Subscribe to Updates
Get the latest creative news from FooBar about art, design and business.
Author: kannadanewsnow09
ಬೈಕೆರೆ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಹತ್ಯೆ ಹೆಚ್ಚು ಎನ್ನುವಂತ ಬಿಜೆಪಿಯ ಆರೋಪ ನಿರಾಧಾರವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೈಕೆರೆ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರು ಮಂಗಳೂರು ಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಹಂತಕರಿಗೆ, ದರೋಡೆಕೋರರಿಗೆ, ವಂಚಕರಿಗೆ ಜಾತಿ, ಧರ್ಮ ಇರುವುದಿಲ್ಲ. ಕಾನೂನಿನ ರೀತ್ಯ ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತದೆ. ಕಾಂಗ್ರೆಸ್ ಕಾರ್ಯಕಾಲದಲ್ಲಿ ಹಿಂದೂಗಳ ಹತ್ಯೆ ಹೆಚ್ಚುತ್ತದೆ ಎಂಬ ಬಿಜೆಪಿ ಆರೋಪ ನಿರಾಧಾರವಾದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ತಿಳಿಸಿದರು. ಜಾತಿಗಣತಿ- ಸಂಪುಟದಲ್ಲಿ ಅಭಿಪ್ರಾಯ ಮಂಡನೆ: ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಆದರೆ ಅದು ಕೇವಲ ಜಾತಿ ಗಣತಿ ಆಗದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ನೆಲೆಯಲ್ಲಿ ನಡೆಯಬೇಕು. ಆಗ ಮಾತ್ರ ವಂಚಿತರಿಗೆ…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡದ ಅಸ್ಮಿತೆಯಾಗಿರುವ ಸರ್ಕಾರಿ ಶಾಲೆಗಳು ಈಗಾಗಲೇ ಇಳಿಮುಖವಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಿಂದ ದುಸ್ಥಿತಿಗೆ ತಲುಪಿವೆ. ಸಾರ್ವಜನಿಕರ ಆಗ್ರಹಕ್ಕೆ ಮಣಿದು ಸಾವಿರಾರು ಕನ್ನಡ ಶಾಲೆಗಳನ್ನು ಆಂಗ್ಲ ಮಾಧ್ಯಮದ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ತಾಯ್ನುಡಿಯ ಶಿಕ್ಷಣದ ವೈಜ್ಞಾನಿಕ ಅವಶ್ಯಕತೆಯನ್ನು ಹಿನ್ನೆಲೆಗೆ ಸರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕನ್ನಡ ಕೇವಲ ಆಡುಭಾಷೆಯಾಗಿ ಉಳಿಯುವ ಅಪಾಯ ತಪ್ಪಿದ್ದಲ್ಲ ಎಂದು ಬಿಳಿಮಲೆ ಹೇಳಿದ್ದಾರೆ. ಅತಿಥಿ ಶಿಕ್ಷಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಆರವತ್ತು ಸಾವಿರ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಕಳೆದ ಸಾಲಿನಲ್ಲಿ ಕೇವಲ ನಲವತ್ತಮೂರು ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದು, ಇದು ಬೋಧನಾ ವ್ಯವಸ್ಥೆಯನ್ನು ಇನ್ನಷ್ಟು ಸಂಕೀರ್ಣವಾಗಿಸಿದೆ. ಅತಿಥಿ ಶಿಕ್ಷಕರಿಗೆ ನೀಡುವ…
ಬೆಂಗಳೂರು: ನಗರದಲ್ಲಿ ನಿನ್ನೆ ಬಿರುಗಾಳಿ ಸಹಿತ ಸುರಿದಂತ ಭಾರೀ ಮಳೆಗೆ ಮೊದಲ ಬಲಿಯಾಗಿತ್ತು. ಮರದಡಿ ಆಟೋ ನಿಲ್ಲಿಸಿಕೊಂಡು ನಿಂತಿದ್ದಂತ ಚಾಲಕನ ಮೇಲೆ ಮರದ ಕೊಂಬೆ ಬಿದ್ದು ಸಾವನ್ನಪ್ಪಿದ್ದನು. ಈ ಬೆನ್ನಲ್ಲೇ ಸಾರ್ವಜನಿಕರೇ ಗಾಳಿ ಮಳೆ ಸಂದರ್ಭದಲ್ಲಿ ಮರದ ಕೆಳಗೆ ನಿಲ್ಲಬೇಡಿ ಅಂತ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಬೆಂಗಳೂರಿನಾದ್ಯಂತ ನಿನ್ನೆ ದಿನಾಂಕ: 01-05-2025 ರಂದು ಸಂಜೆ ಸುರಿದ ಮಳೆಗೆ ಪಾಲಿಕೆಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿನ ಕತ್ರಿಗುಪ್ಪೆ ಗೋ-ಗ್ಯಾಸ್ ಬಂಕ್ನ ಸಮೀಪ ನಿಂತಿದ್ದ ಆಟೋ ಹಾಗೂ ಎರಡು ಕಾರುಗಳ ಮೇಲೆ ಒಂದು ಬೃಹತ್ ಮರವು ಮುರಿದು ಬಿದ್ದ ಪರಿಣಾಮ ಮಹೇಶ್ ಸುಮಾರು 40 ವರ್ಷ ಇವರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಎಂದಿದೆ. ಮುಂದುವರಿದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿರುತ್ತಾರೆ. ಗಾಳಿ ಮಳೆಗೆ ಎಲ್ಲಾ ವಲಯಗಳ ವ್ಯಾಪ್ತಿಯಲ್ಲಿ ಸುಮಾರು 23 ಮರಗಳು ಹಾಗೂ 52 ಬೃಹತ್ ರೆಂಬೆಗಳು ಬಿದ್ದಿರುವುದು ವರದಿಯಾಗಿರುತ್ತದೆ. ಅರಣ್ಯ ಘಟಕವು ಆಯಾ ವಲಯಗಳ ಅಧಿಕಾರಿಗಳೊಂದಿಗೆ ಜೊತೆಗೂಡಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 12,692 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗಿದೆ. ಇವರಿಗೆ ಪ್ರತಿ ತಿಂಗಳು 39,000 ವೇತನ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು…
ದಕ್ಷಿಣ ಕನ್ನಡ: ರಾಜೀನಾಮೆ ಕೊಡೋರು ಯಾವುತ್ತೂ ಕಂಡಿಷನ್ ಹಾಕೋದಿಲ್ಲ ಎಂಬುದಾಗಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದರ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ನನ್ನ ವಿರುದ್ಧ ನಿಂತು ಗೆದ್ದು ನೋಡು ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಶಿವಾನಂದ ಪಾಟೀಲ್ ಗೆ ಸವಾಲ್ ಹಾಕಿದ್ದರು. ಈ ಸವಾಲು ಸ್ವೀಕರಿಸಿದ್ದಂತ ಸಚಿವ ಶಿವಾನಂದ ಪಾಟೀಲ್ ಅವರು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಶಿವಾನಂದ ಪಾಟೀಲ್ ರಾಜೀನಾಮೆ ಪತ್ರದಲ್ಲಿ ಏನಿದೆ.? ವಿಜಯಪುರ ನಗರ ಶಾಸಕ ಬಸನಗೌಡ ಆರ್ ಪಾಟೀಲ್ ಅಂದರೆ ಯತ್ನಾಳ್ ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿದ್ದೇನೆ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹೀಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ ಇಲ್ಲವೇ ಎಂಬ ದೊಡ್ಡ ಯಕ್ಷಪ್ರಶ್ನೆ ನಿರ್ಮಾಣವಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯವರ ಹತ್ಯೆ ಆಗಿದ್ದನ್ನು ಪ್ರಸ್ತಾಪಿಸಿದರು. ಕರ್ನಾಟಕವು ಒಂದು ರೀತಿ ಜಂಗಲ್ ರಾಜ್ಯವಾಗಿದೆ ಎಂದು ಟೀಕಿಸಿದರು. ರಾಜ್ಯದ ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಕೇಳಿದರು. ರಾಜ್ಯದ ಕಾನೂನು- ಸುವ್ಯವಸ್ಥೆ ಬಿಗಡಾಯಿಸಿದೆ. ಲಾರಿ ತಂದು ಅಪಘಾತ ಮಾಡಿ, ಮಚ್ಚು- ಲಾಂಗುಗಳಿಂದ ಹತ್ಯೆ ಮಾಡುತ್ತಾರೆಂದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದ್ದು ಏನು ಪ್ರಯೋಜನ ಎಂದು ಟೀಕಿಸಿದರು. ಇದು ರಾಜ್ಯದ ಪೊಲೀಸ್ ಇಲಾಖೆ, ಗೃಹ ಸಚಿವರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳಿಗೊಂದು ದೊಡ್ಡ ಸವಾಲು ಎಂದು ತಿಳಿಸಿದರು. ಅದೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಆಗ ಡಿ.ಕೆ.ಶಿವಕುಮಾರ್ ಅವರು ನನ್ನ ಸೋದರರು (ಮೈ…
ನವದೆಹಲಿ: ಭಾರತದಲ್ಲಿ ಆಪಲ್ ತನ್ನ ಎರಡನೇ ಹಂತದ ಚಿಲ್ಲರೆ ವಿಸ್ತರಣೆಯನ್ನು ಈ ವರ್ಷದ ಕೊನೆಯಲ್ಲಿ ಅಧಿಕೃತವಾಗಿ ಪ್ರಾರಂಭಿಸುವುದಾಗಿ ದೃಢಪಡಿಸಿದೆ. ಹೊಸ ಮಳಿಗೆಗಳು ಗ್ರಾಹಕರೊಂದಿಗೆ ಸಂಪರ್ಕ ಸಾಧಿಸುವ ನಿರೀಕ್ಷೆಯಿದೆ. ಇಂದು, ಇದು ಎರಡು ಭೌತಿಕ ಮಳಿಗೆಗಳನ್ನು ಹೊಂದಿದೆ. ಆದರೆ ಶೀಘ್ರದಲ್ಲೇ ಇನ್ನೂ ನಾಲ್ಕು ಮಳಿಗೆಗಳನ್ನು ಸೇರಿಸಲಾಗುವುದು. ಇದು ಅದರ ಹೆಜ್ಜೆಗುರುತನ್ನು ಬಲಪಡಿಸುತ್ತದೆ ಮತ್ತು ಖರೀದಿದಾರರಿಗೆ ಐಫೋನ್ನಿಂದ ಮ್ಯಾಕ್, ಆಪಲ್ ವಾಚ್ ಮತ್ತು ಐಪ್ಯಾಡ್ವರೆಗೆ ವ್ಯಾಪಕ ಶ್ರೇಣಿಯ ಆಪಲ್ ಸಾಧನಗಳನ್ನು ಅನುಭವಿಸಲು ಮತ್ತು ಖರೀದಿಸಲು ಹೆಚ್ಚಿನ ಆಯ್ಕೆಗಳನ್ನು ನೀಡುತ್ತದೆ. ಆಪಲ್ನ ಆರ್ಥಿಕ Q2 2025 ರ ಗಳಿಕೆಯ ಸಭೆಯಲ್ಲಿ ಈ ಘೋಷಣೆ ಬಂದಿತು, ಅಲ್ಲಿ ಸಿಇಒ ಟಿಮ್ ಕುಕ್ ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಸ್ಥಿರ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಭಾರತದ ಚಿಲ್ಲರೆ ವಿಸ್ತರಣೆಯನ್ನು ದೃಢಪಡಿಸಿದ ಸಿಇಒ ಟಿಮ್ ಕುಕ್ ನಾವು ಭಾರತ ಸೇರಿದಂತೆ ಪ್ರಪಂಚದಾದ್ಯಂತದ ಹಲವೆಡೆ ಆ್ಯಪಲ್ ರಿಟೇಲ್ ಮಳಿಗೆಯನ್ನು ಸ್ಥಾಪಿಸಿದ್ದೇವೆ ಎಂದು ಕುಕ್ ಹೇಳಿದರು. “ಚಿಲ್ಲರೆ ವ್ಯಾಪಾರದಲ್ಲಿ, ತ್ರೈಮಾಸಿಕದಲ್ಲಿ ನಾವು…
ನವದೆಹಲಿ : ಸೈಬರ್ ದಾಳಿಯ ನಿರಂತರ ಅಲೆಯಲ್ಲಿ, “ಸೈಬರ್ ಗ್ರೂಪ್ HOAX1337” ಮತ್ತು “ನ್ಯಾಷನಲ್ ಸೈಬರ್ ಕ್ರೂ” ನಂತಹ ಪಾಕಿಸ್ತಾನ ಪ್ರಾಯೋಜಿತ ಹ್ಯಾಕರ್ ಗುಂಪುಗಳು ನಿನ್ನೆ ಕೆಲವು ವೆಬ್ಸೈಟ್ಗಳನ್ನು ಕದಿಯಲು ವಿಫಲ ಪ್ರಯತ್ನಗಳನ್ನು ಮಾಡಿದವು. ಈ ಹ್ಯಾಕಿಂಗ್ ಪ್ರಯತ್ನಗಳನ್ನು ಸೈಬರ್ ಭದ್ರತಾ ಸಂಸ್ಥೆಗಳು ತಕ್ಷಣವೇ ಗುರುತಿಸಿ ತಟಸ್ಥಗೊಳಿಸಿದವು. ಇತ್ತೀಚಿನ ಪ್ರಚೋದನೆಗಳಲ್ಲಿ, ಆರ್ಮಿ ಪಬ್ಲಿಕ್ ಸ್ಕೂಲ್ ನಗ್ರೋಟಾ ಮತ್ತು ಸುಂಜುವಾನ್ನ ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡು ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳನ್ನು ಅಪಹಾಸ್ಯ ಮಾಡುವ ಸಂದೇಶಗಳೊಂದಿಗೆ ವಿರೂಪಗೊಳಿಸಲು ಪ್ರಯತ್ನಿಸಲಾಯಿತು. ಮತ್ತೊಂದು ಘಟನೆಯಲ್ಲಿ, ಮಾಜಿ ಸೈನಿಕರ ಆರೋಗ್ಯ ಸೇವೆಗಳನ್ನು ಪೂರೈಸುವ ವೆಬ್ಸೈಟ್ ಅನ್ನು ವಿರೂಪಗೊಳಿಸಲಾಯಿತು. ಇದು ಪಾಕಿಸ್ತಾನದ ಹೆಚ್ಚುತ್ತಿರುವ ಹತಾಶೆಯನ್ನು ಸೂಚಿಸುತ್ತದೆ. ಮಕ್ಕಳು, ವೃದ್ಧಾಪ್ಯದ ಮಾಜಿ ಸೈನಿಕರು ಮತ್ತು ಇತರ ಮುಗ್ಧ ಜನರೊಂದಿಗೆ ಸಂಪರ್ಕ ಹೊಂದಿರುವ ವೆಬ್ಸೈಟ್ಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಹ್ಯಾಕರ್ಗಳು ಪದೇ ಪದೇ ಪ್ರಯತ್ನಗಳನ್ನು ಮಾಡಿದ್ದಾರೆ. ಮಾಜಿ ಸೈನಿಕರು ಮತ್ತು ಕುಟುಂಬಗಳ ವೇದಿಕೆಗಳ ಮೇಲೆ ದಾಳಿ ಮಾಡುವುದು ಪಾಕಿಸ್ತಾನದ ಮತ್ತೊಂದು…
ಮಂಗಳೂರು: ನಗರದಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಬೆನ್ನಲ್ಲೇ ಮಂಗಳೂರಿನ ಸುತ್ತಮುತ್ತಲ ಹಲವೆಡೆ ಮೂವರಿಗೆ ಚಾಕು ಇರಿದಿರುವಂತ ಘಟನೆ ನಡೆದಿದೆ. ಮಂಗಳೂರು ನಗರದ ಹೊರವಲಯದಲ್ಲಿನ ಕಣ್ಣೂರಲ್ಲಿ ಮಂಗಳೂರು ನಗರದ ಮಾರುಕಟ್ಟೆ ಕೆಲಸಕ್ಕೆ ಹೋಗುತ್ತಿದ್ದಂತ ಇರ್ಶಾದ್ ಎಂಬಾತನಿಗೆ ಐವರು ದುರ್ಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಈ ವೇಳೆಯಲ್ಲಿ ಸಮೀಪದ ಮನೆಯೊಂದಕ್ಕೆ ಹೋಗಿ ಅವಿತುಕೊಂಡು ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾನೆ. ಐಸಿಯುನಲ್ಲಿ ಇರ್ಶಾದ್ ಗೆ ಚಿಕಿತ್ಸೆ ಮುಂದುವರೆದಿದೆ. ಇನ್ನೂ ಮಂಗಳೂರಿನ ಕೊಂಚಾಡಿ ಹಾಗೂ ಉಳ್ಳಾಲದಲ್ಲಿಯೂ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಇದು ನಿನ್ನೆ ತಡರಾತ್ರಿ ನಡೆದಿದೆ. ಒಟ್ಟಾರೆ ಸುಹಾಸ್ ಶೆಟ್ಟಿ ಕೊಲೆಯ ನಂತ್ರ ನಗರದಲ್ಲಿ ಮೂವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. https://kannadanewsnow.com/kannada/narayanasamy-demands-resignation-of-aicc-president-mallikarjun-kharge/ https://kannadanewsnow.com/kannada/breaking-breaking-case-court-dismisses-ct-ravis-plea-seeking-quashing-of-case-against-laxmi-hebbalkar/
ಬೆಂಗಳೂರು: ಹಿಂದೂ ಕಾರ್ಯಕರ್ತರು, ಆರೆಸ್ಸೆಸ್, ಬಿಜೆಪಿ ವಿರುದ್ಧ ಪ್ರಚೋದನಕಾರಿ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕÀ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಖರ್ಗೆಯವರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಿ, ಎಲ್ಲರಿಗೂ ನ್ಯಾಯಕೊಡಿ ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಬಿಜೆಪಿ, ಆರ್ಎಸ್ಎಸ್ ಹಾಗೂ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇಂತಹ ಪ್ರಚೋದನಾತ್ಮಕ ಮಾತನಾಡಿದ್ದನ್ನು ಖಂಡಿಸುತ್ತೇನೆ ಎಂದರು. ಎಐಸಿಸಿ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆ ರವರು, ನಾವು ಮನಸ್ಸು ಮಾಡಿದರೆ ನೀವು ರಸ್ತೆಗಳಲ್ಲಿ ಓಡಾಡಲು ಆಗುವುದಿಲ್ಲ. ನಾವು ನಿಮ್ಮನ್ನು ಯಾವ ರೀತಿ ಹಿಡಿತಕ್ಕೆ ತರಬೇಕು ಎಂದು ತಿಳಿದಿದೆ ಎಂದು ಪ್ರಚೋದನಕಾರಿಯಾಗಿ ಭಾಷಣದಲ್ಲಿ ಹೇಳಿಕೆ ನೀಡುತ್ತಾರೆ. ಈ ರೀತಿ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯರಿದ್ದಾರೆಯೇ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರವು ಒಂದು…











