Author: kannadanewsnow09

ಉತ್ತರ ಕನ್ನಡ: ಜಿಲ್ಲೆಯಲ ಮನೆಯೊಂದರಲ್ಲಿ 500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ನಕಲಿ ನೋಟು ಪತ್ತೆಯಾಗಿದೆ. ಈ ನಕಲಿ ನೋಟುಗಳನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 14 ಕೋಟಿ ಮೌಲ್ಯದ ನಕಲಿ ನೋಟು ಪತ್ತೆಯಾಗಿದ್ದಾವೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/woman-arrested-for-stealing-diamonds-jewellery-diamonds-worth-rs-10-lakh/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/ https://kannadanewsnow.com/kannada/2nd-puc-exam-2-schedule-announced-heres-what-you-need-to-know/

Read More

ಬೆಂಗಳೂರು: ಮನೆಗೆಲಸ ಮಾಡುತ್ತಿದ್ದಂತ ಮನೆಯಲ್ಲಿ ವಜ್ರ, ಚಿನ್ನಾಭರಣ ಕಳವು ಮಾಡಿದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನಾಭರಣ, ವಜ್ರವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದು, ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ವೆಂಕಟೇಶ್ವರ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:25/03/2025 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:13/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಓರ್ವ ಮಹಿಳೆಯನ್ನು ಮನೆಕೆಲಸಕ್ಕೆಂದು ನೇಮಕ ಮಾಡಿಕೊಂಡಿದ್ದು, ಮನೆ ಕೆಲಸದಾಕೆಯು ದಿನಾಂಕ:15/03/2025 ರಂದು ಪಿರಾದುದಾರರ ಮನೆಯ ಬೀರುವಿನಲ್ಲಿಟ್ಟಿದ್ದ 128 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ ಎಂದಿದೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ದಿನಾಂಕ:25/03/2025 ರಂದು ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಮನೆಕೆಲಸದಾಕೆಯು ವಾಸವಿರುವ ಮನೆಯಲ್ಲಿ ನೋಟೀಸ್…

Read More

ಅಯೋಧ್ಯೆ: ಮಂಗಳವಾರ ಮಧ್ಯಾಹ್ನ ರೈಲ್ವೆ ಇಲಾಖೆಗೆ ಬಾಂಬ್ ಬೆದರಿಕೆ ಬಂದ ನಂತರ ಜೌನ್‌ಪುರದಿಂದ ಅಯೋಧ್ಯೆಗೆ ತೆರಳುತ್ತಿದ್ದ ರೈಲಿನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಜೌನ್‌ಪುರ-ಅಯೋಧ್ಯಾ ಕ್ಯಾಂಟ್ ಸೂಪರ್‌ಫಾಸ್ಟ್ ರೈಲಿಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದಾಗಿ ರೈಲು ಜಂಗ್‌ಘೈ ನಿಲ್ದಾಣದಲ್ಲಿ ಸ್ಥಗಿತಗೊಂಡಿತು. ವರದಿಗಳ ಪ್ರಕಾರ, ಅಪರಿಚಿತ ವ್ಯಕ್ತಿ ಕರೆ ಮಾಡಿ, ರೈಲಿನಲ್ಲಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ತಿಳಿಸಿದ್ದನು. ಹೀಗಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ಸ್ಕ್ವಾಡ್ ತನಿಖೆಗಾಗಿ ಸ್ಥಳಕ್ಕೆ ಧಾವಿಸಿದರು. ರೈಲು ಈಗಾಗಲೇ ಜೌನ್‌ಪುರ ನಿಲ್ದಾಣದಿಂದ ಹೊರಟಿದ್ದರಿಂದ, ಅಧಿಕಾರಿಗಳು ತ್ವರಿತವಾಗಿ ಜಂಗ್‌ಘೈ ನಿಲ್ದಾಣಕ್ಕೆ ಮಾಹಿತಿಯನ್ನು ರವಾನಿಸಿದರು. ಅಲ್ಲಿ ರೈಲು ನಿಲ್ಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 10ನೇ ಕೋಚ್ ಅನ್ನು ಸ್ಥಳಾಂತರಿಸಲಾಯಿತು ಮತ್ತು ಪ್ರಯಾಗ್‌ರಾಜ್‌ನಿಂದ ಬಾಂಬ್ ಸ್ಕ್ವಾಡ್‌ಗೆ ಎಚ್ಚರಿಕೆ ನೀಡಲಾಯಿತು. ತಂಡವು ಸುಮಾರು ನಾಲ್ಕು ಗಂಟೆಗಳ ಕಾಲ ರೈಲಿನ ಸಂಪೂರ್ಣ ಶೋಧ ನಡೆಸಿತು. ಅಧಿಕಾರಿಗಳ ಪ್ರಕಾರ, ಹುಡುಕಾಟದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗಲಿಲ್ಲ ಮತ್ತು ಅಂತಿಮವಾಗಿ ರೈಲನ್ನು…

Read More

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅಧಿಕೃತವಾಗಿ ಏಪ್ರಿಲ್ 8, 2025 ರಿಂದ ಜಾರಿಗೆ ಬಂದಿದೆ. ದಿ ಗೆಜೆಟ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ಅಧಿಸೂಚನೆಯ ಮೂಲಕ ಕೇಂದ್ರ ಸರ್ಕಾರವು ಈ ಕಾಯ್ದೆಯನ್ನು ಔಪಚಾರಿಕಗೊಳಿಸಿತು. “ವಕ್ಫ್ (ತಿದ್ದುಪಡಿ) ಕಾಯ್ದೆ, 2025 (2025 ರ 14) ರ ಸೆಕ್ಷನ್ 1 ರ ಉಪ-ವಿಭಾಗ (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು, ಕೇಂದ್ರ ಸರ್ಕಾರವು ಈ ಮೂಲಕ 2025 ರ ಏಪ್ರಿಲ್ 8 ನೇ ದಿನವನ್ನು ಸದರಿ ಕಾಯ್ದೆಯ ನಿಬಂಧನೆಗಳು ಜಾರಿಗೆ ಬರುತ್ತಿವೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. https://twitter.com/PTI_News/status/1909594964633256220 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಗೆ ರಾಷ್ಟ್ರಪತಿ ಮತ್ತು ಸಂಸತ್ತಿನ ಒಪ್ಪಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯ ಕೆಲವು ದಿನಗಳ ನಂತರ ಮತ್ತು ಸಂಸತ್ತು ಅಂಗೀಕರಿಸಿದ ನಂತರ ಇದು ಬಂದಿದೆ. ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರು ದಿನಗಳ ಕಾಲ ತೀವ್ರ ಚರ್ಚೆಗೆ ಒಳಗಾಯಿತು ಮತ್ತು ಅನುಮೋದನೆ ಪಡೆಯಿತು. ಆದಾಗ್ಯೂ, ಹೊಸ…

Read More

ಶಿವಮೊಗ್ಗ: ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್ ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತಾಳಗುಪ್ಪ ಹೋಬಳಿಯ ಶಿರೂರು ಗ್ರಾಮದ ಮುಂಡಿಗೆಹಳ್ಳಿಯ ರೈತ ಹೆಚ್.ಎಸ್ ಕೃಷ್ಣಮೂರ್ತಿ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ತಮ್ಮ ಶಿರೂರು ಗ್ರಾಮದ ಸರ್ವೆ ನಂಬರ್.125ರಲ್ಲಿ ತಗ್ಗು ಉಬ್ಬುಗಳಿಂದ ಕೂಡಿದ್ದಂತ ಎರಡು ಎಕರೆ ಜಮೀನಿನನ್ನು ಸಮತಟ್ಟ ಮಾಡುತ್ತಿದ್ದಾಗ, ಆರ್.ಐ ಮಂಜುನಾಥ್ ಸ್ಥಳಕ್ಕೆ ಬಂದು ಕೆಲಸ ನಿಲ್ಲಿಸುವಂತೆ ಒತ್ತಾಯಿಸಿದರು. ಅಲ್ಲದೇ ಲಂಚದ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ತಿಳಿಸಿದ್ದಾರೆ. ದಿನಾಂಕ 20-03-2025ರಂದು ಆರ್ ಐ ಮಂಜುನಾಥ್ ಅವರಿಗೆ ಲಂಚದ ಹಣವಾಗಿ ಪೋನ್ ಪೇ ಮೂಲಕ ರೂ.2500, ದಿನಾಂಕ 02-04-2025ರಂದು 500 ಹಣವನ್ನು ಪಡೆದಿರುತ್ತಾರೆ. ಮತ್ತೆ ರೂ.3000 ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಅವರ ವಿರುದ್ಧ ಕ್ರಮ…

Read More

ಬೆಂಗಳೂರು: ಏಪ್ರಿಲ್.10, 2025ರಂದು ಮಹಾವೀರ ಜಯಂತಿಯ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 10-04-2025 ಗುರುವಾರದಂದು “ಮಹಾವೀರ ಜಯಂತಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/people-are-talking-about-slapping-cm-siddaramaiah-by-vijayendra/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/

Read More

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ದಿನವಾದ ಇಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೆಂದು ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಜನವಿರೋಧಿ ಕಾಂಗ್ರೆಸ್ಸಿಗರು, ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೇ? ಕೇಂದ್ರದಲ್ಲಿ ಮೂರನೇ ಬಾರಿಗೆ ಸರಕಾರ ಬಂದು, ಬಡವರಿಗೆ ಉಜ್ವಲ ಸೇರಿ ಅನೇಕ ಜನಪರ ಯೋಜನೆಗಳನ್ನು ಕೊಟ್ಟಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೇ ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ನಮ್ಮ ನೀರು ನಮ್ಮ ಹಕ್ಕು ಎಂದು ಮೊಸಳೆಕಣ್ಣೀರು ಸುರಿಸಿ ಪಾದಯಾತ್ರೆ ಮಾಡಿ ನಿಮ್ಮ ಮತ ಪಡೆದು ಅಧಿಕಾರಕ್ಕೆ ಬಂದ…

Read More

ಬೆಂಗಳೂರು: ರಾಜ್ಯದಲ್ಲಿ ಸಿಗುವಂತ ಕೆಲ ಅಂಗಡಿಗಳಲ್ಲಿನ ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ ಹಾಗೂ ಖಾರ ಮಿಕ್ಸರ್ ಗಳು ಅಸುರಕ್ಷಿತವಾಗಿದ್ದಾವೆ. ಅವು ತಿನ್ನೋದಕ್ಕೆ ಸುರಕ್ಷಿತವಲ್ಲ. ಆರೋಗ್ಯದ ಮೇಲೆ ಪರಿಣಾಮ ಬೀರುವಂತ ರಾಸಾಯನಿಕ ಅಂಶ ಪತ್ತೆಯಾಗಿದೆ ಎಂಬುದಾಗಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯು ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಫೆಬ್ರವರಿ ಮತ್ತು ಮಾರ್ಚ್‌ 2025ರ ಮಾಹೆಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂದಿದೆ. ಫೆಬ್ರವರಿ 2025ರ ಮಾಹೆಯಲ್ಲಿ ಒಟ್ಟಾರೆ 3698 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ರಾಷ್ಟ್ರಪತಿ ಭವನ, ಸಂಸತ್ ಭವನದ ಮಾದರಿಯಲ್ಲೇ ವಿಧಾನಸೌಧಕ್ಕೂ ಭೇಟಿ ನೀಡಲು ಶುಲ್ಕವನ್ನು ನಿಗದಿಪಡಿಸಲಾಗುತ್ತಿದೆ. ವಿಧಾನಸೌಧ ಟೂರ್ ಗೈಟ್ ಜಾರಿಗೊಳಿಸಿದ್ದು, ಇದರಡಿ ವಿಧಾನಸೌಧ ವೀಕ್ಷಣೆಗೆ ಜನರು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿಯಲ್ಲಿನ ರಾಷ್ಟ್ರಪತಿ ಭವನ ಹಾಗೂ ಸಂಸತ್ ಭವನ ವೀಕ್ಷಣೆಗೆ ಶುಲ್ಕವಿದೆ. ಅದೇ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೂ ಪ್ರವಾಸಿಗರಿಗೆ ಟೂರ್ ಗೈಟ್ ಅನ್ನು ಸರ್ಕಾರ ಏರ್ಪಡಿಸುತ್ತಿದೆ. ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ ವೀಕ್ಷಣೆಗೆ ಪ್ರವಾಸಿಗರು ಶುಲ್ಕ ಪಾವತಿಸಿ, ವೀಕ್ಷಣೆ ಮಾಡಬಹುದಾಗಿದೆ. ಅಂದಹಾಗೇ ಸಾರ್ವಜನಿಕ ರಜಾ ದಿನಗಳಂದು ತಲಾ 30ರಂತೆ ತಂಡಗಳನ್ನು ವಿಭಜಿಸಿ, ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಈ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸೋಧ್ಯಮ ಇಲಾಖೆಯ ಅಧಿಕಾರಿಯೊಬ್ಬರು ಇರುತ್ತಾರೆ. ಇದರ ಉಸ್ತುವಾರಿಯನ್ನಾಗಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರನ್ನು ನೇಮಕ ಮಾಡಲಾಗುತ್ತದೆ. ಪ್ರವಾಸಿಗರು ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ…

Read More

ಬೆಂಗಳೂರು: ಕರ್ನಾಟಕದಲ್ಲಿ ಬಳಕೆಯಾಗುತ್ತಿರುವಂತ ಬ್ರ್ಯಾಂಡೆಡ್ ಕಂಪನಿಯ ಕುಡಿಯೋ ನೀರಿನ ಬಾಟಲಿಯನಲ್ಲೂ ರಾಸಾಯನಿಕ ಪತ್ತೆಯಾಗಿದೆ. ಅಲ್ಲದೇ ನೀರು ಕುಡಿಯೋದಕ್ಕೆ ಯೋಗ್ಯವಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ಬಾಟಲಿಯ ನೀರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಆಘಾತಕಾರಿ ಮಾಹಿತಿ ಲ್ಯಾಬ್ ಪರೀಕ್ಷೆಯಲ್ಲಿ ಹೊರಬಿದ್ದಿದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿರುತ್ತವೆ. ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂಬುದಾಗಿ ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಯಾವೆಲ್ಲಾ ನೀರಿನ ಬಾಟಲಿಯಲ್ಲಿ ರಾಸಾಯನಿಕ ಪತ್ತೆ.? ಕಿಂಗ್ ಸಿಪ್ ಆಕ್ವಾ ಲಿಂಕ್ ಗೋಕುಲ್ ಜಲ್ ತೇಜೋ ಅಕ್ವಾ ನೈಸರ್ಗಿಕ ಕುಡಿಯುವ ನೀರು ಆಕ್ಸಿ ಗ್ರಾಂಡ್…

Read More