೈಸೂರು ತಾಲ್ಲೂಕಿನ ಆನಂದೂರು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಅಣ್ಣ ಮಹೇಶ್(45) ಎಂಬಾತನನ್ನು ತಮ್ಮ ರವಿ ಹತ್ಯೆಗೈದಿದ್ದಾನೆ. ತಂದೆ ಕೃಷ್ಣೇಗೌಡ, ಅತ್ತಿಗೆ ಮೇಲೂ ಮಾರಕಾಸ್ತ್ರಗಳಿಂದ ರವಿ ಹಲ್ಲೆ ಮಾಡಿದ್ದಾನೆ. ಮಹೇಶ್ ಗೆ ಮಾತ್ರ ತಂದೆ ಕೃಷ್ಣೇಗೌಡ ಆಸ್ತಿ ಹಂಚಿಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇದೇ ಕಾರಣದಿಂದ ಕೋಪಗೊಂಡಂತ ತಮ್ಮ ರವಿ, ಅಣ್ಣ ಮಹೇಶ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮೈಸೂರಿನ ಇಲವಾಲ ಠಾಣೆಯ ಪೊಲೀಸರು ಆರೋಪಿ ರವಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/powerful-earthquake-in-afghanistan-death-toll-rises-to-800-2500-injured/ https://kannadanewsnow.com/kannada/military-helicopter-crash-in-pakistan-five-dead/














