Subscribe to Updates
Get the latest creative news from FooBar about art, design and business.
Author: kannadanewsnow09
ಬಾಗಲಕೋಟೆ : ರಾಜ್ಯದ ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು. ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ…
ಮೈಸೂರು: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ಪೊಲೀಸರು ನೋಟಿಸ್ ನೀಡಿ ಶಾಕ್ ಕೊಟ್ಟಿದ್ದಾರೆ. ಕಾರಣ ಏನು? ಯಾಕೆ ಎನ್ನುವ ಬಗ್ಗೆ ಮುಂದೆ ಓದಿ. ಮೈಸೂರಲ್ಲಿ ಅಕ್ಟೋಬರ್.9ರಂದು ಬಾಲಕಿಯ ಮೇಲೆ ರೇಪ್ ಅಂಡ್ ಮರ್ಡರ್ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಆರೋಪಿ ಬಂಧಿಸಿದಂತ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಅನುಮಾನ ವ್ಯಕ್ತಪಡಿಸಿದ್ದರು. ಇದು ಭಾರೀ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜು ಅವರಿಗೆ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಹಾಗೂ ತನಿಖಾಧಿಕಾರಿಯು ನೋಟಿಸ್ ನೀಡಿದ್ದಾರೆ. ಪೊಲೀಸರು ನೀಡಿರುವಂತ ನೋಟಿಸ್ ನಲ್ಲಿ ಅ.9, 2025ರಂದು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾದಂತ ಪ್ರಕರಣ ಸಂಬಂಧ ತಾವು ಅಮೋಘ ಕರ್ನಾಟಕ ಎನ್ನುವಂತ ಸಾಮಾಜಿಕ ಜಾಲತಾಣದಲ್ಲಿ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಆರೋಪಿ ಅರೆಸ್ಟ್ ಮಾಡಿದ ಬಗ್ಗೆ ನಮಗೆ ವಿಶ್ವಾಸವಿಲ್ಲ. ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಹೇಳಿಕೆ…
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಚಾರದ ಗೀಳಿನಿಂದ ಅಪ್ರಸ್ತುತ ಮಾತನಾಡುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಬುದ್ಧಿ ಯಾವ ರೀತಿ ಓಡುತ್ತದೆ ಗೊತ್ತಿಲ್ಲ; ಮನಸ್ಥಿತಿ ಯಾವ ರೀತಿ ಇರುತ್ತದೆ ಎಂದು ಗೊತ್ತಿಲ್ಲ; ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆಯೋ ಇಲ್ಲವೋ ಎಂದು ತಿಳಿಸಿದರು. ಆರೆಸ್ಸೆಸ್ ಎಂದರೆ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ಇಂಥ ದೇಶಭಕ್ತ ಸಂಘಟನೆಯ ಚಟುವಟಿಕೆಗಳ ಮೇಲೆ ನಿಷೇಧ ಹೇರುವ ಪತ್ರ ಬರೆದಿದ್ದಾರೆ. ಸಮಾಜಕ್ಕೆ ಒಳಿತಾಗಬಾರದು; ವ್ಯಕ್ತಿ ನಿರ್ಮಾಣ ಆಗಬಾರದು ಎಂಬ ದುರುದ್ದೇಶದ ಪತ್ರವನ್ನು ಮುಖ್ಯಮಂತ್ರಿಗೆ ಬರೆದಿದ್ದಾರೆ ಎಂದು ಟೀಕಿಸಿದರು. ಈ ವ್ಯಕ್ತಿ ಯಾವಾಗಲೂ ಅಪ್ರಸ್ತುತ ಮಾತನಾಡುತ್ತಾರೆ. ಅಪ್ರಸ್ತುತ ಕೆಲಸಗಳನ್ನು ಮಾಡುತ್ತಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು, ಗ್ರಾಮೀಣಾಭಿವೃದ್ಧಿಯಲ್ಲಿ ಕ್ರಾಂತಿಕಾರಿಯಾದ ಕೆಲಸ ಮಾಡಲು ಅವಕಾಶವಿದೆ. ಐಟಿ, ಬಿಟಿ, ಎಲೆಕ್ಟ್ರಾನಿಕ್ಸ್ ಇಲಾಖೆಯಲ್ಲೂ ಕ್ರಾಂತಿಕಾರಿ ಕೆಲಸ ಮಾಡಬಹುದು; ಇವತ್ತು ನಮ್ಮ ಕರ್ನಾಟಕ, ನಮ್ಮ ಬೆಂಗಳೂರು…
ಬಾಗಲಕೋಟೆ: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್ಎಸ್ಎಸ್ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಸರ್ಕಾರದ ಸ್ಥಳಗಳಲ್ಲಿ ಆರ್ಎಸ್ಎಸ್ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದರು. ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನೆರವು ಪಡೆಯುವ ಸಹಕಾರಿ ಸಂಘಗಳ ನೌಕರರೂ ಲೋಕಾಯುಕ್ತ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಹಾಸನ ಜಿಲ್ಲೆಯ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ದಾಖಲಾಗಿರುವ ಆದಾಯ ಮೀರಿ ಆಸ್ತಿ ಪ್ರಕರಣ ಕುರಿತು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡುವಂತೆ ಸಂಘಕ್ಕೆ ಇದೇ ವೇಳೆ ನ್ಯಾಯಾಲಯ ಸೂಚಿಸಿದೆ. ಭ್ರಷ್ಟಾಚಾರದ ಆರೋಪದಲ್ಲಿ ಸಂಘದ ಕಾರ್ಯದರ್ಶಿ ಸಿ.ಎ.ಕೀರ್ತಿಕುಮಾರ್ ವಿರುದ್ಧ ತನಿಖೆಗೆ ಅನುಮತಿ ನಿರಾಕರಿಸಿ ನಿರ್ಣಯ ಕೈಗೊಂಡಿದ್ದ ಸಂಘದ ಕ್ರಮ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರು, ತಾನು ಸರ್ಕಾರಿ ಸಂಸ್ಥೆಯಲ್ಲ ಎಂದು ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ…
ಹುಬ್ಬಳ್ಳಿ: ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ (AISMA), ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ತನ್ನ ವಾರ್ಷಿಕ ಸಾಮಾನ್ಯ ಸಭೆ ಯಶಸ್ವಿಯಾಗಿ ನೆರವೇರಿತು. ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ವಿಭಾಗದಾದ್ಯಂತದ ಸ್ಟೇಷನ್ ಮಾಸ್ಟರ್ಗಳು ಉತ್ಸಾಹದಿಂದ ಭಾಗವಹಿಸಿದ್ದರು. ಸಂಘದ ಹಿಂದಿನ ಅವಧಿಯ ಸಾಧನೆಗಳ ವಿಮರ್ಶೆ, ಭವಿಷ್ಯದ ಕಾರ್ಯತಂತ್ರಗಳ ರೂಪರೇಷೆ, ಹಾಗೂ ನೂತನ ಪದಾಧಿಕಾರಿಗಳ ನೇಮಕವು ಸಭೆಯ ಪ್ರಮುಖಾಂಶಗಳಾಗಿದ್ದವು. ಹಿಂದಿನ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ನೂತನವಾಗಿ ನೇಮಕಗೊಂಡ ಪ್ರಮುಖ ಪದಾಧಿಕಾರಿಗಳ ವಿವರ ಇಂತಿದೆ: ವಿಭಾಗೀಯ ಅಧ್ಯಕ್ಷರು: ಮಾನವೇಂದ್ರ ಓಜಾ ಕಾರ್ಯಕಾರಿ ಅಧ್ಯಕ್ಷರು: ನೂರಪ್ಪ ಸಿ. ಲಮಾಣಿ ವಿಭಾಗೀಯ ಕಾರ್ಯದರ್ಶಿ: ರಂಜನ್ ಕುಮಾರ್ ಝಾ ವಿಭಾಗೀಯ ಹಣಕಾಸು ಕಾರ್ಯದರ್ಶಿ: ಪ್ರಕಾಶ್ ಕುಮಾರ್ ರಜಾಕ್ ಉಪಾಧ್ಯಕ್ಷರು: ಲೋಕೇಶ್ ಕುಮಾರ ಜಾಟವ ಮತ್ತು ಅಶೋಕ್ ಕುಮಾರ್ ಸಿಂಗ್ ಸಂಯುಕ್ತ ವಿಭಾಗೀಯ ಕಾರ್ಯದರ್ಶಿ: ಹೇಮೇಶ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಬರುಣ್ ಕುಮಾರ್…
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಎಂಸಿಸಿ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ ಹೆಚ್ಚುವರಿಯಾಗಿ ಸೀಟುಗಳನ್ನು ಮಂಜೂರು ಮಾಡಿದೆ. ಈ ಮೂಲಕ ವೈದ್ಯಕೀಯ ವ್ಯಾಸಂಗದ ಆಕಾಂಕ್ಷಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, UGNEET-25: ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ MCC ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಕಾರಣ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.15ರಂದು ಬೆಳಿಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದಿದ್ದಾರೆ. ಶಿವಮೊಗ್ಗದ ಸುಬ್ಬಯ್ಯ, ಬೆಂಗಳೂರು ನಾಗರೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ, ಮಂಗಳೂರಿನ ಎ.ಜೆ. ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ಸೀಟು ಹಂಚಿಕೆ ಮಾಡಿದ್ದು, ಅವುಗಳ ಪ್ರವೇಶಕ್ಕೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕಾಲೇಜುಗಳ ಶುಲ್ಕವನ್ನು ಗಮನಿಸಿ ಆಪ್ಷನ್ಸ್ ದಾಖಲಿಸಬೇಕು ಎಂದು ತಿಳಿಸಿದ್ದಾರೆ. https://twitter.com/KEA_karnataka/status/1977662290163044640?t=BirTUyxdh8PfRDYIelnnrQ&s=08 ಈಗಾಗಲೇ…
ಮಂಡ್ಯ : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ಎಂಬುವರು ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಬಳಿ ಲಂಚಕ್ಕೆ ಬೇಡಿ ಇಟ್ಟಿದ್ದರು. ಈ ಸಂಬಂಧ ಶಿವಲಿಂಗಯ್ಯ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಂಡ್ಯದ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ 5,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪಿಡಿಓ ಸಚಿನ್ ವಶಕ್ಕೆ ಪಡೆದಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಮೂಲಕ ಲಂಚ ಪಡೆಯುತ್ತಿದ್ದಾಗಲೇ ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ರೆಡ್…
ಶಿವಮೊಗ್ಗ : ಜಿಲ್ಲೆಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್.14ರ ನಾಳೆ, ಅಕ್ಟೋಬರ್.15ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ್ದು, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದೆ. ಅಕ್ಟೋಬರ್.14ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾAಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ,…
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದಾರೆ. ಇದರ ಹಿಂದೆ ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಕರ್ನಾಟಕ ಕ್ಯಾಬಿನೇಟ್ ಪುನಾರಚನೆ ಆಗೋದು ಎನ್ನಲಾಗಿತ್ತು.














