Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ದಕ್ಷಿಣ ಕನ್ನಡ : ನಿರುದ್ಯೋಗಿ ಯುವ-ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್ ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ /ಉದ್ಯೋಗಗಳನ್ನು ಕಲ್ಪಿಸಿರುವ ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 17.11.2025 ರಿಂದ 29.11.2025ರ ವರೆಗೆ 13 ದಿನದ ಉಚಿತ ತರಬೇತಿ ಊಟ-ವಸತಿಯೊಂದಿಗೆ ಕೃಷಿ ಉದ್ಯಮಿ-ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತಿರುವ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು 18 ರಿಂದ 50 ವರ್ಷಗಳ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಬರೆದು ಅರ್ಜಿಯನ್ನು : ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574240, ಬೆಳ್ತಂಗಡಿ ದ.ಕ ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ…

Read More

ಬೆಂಗಳೂರು: ನಗರದಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತ ಘಟನೆ ನಡೆದಿದೆ. ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಈ ದಾಳಿ ನಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಸಫಾರಿ ವೇಳೆಯಲ್ಲಿ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. 50 ವರ್ಷದ ವಹಿತ ಬಾನು ಎಂಬ ಮಹಿಳೆಯ ಮೇಲೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಲ್ಲಿ ಚಿರತೆ ದಾಳಿ ನಡೆಸಿದೆ. ಪತಿ, ಮಗನ ಜೊತೆಗೆ ಸಫಾರಿಗೆ ವಹಿತ ಬಾನು ತೆರಳಿದ್ದರು. ಕೆ ಎಸ್ ಟಿ ಡಿ ಸಿ ವಾಹನದಲ್ಲಿ ಸಫಾರಿಗೆ ತೆರಳಿದ್ದಾಗ ಈ ಘಟನೆ ನಡೆದಿದೆ. ಸಫಾರಿ ವಾಹನದ ಗ್ಲಾಸ್ ಓಪನ್ ಮಾಡಿ ಚಿರತೆ ನೋಡುತ್ತಿದ್ದಾಗ ಮಹಿಳೆಯ ಮೇಲೆ ದಾಳಿ ನಡೆಸಲಾಗಿದೆ. ಚಿರತೆ ದಾಳಿಯಿಂದಾಗಿ ಮಹಿಳೆಯ ಕೈಗೆ ಗಾಯವಾಗಿದೆ. https://kannadanewsnow.com/kannada/1-day-of-paid-menstrual-leave-per-month-for-employed-women-labor-department-orders/ https://kannadanewsnow.com/kannada/good-news-for-those-who-applied-for-bed-studies-another-opportunity-for-document-verification/

Read More

ಬೆಂಗಳೂರು: ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು ವೇತನ ಸಹಿತವಾಗಿ ನೀಡಲು ಕಾರ್ಮಿಕ ಇಲಾಖೆ ಆದೇಶಿಸಿದೆ. ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ಸಿಗಲಿದೆ. ಷರತ್ತುಗಳು: ಆಯಾ ತಿಂಗಳ ರಜೆಯನ್ನು ಆಯಾ ತಿಂಗಳಲ್ಲೇ ಬಳಸಿಕೊಳ್ಳಬೇಕು. I ಒಂದು ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸುವಂತಿಲ್ಲ. I ಮುಟ್ಟಿನ ರಜೆ ಪಡೆಯಲು ವೈದ್ಯಕೀಯ ಪ್ರಮಾಣಪತ್ರ ನೀಡಬೇಕಿಲ್ಲ. I 52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ…

Read More

ಬೆಳಗಾವಿ: ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಕಾನೂನು ರೂಪಿಸಿದ್ದರೂ, ಕಿರುಕುಳ ಮಾತ್ರ ತಪ್ಪಿಲ್ಲ. ಇದೀಗ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಡೋಲಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಕಡೋಲಿಯಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸಾತೇರಿ ಹೊನ್ನಪ್ಪ ರುಟಕುಟೆ(78) ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ರೈತ ಸಾತೇರಿ ಹೊನ್ನಪ್ಪ ರುಟಕುಟೆ ಅವರಿಗೆ ಮಣ್ಣೂರು ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದೆ. 12 ಲಕ್ಷ ತೆಗೆದುಕೊಂಡಿದ್ದಂತ ಸಾಲದಲ್ಲಿ ಸುಮಾರು 4 ಲಕ್ಷದಷ್ಟು ಮರು ಪಾವತಿ ಮಾಡಿದ್ದರು. ಆದರೇ ಬಡ್ಡಿ ಹಾಗೂ ಅಸಲು ಸೇರಿದಂತೆ 16 ಲಕ್ಷ ಪಾವತಿ ಮಾಡಿ ಎಂಬುದಾಗಿ ರೈತ ಸಾತೇರಿ ಹೊನ್ನಪ್ಪಗೆ ಖಾಸಗಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಾಗಿ ಹೇಳಲಾಗುತ್ತಿದೆ. ಇದಷ್ಟೇ ಅಲ್ಲದೇ ಒಂದು ವೇಳೆ ಸಾಲವನ್ನು ತೀರಿಸದೇ ಇದ್ದರೇ ನಿಮ್ಮ ಮನೆ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಇದಕ್ಕಾಗಿ ಇಡೀ ಊರ…

Read More

ಶಿವಮೊಗ್ಗ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಗರ ಯೋಜನಾ ಕಚೇರಿಯ ತುಮರಿ ವಲಯದ ಒಕ್ಕೂಟದ ಪದಾಧಿಕಾರಿಗಳ ಕಾರ್ಯಾಗಾರವು ಸಾಗರ ತಾಲ್ಲೂಕಿನ ಕುದುರೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರಗಿತು. ಈ ಕಾರ್ಯಗಾರವನ್ನು ಕುದುರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮಾ ನಾಗೇಂದ್ರ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕರಾದ ದಿನೇಶ್ ಅವರು ಕಾರ್ಯಕರ್ತರಿಗಿಂತಲೂ ಮಿಗಿಲಾದ ಸೇವೆಯನ್ನು ಒಕ್ಕೂಟದ ಪದಾಧಿಕಾರಿಗಳು ಸೇವೆ ನೀಡುತ್ತಿದ್ದಾರೆ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸಲು ಪದಾಧಿಕಾರಿಗಳು ತೊಡಗಿಕೊಳ್ಳಬೇಕು ಪೂಜ್ಯರ ಕನಸನ್ನು ಅನುಷ್ಟಾನ ಮಾಡುವಲ್ಲಿ ಪದಾಧಿಕಾರಿಗಳ ಸೇವೆ ಅನನ್ಯವಾಗಿದೆ ಎಂದರು. ತಮ್ಮ ಬದಲಾವಣೆಗೆ ತಾವೇ ನಿರ್ಧಾರ ಕೈಗೊಂಡು ಸ್ವ ಸಹಾಯ ಗುಂಪುಗಳನ್ನು ಸದಸ್ಯರು ನಡೆಸುತ್ತಿದ್ದಾರೆ. ಗುಂಪುಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕಾದರೆ ಗುಂಪಿನ ಪ್ರತಿನಿಧಿಗಳು ಜವಾಬ್ದಾರಿಯನ್ನೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವ ಸಹಾಯ ಗುಂಪುಗಳ ಅಕೌಂಟ್ ನ್ನೂ ರಾಷ್ಟ್ರೀಕೃತ ಬ್ಯಾಂಕುಗಳಲಿ ತೆರೆದು ಬ್ಯಾಂಕಿನ ಸೌಲಬ್ಯ ವನ್ನು ಒದಗಿಸಲಾಗುತ್ತಿದೆ. ಬ್ಯಾಂಕಿನ B C ಪ್ರತಿನಿಧಿಯಾಗಿ…

Read More

ಕಲಬುರ್ಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಹೀಗಾಗಿ ನವೆಂಬರ್.16ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಕೇವಲ 300 ಕಾರ್ಯಕರ್ತರ ಪಥಸಂಚಲನಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಈ ಕುರಿತು ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಕೂಡ ಮಾಹಿತಿ ನೀಡಿದ್ದಾರೆ. 800 ಜನರಿಗೆ ಅನುಮತಿ ಕೇಳಲಾಗಿತ್ತು. ಆದರೇ 300 ಜನರಿಗೆ ಅನುಮತಿ ನೀಡಲಾಗಿದೆ. 800 ಜನರಿಗೆ ಅನುಮತಿ ನೀಡಲು ಹಿರಿಯ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದ್ದಾರೆ. ಆದರೇ ಸರ್ಕಾರವು 300 ಕಾರ್ಯಕರ್ತರು 25 ಬ್ಯಾಂಡ್ ವಾದಕರಿಗೆ ಅನುಮತಿ ನೀಡಿದೆ ಎಂಬುದಾಗಿ ಹೇಳಿದರು. ಕೆಲವೆಡೆ 100 ರಿಂದ 150 ಜನರ ಪಥಸಂಚಲನ ನಡೆಸಲಾಗಿದೆ. ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಎಂಬುದಾಗಿ ಎಜಿ ಶಶಿಕಿರಣ್ ಶೆಟ್ಟಿ ನ್ಯಾಯಪೀಠದ ಗಮನಕ್ಕೆ ತಂದರು. ಈ…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವಂತ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾಗಿರುವಂತ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದಂತ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು. ಅಂದಹಾಗೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು. https://kannadanewsnow.com/kannada/high-court-grants-conditional-permission-for-rss-procession-in-chittapur-on-november-16/ https://kannadanewsnow.com/kannada/good-news-for-those-who-applied-for-bed-studies-another-opportunity-for-document-verification/

Read More

ಚಿತ್ತಾಪುರ: ಇಲ್ಲಿ ನವೆಂಬರ್.12ರಂದು ಆರ್ ಎಸ್ ಎಸ್ ಪಥಸಂಚಲನ ನಡೆಸೋದಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ. ಈ ಮೂಲಕ ನವೆಂಬರ್.16ರಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ. ಈ ಕುರಿತಂತೆ ಕಲಬುರ್ಗಿ ಹೈಕೋರ್ಟ್ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನವೆಂಬರ್.16ರಂದು ಮಧ್ಯಾಹ್ನ 3.30ರಿಂದ 5.45ರ ಒಳಗಾಗಿ ಪಥಸಂಚಲನ ನಡೆಸಲು ಅನುಮತಿ ನೀಡಿದೆ. ಇದಷ್ಟೇ ಅಲ್ಲದೇ ಆರ್ ಎಸ್ ಎಸ್ ಪಥಸಂಚಲನದಲ್ಲಿ ಕೇವಲ 350 ಜನರು ಮಾತ್ರವೇ ಸೇರಬಹುದು. ಇದರಲ್ಲಿ 300 ಕಾರ್ಯಕರ್ತರು, 50 ಮಂದಿ ಬ್ಯಾಂಡ್ ನವರು ಸೇರಬೇಕು. ಅದರ ಹೊರತಾಗಿ ಹೆಚ್ಚಿನವರು ಸೇರುವಂತಿಲ್ಲ ಎಂಬುದಾಗಿ ಷರತ್ತು ಬದ್ಧ ಅನುಮತಿಯನ್ನು ನೀಡಿ ಆದೇಶಿಸಿದೆ.

Read More

ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ ಎಂದು, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ. ಸರ್ಕಾರ ಈ ನಾಲ್ಕು ನಿಲ್ದಾಣ ಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ಅವರು ವಿವರಿಸಿದರು. ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ.…

Read More

ನವದೆಹಲಿ: ಕಳೆದ ಎರಡು ವಾರಗಳಿಂದ ಪ್ರತಿ ದಿನ ಬೆಳಿಗ್ಗೆಯಂತೆ, ದೆಹಲಿಯು ಹೊಗೆ, ಹೊಗೆ, ಹೆಚ್ಚಿನ ವಾಯು ಗುಣಮಟ್ಟ ಸೂಚ್ಯಂಕ ಮತ್ತು ವಿಷಕಾರಿ ಗಾಳಿಯಿಂದ ಆವೃತವಾದ ಮತ್ತೊಂದು ಬೆಳಿಗ್ಗೆಯನ್ನು ನೋಡಲಾಗುತ್ತಿದೆ. ಇದರ ಮಧ್ಯೆ ವಾಯು ಗುಣಮಟ್ಟ ಸೂಚ್ಯಂಕವು 400ಕ್ಕಿಂತ ಹೆಚ್ಚಿದರೇ ನಮ್ಮ ಶ್ವಾಸಕೋಶಗಳಿಗೆ ಏನು ಆಗಲಿದೆ ಎಂಬುದಾಗಿ ಮುಂದೆ ಓದಿ. ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು ನಿರಂತರವಾಗಿ 400 ಕ್ಕಿಂತ ಹೆಚ್ಚಿದೆ, “ತೀವ್ರ” ವ್ಯಾಪ್ತಿಯಲ್ಲಿದೆ, ಹಲವಾರು ಪಾಕೆಟ್‌ಗಳು 450 ಅನ್ನು ದಾಟಿದ್ದರೂ ಸಹ. ನಿಮ್ಮ ದೇಹದೊಳಗಿನ ಈ ತೀವ್ರವಾಗಿ ಕಲುಷಿತ ಗಾಳಿಯು ನಿಮ್ಮ ಶ್ವಾಸಕೋಶಗಳಿಗೆ ಹಾನಿ ಮಾಡುತ್ತಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. “PM2.5 ಕಣಗಳು ತುಂಬಾ ಚಿಕ್ಕದಾಗಿದ್ದು, ಅವು ಶ್ವಾಸಕೋಶವನ್ನು ಬೈಪಾಸ್ ಮಾಡಿ ರಕ್ತಪ್ರವಾಹಕ್ಕೆ ಪ್ರವೇಶಿಸಬಹುದು, ದೇಹದ ಮೂಲಕ ಪರಿಚಲನೆಗೊಳ್ಳಬಹುದು ಮತ್ತು ವ್ಯವಸ್ಥಿತ ಉರಿಯೂತವನ್ನು ಪ್ರಾರಂಭಿಸಬಹುದು. ಇದು ಕಳವಳಕಾರಿಯಾಗಿದೆ” ಎಂದು ಭಾರತೀಯ ಬೆನ್ನುಮೂಳೆಯ ಗಾಯಗಳ ಕೇಂದ್ರದ ಶ್ವಾಸಕೋಶಶಾಸ್ತ್ರದ ಹಿರಿಯ ಸಲಹೆಗಾರ ಡಾ. ರಾಜ್ ಕುಮಾರ್ ವಿಶೇಷ ಸಂದರ್ಶನದಲ್ಲಿ ತಿಳಿಸಿದರು. ಡಾ. ಕುಮಾರ್…

Read More