Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು’ ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಆಕ್ಸಿಯಂ ಸ್ಪೇಸ್-4 ಮಿಷನ್ ಯಶಸ್ವಿಯ ರುವಾರಿಯಾಗಿರುವ ಗಗನಯಾತ್ರಿ ಶ್ರೀಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಈ ವೇಳೆ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. `ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. ಆದರೆ, ನನ್ನ ಯಾತ್ರೆಗೆ ಸಾವಿರಾರೂ ಮಂದಿ ಕೆಲಸ ಮಾಡಿದ್ದಾರೆ. ಎಂಜಿನಿಯರ್, ವೈದ್ಯರು ಹೀಗೆ ಸಾಕಷ್ಟು ಮಂದಿ ಇದ್ದಾರೆ. ಅವರಂತೆ ನೀವು ಆಗಬಹುದು’ ಎಂದರು. ಸಾಕಷ್ಟು ಸ್ಫೂರ್ತಿ: `ನನ್ನ ಗಗನಯಾನಕ್ಕೆ ಸಾಕಷ್ಟು ಜನರ ಸ್ಪೂರ್ತಿ ಇದೆ. ಹೀಗಾಗಿ ಒಬ್ಬಿಬ್ಬರ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 27.11.2025 ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿ.ಎಂ.ಟಿ.ಸಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ನವೆಂಬರ್ 27 ರ ಗುರುವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. https://kannadanewsnow.com/kannada/government-jobs-rs-10-lakh-prize-for-each-of-the-winning-athletes-of-the-blind-world-cup-cm-siddaramaiah-announces/ https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/

Read More

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ…

Read More

ಶಿವಮೊಗ್ಗ: ಪ್ರಸ್ತುತ ಶೈಕ್ಷಣಿಕ ವಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗಗಳು “ಅಂಚಿಗೆ ತಳ್ಳಲ್ಪಟ್ಟಿವೆ” ಎಂದು ಕನ್ನಡದ ಹಿರಿಯ ವಿಮರ್ಶಕ ಮತ್ತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಕಳವಳ ವ್ಯಕ್ತಪಡಿಸಿದರು. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಸೋಮವಾರ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ತಂತ್ರಜ್ಞಾನ ಹಾಗೂ ಆರ್ಥಿಕವಾಗಿ ಲಾಭದಾಯಕ ಎಂದು ಪರಿಗಣಿಸಲಾಗುವ ಕ್ಷೇತ್ರಗಳಿಗೆ ಒಲವು ಹೆಚ್ಚಿದ ಕಾರಣ ಹಾಗೂ ಆರ್ಥಿಕತೆಗೆ ಕೊಡುಗೆ ನೀಡದ ಜ್ಞಾನಕ್ಷೇತ್ರಗಳೆಂಬ ಕಾರಣದಿಂದ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಡುತ್ತಿವೆ. ಹಿಂದೆ ಸಮಾಜವನ್ನು ಕಟ್ಟುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಈ ಮಾನವಿಕ ವಿಭಾಗಗಳು, ಇಂದು ತಮ್ಮ ಶಕ್ತಿಯನ್ನು ತಾವೇ ಕುಂದಿಸಿಕೊಂಡು ಮಾರ್ಜಿನಲೈಸ್‌ ಆಗಿವೆ” ಎಂದು ವಿಶ್ಲೇಷಿಸಿದರು. ಇದೇ ಸಂದರ್ಭದಲ್ಲಿ ವಿಭಾಗದ ಸಾಹಿತ್ಯ ಸಂಘಕ್ಕೆ ಚಾಲನೆ ನೀಡಲಾಯಿತು. ವಿಭಾಗದ ಅಧ್ಯಕ್ಷ ಡಾ. ದತ್ತಾತ್ರೇಯ ಮಾತನಾಡಿ, ಇಂಗ್ಲಿಷ್…

Read More

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕರಿಯಾಗಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ನಗರದ ಡಿ. ಎ. ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆಯ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ ಕ್ರೀಡಾಕೂಟವು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು, ಇತರರು ಅನುಸರಿಸುವಂತಿದೆ. ಅದನ್ನು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನೌಕರರು ಕೂಡ ಕ್ರೀಡೆಯನ್ನು ಪೊಲೀಸ್ ಕ್ರೀಡಾಕೂಟವನ್ನು ಅನುಸರಿಸುತ್ತಿರುವುದು ಸಂತೋಷ ಎನಿಸಿದೆ ಎಂದರು. ಕ್ರೀಡೆ ಸ್ಫೂರ್ತಿದಾಯಕ ಆಗಿರುವಂತೆ ಪ್ರೇರಣಾದಾಯಕವಾಗಿದೆ. ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದ ಅವರು ಸದಾ ಲವಲವಿಕೆಯಿಂದಿರಲು, ಉತ್ಸುಕರಾಗಿರಲು ಪೂರಕವಾಗಿದೆ ಎಂದರು. ಪೊಲೀಸರು ತಮ್ಮ ದೈನಂದಿನ ಕಾರ್ಯದಲ್ಲಿ ಎದುರಾಗುವ ಸಮಸ್ಯೆ- ಸವಾಲುಗಳನ್ನು ಎದುರಿಸಲು, ಉತ್ತಮ ಸೇವೆ ಸಲ್ಲಿಸುವಲ್ಲಿ ಕ್ರೀಡೆ ಸಹಾಯಕವಾಗಿದೆ ಎಂದರು. ಜಿಲ್ಲೆಯಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ, ಕೋಮುಗಲಭೆ ಮತ್ತಿತರ ಕುಕೃತ್ಯಗಳನ್ನು ನಿಯಂತ್ರಿಸುವಲ್ಲಿ…

Read More

ಶಿವಮೊಗ್ಗ : ಪೊಲೀಸರು ಹೆಣ್ಣುಮಕ್ಕಳೊಂದಿಗೆ ಸೂಕ್ಮತೆ ಮತ್ತು ಸಮಾಧಾನದಿಂದ ನಡೆದುಕೊಳ್ಳಬೇಕು. ಹಾಗೂ ಅವರಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮ ಚೌದರಿ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013(POSH) ಅನುಷ್ಟಾನ, ಮಹಿಳಾ ಸ್ಪಂದನ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೊಲೀಸರು ಮಹಿಳೆಯರು, ಮಕ್ಕಳಸ್ನೇಹಿ ಮತ್ತು ಜನಸ್ನೇಹಿಯಾಗಿರಬೇಕು, ಸ್ಥಳೀಯ ಠಾಣೆಗಳಲ್ಲಿ ಹೆಣ್ಣು ಮಕ್ಕಳೊಂದಿಗೆ ಸಮಾಧಾನ, ಸೂಕ್ಷ್ಮತೆಯಿಂದ ನಡೆದುಕೊಳ್ಳಬೇಕು. ಪೊಲೀಸ್ ಸಿಬ್ಬಂದಿಗಳಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ಮಾಡಿಸಬೇಕು. ತರಬೇತಿ ನೀಡಿದ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು ಎಂದ ಅವರು ಹೆಣ್ಣು ಮಕ್ಕಳು ಸಹ ಪೊಲೀಸ್ ಠಾಣೆಗಳ ಬಗ್ಗೆ ಭಯ ತೊರೆದು ಉತ್ತಮ ಸಂಬAಧ ಹೊಂದಬೇಕು ಎಂದರು. ಮಹಿಳಾ ಮತ್ತು ಮಕ್ಕಳ…

Read More

ಮುಂಬೈ : ಚೊಚ್ಚಲ ಆವೃತ್ತಿಯ ಮಹಿಳಾ ಅಂಧರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ಬರೆದ ಕನ್ನಡತಿ ದೀಪಿಕಾ ಟಿ.ಸಿ. ಸಾರಥ್ಯದ ಭಾರತೀಯ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ನೀತಾ ಎಂ. ಅಂಬಾನಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ನೇಪಾಳ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡ ಭಾರತ ತಂಡ, ನಿಜವಾದ ದೃಷ್ಟಿ ಹೃದಯದಿಂದ ಬರುತ್ತದೆ ಎಂಬುದನ್ನು ನಮಗೆ ತೋರಿಸಿಕೊಟ್ಟಿದೆ ಎಂದು ಅವರು ಬಣ್ಣಿಸಿದ್ದಾರೆ. “ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಟಿ20 ಕ್ರಿಕೆಟ್ ವಿಶ್ವಕಪ್ ಗೆಲುವಿನೊಂದಿಗೆ, ನಮ್ಮ ನೀಲಿ ಬಣ್ಣದ ಜೆರ್ಸಿ ಧರಿಸಿದ ಹುಡುಗಿಯರು ಮತ್ತೊಮ್ಮೆ ನಾವು ಹೆಮ್ಮೆ ಪಡುವಂತೆ ಮಾಡಿದ್ದಾರೆ. ನಿಜವಾದ ದೃಷ್ಟಿ ಹೃದಯದಿಂದ ಬರುತ್ತದೆ ಎಂದು ಅವರು ನಮಗೆ ತೋರಿಸಿದ್ದಾರೆ. ಅವರ ಧೈರ್ಯ, ಸ್ಥಿತಿಸ್ಥಾಪಕತ್ವ ಮತ್ತು ಅಬೇಧ್ಯ ಸ್ಫೂರ್ತಿಯ ವಿಜಯ ಇದಾಗಿದೆ. ಅವರು ಕೋಟ್ಯಂತರ ಜನರಿಗೆ ಭರವಸೆ, ಸಾಧ್ಯತೆ ಮತ್ತು ಪ್ರೇರಣೆಯ ಹಾದಿಯನ್ನು ಬೆಳಗಿಸಿದ್ದಾರೆ. ಅವರಿಗೆ…

Read More

ಶಿವಮೊಗ್ಗ: ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ನಡೆದ ಮಹಿಳಾ ಬ್ಲೈಂಡ್ ಟಿ20 ಪಂದ್ಯಾವಳಿಯಲ್ಲಿ ಜಯ ಸಾಧಿಸಿದೆ. ಈ ಜಯವು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ. ಈ ಜಯಶೀಲ ವಿಶ್ವ ಕಪ್ ತಂಡದಲ್ಲಿ ಕರ್ನಾಟಕದಿಂದ ಮೂವರು ಆಟಗಾರ್ತಿಯರು ಇದ್ದಾರೆ. ಅವರಲ್ಲಿ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯ.ವಿ ತನ್ನ ಆಲ್ ರೌಂಡರ್ ಮೂಲಕ ತಂಡದ ಗೆಲುವಿಗೆ ಸಖತ್ ಸಾಥ್ ನೀಡಿದ್ದಾರೆ. ಟಿ20 ಅಂಧರ ವಿಶ್ವಕಪ್ ಗೆಲುವಿಗೆ ಕಾರಣವಾದಂತ ನನ್ನ ಸ್ವ ಕ್ಷೇತ್ರದ ಕಾವ್ಯಾ.ವಿ ಕೃತಜ್ಞತಾ ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. https://kannadanewsnow.com/kannada/guest-lecturer-attempts-suicide-by-pouring-petrol-on-himself-in-gadag-demanding-fulfillment-of-demands/ https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/

Read More

ಗದಗ: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿರುವ ಘಟನೆ ನಡೆದಿದೆ. ಗದಗದ ಡಿಸಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಉಪನ್ಯಾಸಕ ಆತ್ಮಹತ್ಯೆಗೂ ಯತ್ನಿಸಿದರು. ಆದರೇ ಸ್ಥಳದಲ್ಲಿದ್ದಂತ ಪೊಲೀಸರು ತಕ್ಷಣವೇ ಬಾಟಲಿ ವಶಕ್ಕೆ ಪಡೆದು, ರಕ್ಷಣೆ ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ವೇಳೆಯಲ್ಲೇ ಚಾಕು ಪ್ರದರ್ಶಿಸಿ ಅತಿಥಿ ಉಪನ್ಯಾಸಕಿ ಆಕ್ರೋಶ ಹೊರ ಹಾಕಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುತ್ತಿರೋ ಕೌನ್ಸೆಲಿಂಗ್ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಅತಿಥಿ ಉಪನ್ಯಾಸಕರ ನೇಮಕಾತಿಗೆ ಅವೈಜ್ಞಾನಿಕ ನಿಯಮ ಜಾರಿಗೊಳಿಸಲಾಗಿದೆ. 20 ರಿಂದ 30 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಅತಂತ್ರರಾಗಿದ್ದಾರೆ ಎಂಬುದಾಗಿ ಆಕ್ರೋಶವನ್ನು ಅತಿಥಿ ಉಪನ್ಯಾಸಕರು ಹೊರಹಾಕಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಗದಗಕ್ಕೆ ಆಗಮಿಸಿದಂತ…

Read More

ಬೆಂಗಳೂರು: ಡಿಸೆಂಬರ್.25ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಕ್ಷೇತ್ರವನ್ನು 29 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ. 29.00 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಶ್ರೀ.ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ ಹಾಗೂ ನಾಗರೀಕ ಸರಬರಾಜು ಸಚಿವರು ಅವರ ಘನಉಪಸ್ಥಿತಿಯಲ್ಲಿ ನೀಡಲಾಯಿತು. ಅದರಲ್ಲಿ ಪ್ರಮುಖವಾಗಿ : ರೂ.16 ಕೋಟಿ ವೆಚ್ಚದಲ್ಲಿ ದಾಸೋಹ ಭವನ ರೂ. 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ರೂ.3.53 ಕೋಟಿ ವೆಚ್ಚದಲ್ಲಿ ರಥ ಬೀದಿ ರೂ.1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸುವುದು ರೂ. 28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ರೂ. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳ ನಿರ್ಮಾಣ ಒಳಗೊಂಡಿವೆ. * 2025-26ನೇ ಸಾಲಿನ…

Read More