Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ…
ಬೆಂಗಳೂರು : “ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೇಶವ ಪ್ರಸಾದ್ ಅವರು ಬೆಂಗಳೂರಿನ ಕಸ ವಿಲೇವಾರಿ ಹಾಗೂ ಕಸದ ಸೆಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.” ಎಂದು ತಿಳಿದರು. ಕಸದ ಮಾಫಿಯಾ ಭೇದಿಸುವುದು ಸುಲಭವಿಲ್ಲ “ಬೆಂಗಳೂರಿನ ಕಸದ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲು ಆಗುವುದಿಲ್ಲ. ನಿಮ್ಮ ಬಿಜೆಪಿ ಸರ್ಕಾರ…
ಬೆಂಗಳೂರು : “ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್ ಜವರಾಯಿ ಗೌಡ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಜಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “15-5-2025ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಣೆ ಮಾಡಿದ್ದು, 19-07-2025ರಂದು ಐದು ಪಾಲಿಕೆ ರಚಿಸಲಾಗಿದೆ. 18-08-2025ರ ವರೆಗೂ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ” ಎಂದು ತಿಳಿಸಿದರು. “ವಾರ್ಡ್ ಗಳ…
ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲಾಗಿತ್ತು. ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅಂದಹಾಗೇ ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.23ಕ್ಕೆ ಮುಂದೂಡಿದೆ. https://kannadanewsnow.com/kannada/ksrtc-driver-co-conductor-posts-2nd-selection-list-announced/ https://kannadanewsnow.com/kannada/approval-of-the-karnataka-essential-services-maintenance-amendment-bill-2025-in-the-legislative-council/
ಬೆಂಗಳೂರು: ತುಂಗಭದ್ರಾ ಜಲಾಶಯದ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಈಗಾಗಲೇ 6 ಗೇಟ್ ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಮೇಲೆ ಸದಸ್ಯರುಗಳಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್ ಮತ್ತು ಬಸನಗೌಡ ತುರುವಿಹಾಳ ಇವರುಗಳು ತುಂಗಾಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಉತ್ತರ ನೀಡಿದ ಉಪಮುಖ್ಯಮಂತ್ರಿಗಳು, ತುಂಗಾಭದ್ರ ಜಲಾಶಯದ ಬೋರ್ಡ್ ನವರು 1633 ಅಡಿ ಬದಲಿಗೆ 1626 ಅಡಿ ನೀರನ್ನು ಸಂಗ್ರಹಿಸಲು ಸೂಚಿಸಿದ್ದಾರೆ. ತಾಂತ್ರಿಕ ತೊಂದರೆಯಿಂದಾಗಿ ರೈತರಿಗೆ ಈ ಬಾರಿ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ. ರೈತರ ಹಿತ ಕಾಪಾಡಲು ಸರ್ಕಾರವು ಬದ್ಧವಾಗಿದೆ. ಕುಡಿಯುವ ನೀರು ಕೈಗಾರಿಕೆಗಳಿಗೆ ನೀರು ಕೊಡಲಾಗುವುದು. ದುರಸ್ತಿ ಕಾಮಗಾರಿಗಳನ್ನು ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು. https://kannadanewsnow.com/kannada/ksrtc-driver-co-conductor-posts-2nd-selection-list-announced/ https://kannadanewsnow.com/kannada/approval-of-the-karnataka-essential-services-maintenance-amendment-bill-2025-in-the-legislative-council/
ಬೆಂಗಳೂರು : ವಿಧಾನಸಭೆಯ ಅಧಿವೇಶನದಲ್ಲಿ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು 2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿರ್ವಹಣೆ) ವಿಧೇಯಕ,2025ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ)ವಿಧೇಯಕ, 2025ನೇ ಸಾಲಿನ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿ ಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಫ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು 2025ನೇ ಸಾಲಿನ ಕರ್ನಾಟಕ ಲಿಫ್ಟ್ ಗಳ, ಎಸ್ಕಲೇಟರ್ ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್ ಗಳ (ತಿದ್ದುಪಡಿ) ವಿಧೇಯಕವನ್ನು ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರು 2025ನೇ ಸಾಲಿನ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ)ವಿಧೇಯಕಗಳನ್ನು ಮಂಡಿಸಿದರು. ವಿಧೇಯಕಗಳ ಪ್ರಸ್ತಾವನೆಗಳನ್ನು ಅಂಗೀಕರಿಸಲಾಯಿತು
ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಧರ್ಮಸ್ಥಳ ಪೊಲೀಸರು ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೂ ಅವರ ಮನೆಗೆ ತೆರಳಿದ್ದರು. ಅವರು ನಾಪತ್ತೆಯಾಗಿದ್ದಾಗಿ ತಿಳಿದು ಬಂದಿತ್ತು. ಈ ಬೆನ್ನಲ್ಲೇ ಸಮೀರ್ ಎಂ.ಡಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಮಂಗಳೂರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/approval-of-the-karnataka-essential-services-maintenance-amendment-bill-2025-in-the-legislative-council/ https://kannadanewsnow.com/kannada/ksrtc-driver-co-conductor-posts-2nd-selection-list-announced/
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ( ತಿದ್ದುಪಡಿ) ವಿಧೇಯಕ 2025 ಅನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನ ಪರಿಷತ್ ನಲ್ಲಿ ಮಂಡಿಸಿದರು. ಸದನದ ಸದಸ್ಯರಿಂದ ಪರ್ಯಾಲೋಚನೆಗೊಂಡ ನಂತರ ವಿಧೇಯಕ ಅಂಗೀಕಾರಗೊಂಡಿತು. ವಿಧಾನ ಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಪಟ್ಡಣ ಮತ್ತು ಗ್ರಾಮಾಂತರ ಯೋಜನೆ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ 2025 ಹಾಗೂ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025 ಅನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ ಅವರು ವಿಧಾನ ಪರಿಷತ್ ನಲ್ಲಿ ಮಂಡಿಸಿದರು. ಸದನದ ಸದಸ್ಯರಿಂದ ಪರ್ಯಾಲೋಚನೆಗೊಂಡ ನಂತರ ವಿಧೇಯಕಗಳು ಅಂಗೀಕಾರಗೊಂಡವು ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ 2025 ಹಾಗೂ ಕರ್ನಾಟಕ ವೈದ್ಯಕೀಯ ನೋಂದಣಿ ( ತಿದ್ದುಪಡಿ) ವಿಧೇಯಕ 2025 ಅನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್…
ವಿಧಾನಸಭೆ: ರಾಜ್ಯದಲ್ಲಿರುವ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದ 2025 ನೇ ಸಾಲಿನ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ವಿಧೇಯಕವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಸ್ವಾಗತಿಸಿದ್ದಾರೆ. ಗುರುವಾರ ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಕುರಿಗಾಹಿಗಳ ಪರವಾಗಿ ಮಂತ್ರಿಗಳು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕುರಿಗಾಹಿಗಳೆಂದರೆ ಕೇವಲ ಕುರುಬರೇ ಅಲ್ಲ. ಒಂದು ಧರ್ಮಕ್ಕೆ, ಜಾತಿಗೆ ಸೀಮಿತವಾಗಿರದೇ ರಾಜ್ಯದ ಬಹುತೇಕ ಹಳ್ಳಿಗಳ ಎಲ್ಲಾ ಸಮುದಾಯಗಳಿಗೆ ಸೇರಿದ ಜನರು ಕುರಿಗಳನ್ನು ಸಾಕುತ್ತಿದ್ದಾರೆ. ಈ ಮೂಲಕ ಕುರಿ ಸಾಕಾಣಿಕೆ ಒಂದು ಉದ್ಯೋಗವಾಗಿದೆ. ಜೀವನ ಸಾಗಿಸಲು ಇದೊಂದು ಮಾರ್ಗವಾಗಿದೆ. ಕುರಿಗಾಹಿಗಳದ್ದು ಶತಮಾನಗಳಷ್ಟು ಹಳೆಯದಾದ ಸಂಪ್ರದಾಯವಾಗಿದೆ ಎಂದರು. ರಾತ್ರೋರಾತ್ರಿ ಕುರಿಗಳನ್ನು ಕಳ್ಳತನ ಮಾಡುವ ಪ್ರಕರಣಗಳು ಜರುಗುತ್ತಿವೆ. ನಾಲ್ಕೈದು ತಿಂಗಳ ಹಿಂದೆ ಬಾಗಲಕೋಟೆಯಲ್ಲಿ ಕುರಿಗಾಹಿಯೊಬ್ಬರನ್ನು ಕೊಲೆ ಮಾಡಿ ಕುರಿಗಳನ್ನು ಕದ್ದೊಯ್ದ ಪ್ರಕರಣ ನಡೆದಿದೆ. ಇಂತಹ ಕುರಿಗಾಹಿಗಳಿಗೆ ಕಾನೂನಾತ್ಮಕವಾಗಿ ರಕ್ಷಣೆ…
2025 ರ ಏಷ್ಯಾ ಕಪ್ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯು ಕ್ರಿಕೆಟ್ಗಿಂತಲೂ ಹೆಚ್ಚು ದೂರದಲ್ಲಿರುವ ತೀವ್ರ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ಈ ವರ್ಷದ ಆರಂಭದಲ್ಲಿ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸಾರ್ವಜನಿಕರ ಭಾವನೆಗಳು ಹೆಚ್ಚುತ್ತಿರುವ ಕಾರಣ, ಬಹಿಷ್ಕಾರದ ಕರೆಗಳು ಜೋರಾಗಿ ಬೆಳೆದವು. ಆದಾಗ್ಯೂ, ಭಾರತವನ್ನು ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ತಡೆಯಲಾಗುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವಾಲಯ ಹೇಳಿದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಕಡೆಗೆ ಭಾರತದ ನೀತಿ ಪಾಕಿಸ್ತಾನದೊಂದಿಗಿನ ಕ್ರೀಡೆಗಳ ಬಗ್ಗೆ ಭಾರತದ ನಿಲುವು ಅದರ ವಿಶಾಲ ರಾಜತಾಂತ್ರಿಕ ವಿಧಾನಕ್ಕೆ ಅನುಗುಣವಾಗಿದೆ ಎಂದು ಸರ್ಕಾರ ಪುನರುಚ್ಚರಿಸಿತು. ‘ಪಾಕಿಸ್ತಾನವನ್ನು ಒಳಗೊಂಡ ಕ್ರೀಡಾಕೂಟಗಳಿಗೆ ಭಾರತದ ವಿಧಾನವು ಆ ದೇಶದೊಂದಿಗೆ ವ್ಯವಹರಿಸುವಾಗ ಅದರ ಒಟ್ಟಾರೆ ನೀತಿಯನ್ನು ಪ್ರತಿಬಿಂಬಿಸುತ್ತದೆ. ಪರಸ್ಪರರ ದೇಶದಲ್ಲಿ ದ್ವಿಪಕ್ಷೀಯ ಕ್ರೀಡಾಕೂಟಗಳಿಗೆ ಸಂಬಂಧಿಸಿದಂತೆ, ಭಾರತೀಯ ತಂಡಗಳು ಪಾಕಿಸ್ತಾನದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸುವುದಿಲ್ಲ. ಪಾಕಿಸ್ತಾನಿ ತಂಡಗಳನ್ನು ಭಾರತದಲ್ಲಿ ಆಡಲು ನಾವು ಅನುಮತಿಸುವುದಿಲ್ಲ. ಭಾರತದಲ್ಲಿ ಅಥವಾ ವಿದೇಶಗಳಲ್ಲಿ ಅಂತರರಾಷ್ಟ್ರೀಯ ಮತ್ತು ಬಹುಪಕ್ಷೀಯ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ, ನಾವು ಅಂತರರಾಷ್ಟ್ರೀಯ ಕ್ರೀಡಾ ಸಂಸ್ಥೆಗಳ ಅಭ್ಯಾಸಗಳು ಮತ್ತು ನಮ್ಮ…













