Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಆನೇಕಲ್: ಶಾಕಿಂಗ್ ಘಟನೆ ಎನ್ನುವಂತೆ ಸ್ಕ್ಯಾನಿಂಗ್ ಗೆ ತೆರಳಿದಂತ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ, ಲೈಂಗಿಕ ಕಿರುಕುಳವನ್ನು ರೆಡಿಯಾಲಜಿಸ್ಟ್ ಒಬ್ಬರು ನೀಡಿದಂತ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸಮೀಪದ ಆನೇಕಲ್ ನಲ್ಲಿ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಕಾಮುಕ ರೆಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸೋದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದಾರೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತ ಪಡಿಸಿದಾಗ ಹೊರಗೆ ಹೇಳಿದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದ್ದಾರೆ. ಈ ಎಲ್ಲವನ್ನು ಮೊಬೈಲ್ ನಲ್ಲಿ ಚಿತ್ರಿಸಿಕೊಂಡು, ಆನೇಕಲ್ ಠಾಣೆಗೆ ತೆರಳಿ…

Read More

ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಸಚಿವರ ಕನಸಿನ ಯೋಜನೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ. ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಮಾಹಿತಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ನಿನ್ನೆಯವರೆಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರಿಗೆ ಅವಕಾಶ ನೀಡಲಾಗಿತ್ತು. ಇನ್ನೂ ಕೆಲವರು ವಿವರ ದಾಖಲಿಸಲು ಅವಕಾಶ ಕೋರಿದ್ದರಿಂದಾಗಿ ಮತ್ತೆ ವಿಸ್ತರಿಸಲಾಗಿದೆ ಎಂದಿದ್ದಾರೆ. ನವೆಂಬರ್.30, 2025ರವರೆಗೆ ಆನ್ ಲೈನ್ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕಾರಣಾಂತರಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು ಆನ್ ಲೈನ್ ಮೂಲಕ ತಮ್ಮ ಮಾಹಿತಿ ನೋಂದಾಯಿಸಿಬಹುದು ಎಂದು ತಿಳಿಸಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್‌ಲೈನ್‌ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ…

Read More

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯನ್ನು ವಿವಿಧ ಸಮೀಕ್ಷಾ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಈ ಸಮೀಕ್ಷೆಯಲ್ಲಿ ಎನ್ ಡಿ ಎ ಬಹುಮತ ಪಡೆಯಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಮಾಟ್ರಿಜ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್ ಡಿಎ 147ರಿಂದ 167 ಸೀಟನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷದ ಎಂಜಿಪಿ 70 ರಿಂದ 90 ಸೀಟ್, ಜೆಎಸ್ ಪಿ 0, ಇತರೆ 2ರಿಂದ 6 ಸೀಟು ಗೆಲ್ಲುವ ಸಾಧ್ಯತೆಯನ್ನು ತಿಳಿಸಿದೆ. ಪೀಪಲ್ ಇನ್ ಸೈಟ್ ಸಮೀಕ್ಷೆಯ ಪ್ರಕಾರ ಎನ್ ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂಬುದಾಗಿ ಹೇಳಲಾಗಿದೆ. ಎನ್ ಡಿಎ 133-143, ಮಹಾಘಟಬಂಧನ್ 93-102, ಇತರೆ 2-9 ಸ್ಥಾನವನ್ನು ಗೆಲ್ಲಲಿವೆ ಎಂಬುದಾಗಿ ಹೇಳಲಾಗಿದೆ. https://twitter.com/ANI/status/1988236009977606355 ಡಿವಿ ರಿಸರ್ಚ್ ನಂತೆ ಎನ್ ಡಿಎಗೆ ಸರಳ ಬಹುಮತ ಬರಲಿದೆ. ಎನ್ ಡಿಎ 132 ರಿಂದ 152, ಮಹಾಘಟಬಂಧನ್ ಗೆ 83-98 ಸೀಟ್, ಜೆಎಸ್ ಪಿ 2ರಿಂದ 4, ಇತರೆ 1 ರಿಂದ 8 ಸೀಟ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.…

Read More

ಬೆಂಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 4,007 ಸೀಟು ಹಂಚಿಕೆಗೆ ಲಭ್ಯ ಇದ್ದು, ಅವುಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಕೊಟ್ಟಿರುವ ಪಟ್ಟಿಯಲ್ಲಿ ಕ್ಲಿನಿಕಲ್, ಪ್ರೀ ಕ್ಲಿನಿಕಲ್ ಮತ್ತು ಪ್ಯಾರಾ ಕ್ಲಿನಿಕಲ್ ಗೆ ಸೇರಿದ ಸೀಟುಗಳು ಸೇರಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವ ಕಾಲೇಜಿನಲ್ಲಿ? ಯಾವ ವಿಭಾಗದ ಸೀಟುಗಳು ಎಷ್ಟು ಸಂಖ್ಯೆಯಲ್ಲಿ ಇವೆ ಎಂಬುದನ್ನು ಅಭ್ಯರ್ಥಿಗಳು ನೋಡಿಕೊಂಡು, ಎಚ್ಚರಿಕೆಯಿಂದ ಆಪ್ಷನ್ ಎಂಟ್ರಿ ಮಾಡಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಆಪ್ಷನ್ ಎಂಟ್ರಿ ಆರಂಭ ಮತ್ತು ಸೀಟು ಹಂಚಿಕೆ ಬಗ್ಗೆ ಸದ್ಯದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/important-information-for-state-youth-fund-beneficiaries/ https://kannadanewsnow.com/kannada/money-will-be-deposited-in-the-accounts-of-farmers-who-lost-their-crops-due-to-heavy-rains-cm-siddaramaiah-announces/

Read More

ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು…

Read More

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳು ಮಾಹೆಯಾನ ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 01 ರಿಂದ 25ನೇ ತಾರೀಖಿನೊಳಗೆ ಸ್ವಯಂ–ಘೋಷಣೆಯನ್ನು ಪಲಾನುಭವಿಗಳು ವೆಬ್ ಸೈಟ್ www.sevasindhugs.karnataka.gov.in ನ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ನಿಗಧಿತ ಅವಧಿಯೊಳಗೆ ಸಲ್ಲಿಸಬೇಕೆಂದು ಬೆಂಗಳೂರು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/science-in-kannada-a-special-campaign-from-param-science-experience-center/ https://kannadanewsnow.com/kannada/extension-of-the-deadline-for-online-registration-in-the-caste-census-survey-in-the-state/

Read More

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ನಲ್ಲಿ (ParSEC) ಈ ತಿಂಗಳು ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು ಹಮ್ಮಿಕೊಂಡಿದೆ. ಕೇಂದ್ರಕ್ಕೆ ಭೇಟಿ ನೀಡುವ ಎಲ್ಲ ಸಂದರ್ಶಕರಿಗೆ ಗ್ಯಾಲರಿಯಲ್ಲಿನ ವಿಜ್ಞಾನದ ಕೌತುಕಗಳನ್ನು ಕನ್ನಡ ಭಾಷೆಯಲ್ಲಿಯೇ ಮನಮುಟ್ಟುವಂತೆ ವಿವರಿಸಲಾಗುತ್ತದೆ. ವಿಜ್ಞಾನದ ವಿಷಯಗಳನ್ನು ಹೆಚ್ಚು ಆಕರ್ಷಕವಾಗಿಸಲು ಸಿಬ್ಬಂದಿ ವರ್ಗವು ಸಂದರ್ಶಕರೊಂದಿಗೆ ಸಂವಾದ ನಡೆಸಲಿದೆ. ಉದಾಹರಣೆಗೆ, ‘ನೀವೇನಾದರೂ ಕನ್ನಡದಲ್ಲಿ ಒಂದು ನುಡಿಗಟ್ಟು ಹೇಳಿದರೆ, ಅದರ ಹಿಂದಿನ ವಿಜ್ಞಾನದ ಹಿನ್ನೆಲೆ (Science behind it) ನಿಮಗೆ ಗೊತ್ತೇ?’ ಅಥವಾ ‘ಕರ್ನಾಟಕದಲ್ಲಿ ಬಳಕೆಯಲ್ಲಿರುವ ಯಾವುದಾದರೂ ತಂತ್ರಜ್ಞಾನದ ಹಿಂದಿನ ವಿಜ್ಞಾನವೇನು?’ ಎಂದು ಪ್ರಶ್ನಿಸುವ ಮೂಲಕ ಅವರನ್ನು ವಿಷಯದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. ಈ ರೀತಿಯಾಗಿ ವಿಜ್ಞಾನವನ್ನು ಕನ್ನಡದೊಂದಿಗೆ ಬೆಸೆಯುವ ಪ್ರಯತ್ನ ನಡೆಯಲಿದೆ. ವಾರಾಂತ್ಯದಲ್ಲಿ ವಿಜ್ಞಾನದ ವಿಶೇಷ ಕಾರ್ಯಾಗಾರಗಳು! ಕೇವಲ ಗ್ಯಾಲರಿ ವಿವರಣೆಗೆ ಸೀಮಿತವಾಗದೇ, ಮಕ್ಕಳು ಹಾಗೂ ಸಂದರ್ಶಕರಲ್ಲಿ ವಿಜ್ಞಾನದ ಬಗೆಗೆ ಆಸಕ್ತಿ ಹೆಚ್ಚಿಸಲು ಪ್ರತಿ ಶನಿವಾರ ಮತ್ತು ಭಾನುವಾರ ಎರಡು ಮುಖ್ಯ ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ. ಇದಕ್ಕೆ ಹಾಜರಾಗಲು…

Read More

ಬೆಂಗಳೂರು: ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್‌ಲೆಸ್‌, ಸಂಪರ್ಕರಹಿತ, ಆನ್‌ಲೈನ್‌ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಕಿರುಕುಳ ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್‌ ಮೌದ್ಗಿಲ್‌ ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? * ಪ್ರತಿಯೊಬ್ಬ ನಾಗರಿಕರು ತಮ್ಮ ಖಾತಾಗಳನ್ನು ಪಡೆಯಲು ಮತ್ತು ರೂಪಾಂತರಗಳಿಗಾಗಿ ARO ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು * ದಾಖಲೆಗಳನ್ನು ಭೌತಿಕವಾಗಿ ಸ್ಥಳೀಯವಾಗಿ ಪರಿಶೀಲಿಸಲಾಗಿದ್ದರಿಂದ ಹಿರಿಯ ಅಧಿಕಾರಿಗಳ ಅಥವಾ ವ್ಯವಸ್ಥೆಯ ಮೇಲ್ವಿಚಾರಣೆ ಸಾಧ್ಯವಾಗಲಿಲ್ಲ. * ಮಧ್ಯವರ್ತಿಗಳು ನಾಗರಿಕರಿಂದ ಹಣವನ್ನು ಸಂಗ್ರಹಿಸಿ ಅಧಿಕಾರಿಗಳನ್ನು ಪ್ರಭಾವಿಸಿದರು ಮತ್ತು ಭ್ರಷ್ಟಾಚಾರವು ತುಂಬಾ ಹೆಚ್ಚಾಗಿತ್ತು * ನಾಗರಿಕರು ಸಂಪೂರ್ಣವಾಗಿ ಮಧ್ಯವರ್ತಿ ಮತ್ತು ಅಧಿಕಾರಿಗಳ ಮೇಲೆ ಅವಲಂಬಿತರಾಗಿದ್ದರು. ಫೇನ್‌ಲೆಸ್, ಸಂಪರ್ಕರಹಿತ ಮತ್ತು ಆನ್‌ಲೈನ್ ಇಖಾತಾ ವ್ಯವಸ್ಥೆ – ಒಂದು ಕ್ರಾಂತಿ: * ಎಲ್ಲಾ ಬೆಂಗಳೂರು ನಗರ ಖಾತಾಗಳನ್ನು (25 ಲಕ್ಷಕ್ಕೂ ಹೆಚ್ಚು) https://BBMPeAasthi.karnataka.gov.in ನಾಗರಿಕರು ಯಾವುದೇ ಸಮಯದಲ್ಲಿ…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಮೃತರಾದವರ ಕುಟುಂಬಕ್ಕೆ ದೆಹಲಿ ಸರ್ಕಾರ ಪರಿಹಾರ ಘೋಷಿಸಿದೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ರೇಖಾ ಗುಪ್ತ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ದೆಹಲಿಯಲ್ಲಿ ನಡೆದ ಈ ದುರಂತ ಘಟನೆ ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಈ ಸಂಕಷ್ಟದ ಸಮಯದಲ್ಲಿ, ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಈ ಘಟನೆಯಲ್ಲಿ ಗಾಯಗೊಂಡವರಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ದೆಹಲಿ ಸರ್ಕಾರವು ಪ್ರತಿ ಪೀಡಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ಪರಿಹಾರಕ್ಕಾಗಿ ನಾವು ಸಹಾನುಭೂತಿಯ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದಿದ್ದಾರೆ. ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ₹10 ಲಕ್ಷ ನೀಡಲಾಗುವುದು, ಶಾಶ್ವತವಾಗಿ ಅಂಗವಿಕಲರಾದ ವ್ಯಕ್ತಿಗಳಿಗೆ ₹5 ಲಕ್ಷ ನೀಡಲಾಗುವುದು ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ನೀಡಲಾಗುವುದು. ಗಾಯಾಳುಗಳ ಸರಿಯಾದ ಮತ್ತು ಗುಣಮಟ್ಟದ…

Read More