Author: kannadanewsnow09

ಕಲಬುರ್ಗಿ: ಜಿಲ್ಲೆಯ ಚಿಂಚನಸೂರಿನಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಓಡಿ ಬಂದಂತ ಜನರು ಕೆಲ ಕಾಲ ಬಯಲಲ್ಲೇ ಆತಂಕದಲ್ಲಿ ಕಳೆದಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿದೆ. ಈ ಬಗ್ಗೆ ಕೆ ಎಸ್ ಡಿ ಎಂ ಸಿ ಮಾಹಿತಿ ನೀಡಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ಭೂಕಂಪನ ಉಂಟಾಗಿರುವುದಾಗಿ ತಿಳಿಸಿದೆ. ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ. ಭೂಕಂಪನದಿಂದಾಗಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. https://kannadanewsnow.com/kannada/human-50-lakh-compensation-for-the-victims-during-the-conflict-between-humans-and-animals-minister-eshwar-khandre-announced/

Read More

ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆ ಹುತಾತ್ಮರಾದಂತ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಇಂದು ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ವೇಳೆಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈವರೆಗೆ 62 ಮಂದಿ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆ, ಕಳ್ಳಬೇಟೆಗಾರರನ್ನು ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ಸಂದರ್ಭದಲ್ಲಿ, ಮಾನವ ಮತ್ತು ಪ್ರಾಣಿ ಸಂಘರ್ಷದ ವೇಳೆಯಲ್ಲಿ ಇವರೆಲ್ಲ ಬಲಿಯಾಗಿದ್ದಾರೆ ಎಂದರು. ರಾಜ್ಯದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷದಲ್ಲಿ ಹುತಾತ್ಮರಾದಂತ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ 50 ಲಕ್ಷ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.

Read More

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್‌ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ. 10 ರಿಂದ 15 ಜನರ ತಂಡ ಇರಲಿದ್ದು, ಎನ್‌ಸಿಸಿ ಹಿರಿಯ ಕೆಡೆಟ್‌ಗಳು ಮತ್ತು ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ಒಳಗೊಂಡಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1965759195095212407 https://kannadanewsnow.com/kannada/all-8-squads-of-icc-womens-world-cup-2025-revealed/ https://kannadanewsnow.com/kannada/women-should-be-careful-now-if-they-sleep-wearing-a-bra-at-night/

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರದಲ್ಲೇ ಮೈಸೂರು ವಲಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದ್ದಾವೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ಮೈಸೂರಿನಲ್ಲಿ ವಲಯ ಮಟ್ಟದ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ. ಆಸಕ್ತರು ಈ ಕೂಡಲೇ  https://udyogamela.ksdckarnataka.com ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದೆ. ರಾಜ್ಯದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಈ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. https://twitter.com/KarnatakaVarthe/status/1965766651565187286

Read More

ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ನೇಮಕ ಮಾಡಲಾಗಿತ್ತು. ಅವರು ಇಂದು ಸಂಜೆ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರನ್ನು ಆಸ್ಪತ್ರೆಯ ಹಿಂದಿನ ನಿರ್ದೇಶಕ ಡಾ.ಕೆಎಸ್ ರವೀಂದ್ರ ನಾಥ್ ಹಾಗೂ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. https://kannadanewsnow.com/kannada/hindu-activist-puneeth-kerehalli-arrested-by-police-in-bengaluru/ https://kannadanewsnow.com/kannada/nrega-scam-in-kalmane-gram-panchayat-of-sagar-minister-priyank-kharge-instructed-to-conduct-an-investigation-and-submit-a-report/

Read More

ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಕಲ್ಲು ತೂರಾಟ ಖಂಡಿಸಿ ಮದ್ದೂರಿಗೆ ತೆರಳೋದಕ್ಕೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಪುನೀತ್ ಕೆರೆಹಳ್ಳಿ ಬಂಧಿಸಲಾಗಿದೆ. ಇಂದು ಮಂಡ್ಯದ ಮದ್ದೂರಲ್ಲಿ 20ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಕಲ್ಲು ತೂರಾಟ ಘಟನೆಯ ನಂತ್ರ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಯಿತು. ಇಂತಹ ಮದ್ದೂರಿಗೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಠಾಣೆಯ ಪೊಲೀಸರು ಪುನೀತ್ ಕೆರೆಹಳ್ಳಿ ಬಂಧಿಸಿದ್ದಾರೆ. https://kannadanewsnow.com/kannada/nrega-scam-in-kalmane-gram-panchayat-of-sagar-minister-priyank-kharge-instructed-to-conduct-an-investigation-and-submit-a-report/

Read More

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಲ್ಲಿ ಮಳೆ ಶುರುವಾಗಿದೆ. ಬೆಂಗಳೂರಿನ ಶಾಂತಿನಗರ, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಹೆಣ್ಣೂರು, ನಾಗವಾರ, ಕಲ್ಯಾಣನಗರದ ಸುತ್ತಮುತ್ತ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತೆ ಆಗಿದೆ. https://kannadanewsnow.com/kannada/decision-on-land-acquisition-rates-for-ukp-phase-3-in-thursdays-cabinet-meeting-deputy-cm-dk-shivakumar/ https://kannadanewsnow.com/kannada/women-should-be-careful-now-if-they-sleep-wearing-a-bra-at-night/

Read More

ಬೆಂಗಳೂರು : “ಯುಕೆಪಿ ಹಂತ 3 ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಗುರುವಾರ ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಬುಧವಾರ ಪ್ರತಿಕ್ರಿಯೆ ನೀಡಿದರು. “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ” ಎಂದರು. ದರ ನಿಗದಿ ಎಂದು ಅಂತಿಮವಾಗಬಹುದು ಹಾಗೂ ಕಾನೂನಾತ್ಮಕ ತೊಡಕುಗಳ ನಿವಾರಣೆಯ ಕ್ರಮದ ಬಗ್ಗೆ ಎಂದು ಕೇಳಿದಾಗ, “ಈ ವಿಚಾರ ತುಂಬಾ ತಡವಾಗಬಾರದು ಎಂದು ನಾನು ತೀರ್ಮಾನ ತೆಗೆದುಕೊಂಡಿರುವೆ. ಸಚಿವ ಸಂಪುಟದಲ್ಲಿ ಇದರ ಬಗ್ಗೆ ತೀರ್ಮಾನ ಮಾಡಲಾಗುವುದು. ನಾನು ಅಫಿಡವಿಟ್ ಗೆ ಸಹಿ ಹಾಕಿದ್ದು ಎಸಿಎಸ್ ಅವರು ಗುರುವಾರ ನ್ಯಾಯಲಯಕ್ಕೆ ಇದನ್ನು ಸಲ್ಲಿಸಲಿದ್ದಾರೆ” ಎಂದರು. “ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀ. ಹೆಚ್ಚಳ ಮಾಡಿದರೆ ಎಷ್ಟು ಭೂಮಿ ಬೇಕಾಗಬಹುದು ಎಂದು ಮುಖ್ಯಮಂತ್ರಿಯವರು ಹಾಗೂ ನಾನು ಸಂಬಂಧಪಟ್ಟವರಿಂದ ಮಾಹಿತಿ ಪಡೆದುಕೊಂಡಿದ್ದೇವೆ.…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ದತಿಯೂ ಅಲ್ಲಲ್ಲಿ ವರದಿಯಾಗಿವೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸೋ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಬೀದಿ ನಾಟಕ ಪ್ರದರ್ಶಿಸಿ, ಅರಿವು ಮೂಡಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಟೀಲು ಅಶೋಕ ಪೈ ಮೆ ಮೋರಿಯಲ್ ಕಾಲೇಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ, ವಿದ್ಯಾರ್ಥಿಗಳಿಂದ ಬಾಲ್ಯ ವಿವಾಹ, ಬಾಲಕಾರ್ಮಿಕ, ಲೈಂಗಿಕ ದೌರ್ಜನ್ಯದ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭದ್ರಾವತಿ ತಾಲೂಕಿನ ತಹಶೀಲ್ದಾರ್ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಂರಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವರು, ಅಂಗನವಾಡಿ ವಲಯ ಮೇಲ್ವಿಚಾರಕರು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. https://kannadanewsnow.com/kannada/a-huge-scandal-in-the-state-the-dead-and-the-names-of-those-suffering-from-illness-have-received-nrega-funds/ https://kannadanewsnow.com/kannada/nrega-scam-in-kalmane-gram-panchayat-of-sagar-minister-priyank-kharge-instructed-to-conduct-an-investigation-and-submit-a-report/

Read More

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿಯ ಸಂಬಂಧಿಸಿದ ಅನ್ಯಾಯವನ್ನು ಸರಿಪಡಿಸಲು ಸರಕಾರಕ್ಕೆ ಒಂದು ವಾರದ ಗಡುವು ನೀಡಲಾಗಿದೆ ಎಂದು ಮಾಜಿ ಶಾಸಕರಾದ ಪಿ. ರಾಜೀವ್ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ನಲ್ಲಿ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾತ್ರಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಿ. ರಾಜೀವ್ ಅವರು ಸರಕಾರಕ್ಕೆ ನಮ್ಮ ಬೇಡಿಕೆಗಳನ್ನು ಸಲ್ಲಿಸಲಾಗಿದೆ. ‘ಇಂದಿನದು ಕೇವಲ ಟ್ರೈಲರ್ ಮಾತ್ರ; ಪಿಕ್ಚರ್ ಅಭಿ ಬಾಕಿ ಹೈ’ ಎಂದು ಎಚ್ಚರಿಕೆ ನೀಡಿದರು. ಅಧಿಕಾರಿಗಳು ತಮಗೆ ಮನವಿ ಕೊಡುವಂತೆ ಹೇಳಿದ್ದು ನಾವು ಅದಕ್ಕೆ ಒಪ್ಪಲಿಲ್ಲ; ಬಳಿಕ ಹಿರಿಯ ಅಧಿಕಾರಿಗಳನ್ನು ಕಳಿಸುವುದಾಗಿ ಹೇಳಿದ್ದರು. ಅದಕ್ಕೂ ಒಪ್ಪಲಿಲ್ಲ; ಹೋರಾಟವು ಉಗ್ರ ಸ್ವರೂಪ ಪಡೆದಾಗ ಮಾನ್ಯ ಸಚಿವರು ಬಂದು ನಮ್ಮ ಮನವಿ ಸ್ವೀಕರಿಸಿದ್ದಾರೆ ಎಂದು ವಿವರಿಸಿದರು. ಈ ಸರಕಾರಕ್ಕೆ ಒಂದು ವಾರದ ಗಡುವು ಕೊಟ್ಟಿದ್ದೇವೆ. ಒಂದು…

Read More