Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದರು. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ…
ಬೆಂಗಳೂರು: ಹೊಸ ಹೆಚ್ ಆರ್ ಪಾಲಿಸಿಯಿಂದಾಗಿ ರಾಜ್ಯದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಆತಂಕದಲ್ಲಿ ಇದ್ದರು. ಕೆಲಸ ಕಳೆದುಕೊಳ್ಳುವಂತ ಭೀತಿ ಕೂಡ ಎದುರಾಗಿತ್ತು. ಈ ಸಂದರ್ಭದಲ್ಲೇ ಎನ್ ಹೆಚ್ ಎಂ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡದಂತೆ ಸೂಚಿಸಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರ ಮೂಲಕ KSHCOEA ಸಂಘವು ಭೇಟಿ ಮಾಡಲಾಗಿತ್ತು. ರಾಜ್ಯದ ಎನ್ ಹೆಚ್ ಎಂ ಸಿಬ್ಬಂದಿಗಳಿಗಾಗಿ ಜಾರಿಗೊಳಿಸಲು ಹೊರಟಿಸುವಂತ ಹೆಚ್ ಆರ್ ಪಾಲಿಸಿ, ಅದರಿಂತ ನೌಕರರಿಗೆ ಆಗುವಂತ ತೊಂದರೆಗಳ ಬಗ್ಗೆ ಸಂಘದಿಂದ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೆ ತರಲಾಯಿತು. ರಾಷ್ಟೀಯ ಆರೋಗ್ಯ ಅಭಿಯಾನದ 30 ಸಾವಿರ ಸಿಬ್ಬಂದಿಗಳನ್ನು ಕಡ್ಡಾಯ ವರ್ಗಾವಣೆ ಮತ್ತು ಮರು ನೇಮಕಾತಿ ಮಾಡುವ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ದಿನಾಂಕ 28.10.2025 ರಂದು ಪ್ರಸ್ತಾವನೆ ಸಲ್ಲಿಸಲು ಆದೇಶ ಹೊರಡಿಸಿದ್ದನ್ನು KSHCOEA ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿಗಳ ಮುಂದೆ ಕೂಲಂಕುಶವಾಗಿ…
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ…
ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ. ಆರ್ ಟಿ ಓ ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಆರ್ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ…
ದಕ್ಷಿಣ ಕನ್ನಡ: ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ದಾಖಲಾಗಿದ್ದಂತ ಕೇಸಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೇಸ್ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡವೆಂದಿತ್ತು. ನಂತರ ಪ್ರಭಾಕರ ಭಟ್ ಗೆ ಮಧ್ಯಂತರ ಜಾಮೀನು ನೀಡಿತ್ತು. ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನನ್ನು ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಜೂರು ಮಾಡಿದೆ. https://kannadanewsnow.com/kannada/japan-hit-by-another-7-6-magnitude-earthquake-after-a-few-days/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/
ಜಪಾನ್ನಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಸತತ ಮೂರನೇ ದಿನವೂ ಆಗ್ನೇಯ ಏಷ್ಯಾದ ದೇಶದಲ್ಲಿ ಸಂಭವಿಸಿದ ಭೂಕಂಪವಾಗಿದೆ. ಜಪಾನಿನ ಮಾಪನದ ಪ್ರಕಾರ, ಭೂಕಂಪವು 5.9 ತೀವ್ರತೆಯದ್ದಾಗಿತ್ತು. ಇತ್ತೀಚಿನ ಭೂಕಂಪದ ನಂತರ ಯಾವುದೇ ಸುನಾಮಿ ಬೆದರಿಕೆಯನ್ನು ನೀಡಲಾಗಿಲ್ಲ. ಬುಧವಾರದ ಭೂಕಂಪವು ಮುಖ್ಯವಾಗಿ ಪೂರ್ವ ಅಮೋರಿ ಮತ್ತು ಹೊಕ್ಕೈಡೊ ಪ್ರಾಂತ್ಯಗಳಲ್ಲಿ ಕಂಡುಬಂದಿದೆ. ಭೂಕಂಪದ ಆಳ 30 ಕಿಲೋಮೀಟರ್ ಆಗಿತ್ತು. ಸೋಮವಾರ, ಜಪಾನ್ನಲ್ಲಿ 7.6 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದರೆ, ಮಂಗಳವಾರ, ದೇಶದ ಹೊಂಚೋ ಪಟ್ಟಣದಲ್ಲಿ 6.7 ತೀವ್ರತೆಯ ಕಂಪನಗಳು ಅನುಭವಿಸಿವೆ. https://kannadanewsnow.com/kannada/bmtc-to-purchase-4500-electric-buses-under-central-governments-pm-e-drive-scheme/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/
ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44…
ಬೆಳಗಾವಿ ಸುವರ್ಣಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ಉತ್ತರಿಸಿದರು. 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ. ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. https://twitter.com/KarnatakaVarthe/status/1998745244163260681 https://kannadanewsnow.com/kannada/finance-department-approves-filling-of-24300-vacant-posts-in-the-state-cm-siddaramaiah/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/
ಬೆಳಗಾವಿ ಸುವರ್ಣಸೌಧ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರ ಉದ್ದೇಶ ಹೊಂದಿದೆಯೇ ಎಂಬ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79694, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37572, ಒಳಾಡಳಿತದಲ್ಲಿ 28188 ಹುದ್ದೆಗಳು ಗರಿಷ್ಠ ಪ್ರಮಾಣದಲ್ಲಿ ಖಾಲಿ ಇವೆ. ಈ ರೀತಿ 2025-26ನೇ ಸಾಲಿನಲ್ಲಿ ಒಟ್ಟು 43 ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭರ್ತಿ ಮಾಡಲು ಆರ್ಥಿಕ ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. https://twitter.com/KarnatakaVarthe/status/1998744724971114638 https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/
ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ ತಿಳಿಯದು ಅಷ್ಟು ಭಕ್ತಿ ಬರುತ್ತಿರಲಿಲ್ಲ.. ಕೆಲ ತಿಂಗಳ ಹಿಂದೆ ಉಡುಗೊರೆಯಾಗಿ ಕೊಟ್ಟ ರಾಘವೇಂದ್ರ ಸ್ವಾಮಿಗಳ ಮೂರ್ತಿಯೊಂದು ಮನೆಗೆ ಬಂತು.. ದೇವರ ಮನೆಯಲ್ಲಿ ಇಟ್ಟು ಪೂಜಿಸಲು ಶುರು ಮಾಡಿದೆ.. ಪೂಜೆ ಮಾಡುವ ಸಮಯದಲ್ಲಿ ಏನಾದರು ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಪ್ಪ ತಂದೆ ಎಂದು ಭಕ್ತಿಯಿಂದ ಒಮ್ಮೆ ಕೇಳಿಕೊಂಡೆ ಅಷ್ಟೇ ನೋಡಿ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…














