Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರವು ಕಷ್ಟದಲ್ಲಿರುವಂತ ಕಲಾವಿದರಿಗೆ ಮನಮಿಡಿದಿದೆ. ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ. 2025-26ನೇ…
ಹುಬ್ಬಳ್ಳಿ: ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1ರಿಂದ ಡಿಸೆಂಬರ್ 31, 2025 ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ. ಬೀರೂರು ನಿಲ್ದಾಣದಲ್ಲಿ: ರೈಲು ಸಂಖ್ಯೆ 16587/16588 ಯಶವಂತಪುರ–ಬಿಕಾನೇರ್–ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯುತ್ತದೆ. ರಾಮಗಿರಿ ನಿಲ್ದಾಣದಲ್ಲಿ: ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರಿಸುತ್ತವೆ: 1. ರೈಲು ಸಂಖ್ಯೆ 17325/17326 ಬೆಳಗಾವಿ – ಮೈಸೂರು – ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್ಪ್ರೆಸ್. 2. ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ದೈನಂದಿನ ಎಕ್ಸ್ಪ್ರೆಸ್. https://kannadanewsnow.com/kannada/if-the-elections-are-held-now-karnataka-congress-faces-a-humiliating-defeat-bjps-position-doubles-survey/ https://kannadanewsnow.com/kannada/entrepreneur-sunita-timmengowda-had-a-special-darshan-and-arati-at-tirupati/
ಕೆಎನ್ಎನ್ ಡಿಜಿಟಲ್ ಡೆಸ್ಕ್: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಕೇವಲ ಎರಡು ವರ್ಷಗಳಲ್ಲಿ, ರಾಜ್ಯದಲ್ಲಿ ರಾಜಕೀಯ ಗಾಳಿ ನಾಟಕೀಯವಾಗಿ ಬದಲಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದ ರಾಜ್ಯವು ಈಗ ಅದನ್ನು ಅಗಾಧವಾಗಿ ತಿರಸ್ಕರಿಸುತ್ತಿದೆ. ಜನಸಂಖ್ಯಾಶಾಸ್ತ್ರ, ಸಮುದಾಯಗಳು ಮತ್ತು ಪ್ರದೇಶಗಳಲ್ಲಿ ಬೆಳೆಯುತ್ತಿರುವ ಈ ಅಸಮಾಧಾನವನ್ನು ಪೀಪಲ್ಸ್ ಪಲ್ಸ್ – ಕೊಡೆಮೊ ಸಮೀಕ್ಷೆಯು ಬಹಿರಂಗಪಡಿಸುತ್ತದೆ. ಇದು ಕಾಂಗ್ರೆಸ್ ಸರ್ಕಾರದ ಆಳವಾದ ವೈಫಲ್ಯಗಳು ಮತ್ತು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಹೆಚ್ಚುತ್ತಿರುವ ಬೆಂಬಲದ ಅಲೆಯನ್ನು ಬಹಿರಂಗಪಡಿಸುತ್ತದೆ. ಈ ಮೂಲಕ ಈಗ ಚುನಾವಣೆ ನಡೆದ್ರೆ ಕಾಂಗ್ರೆಸ್ ಸೋಲು ಖಚಿತ, ಬಿಜೆಪಿ ಹೆಚ್ಚು ಸ್ಥಾನ ಪಡೆದು ಗೆಲುವು ನಿಶ್ಚಿತ ಎಂಬುದಾಗಿ ಎತ್ತಿ ತೋರಿಸಿದೆ. 2023 ರ ಚುನಾವಣಾ ಫಲಿತಾಂಶಗಳಿಗಿಂತ ನಾಟಕೀಯವಾಗಿ ಹಿಮ್ಮುಖವಾಗಿ, ಇಂದು ಚುನಾವಣೆ ನಡೆದರೆ ಬಿಜೆಪಿಯ ಸ್ಥಾನಗಳ ಸಂಖ್ಯೆ ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ. ಈ ಸ್ಪೋಟಕ ಬದಲಾವಣೆಯು ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳಲ್ಲಿ ಈಡೇರಿಸದ ಭರವಸೆಗಳು, ಗಗನಕ್ಕೇರುತ್ತಿರುವ ಬೆಲೆಗಳು ಮತ್ತು…
ಬೆಂಗಳೂರು: ವಿಶ್ವ ವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ತಮ್ಮ ಅನುಪಮ ಧಾರ್ಮಿಕ ಸೇವೆಗಳ ಮೂಲಕ ಚಿರಪರಿಚಿತರಾಗಿರುವ ಕರ್ನಾಟಕದ ಉದ್ಯಮಿ ಸುನಿತಾ ತಿಮ್ಮೇಗೌಡ ಅವರು ಬುಧವಾರ (ಜೂನ್ 25ರಂದು) ಕುಟುಂಬ ಸಮೇತರಾಗಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ದರ್ಶನ ಪಡೆದರು. ವೈಕುಂಠ ಏಕಾದಶಿ ಸಮಯದಲ್ಲಿ ತಿರುಪತಿ ದೇವಾಲಯಕ್ಕೆ ಅತ್ಯಾಕರ್ಷಕ ಹೂವಿನ ಅಲಂಕಾರ ಸೇವೆಯನ್ನು ನಡೆಸಿಕೊಡುವ ಮೂಲಕ ತಿಮ್ಮೇಗೌಡರ ಕುಟುಂಬವು ಪ್ರಸಿದ್ಧವಾಗಿದೆ. ವಿದೇಶಿ ಹೂವುಗಳನ್ನು ಬಳಸಿ ದೇವಾಲಯದ ಅಂದವನ್ನು ಹೆಚ್ಚಿಸುವ ಮೂಲಕ ಅವರು ತಿರುಪತಿ ದೇವಸ್ಥಾನದ ಭಕ್ತರಿಂದ ಮೆಚ್ಚುಗೆ ಗಳಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ, ಬುಧವಾರದ ಭೇಟಿಯ ವೇಳೆ ಅವರಿಗೆ ವಿಶೇಷ ಆರತಿಯನ್ನು ಮಾಡುವ ಗೌರವ ಅವಕಾಶ ಲಭಿಸಿತು. ಸುನಿತಾ ತಿಮ್ಮೇಗೌಡ ಅವರೊಂದಿಗೆ ಅವರ ತಂದೆ, ಸುಧಾ ಕೋಆಪರೇಟಿವ್ ಬ್ಯಾಂಕ್ನ ಅಧ್ಯಕ್ಷರಾಗಿರುವ ಎಂ. ತಿಮ್ಮೇಗೌಡ, ಸ್ವಾಗತ್ ಗೌಡ ಮತ್ತು ಪೋತರಾಜು ಅವರಿದ್ದರು. ಈ ಭೇಟಿಯ ಸಂದರ್ಭದಲ್ಲಿ, ಸುನಿತಾ ತಿಮ್ಮೇಗೌಡ ಅವರು ಮುಂದಿನ ವರ್ಷದ ವೈಕುಂಠ ಏಕಾದಶಿ ವೇಳೆಗೆ ದೇವರಿಗೆ ನವರತ್ನಗಳ ವಿಶೇಷ ಅಲಂಕಾರವನ್ನು ಮಾಡುವ ಮಹತ್ವಾಕಾಂಕ್ಷೆಯ…
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಮ್ಮ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಡಾ. ಶಾಲಿನಿ ರಜನೀಶ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ, ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆಯನ್ನು ನೀಡದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ನೀಡಿರುವ ತಮ್ಮ ಎಚ್ಚರಿಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಮುಖ್ಯಮಂತ್ರಿಗಳು ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿಯನ್ನು ಪಡೆಯಲು ನೀಡಿರುವ ನಿರ್ದೇಶನವನ್ನು ಉಲ್ಲೇಖಿಸಿರುವುದು ಕೂಡ ಸರ್ಕಾರದ ಕನ್ನಡಪರ ನಿಲುವನ್ನು ಪ್ರಭಾವಶಾಲಿಯಾಗಿ ಅಭಿವ್ಯಕ್ತಿಸಿದೆ. ಅಧಿಕಾರಿ ವರ್ಗ ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಇನ್ನಷ್ಟು ಮುತುವರ್ಜಿಯಿಂದ ಕನ್ನಡದ ಬಳಕೆಗೆ ಮುಂದಾಗಬೇಕೆಂದು ಆಶಿಸಿದ್ದಾರೆ.…
ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ನಿರ್ದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದಿದ್ದಾರೆ. ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಲು ತಿಳಿಸಲಾಗಿದೆ. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟವಾಗಿ ಸೂಚನೆಗಳನ್ನು ನೀಡಲಾಗಿದೆ. ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡುವಂತೆ ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಸುರಕ್ಷಿತ ಕಾಂತಿವರ್ಧಕ ಹಾಗೂ ಔಷಧಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಾಂತಿವರ್ಧಕಗಳನ್ನು ಬಳಸುವಂತವರಿಗೆ ಬಳಸದಂತೆ ಎಚ್ಚರಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಅಸುರಕ್ಷಿತ ಕಾಂತಿವರ್ಧಕ ಹಾಗೂ ಔಷಧಿಗಳ ಪತ್ತೆಗಾಗಿ ಮೇ ತಿಂಗಳಿನಲ್ಲಿ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಈ ಸ್ಯಾಂಪಲ್ ಗಳಲ್ಲಿ 15 ವಸ್ತುಗಳು ಅಸುರಕ್ಷಿತ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ರಾಜ್ಯ ಸೇರಿ ಹೊರ ರಾಜ್ಯಗಳ ಕಾಂತಿ ವರ್ಧಕ ಹಾಗೂ ಔಷಧಿಗಳು ಪಟ್ಟಿಯಲ್ಲಿದ್ದು. ಆರೋಗ್ಯ ಇಲಾಖೆಯ ಪಟ್ಟಿಯ ಕಾಂತಿವರ್ಧಕ ಹಾಗೂ ಔಷಧಿಗಳನ್ನು ಬಳಸದಂತೆ, ಸಂಗ್ರಹಿಸದಂತೆ, ಮಾರಾಟ ಮಾಡದಂತೆ, ದಾಸ್ತಾನು ಮಾಡದಂತೆ ಖಡಕ್ ಎಚ್ಚರಿಕೆ ನೀಡಿದೆ. ಅಂದಹಾಗೇ ಮೈಸೂರು ಕಂಪನಿಯ ಓ ಶಾಂತಿ ಗೋಲ್ಡ್ ಕುಂಕುಮ್ ಸಹ ಅಸುರಕ್ಷಿತವಾಗಿದೆ. ಕಂಪೌಂಡ್ ಸೋಡಿಯಂ ಲ್ಯಾಕ್ಟೆಟ್ ಇಜ್ ಜೆಕ್ಷನ್ ಐಪಿ ಕೂಡ ಅಸುರಕ್ಷಿತವಾದಂತ ಔಷಧಿಯಾಗಿದೆ. ಇದಲ್ಲದೇ ಐರನ್ ಸುಕ್ರೋಸ್ ಇನ್ ಜೆಕ್ಷನ್ ಯುಎಸ್ ಪಿ 100ಎಂಜಿ ಎನ್ನುವಂತದ್ದು ಬಳಕೆ ಮಾಡದಂತೆ ಸೂಚಿಸಿದೆ.
ನವದೆಹಲಿ: 2026 ರಿಂದ ಪ್ರಾರಂಭವಾಗುವ ದ್ವೈವಾರ್ಷಿಕ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ CBSE ಅನುಮೋದನೆ ನೀಡಿದೆ. ಹೀಗಾಗಿ 2026ರಿಂದ 10ನೇ ತರಗತಿ ಸಿಬಿಎಸ್ಸಿ ಬೋರ್ಡ್ ಪರೀಕ್ಷೆಯು ವರ್ಷದಲ್ಲಿ ಎರಡು ಬಾರಿ ನಡೆಯಲಿದೆ. ಬುಧವಾರ ಸಿಬಿಎಸ್ಇ ತೆಗೆದುಕೊಂಡ ದೊಡ್ಡ ನಿರ್ಧಾರದಲ್ಲಿ, 2026 ರಿಂದ ವರ್ಷಕ್ಕೆ ಎರಡು ಬಾರಿ 10ನೇ ತರಗತಿ ಪರೀಕ್ಷೆಗಳನ್ನು ನಡೆಸಲು ಮಂಡಳಿಯು ಅನುಮೋದನೆ ನೀಡಿದೆ. 10 ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಹೇಳಿದ್ದಾರೆ. ಮಂಡಳಿಯ ಪ್ರಕಾರ ಎರಡನೇ ಹಂತವು ಐಚ್ಛಿಕವಾಗಿದೆ ಎಂದು ತಿಳಿಸಿದೆ. ಮೊದಲ ಹಂತದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ನಲ್ಲಿ ಮತ್ತು ಎರಡನೇ ಹಂತದ ಫಲಿತಾಂಶವನ್ನು ಜೂನ್ನಲ್ಲಿ ಪ್ರಕಟಿಸಲಾಗುವುದು. ಆಂತರಿಕ ಮೌಲ್ಯಮಾಪನವನ್ನು ಒಮ್ಮೆ ಮಾತ್ರ ನಡೆಸಲಾಗುತ್ತದೆ ಎಂದು ಹೇಳಿದೆ. https://twitter.com/PTI_News/status/1937819690140938297
ಧಾರವಾಡ: ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡಲು ತಪ್ಪಿದ್ದಲ್ಲಿ ವಾಹನದ ಹಣ ಮರಳಿಸಲು ಟ್ರೈಯೋ ಗ್ರೂಪ್ಸ್ ಪ್ಯುವರ್ ಎನರ್ಜಿ ಪ್ರೈ.ಲಿ.ಗೆ ಗ್ರಾಹಕರ ಆಯೋಗದ ಆದೇಶಿಸಿದೆ. ಧಾರವಾಡದ ಹಾವೇರಿ ಪೇಟ ನಿವಾಸಿ ಇಲಿಯಾಸ್ ಖಾನ್ ಮೈಸೂರು ಎನ್ನುವವರು ದಿ:15/03/2022 ರಂದು ರೂ.77,000 ಪಾವತಿಸಿ ಇಲೆಕ್ಟ್ರೀಕ್ ಸ್ಕೂಟರನ್ನು ಎದುರುದಾರರಿಂದ ಖರೀದಿಸಿದ್ದರು. ವಾಹನವು ಬ್ಯಾಟರಿಯ ಮೇಲೆ 5 ವರ್ಷದ ವಾರಂಟಿಯನ್ನು ಹೊಂದಿತ್ತು. ದೂರುದಾರರು ಎದುರುದಾರರ ಹೇಳಿಕೆಯಂತೆ ವಾಹನವನ್ನು ಉಪಯೋಗಿಸುತ್ತಿದ್ದು ನಂತರ ಒಮ್ಮಿಂದೊಮ್ಮೆಲೆ ರಸ್ತೆಯ ಮದ್ಯ ನಿಲ್ಲಲು ಪ್ರಾರಂಭಿಸಿತು. ಅಲ್ಲದೇ ಎದುರುದಾರರು ಹೇಳಿದಷ್ಟು ಮೈಲೇಜನ್ನೂ ಸಹ ವಾಹನವು ಕೊಡುತ್ತಿರಲಿಲ್ಲ. ಈ ವಿಷಯವನ್ನು ದೂರುದಾರರು ಎದುರುದಾರರಿಗೆ ತಿಳಿಸಿದಾಗ ಅವರು ಅದನ್ನು ಸರಿಪಡಿಸಿಕೊಟ್ಟಿರಲಿಲ್ಲ. ಅಲ್ಲದೇ 1ನೇ ಎದುರುದಾರರು ತಮ್ಮ ಮಳಿಗೆಯನ್ನು ಶಾಶ್ವತವಾಗಿ ಮುಚ್ಚಿರುತ್ತಾರೆ. ಇದರಿಂದ ದೂರುದಾರರಿಗೆ ವಾಹನವನ್ನು ರಿಪೇರಿ ಮಾಡಿಸಲು ಕಷ್ಟವಾಗಿರುತ್ತದೆ. ಎದುರುದಾರರ ಇಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ…
ಧಾರವಾಡ: ಯೂರಿಯಾ ಗೊಬ್ಬರವು ಬೆಳೆಗಳಿಗೆ ಎಷ್ಟು ಮುಖ್ಯವೋ ಅತೀಯಾದ ಬಳಕೆ ಅμÉ್ಟೀ ಹಾನಿಕಾರಕ. ಇದರಿಂದ ಬೆಳೆ ಮತ್ತು ಮಣ್ಣಿನ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು. ಮುಖ್ಯವಾಗಿ, ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಬೀಜ ಮತ್ತು ಬೇರುಗಳಿಗೆ ಹಾನಿಕಾರಕವಾಗಿದೆ. ಅತಿಯಾದ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಬಹುದು ಮತ್ತು ಪರಿಸರ ಮಾಲಿನ್ಯ ಉಂಟಾಗಬಹುದು. ಮಣ್ಣಿನ ಮೇಲೆ ಪರಿಣಾಮ: ಯೂರಿಯಾ ಮಣ್ಣಿನಲ್ಲಿ ಹೈಡ್ರಾಲಿಸಿಸ್ ಆಗಿ ಅಮೋನಿಯಾವನ್ನು ಬಿಡುಗಡೆ ಮಾಡುತ್ತದೆ, ಇದು ಮಣ್ಣಿನ ಪಿಎಚ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಸಸ್ಯಗಳಿಗೆ ಹಾನಿಕಾರಕವಾಗಬಹುದು ಮತ್ತು ಮಣ್ಣಿನ ರಚನೆ ಹಾಳಾಗಿ, ಮಣ್ಣಿನ ಆರೋಗ್ಯ ಹದಗೆಡುತ್ತದೆ. ಅತಿಯಾದ ಯೂರಿಯಾ ಬಳಕೆಯು ಮಣ್ಣಿನ ಸೂಕ್ಷ್ಮಜೀವಿಗಳ ಮೇಲೆ ಪರಿಣಾಮ ಬೀರಬಹುದು ಮತ್ತು ದೀರ್ಘಾವಧಿಯಲ್ಲಿ ಮಣ್ಣಿನ ಫಲವತ್ತತೆಯನ್ನು ಕಡಿಮೆ ಮಾಡಬಹುದು. ಬೆಳೆಗಳ ಮೇಲೆ ಪರಿಣಾಮ: ಅತೀಯಾದ ಯೂರಿಯಾ ಬಳಕೆಯಿಂದ ಬೆಳೆಗಳು ಸಸ್ಯ ಬೆಳವಣಿಗೆ ಹೆಚ್ಚಾಗಿ ರಸ ಹೀರುವ ಕೀಟ ಹಾಗೂ ಮುಂತಾದ ಕೀಟ ಮತ್ತು ರೋಗ ಭಾಧೆಗಳಿಗೆ ತುತ್ತಾಗಬಹುದು.…













