Author: kannadanewsnow09

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ  70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷ‌ ಭಾಆಸೇ, ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರು, ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತಾ ಮಾತನಾಡಿದ ಅವರು ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ ಎಂದರು. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ, ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ. ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ ಎಂದು ತಿಳಿಸಿದರು. ಕೆ ಎಸ್ ಆರ್…

Read More

ನವದೆಹಲಿ: ಭಾರತೀಯ ಟೆನಿಸ್ ಐಕಾನ್ ರೋಹನ್ ಬೋಪಣ್ಣ ಅವರು ಕೇಂದ್ರಬಿಂದುವಾಗಿದ್ದು, ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಹೊಸ ಆಟಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತಾ, ಎರಡು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದ ನಂತರ ಬೋಪಣ್ಣ ನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಟೆನಿಸ್‌ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಬೋಪಣ್ಣ ತಮ್ಮ ನಿರ್ಧಾರವನ್ನು Instagram ನಲ್ಲಿ ಪ್ರಕಟಿಸಿದ್ದಾರೆ. ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್‌ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು ಪ್ರತಿನಿಧಿಸುವುದು ನನ್ನ ಜೀವನದ ಶ್ರೇಷ್ಠ ಗೌರವವಾಗಿದೆ ಎಂದಿದ್ದಾರೆ. ವರ್ಷಗಳಲ್ಲಿ, ಬೋಪಣ್ಣ ಭಾರತೀಯ ಟೆನಿಸ್‌ನ ಮೂಲಾಧಾರವಾದರು, ತಮ್ಮ ದೊಡ್ಡ ಸರ್ವ್, ನಿರ್ಭೀತ ನೆಟ್ ಆಟ ಮತ್ತು ವಯಸ್ಸನ್ನು ಮೀರುವ ದೀರ್ಘಾಯುಷ್ಯದಿಂದ ಡಬಲ್ಸ್…

Read More

ಭಾರತೀಯ ಟೆನಿಸ್ ದಂತಕಥೆ ರೋಹನ್ ಬೋಪಣ್ಣ ವೃತ್ತಿಪರ ಟೆನಿಸ್‌ನಿಂದ ನಿವೃತ್ತಿ ಘೋಷಿಸಿದ್ದಾರೆ, ಇದು ಎರಡು ದಶಕಗಳಿಗೂ ಹೆಚ್ಚು ಕಾಲ ನಡೆದ ಮತ್ತು ಭಾರತೀಯ ಕ್ರೀಡೆಯಲ್ಲಿ ಅಳಿಸಲಾಗದ ಗುರುತು ಬಿಟ್ಟ ಅವರ ಹೊಳೆಯುವ ವೃತ್ತಿಜೀವನದ ಅಂತ್ಯವನ್ನು ಸೂಚಿಸುತ್ತದೆ. ಅವರ ಅಂತಿಮ ಪ್ರದರ್ಶನವು ಪ್ಯಾರಿಸ್ ಮಾಸ್ಟರ್ಸ್ 1000 ನಲ್ಲಿ ಬಂದಿತು, ಅಲ್ಲಿ ಅವರು ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ಪಾಲುದಾರರಾದರು, ಕೂರ್ಗ್‌ನ ಕಾಫಿ ಬೆಟ್ಟಗಳಲ್ಲಿ ಪ್ರಾರಂಭವಾದ ಮತ್ತು ವಿಶ್ವ ಟೆನಿಸ್‌ನ ಭವ್ಯ ಹಂತಗಳನ್ನು ತಲುಪಿದ ಪ್ರಯಾಣದ ಪರದೆಯನ್ನು ಮುಚ್ಚಿದರು. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಭಾವನಾತ್ಮಕ ಟಿಪ್ಪಣಿಯಲ್ಲಿ, ಬೋಪಣ್ಣ ಹೀಗೆ ಬರೆದಿದ್ದಾರೆ: “ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್‌ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ. ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿದ್ದರೇ ಮಾತ್ರ ಈ ಆದೇಶವು ಅನ್ವಯ ಆಗಲಿದೆ. ಯಾರು ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿರುತ್ತಾರೋ ಅವರಿಗೆಲ್ಲ ಅನುಕೂಲ ಆಗಲಿದೆ. ಈ ಪರವಾನಿಗೆ ಉಲ್ಲಂಘಿಸಿದ ಕಟ್ಟಡಗಳಿಗೆ ವಿನಾಯಿತಿ ನೀಡಲು ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕೆಳಕಿನಂತೆ ದಂಡ ನಿಗದಿಪಡಿಸಿದೆ. ಈ ಆದೇಶವು ಶೇ.15ರಷ್ಟು ಮಿತಿಯೊಳಗೆ…

Read More

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೆಲ ವಿಶ್ವ ವಿದ್ಯಾಲಯಗಳಿಗೆ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವಂತ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಹೆಸರಿಡಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅವರು,ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಈ…

Read More

ಬೆಂಗಳೂರು: ಬೆಂಗಳೂರು ನಗರ ವಿಶ್ವ ವಿದ್ಯಾನಿಲಯಕ್ಕೆ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರನ್ನಾಗಿ ಡಾ.ಮಹಂತೇಶ್ ಪಾಟೀಲ್(ಡಾ.ಮಹಂತಗೌಡ) ಅವರನ್ನು ನೇಮಿಸಿ ಕುಲಸಚಿವರು ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಬಾಪು ಕಾಲೇಜ್ ಆಫ್ ಎಜುಕೇಷನ್ ಪ್ರಾಂಶುಪಾಲರಾದಂತ ಡಾ.ಮಹಂತೇಶ್ ಪಾಟೀಲ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದಿದ್ದಾರೆ. ಅಂದಹಾಗೇ ಡಾ.ಮಹಂತೇಶ್ ಪಾಟೀಲ್ ಅವರು ಮದರ್ ಥೆರೇಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉಪ್ಯಾಸಕರಾಗಿ, ಆ ಬಳಿಕ ಪ್ರಾಂಶುಪಾಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಆ ಬಳಿ ಜಿಎಂ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದರು. ಇದೀಗ ಬೆಂಗಳೂರಿನ ಯಶವಂತಪುರದಲ್ಲಿರುವಂತ ಬಾಪು ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/ https://kannadanewsnow.com/kannada/cm-siddaramaiah-orders-naming-of-some-universities-in-the-state-after-basavanna-nalvadi-krishnaraja-wodeyar-and-urs/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ವೇಳೆಗೆ ಕ್ರಾಂತಿಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದು ಗಮನ ಸೆಳೆದಿದೆ. ಮಾಜಿ ಪ್ರಧಾನಿ ಇಂದಿರಾ ಸ್ಮರಣೆ ವೇಳೆ ಸೋನಿಯಾ ಗಾಂಧಿ ಬಗ್ಗೆ ಪ್ರಸ್ತಾಪಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ತ್ಯಾಗವನ್ನು ಉಲ್ಲೇಖಿಸಿದರು. ಅಲ್ಲದೇ ಪ್ರಧಾನಿಯಾಗಬೇಕಾಗಿದ್ದವರು ಪಕ್ಷಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ರು ಎಂಬುದಾಗಿ ಹೇಳುವ ಮೂಲಕ ತ್ಯಾಗದ ಮಾತನಾಡಿದ್ದಾರೆ. https://kannadanewsnow.com/kannada/plastic-bottled-water-cannot-be-used-in-government-meetings-and-functions-across-the-state-cm-siddaramaiah-orders/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/shocking-act-in-bengaluru-transgenders-shave-head-of-transgender-woman-and-attack-her/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ತೃತೀಯ ಲಿಂಗಿಯೊಬ್ಬರನ್ನು ತಲೆ ಬೋಳಿಸಿರುವಂತ ತೃತೀಯ ಲಿಂಗಿಯರ ತಂಡವೇ, ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟ ನಗರದಲ್ಲಿ ಈ ಘಟನೆ ನಡೆದಿದೆ. ತೃತೀಯ ಲಿಂಗಿಯಾಗಿದ್ದಂತ ಸುಕನ್ಯಾರನ್ನು ಆಟೋದಲ್ಲಿ ಅಪಹರಿಸಿ ಹಲ್ಲೆ ಮಾಡಲಾಗಿದೆ. ಬೇರೊಂದು ತಂಡದ ಜೊತೆಗೆ ಹೋಗಿದ್ದಕ್ಕೆ ತೃತೀಯ ಲಿಂಗಿಗಳಾದಂತ ಪ್ರೀತಿ, ಚಿನ್ನಿ ಮತ್ತು ತಂಡವರು ಈ ಕೃತ್ಯವೆಸಗಿದ್ದಾರೆ. ಕೆ ಆರ್ ಪುರಂನಿಂದ ಅಪಹರಣ ಮಾಡಿದಂತ ತೃತೀಯ ಲಿಂಗಿಯರ ಮತ್ತೊಂದು ಗುಂಪು, ಬೊಮ್ಮನಹಳ್ಳಿಯವರೆಗೆ ಕರೆದು ತಂದು ಕೈಮುಗಿದು ಬೇಡಿಕೊಂಡರೂ ದೊಣ್ಣೆ, ಸೌಟ್, ಕೈಗೆ ಸಿಕ್ಕಂತ ವಸ್ತುಗಳು, ಕಾಲಿನಿಂದ ಒದ್ದು ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/city-accelerator-program-launched-to-accelerate-pm-surya-ghar-yojana/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು : ರಾಜ್ಯದಲ್ಲಿ ಪ್ರಧಾನ‌ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಶುಕ್ರವಾರ ಚಾಲನೆ ನೀಡಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ ಮೇಲ್ಛಾವಣಿ ಸೌರ (ಆರ್‌ಟಿಎಸ್‌) ಘಟಕಗಳ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂಎನ್‌ಆರ್‌ಇ), ಶಕ್ತಿ ಸಸ್ಟೇನಬಲ್‌ ಎನರ್ಜಿ ಫೌಂಡೇಶನ್‌, ನಾಲೆಡ್ಜ್ ಪಾರ್ಟನರ್‌ ಕೆಪಿಎಂಜಿ ಮತ್ತು ಬೆಸ್ಕಾಂ ಸಹಯೋಗದೊಂದಿಗೆ ಇಂದು ಸಿಟಿ ಆಕ್ಸಿಲರೇಟರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ‘ಸಿಟಿ ಆಕ್ಸಿಲರೇಟರ್‌’ ಉಪಕ್ರಮದಡಿ ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸೌರ ಮೇಲ್ಛಾವಣಿ ಘಟಕಗಳ ಸ್ಥಾಪನೆಗೆ ಉತ್ತೇಜನೆ ನೀಡಲಾಗುತ್ತದೆ. ಸಿಟಿ ಆಕ್ಸಿಲರೇಟರ್‌ ಕಾರ್ಯಕ್ರಮದಡಿ ವಿದ್ಯುತ್‌ ವಿತರಣಾ ಕಂಪನಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ತಾಂತ್ರಿಕ ನೆರವು ಒದಗಿಸಲಾಗುತ್ತದೆ. ಈ ಉಪಕ್ರಮವನ್ನು ದೇಶಾದ್ಯಂತ 100 ನಗರಗಳಲ್ಲಿ…

Read More