Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಭಾರತದ ಅಂಡಮಾನ್ ದ್ವೀಪಗಳಲ್ಲಿ ಭಾನುವಾರ ಪ್ರಬಲ ಭೂಕಂಪ ಸಂಭವಿಸಿದೆ. ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) X ತೀವ್ರತೆಯನ್ನು ಪಡೆದುಕೊಂಡು 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಮತ್ತು 90 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಿದೆ. ಆರಂಭದಲ್ಲಿ, ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ, GFZ, ಭಾನುವಾರ ಅಂಡಮಾನ್ ದ್ವೀಪಗಳಲ್ಲಿ 6.07 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಿದೆ, ಇದು 10 ಕಿ.ಮೀ (6 ಮೈಲುಗಳು) ಆಳದಲ್ಲಿದೆ. https://twitter.com/NCS_Earthquake/status/1987412758338674874 ಏತನ್ಮಧ್ಯೆ, ಸೋಮವಾರ, ವಿದೇಶಾಂಗ ಸಚಿವಾಲಯ (MEA) ಭಾರತವು ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ಒದಗಿಸಿದೆ ಎಂದು ಹೇಳಿದೆ. ಭಾರತ ಕಳುಹಿಸಿದ ಸಹಾಯದ ಚಿತ್ರಗಳನ್ನು MEA ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹಂಚಿಕೊಂಡಿದ್ದಾರೆ. “ಆಫ್ಘಾನ್ ಜನರಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸುತ್ತಾ, ಭೂಕಂಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಭಾರತ ಆಹಾರ ಸಾಮಗ್ರಿಗಳನ್ನು ತಲುಪಿಸುತ್ತದೆ. ಭಾರತ ಮೊದಲು ಪ್ರತಿಕ್ರಿಯಿಸುತ್ತದೆ” ಎಂದು ಜೈಸ್ವಾಲ್ X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. https://twitter.com/DrSJaishankar/status/1985310475325001759…

Read More

ಬೆಂಗಳೂರು: ಉತ್ತರ ಕನ್ನಡದಲ್ಲಿ ಶರಾವತಿ ನದಿಗೆ ನಿರ್ಮಿಸಲು ಉದ್ದೇಶಿಸಿದ್ದ 2,000 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಪರಿಸರ ವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಡೆಹಿಡಿದಿದೆ. ಹೀಗಾಗಿ ಪರಿಸರವಾದಿಗಳ ಹೋರಾಟಕ್ಕೆ ಭರ್ಜರಿ ಗೆಲುವು ಸಿಕ್ಕಂತೆ ಆಗಿದೆ. ಹೌದು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸುವ ಪ್ರಸ್ತಾವನೆಗೆ ಅರಣ್ಯ ಸಲಹಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಸಮಿತಿಯ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಈ ನಿರ್ಧಾರವು ಪರಿಸರವಾದಿಗಳು ಮತ್ತು ಸ್ಥಳೀಯರ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ವಿರೋಧದ ನಡುವೆಯೂ ಯೋಜನೆ ಜಾರಿಗೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಏನಿದು ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ? ವಿರೋಧ ಏಕೆ? ಪಂಪ್ಡ್ ಸ್ಟೋರೇಜ್ ಯೋಜನೆಯು ವಿಶ್ವದ ಅತಿದೊಡ್ಡ ಬ್ಯಾಟರಿ ತಂತ್ರಜ್ಞಾನ ಎಂದೇ ಪರಿಗಣಿಸಲಾಗಿದ್ದು, ಎರಡು ಜಲಾಶಯಗಳ ನಡುವೆ ಇದನ್ನು ಕಾರ‍್ಯಗತಗೊಳಿಸಲಾಗುತ್ತದೆ. ಹೆಚ್ಚುವರಿ ವಿದ್ಯುತ್‌…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka Union of Working Journalists – KUWJ) ದ 20 ಜಿಲ್ಲೆಗಳ ಕಾರ್ಯಕಾರಿ ಸಮಿತಿಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಮದ್ಯಾಹ್ನ 12 ಗಂಟೆ ವೇಳೆಗೆ ಶೇಕಡ 60 ಮತದಾನ ಆಗಿದೆ. ಬೆಳಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು ಪತ್ರಕರ್ತ ಸದಸ್ಯರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು. ಗದಗ, ಚಿತ್ರದುರ್ಗ,ತುಮಕೂರು, ಕೋಲಾರ ಜಿಲ್ಲಾ ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆ ನಡೆದಿವೆ. KUWJ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ಎನ್.ರವಿಕುಮಾರ್ ಅವರು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ , ಕೋಲಾರ ಮಾತಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನ ಮದ್ಯಾಹ್ನ 3 ಗಂಟೆಗೆ ಕೊನೆಗೊಳ್ಳಲಿದ್ದು, ನಂತರ ಮತ ಎಣಿಕೆ ನಡೆಯಲಿದೆ. ಮತಗಟ್ಟೆಗೆ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್ ಭೇಟಿ, ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದಲ್ಲಿ ನಡೆಯುತ್ತಿದ್ದ ಮತಗಟ್ಟೆಗೆ ಮುಖ್ಯ ಚುನಾವಣಾ ಅಧಿಕಾರಿ ರವಿಕುಮಾರ್ ಟೆಲೆಕ್ಸ್ ಹಾಗೂ ರಾಜ್ಯ ಅಧ್ಯಕ್ಷರಾದಂತ ಶಿವಾನಂದ ತಗಡೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. -ವಸಂತ ಬಿ…

Read More

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್. ಯು. ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿ ವರದಿಗಾರ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ ನಿರ್ದೇಶಕರಾಗಿ ನಮ್ಮ ನಾಡು ಪತ್ರಿಕೆಯ ಸಂಪಾದಕ ಕೆ. ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಽಕಾರಿ ಶ್ರೀನಿವಾಸ್‌ ಅವರು ಘೋಷಿಸಿದ್ದಾರೆ. ವಸಂತ ಬಿ ಈಶ್ವರಗೆರೆ, ಸಂಪಾದಕರು

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ( KUWJ ) ತುಮಕೂರು, ಚಿತ್ರದುರ್ಗ ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 20 ಜಿಲ್ಲಾ ಘಟಕಗಳಿಗೆ ಮತದಾನ ನಡೆಯಲಿದೆ. ಅದೇ ರೀತಿ ಮಂಡ್ಯ ಜಿಲ್ಲಾ ಘಟದ ಚುನಾವಣೆಗೂ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಜ್ಯದ 20 ಜಿಲ್ಲೆಗಳಿಗೆ ನವಂಬರ್ 9ರಂದು ಭಾನುವಾರ ನಿಗದಿಯಂತೆ ಚುನಾವಣೆ ನಡೆಯಲಿದೆ. ಬೆಂಗಳೂರು ನಗರ ಘಟಕದಲ್ಲಿ ಚುನಾವಣೆ ಇಲ್ಲ ತುಮಕೂರು,ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಯಲ್ಲಿ ಅರ್ಜಿದಾರರು ಸದಸ್ಯತ್ವ, ಮತದಾನದ ಹಕ್ಕು ಮತ್ತು ನಾಮಪತ್ರ ತಿರಸ್ಕೃತ ಸಂಬಂಧ ಹೈಕೋರ್ಟ್ ನಲ್ಲಿ ರಿಟ್ ಪಿಟಿಶನ್ ಸಲ್ಲಿಸಿದ್ದು, ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಮತದಾನಕ್ಕೆ ಇನ್ನೆರೆಡು ದಿನಗಳು ಉಳಿದಿದ್ದು,ಎಲ್ಲಾ ಪ್ರಕ್ರಿಯೆ ಮುಗಿಯುವ ಹಂತದಲ್ಲಿರುವುದನ್ನು ಪರಿಗಣಿಸಿ ತಡೆಯಾಜ್ಞೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಮುಂದೂಡಿದ್ದಾರೆ. ಇದರಿಂದ…

Read More

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಕ್ಯಾಲೆಂಡರ್ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕವಾಗಿ ಪ್ರತಿಯೊಬ್ಬ ನೌಕರನಿಗೂ, ಶಿಕ್ಷಕರಿಗೂ 2026ರ ಕ್ಯಾಲೆಂಡರ್ ನೀಡುತ್ತಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು ಎಂದಿದ್ದಾರೆ. ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ವಿನೂತನ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಬ್ಬ ನೌಕರರ, ಶಿಕ್ಷಕರ ಕರ್ತವ್ಯ ನಿರತ ಸ್ಥಳಕ್ಕೆ ಆಯಾ ಜಿಲ್ಲಾ ಮತ್ತು ತಾಲ್ಲೂಕು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕ್ಯಾಲೆಂಡರ್ ತಲುಪಿಸುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.

Read More

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಯಾವುದೇ ಬೇಧ ಭಾವ ಮಾಡದೇ, ಎಲ್ಲಾ ಮಕ್ಕಳನ್ನು ಸಮಾನವಾಗಿ ಕಾಣಬೇಕು. ಅದೇ ಕಾರಣಕ್ಕೆ ಬಡವ-ಬಲ್ಲಿದ, ಮೇಲು-ಕೀಳು ಎಂಬ ಬೇಧ ಭಾವ ಬಾರದಂತೆ ಇರಿಸಲು ಸಮವಸ್ತ್ರವನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಇದರ ನಡುವೆಯೂ ಸಾಗರ ತಾಲ್ಲೂಕಿನ ಬೇಳೂರು ಶಾಲೆಯಲ್ಲಿ ಜಾತಿ ತಾರತಮ್ಯವನ್ನು ಊಟದ ವಿಚಾರದಲ್ಲಿ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ವಿಷಯವನ್ನು ಪ್ರಶ್ನಿಸಿದಂತ ದಲಿತ ಮುಖಂಡನಿಗೆ ಬೆದರಿಕೆ ಕೂಡ ಹಾಕಲಾಗಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೆಳೆಯೂರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯಲ್ಲೇ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಹೀಗಿದ್ದರೂ ಬಂದಗದ್ದೆಯ ಕೆಲ ಮೇಲ್ವರ್ಗದ ಕುಟುಂಬದ ವಿದ್ಯಾರ್ಥಿಗಳು ಮಾತ್ರ ಮನೆಯಿಂದ ಊಟ ತೆಗೆದುಕೊಂಡು ವೇದಿಕೆಯ ಮುಂಭಾಗದಲ್ಲೇ ಕೆಳ ವರ್ಗದ ವಿದ್ಯಾರ್ಥಿಗಳೊಂದಿಗೆ ಸೇರದೆ ಪಂಕ್ತಿ ಬೇಧ ತೋರಿದ್ದನ್ನು ದಲಿತ ಮುಖಂಡ ಅಣ್ಣಪ್ಪ ಕೆಳದಿಪುರ ಗಮನಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಯಾವುದೇ ಜಾತಿ ಬೇದ ಮಾಡುವಂತಿಲ್ಲ. ಪಂಕ್ತಿ ಬೇಧವೂ ಇಲ್ಲ. ಹೀಗಿದ್ದರೂ ಯಾಕೆ ಇಲ್ಲಿ…

Read More

ಬೆಂಗಳೂರು: ಅಂದು‌ ಸಂತ ಶ್ರೇಷ್ಠ ಕನಕದಾಸರಂತೆ ಇಂದು ದೀನದಲಿತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕಾಣುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅಭಿಪ್ರಾಯಪಟ್ಟರು. ಸಂತ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಿಮ್ಮಪ್ಪ ನಾಯಕನೆಂಬ ಹೆಸರಿನಿಂದ ಬೆಳೆದ ಕನಕದಾಸರಿಗೆ ಸಮಾಜದ ಕಡುಬಡವರನ್ನು, ದೀನದಲಿತರನ್ನು ಕಂಡರೆ ಅಪಾರ ವಾತ್ಸಲ್ಯ. ಅದರಂತೆ ಸಿದ್ದರಾಮಯ್ಯ ಅವರು ಕೂಡ ದೀನದಲಿತರ ಬಗ್ಗೆ ಅಪಾರವಾದ ವಾತ್ಸಲ್ಯ ಹೊಂದಿದ್ದಾರೆ ಎಂದು ಹೇಳಿದರು‌. ಎಲ್ಲರೂ ಭಾಷಣಕ್ಕೆ ಮಾತ್ರ ಸೀಮಿತವಾಗುತ್ತಾರೆ. ಆದರೆ ನಮ್ಮ ಮುಖ್ಯಮಂತ್ರಿಗಳು ದೇಶದ ಇತಿಹಾಸದಲ್ಲೇ ರಾಜ್ಯ ಬಜೆಟ್ ನ ಒಟ್ಟು ಗಾತ್ರದಲ್ಲಿ ಶೇ.24.1ರಷ್ಟು ಅನುದಾನವನ್ನು ದೀನದಲಿತರಿಗೆ ಮೀಸಲಿಟ್ಟಿದ್ದಾರೆ. ಇದು ಕಾರ್ಯ ಮಾಡಲು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ. ಇದು ಆ ಸಮುದಾಯದವರ ಬಗ್ಗೆ ಅವರು ಹೊಂದಿರುವ ಕಾಳಜಿ ಮತ್ತು ವಾತ್ಸಲ್ಯವನ್ನು…

Read More

ಸರಿಯಾದ ಆಹಾರವನ್ನು ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಅನೇಕ ನೈಸರ್ಗಿಕ ಪದಾರ್ಥಗಳು ದೇಹದಲ್ಲಿನ ಹಾನಿಕಾರಕ ಜೀವಕೋಶ ಹಾನಿಯ ವಿರುದ್ಧ ಹೋರಾಡುವ ಶಕ್ತಿಶಾಲಿ ಉತ್ಕರ್ಷಣ ನಿರೋಧಕಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಪ್ರತಿಯೊಬ್ಬರೂ ತಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಟಾಪ್ ಕ್ಯಾನ್ಸರ್ ವಿರೋಧಿ ಆಹಾರಗಳು ಇಲ್ಲಿವೆ. ನೀವು ಪ್ರತಿದಿನ ಸೇವಿಸಿ, ರೋಗದ ಭಯದಿಂದ ದೂರಾಗಿ. ಟೊಮೆಟೋಗಳು ಟೊಮೆಟೋಗಳು ಲೈಕೋಪೀನ್‌ನಲ್ಲಿ ಸಮೃದ್ಧವಾಗಿವೆ, ಇದು ಕ್ಯಾನ್ಸರ್ ಉಂಟುಮಾಡುವ ಜೀವಕೋಶ ಹಾನಿಯನ್ನು ಕಡಿಮೆ ಮಾಡಲು ಹೆಸರುವಾಸಿಯಾದ ಉತ್ಕರ್ಷಣ ನಿರೋಧಕವಾಗಿದೆ. ಅವು ವಿಶೇಷವಾಗಿ ಪ್ರಾಸ್ಟೇಟ್ ಮತ್ತು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಂಬಂಧಿಸಿವೆ. ಟೊಮೆಟೊಗಳನ್ನು ಬೇಯಿಸುವುದು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಪ್ರಯೋಜನಕಾರಿಯಾಗಿಸುತ್ತದೆ. ಸೇಬುಗಳು ಸೇಬುಗಳು ಉರಿಯೂತದ ವಿರುದ್ಧ ಹೋರಾಡಲು ಮತ್ತು ಜೀರ್ಣಕ್ರಿಯೆಯನ್ನು ಬೆಂಬಲಿಸಲು ಸಹಾಯ ಮಾಡುವ ಕ್ವೆರ್ಸೆಟಿನ್ ಮತ್ತು ಆಹಾರದ ನಾರನ್ನು ಹೊಂದಿರುತ್ತವೆ. ಅವುಗಳ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಬೆಳವಣಿಗೆಗೆ ಸಂಬಂಧಿಸಿದ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತವೆ. ಸಿಪ್ಪೆಯನ್ನು ಇಡುವುದು ಗರಿಷ್ಠ ಪೌಷ್ಟಿಕಾಂಶದ…

Read More

ಪಶ್ಚಿಮ ಬಂಗಾಳ: ಇಲ್ಲಿ ಶುಕ್ರವಾರ ಕೆಲವು ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಡೆಸಲಾಗುತ್ತಿದ್ದ “ಸಂಘಟಿತ” ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ದಂಧೆಯ ಬಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ED) 1.01 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ಎರಡು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಫೆಡರಲ್ ತನಿಖಾ ಸಂಸ್ಥೆಯು ಬಿಧಾನ್‌ನಗರ (ಉತ್ತರ 24 ಪರಗಣ ಜಿಲ್ಲೆ), ಕೋಲ್ಕತ್ತಾ ಮತ್ತು ಸಿಲಿಗುರಿಯಲ್ಲಿ ಕನಿಷ್ಠ ಎಂಟು ಸ್ಥಳಗಳಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಿದೆ. ಶೋಧ ಕಾರ್ಯಾಚರಣೆಯಲ್ಲಿ 1.01 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ಎರಡು ಐಷಾರಾಮಿ ಕಾರುಗಳು, ಒಂದು ಲ್ಯಾಂಡ್ ರೋವರ್ ಡಿಫೆಂಡರ್ ಮತ್ತು ಒಂದು ಜಾಗ್ವಾರ್, ಡಿಜಿಟಲ್ ಸಾಧನಗಳು ಮತ್ತು ವಿವಿಧ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಹಣವನ್ನು ನಿರ್ವಹಿಸಲು ಬಳಸಲಾಗುತ್ತಿದ್ದ ಆರೋಪಿಗಳಿಗೆ ಸಂಬಂಧಿಸಿದ ಹಲವಾರು ಬ್ಯಾಂಕ್ ಖಾತೆಗಳನ್ನು ಸಹ ಅಧಿಕಾರಿಗಳು ಗುರುತಿಸಿದ್ದಾರೆ. ದಾಳಿಯ…

Read More