Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಪಟ್ಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಕೊನೆಗೂ ಅಧಿಕಾರ ಹಸ್ತಾಂತರದ ಗುಟ್ಟನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಹೌದು.. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಿಯೇ ಇಲ್ಲ ಎಂಬುದಾಗಿದೆ. ಅಲ್ಲದೇ ನನಗೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ಇಷ್ಟವಿಲ್ಲ. ಪಕ್ಷ ಇದ್ದರೇ ನಾವೆಲ್ಲ. ಪಕ್ಷವನ್ನು ನಾನು ವೀಕ್ ಮಾಡೋದಿಲ್ಲ ಎಂದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರೇ ಬಜೆಟ್ ಮಂಡಿಸುತ್ತೇನೆ ಎಂದಿದ್ದಾರೆ. ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿ, ಪಕ್ಷಕ್ಕೆ ದುಡಿದು ಕೆಲಸ ಮಾಡಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/

Read More

ಬೆಂಗಳೂರು: ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವುದೇ? ಎಂದು ಕೇಳಿದ್ದಾರೆ. ಈ ಪ್ರಶ್ನೆಗಳು ನಮ್ಮದಲ್ಲ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಎಂಬುದು “ಪೇಮೆಂಟ್ ಸೀಟ್“ ಎಂದು ಯತ್ನಾಳ್ ಅವರೇ ಹೇಳಿದ್ದರು. ಮಂತ್ರಿಗಿರಿಗೆ…

Read More

ಬೆಂಗಳೂರು: ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಇಡೀ ಕುಟುಂಬದ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್ ಮಾಡಿ, ಸರ್ಕಾರ ಬಡವರ ಹೊಡ್ಡೆ ಮೇಲೆ ಹೊಡೆದಿದೆ. ಕೇವಲ ಒಬ್ಬರ ಕಾರಣಕ್ಕಾಗಿ ಇಡೀ ಕುಟುಂಬ ರೇಷನ್ ಕಾರ್ಡಿನ ರೇಷನ್ ಮೇಲೆ ಅವಲಂಬಿತವಾಗಿದ್ದದ್ದನ್ನು, ರದ್ದುಗೊಳಿಸಿದ ಬಳಿಕ ಅಕ್ಕಿಗಾಗಿ ಪರದಾಡುವ ಪರಿಸ್ಥಿತಿಯನ್ನು ತಂದಿಟ್ಟಿದೆ. ಕಾಲ ಬದಲಾದಂತೆ ಆದಾಯವೂ ಹೆಚ್ಚಾಗುತ್ತಿದೆ. ಆದಾಯದಂತೆ ಸರ್ಕಾರದ ನಿಯಮ, ಮಾನದಂಡಗಳು ಬದಲಾವಣೆಯಾಗಬೇಕಿತ್ತು. ಆದರೇ 2017ರಲ್ಲಿ ನಿಗದಿಯಾಗಿದ್ದಂತ ಮಾನದಂಡವನ್ನೇ ಇಟ್ಟುಕೊಂಡು, ಲಕ್ಷಾಂತರ ಕುಟುಂಬಗಳ ಬಿಪಿಎಲ್ ಕಾರ್ಡ್ ಅನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸಿಎಂ ಸಿದ್ಧರಾಮಯ್ಯ ಮಾತ್ರ ತಾನು ಮಾಡಿದ್ದಲ್ಲ, ಬದಲಾಗಿ ಕೇಂದ್ರ ಸರ್ಕಾರವೆಂದು ಗೂಬೆ ಕೂರಿಸುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳ ಕಚ್ಚಾಟದಲ್ಲಿ ಈಗ ಕೂಸು ಬಡವಾದಂತೆ ಬಿಪಿಎಲ್ ಕಾರ್ಡ್ ರದ್ದಾದಂತ ಅನೇಕ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುವಂತೆ ಆಗಿದೆ. ಒಂದು ಬಾರಿಗೆ ಅವಕಾಶ ಕೊಡಬೇಕಿತ್ತು ಬಿಪಿಎಲ್ ಕಾರ್ಡ್ ಹೊಂದಿರೋರು ಯಾರೆಲ್ಲ ಆದಾಯ ತೆರಿಗೆ ಪಾವತಿ ಮಾಡ್ತಾ ಇದ್ದೀರಿ ಅವರು ನಿಮ್ಮ…

Read More

ಬೆಂಗಳೂರು: ಆ ಕುಟುಂಬಕ್ಕೆ ಹೊಟ್ಟೆ ತುಂಬ ಉಣ್ಣೋದಕ್ಕೆ ಇದ್ದದ್ದೇ ಒಂದು ರೇಷನ್ ಕಾರ್ಡ್. ಸಿಟಿ ಸೇರಿದರೂ, ಹೊಟ್ಟೆಗೆ ಬಿಪಿಎಲ್ ಕಾರ್ಡ್ ಅಕ್ಕಿಯೇ ಗಟ್ಟಿಯಾಗಿತ್ತು. ಕಾರಣ ಕಡಿಮೆ ಸಂಬಳದಲ್ಲೂ, ಅನ್ನ ರಾಮಯ್ಯ ಎಂಬ ಕೀರ್ತಿಗಳಿಸಿದ್ದಂತ ಸಿದ್ಧರಾಮಯ್ಯ ಕೊಡುತ್ತಿದ್ದ 10 ಕೆಜಿ ಅಕ್ಕಿ ಹೊಟ್ಟೆ ತುಂಬಿಸುತ್ತಿತ್ತು. ಆದರೇ ಕಂಪನಿಯವರು ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಬೇಕು ಎಂದಿದ್ದಕ್ಕೆ ಮಾಡಿದ್ದರ ಕಾರಣ, ಬಿಪಿಎಲ್ ಕಾರ್ಡ್ ರದ್ದಗೊಂಡು ವ್ಯಥೆ ಪಡುವಂತಾಗಿದೆ. ಆ ಬಿಪಿಎಲ್ ಕಾರ್ಡ್ ರದ್ದಾದವರ ಕಥೆ ಮುಂದೆ ಓದಿ. ರಾಜ್ಯದ ಹಳ್ಳಿಯೊಂದರಲ್ಲಿ ಅಪ್ಪ-ಮಗ ಇಬ್ಬರಿದ್ದರು. ಉದ್ಯೋಗ ಹರಸಿ ಬಂದಾಗ, ಹೆಚ್ಚು ಓದಿಲ್ಲದ ಅವರಿಗೆ ಜೀವನ ನಿರ್ವಹಣೆಗೆ ಸೇರಿದ್ದು ಸ್ವಿಗ್ಗಿಯಲ್ಲಿ ಪುಡ್ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕಷ್ಟ ಪಟ್ಟು ದುಡಿದಂತ ದುಡ್ಡಿನಲ್ಲೇ ಕಂಪನಿಯಿಂದ ಟಿಡಿಎಸ್ ಕಡಿತಗೊಳಿಸಿ ಹಣವನ್ನು ನೀಡಲಾಗುತ್ತಿತ್ತು. ಒಂದು ವರ್ಷಗಳ ಹಿಂದೆ ಕೆಲಸ ಬಿಟ್ಟಾಗ, ಕಂಪನಿಯವರು ನಿಮ್ಮ ಕಡಿತದ ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಿ ಎಂಬುದಾಗಿ ಸೂಚಿಸಿತ್ತು. ಸ್ವಿಗ್ಗಿ ಕಂಪನಿಯವರು ಹೇಳಿದ್ದ…

Read More

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.  ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ…

Read More

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಲುವಾಗಿ ನಡೆದ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ (SCA, SCB, SCC) ಸಂಬಂಧ ದಾಖಲೆ ಸಲ್ಲಿಸದಿರುವ ಅಭ್ಯರ್ಥಿಗಳು ನ.25 ಮತ್ತು 26 ರಂದು ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ ವೇಳೆಗೆ ಅನೇಕರು ತಹಶೀಲ್ದಾರ್ ಅವರಿಂದ ಒಳ ಮೀಸಲಾತಿ ಕುರಿತ ಪ್ರಮಾಣ ಪತ್ರಗಳನ್ನು ಪಡೆಯಲು ಆಗಿರಲಿಲ್ಲ ಎಂದು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ ಕಾರಣಕ್ಕೆ ಈ ಅನುಕೂಲ ಮಾಡಲಾಗಿದೆ. ಯಾರೆಲ್ಲ ದಾಖಲೆಗಳನ್ನು ಪರಿಶೀಲನಾ ಅರ್ಜಿ ಜತೆ ಸಲ್ಲಿಸುತ್ತಾರೊ ಅಂತಹವರನ್ನು ಸದರಿ ಪ್ರವರ್ಗದಡಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/whatever-siddaramaiah-says-it-is-the-same-as-the-scriptures-dcm-d-k-shivakumar/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/

Read More

ಬೆಂಗಳೂರು: ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸಲು ಸಂಘಟಿತ ನಡೆಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುದ್ದಿಯನ್ನು ತಲುಪಿಸುವ ನಿಟ್ಟಿನಲ್ಲಿ ಧಾವಂತ ಬೇಡ. ಸರಿಯಾದ ಸುದ್ದಿಯನ್ನು ಜನರಿಗೆ ತಲುಪಿಸುವುದು ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು. ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ. ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ…

Read More

ಬೆಂಗಳೂರು: ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೇ ಆಗಲಿ ಮಾತನಾಡಿಲ್ಲ. ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಾ ಇದ್ದೀರಿ. ನೀವುಗಳೇ ಅನವಶ್ಯಕ ಗೊಂದಲ ಮೂಡಿಸುತ್ತಿದ್ದೀರಿ. ನನಗೂ ಹಾಗೂ ಯಾರಿಗೂ ಗೊಂದಲಗಳಿಲ್ಲ. ಏನಾದರೂ ಇದ್ದರೆ ನಾನು ಹಾಗೂ ಪಕ್ಷದ ಹೈಕಮಾಂಡ್ ಬಗೆಹರಿಸಿಕೊಳ್ಳುತ್ತೇವೆ. ಏನೇ ತೀರ್ಮಾನ ಆಗಿದ್ದರು ಅದು ಒಂದು ಕೊಠಡಿಯ ಆಂತರಿಕ ಚೌಕಟ್ಟಿನ ಒಳಗೆ ಆಗಿರುತ್ತದೆ” ಎಂದರು.…

Read More

ಯಾದಗಿರಿ : ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿ ನಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಆದರೆ, ಅದರ ಪೂರೈಕೆಯನ್ನು ಸಮರ್ಪಕಗೊಳಿಸುವುದು ಅವಶ್ಯವಾಗಿದೆ. ಹೀಗಾಗಿ ಪಂಪ್ ಸೆಟ್ ಗಳಿಗಾಗಿ ಹಾಗೂ ಇತರೆ ಅವಶ್ಯಕತೆಗಳು ಮತ್ತು ಕೈಗಾರಿಕೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ ಆಗದಂತೆ ನಿಗಾವಹಿಸಬೇಕು. ಜತೆಗೆ ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗದಂತೆ ನೋಡಿಕೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಈಗಾಗಲೇ ಸ್ಥಾಪಿಸಿರುವ ವಿದ್ಯುತ್ ಉಪ…

Read More

ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಚುನಾವಣೆಗೆ ತಡೆಯಾಜ್ಞೆ ತಂದಿರುವುದನ್ನು ತೆರವುಗೊಳಿಸಲು ನಮ್ಮ ಸಮಿತಿ ಪ್ರಯತ್ನಶೀಲವಾಗಿದೆ ಎಂದು ಪ್ರತಿಷ್ಟಾನದ ಉಪಾಧ್ಯಕ್ಷ ಸುಂದರ ಸಿಂಗ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ.30ಕ್ಕೆ ಚುನಾವಣೆ ನಿಗಧಿಯಾಗಿದ್ದು, ಎಲ್ಲ ಪ್ರಕ್ರಿಯೆ ಮುಗಿದಿರುವ ಸಂದರ್ಭದಲ್ಲಿಯೆ ಕೊರಮ ಸಮಾಜದವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದರು. ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನವು ಜಿಲ್ಲಾ ನ್ಯಾಯಾಲಯದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದೆ. ಜಿಲ್ಲಾ ನ್ಯಾಯಾಲಯವು ದಿನಾಂಕ 11-07-2025ರಂದು 11-10-2025ರೊಳಗೆ ಚುನಾವಣೆ ನಡೆಸಲು ಆದೇಶ ನೀಡಿತ್ತು. ಈಗಾಗಲೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಚುನಾವಣೆಗೆ ಯಾವುದೇ ಅಡೆತಡೆ ಬರಬಾರದು ಎಂದು ನಮ್ಮ ಪ್ರತಿಷ್ಟಾನದ ವತಿಯಿಂದ ಕೆವಿಯಟ್ ಸಹ ತರಲಾಗಿತ್ತು. ಆದರೆ ಕೊರಮ ಸಮಾಜದವರು ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿಲ್ಲ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ನ್ಯಾಯಾಲಯ…

Read More