Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲ ಮಹತ್ವದ ಮಸೂದೆಗಳಿಗೆ ಅನುಮೋದನೆ ನೀಡಲಾಯಿತು. ಆ ಮಸೂದೆಗಳ ವಿವರ ಈ ಕೆಳಗಿನಂತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಮಸೂದೆಗಳ ವಿವರ… ಒಳಾಡಳಿತ ಇಲಾಖೆ: 1 “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025ಕ್ಕೆ ಅನುಮೋದನೆ ನೀಡಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ: 2.ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ನೀಡಿದೆ. 3. “ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ನೀಡಿದೆ. ಕಂದಾಯ ಇಲಾಖೆ: 4. “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಿದೆ. 5. “ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಿದೆ. ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ:…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜಿ.ಎಂ ತೋಟಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಬಾಪಟ್ ಅವರನ್ನು ನೇಮಕ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಆಯ್ಕೆಗಾಗಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಜಿಎಂ ತೋಟಪ್ಪ ಹಾಗೂ ನುಡಿಗಿಡ ರಾಘವೇಂದ್ರ ಬಾಪಟ್ ಅವರು ಸ್ಪರ್ಧೆ ಮಾಡಿದ್ದರು. ಚುನಾವಣೆ ಸಂದರ್ಭದಲ್ಲಿ ಇಬ್ಬರಿಗೂ ತಲಾ 7 ಮತಗಳು ಚಲಾವಣೆಯಾಗಿ ಸಮಗೊಂಡಿದ್ದವು. ಶಿವಮೊಗ್ಗ ಜಿಲ್ಲಾ ಸಮಿತಿಯಿಂದ ಆಗಮಿಸಿದ್ದಂತ ಅಧ್ಯಕ್ಷರಾದಂತ ವೈದ್ಯ, ಉಪಾಧ್ಯಕ್ಷರಾದಂತ ಹುಚ್ಚರಾಯಪ್ಪ, ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ, ಕೋಶಾಧ್ಯಕ್ಷರಾದಂತ ರೋಹಿತ್, ರಾಜ್ಯ ಚುನಾವಣಾಧಿಕಾರಿ ರವಿಕುಮಾರ್ ಟೆಲೆಕ್ಸ್, ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್ ಅವರು ಇಬ್ಬರನ್ನು ಮನವೊಲಿಸಿದ ಬಳಿಕ ಹಿರಿತನದಲ್ಲಿ ಜಿ.ಎಂ.ತೋಟಪ್ಪ ಅವರನ್ನು ಅಧ್ಯಕ್ಷರನ್ನಾಗಿ, ರಾಘವೇಂದ್ರ ಬಾಪಟ್ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದಂತ ಶಿವಮೊಗ್ಗ…

Read More

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆ ಇತಿಹಾಸದಲ್ಲೇ ಹೊಸ ಅಲೆಯನ್ನು ಉದ್ಯೋಗ ನೇಮಕಾತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಸೃಷ್ಠಿಸಿದ್ದಾರೆ. ಅದೇ ಎರಡೂವರೆ ವರ್ಷದಲ್ಲೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇದ್ದಂತ ಬರೋಬ್ಬರಿ 10,000 ಉದ್ಯೋಗ ನೇಮಕಾತಿಯನ್ನು ನಡೆಸಲಾಗಿದೆ. ಹೌದು.. ಸಾರಿಗೆ ಸಂಸ್ಥೆಗಳಲ್ಲಿ 10000 ನೇಮಕಾತಿ ಎರಡುವರೆ ವರ್ಷದ ಅವಧಿಯಲ್ಲಿ ಅನ್ನುವುದು ಸುಲಭದ ಮಾತಲ್ಲ. ಅದರಲ್ಲೂ ಒಂದೇ ಒಂದು ವಿವಾದವಿಲ್ಲದೇ, ಭ್ರಷ್ಟಾಚಾರ ರಹಿತ,‌ಪಾರದರ್ಶಕ ನೇಮಕಾತಿ ಅಂದರೆ ಮೆಚ್ಚಲೇಬೇಕು. ವಿರೋಧ‌ಪಕ್ಷವಾದ ಬಿ.ಜೆ.ಪಿ ಅವರಿಗೆ ತಾವು ಕೆಲಸ‌ ಮಾಡಿ‌, ಸಾಧಿಸಿ ತೋರಿಸಿ ಕ್ರೆಡಿಟ್ ತೆಗೆದುಕೊಳ್ಳುವ ಅಭ್ಯಾಸವಿಲ್ಲ. ಕ್ಷುಲ್ಲಕ ಕಾರಣಗಳಿಗೆ ಟ್ಟೀಟ್ ಮೇಲೆ ಟ್ಟೀಟ್ ಮಾಡಿ ಸಾಧನೆ ಮಾಡುವ ಖಯಾಲಿ ಬಹಳಷ್ಟಿದೆ. ಈ ಮುನ್ನುಡಿಗೆ ಕಾರಣವಾಗಿರುವುದು ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 1000 ಚಾಲನಾ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಅನುಮೋದನೆ‌ ಪಡೆದು ಆದೇಶ‌ ಕೂಡ ಹೊರಬಿದ್ದಿದೆ. ಇಲ್ಲಿಯವರೆಗೆ ಕಳೆದ ಎರಡುವರೆ ವರ್ಷದಲ್ಲಿ ನಾಲ್ಕು ನಿಗಮಗಳಲ್ಲಿನ ನೇಮಕಾತಿ ವಿವರ, ಅನುಕಂಪದ ನೌಕರಿಯೂ ಒಳಗೊಂಡು ಒಟ್ಟು 9989 ನೇಮಕಾತಿ ಮಾಡಲಾಗಿದೆ. ಹೀಗಿದೆ ನಿಗಮವಾರು ನೇಮಕಾತಿಗಳ ವಿವರ ಕೆ ಎಸ್ ಆರ್…

Read More

ಬೆಂಗಳೂರು: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆರೋಗ್ಯ ರಕ್ಷಾ ಸಮಿತಿಗೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಅನುಮೋದಿತ ಅಧಿಕಾರೇತರ ಸದಸ್ಯರನ್ನು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲು ಆದೇಶ ಮಾಡಲಾಗಿದೆ. ಈ ಮೂಲಕ 21 ವರ್ಷಗಳ ಬಳಿಕ ಆಯುಕ್ತಾಲಯದ ಮಟ್ಟದಲ್ಲಿ ಅಧಿಸೂಚನೆಯ ಅಧಿಕಾರವನ್ನು ಬದಲಾಯಿಸಿ, ಜಿಲ್ಲಾ ಹಂತದಲ್ಲೇ ಡಿಸಿಗಳಿಗೆ ಅಧಿಕಾರವನ್ನು ನೀಡಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. 2004ರಿಂದಲೇ ಆಯಾ ಜಿಲ್ಲಾ ಹಂತದಲ್ಲೇ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಅನುಮೋದನೆ, ಅಧಿಸೂಚನೆಗೆ ಅಧಿಕಾರ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು. ಆದರೇ ಅದು ಸಾಧ್ಯವಾಗಲಿಲ್ಲ. 2021ರದಲ್ಲಿ ಮತ್ತೆ ಮುಂಚೂಣಿಗೆ ಬಂದಿತ್ತು. ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸಮಸ್ಯೆಯ ಗಂಭೀರತೆಯನ್ನು ಅರಿತು, ಇದನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿದ್ದರು. ಅದರಂತೆ ಇದೀಗ ಕೊನೆಗೂ ಆಯಾ ಜಿಲ್ಲಾ ಹಂತದಲ್ಲೇ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನು ಜಿಲ್ಲಾ ಉಸ್ತುವಾರಿ ಸಚಿವರು ಅನುಮೋದಿಸುವ, ಆ ಅನುಮೋದನೆಯನ್ನು ಅಧಿಸೂಚನೆ ಮೂಲಕ ಹೊರಡಿಸುವಂತ…

Read More

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ. ಹಾಗಾದ್ರೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂಪುಟದ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂಬುದಾಗಿ ಹೇಳಿದರು. ಇನ್ನೂ ಸಾಮಾಜಿಕ‌ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 8 ಬಿಲ್ ಗೆ ಅನುಮೋದನೆ ಮಾಡಿದ್ದೇವೆ. ಮತೀಯ…

Read More

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಇದಲ್ಲದೇ ಧಾರ್ಮಿಕ ದತ್ತಿ ವಿಧೇಯಕಕ್ಕೂ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆಯನ್ನು ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಕಾನೂನು ಸಚಿವ ಹೆಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂಪುಟದ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂಬುದಾಗಿ ಹೇಳಿದರು. ಇನ್ನೂ ಸಾಮಾಜಿಕ‌ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 8 ಬಿಲ್ ಗೆ ಅನುಮೋದನೆ ಮಾಡಿದ್ದೇವೆ. ಮತೀಯ ದ್ವೇಷ ಭಾಷಣವೂ ಇದರಲ್ಲಿ ಸೇರಿದೆ. ದ್ವೇಷ ಭಾಷಣ,ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿದೆ. ವಿಧೇಯಕದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು. ವಿಶ್ವಬಂಡವಾಳ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11KV ಕಾಡುಗೋಡಿ”ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 06.12.2025 (ಶನಿವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.6ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಬೆಳತೂರು, ಅಯ್ಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟ್ಟಲಮ್ಮ ಲೇಔಟ್, ವಿ.ಎಸ್.ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್ಸಿಐ ಗೋದಾಮು, ಸಫಲ್, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಎಚ್ಡಿಎಫ್ಸಿ ಬ್ಯಾಂಕ್, ಅಲಾಂಬಿಕ್ ಅಪಾರ್ಟ್ಮೆಂಟ್, ಮಾರ್ವೆಲ್ ಅಪಾರ್ಟ್ಮೆಂಟ್, ಇಮ್ಮಡಿಹಳ್ಳಿ, ಕೈತೋಟ, ದಿನ್ನೂರು, ಜಿ.ಕೆ ಲೇಔಟ್, ದಿನ್ನೂರು ಪೊಲೀಸ್ ಸ್ಟೇಷನ್, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮೈನ್ ರೋಡ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರಪಾಳ್ಯ, ಪ್ರಶಾಂತ್ ಲೇಔಟ್, ಉಪ್ಕರ್ ಲೇಔಟ್, ಪೃಥ್ವಿ ಲೇಔಟ್ ಕರೆಂಟ್ ಇರೋದಿಲ್ಲ. ಸ್ವಾಮಿ ವಿವೇಕಾನಂದ ರಸ್ತೆ, ವೈಟ್ಫೀಲ್ಡ್ ಮೆೈನ್ ರೋಡ್, ಇಸಿಸಿಸಿ ರಸ್ತೆ, ನೈಡು ಲೇಔಟ್, ಇನರ್ ಸರ್ಕಲ್, ಕಾರಮ್ಮರಿಯಪ್ಪ ದೇವಸ್ಥಾನ ರಸ್ತೆ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್,…

Read More

ಬೆಂಗಳೂರು: ಎಲ್ಲಾ ಏತ ನೀರಾವರಿ ಯೋಜನೆಗಳಲ್ಲಿ ಇಂಧನ ಪರಿಶೀಲನೆ ಮತ್ತು ಉಳಿತಾಯದ ಯಾಂತ್ರಿಕತೆಯ ಕಾರ್ಯವಿಧಾನಗಳನ್ನು ಶಿಸ್ತುಬದ್ಧವಾಗಿ ಅನುಷ್ಠಾನ ಮಾಡಿದರೆ, ಇಲಾಖೆಗೆ ಬಹಳಷ್ಟು ಹಣ ಉಳಿತಾಯವಾಗಲಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಬಿ.ಕೆ.ಪವಿತ್ರ ಹೇಳಿದರು. ಸಣ್ಣ ನೀರಾವರಿ ಇಲಾಖೆಯು ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಸಚಿವಾಲಯ ಕ್ಲಬ್‌ನಲ್ಲಿ `ಇಂಧನ ಲೆಕ್ಕಪರಿಶೋಧನೆ ಮತ್ತು ಇಂಧನ ಉಳಿತಾಯಕ್ಕೆ ಪ್ರಮುಖ ಕಾರ್ಯತಂತ್ರ’ ಎಂಬ ವಿಷಯ ಕುರಿತು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಏತ ನೀರಾವರಿ ಯೋಜನೆಗಳನ್ನು ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಕಡೆ ಕೈಗೆತ್ತುಕೊಂಡಿದ್ದೇವೆ. ಇದರಲ್ಲಿ ವೃಷಭಾವತಿ ವ್ಯಾಲಿ ಕೆರೆ ಯೋಜನೆ ಕೂಡ ಒಂದಾಗಿದೆ. ನಾವು ಇದರ ಅನುಷ್ಠಾನದ ವೇಳೆ ಸೂಕ್ತವಾದ ಇಂಧನ ಪರಿಶೀಲನೆ ಮತ್ತು ಉಳಿತಾಯದ ಯಾಂತ್ರಿಕತೆಯನ್ನು ಬಳಸಿಕೊಂಡಿದ್ದೇ ಆದಲ್ಲಿ, ನೀರಾವರಿ ಇಲಾಖೆಗೆ ಎದುರಾಗುವ ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಬಹುದಾಗಿದೆ. ಅಲ್ಲದೆ, ಯಂತ್ರೋಪಕರಣಗಳು ಸಹ ಹೆಚ್ಚಿನ ಕಾಲ ಕಾರ್ಯನಿರ್ವಹಿಸುವುದರಿಂದ ಇದರ ನಿರ್ವಹಣೆಯ ಸಮಸ್ಯೆ ಕೂಡ ಎದುರಾಗುವುದಿಲ್ಲ ಎಂದರು. ವಿಶ್ವಬ್ಯಾಂಕ್‌ನ ಪ್ರತಿನಿಧಿ ಹಾಗೂ ಇಂಧನ ತಜ್ಞ ಅಲ್ಬರ್ಟ್ ವಿಲಿಯಂ…

Read More

ನವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ, ಪ್ರಸ್ತುತ ಟೋಲ್ ಸಂಗ್ರಹ ವ್ಯವಸ್ಥೆಯು ಒಂದು ವರ್ಷದೊಳಗೆ ಕೊನೆಗೊಳ್ಳಲಿದೆ ಮತ್ತು ಎಲೆಕ್ಟ್ರಾನಿಕ್ ವ್ಯವಸ್ಥೆಯು ಜಾರಿಗೆ ಬರಲಿದೆ, ಇದು ಹೆದ್ದಾರಿ ಬಳಕೆದಾರರಿಗೆ ಸುಗಮ ಅನುಭವವನ್ನು ಖಚಿತಪಡಿಸುತ್ತದೆ. ಹೊಸ ವ್ಯವಸ್ಥೆಯನ್ನು 10 ಸ್ಥಳಗಳಲ್ಲಿ ಜಾರಿಗೆ ತರಲಾಗಿದ್ದು, ಒಂದು ವರ್ಷದೊಳಗೆ ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದರು. ಈ ಟೋಲ್ ವ್ಯವಸ್ಥೆ ಕೊನೆಗೊಳ್ಳುತ್ತದೆ. ಟೋಲ್ ಹೆಸರಿನಲ್ಲಿ ನಿಮ್ಮನ್ನು ತಡೆಯಲು ಯಾರೂ ಇರುವುದಿಲ್ಲ. ಒಂದು ವರ್ಷದೊಳಗೆ, ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು. ದೇಶಾದ್ಯಂತ ಪ್ರಸ್ತುತ 10 ಲಕ್ಷ ಕೋಟಿ ರೂ. ಮೌಲ್ಯದ 4,500 ಹೆದ್ದಾರಿ ಯೋಜನೆಗಳು ನಡೆಯುತ್ತಿವೆ ಎಂದು ಗಡ್ಕರಿ ಹೇಳಿದರು. ಇತ್ತೀಚೆಗೆ ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, ಭಾರತದ ರಾಷ್ಟ್ರೀಯ ಪಾವತಿ ನಿಗಮ (NPCI) ಭಾರತದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಸುಗಮಗೊಳಿಸಲು ಎಲೆಕ್ಟ್ರಾನಿಕ್ ಟೋಲ್ ಪಾವತಿಗಳಿಗಾಗಿ ಏಕೀಕೃತ,…

Read More

ಬೆಂಗಳೂರು: ನ್ಯಾಯಮೂರ್ತಿಗಳು ಶೇ 63 ಭ್ರಷ್ಟಾಚಾರದ ವಿಚಾರ ಪ್ರಕಟಿಸಿ, ರಾಜ್ಯ ಸರಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದು, ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ವಿರುದ್ಧ ಶೇ 40 ಕಮಿಷನ್ ಎಂದು ವಿಶೇಷ ತನಿಖಾ ದಳ (ಎಸ್‍ಐಟಿ) ಮಾಡಿದ್ದೀರಲ್ಲವೇ? ಈಗ ಶೇ 63 ಭ್ರಷ್ಟಾಚಾರ ಸಂಬಂಧ ಯಾವ ಎಸ್‍ಐಟಿ ಮಾಡುತ್ತೀರಿ ಎಂದು ಪ್ರಶ್ನಿಸಿದರು. ನಿಮಗೆ ಧೈರ್ಯ ಇದ್ದರೆ ಸಿಬಿಐ ತನಿಖೆ ಮಾಡಿ ಎಂದು ಅವರು ಒತ್ತಾಯಿಸಿದರು. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಭ್ರಷ್ಟಾಚಾರ ಇದೆ ಎಂಬುದು ಜಗಜ್ಜಾಹೀರಾಗಲಿ ಎಂದು ನುಡಿದರು. ಬೋವಿ ನಿಗಮದ ಅಧ್ಯಕ್ಷರೇ ಎಕರೆಗೆ 25 ಲಕ್ಷ ಕಮಿಷನ್ ಪಡೆಯುತ್ತಿದ್ದರು. ವಾಲ್ಮೀಕಿ ನಿಗಮದಡಿ 187 ಕೋಟಿ ಸುಮಾರು 700 ಖಾತೆಗೆ ವರ್ಗಾಯಿಸಲಾಗಿತ್ತು. ಅದನ್ನು ಬಳ್ಳಾರಿ ಚುನಾವಣೆಗೆ ಬಳಸಿದ್ದು, ತನಿಖೆ ನಡೆಯುತ್ತಿದೆ.…

Read More