Author: kannadanewsnow09

ಬೆಂಗಳೂರು: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಆ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಈ ಅಗ್ನಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮನುರುಲ್ ಶೇಖ್, ಜಾವಿದ್ ಆಲಿ ಹಾಗೂ ತಜ್ ಬುಲ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಕ್ಟೋಬರ್.7ರಂದು ಭೀಮನಹಳ್ಳಿ ಬಳಿಯ ಶೆಡ್ ನಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಇದಾಗಿದೆ. ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. https://kannadanewsnow.com/kannada/actress-ramyas-obscene-comment-threat-case-high-court-grants-bail-to-7-accused/ https://kannadanewsnow.com/kannada/police-station-closed-due-to-heavy-rains-in-mandya-water-blockade-for-more-than-10-houses/

Read More

ಬೆಂಗಳೂರು: ಇಂದು ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳು, ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. * ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್‌ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು. * ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್‌ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ಸಹ ನೀಡಿತ್ತು. ಆದರೆ ನಂತರ ಬಂದ ಸರ್ಕಾರಗಳಲ್ಲಿ ಈ ಕುರಿತು ಯಾವುದೆ ತೀರ್ಮಾನ ಆಗಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನರ್ರಚಿಸಿದೆವು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ನಾವು ಕಾನೂನು…

Read More

ಶ್ರೀ ಆಂಜನೇಯ ಸ್ವಾಮಿಯ ಅಷ್ಟೋತ್ತರ ಮಂತ್ರವನ್ನು ವ್ಯಾಪಾರ,ವ್ಯವಹಾರದ ಬೆಳವಣಿಗಾಗಿ ಜಪಿಸಿ ಶುಭವಾಗುತ್ತದೆ.. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ನಾಳೇಯ ದಿನ ಆಂಜನೇಯ ಸ್ವಾಮಿಯ ಹನುಮಾನ್ ಚಾಲೀಸ ಪಾರಾಯಣ ಮಾಡಿರಿ ಇದರಿಂದ ನಿಮಗೆ ಸಾಕಷ್ಟು ಒಳಿತು ಆಗುತ್ತದೆ ಕುಟುಂಬ ಜನಕ್ಕೂಸಹ ಸಾಕಷ್ಟು ಒಳ್ಳೆಯದು ಆಗಲಿದೆ. ಓಂ ಶ್ರೀ ಆಂಜನೇಯಾಯ ನಮಃ ಓಂ ಮಹಾವೀರಾಯ ನಮಃ ಓಂ ಹನುಮತೇ ನಮಃ ಓಂ ಸೀತಾದೇವಿ…

Read More

ಮಂಡ್ಯ : ಜಿಲ್ಲೆಯ ವಿವಿಧೆಡೆ ಗುರುವಾರ ಇಡೀ ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಮದ್ದೂರು ತಾಲ್ಲೂಕಿನ ನಿಲುವಾಗಿಲು ಗ್ರಾಮದ ಕೆರೆ ಕೋಡಿ ಬಿದ್ದು ನಾಲೆಯಲ್ಲಿ ತ್ಯಾಜ್ಯ ತುಂಬಿದ ಪರಿಣಾಮ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಜನರು ರಾತ್ರಿಯಿಡೀ ಜಾಗರಣೆ ಮಾಡಿ ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ಸಂರಕ್ಷಿಸಿಕೊಂಡಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮನೆಗಳಿಗೆ ನೀರು ನುಗ್ಗಿರುವುದೆಕೆ ಎಂದು ಗ್ರಾಮಸ್ಥರ ಬಳಿ ಚರ್ಚಿಸಿದರು. ನಾಲೆಗಳಲ್ಲಿರುವ ತ್ಯಾಜ್ಯವನ್ನು ಸ್ವಚ್ಚತೆ ಮಾಡದ ಪರಿಣಾಮ ಮನೆಗಳಿಗೆ ನೀರು ನುಗ್ಗಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯೇ ನೇರ ಕಾರಣರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ತಕ್ಷಣವೇ ಎಚ್ಚೆತ್ತುಕೊಂಡ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಲುವಾಗಿಲು ಗ್ರಾಮ ಪಂಚಾಯಿತಿ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಗಳಲ್ಲಿ…

Read More

ಬೆಂಗಳೂರು: ಹಾಸನಾಂಭ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ಯಾಕೇಜ್ ಪ್ರವಾಸವನ್ನು ಕೆ ಎಸ್ ಆರ್ ಟಿಸಿ ಆರಂಭಿಸಿದೆ. ಈ ಮೂಲಕ ಹಾಸನಾಂಭ ಭಕ್ತರಿಗೆ ಕೆ ಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್-2025ರ ಮಾಹೆಯಲ್ಲಿ ಹಾಸನ ನಗರದಲ್ಲಿ ಜರುಗುವ ಹಾಸನಾಂಭ ಜಾತ್ರಾ ಮಹೋತ್ಸವ-2025 ರ ಅಂಗವಾಗಿ ಹಾಸನಾಂಭ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗೆ ಹಾಸನ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗಾಗಿ (8 ಕರ್ನಾಟಕ ಸಾರಿಗೆ+2 ಅಶ್ವಮೇಧ+2 ವೋಲ್ವೊ) 10 ಮಾರ್ಗಗಳ ಟೂರ್ ಪ್ಯಾಕೇಜ್‌ನ್ನು ಸಿದ್ದಪಡಿಸಿ ಸದರಿ ಟೂರ್ ಪ್ಯಾಕೇಜ್ ಅನ್ನು ದಿನಾಂಕ:10.10.2025 ರಿಂದ ದಿನಾಂಕ:22.10.2025 ರವರೆಗೆ ಹಮ್ಮಿಕೊಳ್ಳಲಾಗಿರುತ್ತದೆ. ಸದರಿ 10(+2 ವೋಲ್ವೋ) ಪ್ಯಾಕೇಜ್ ಪ್ರವಾಸದ ಮಾರ್ಗಗಳ ವಿವರ ಈ ಕೆಳಕಂಡಂತಿರುತ್ತದೆ. ಪ್ಯಾಕೇಜ್ ಟೂರ್ ಹಾಸನ ನಗರ ಬಸ್ ನಿಲ್ದಾಣದಿಂದ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಗಳಿಗೆ ವೊಲ್ವೋ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆ ವಾಹನಗಳನ್ನು ಕಾರ್ಯಾಚರಣೆ, ಹೊರಡುವ ಸಮಯ ಹಾಗೂ ಸ್ಥಳಗಳ…

Read More

ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಆರೋಪಿಗಳಾದಂತ ಕೆ.ಪ್ರಮೋದ್, ಮಂಜುನಾಥ್, ರಾಜೇಶ್ ಸಿವೈ, ಓಬಣ್ಣ.ಟಿ, ಗಂಗಾಧರ್.ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೂ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಲಾಗಿತ್ತು. https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/

Read More

ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು‌. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.13 ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಉದ್ಘಾಟಿಸಲಿದ್ದಾರೆ ಎಂದರು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಟರಾಜ್, ರೈತ ಮುಖಂಡ ಅಣ್ಣೂರು ಮಹೇಂದ್ರ, ನೈದಿಲೆ ಚಂದ್ರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ನಿರುದ್ಯೋಗಿ ಯುವಕ,…

Read More

ಬೆಂಗಳೂರು : ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೆಚ್ಚಿನ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚುವರಿಯಾಗಿ 450 ಹಾಸಿಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳಿವೆ, ಆದರೆ ರೋಗಿಗಳ ಒಳಹರಿವು ಇತ್ತೀಚೆಗೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ಬ್ಲಾಕ್‌ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳಿಗೆ ರೋಗಿಗಳು ಹೋಗುವುದು ತಪ್ಪುತ್ತದೆ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಾರ್ವಜನಿಕ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವ ದರದಲ್ಲಿ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. “ಕಿದ್ವಾಯಿ ಆಸ್ಪತ್ರೆಗೆ ಬಹಳ ದೂರದೂರುಗಳಿಂದ ಆಗಮಿಸುತ್ತಾರೆ. ಆರ್ಥಿಕವಾಗಿ ಹಿಂದುಳಿದ ರೋಗಿಗಳು ಆರೈಕೆಗಾಗಿ ತಮ್ಮ ಭೂಮಿ ಅಥವಾ ಮನೆಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಎದುರಿಸುತ್ತಾರೆ. ಎಲ್ಲರಿಗೂ ಆರೋಗ್ಯ ನೀಡಬೇಕೆಂಬ ನಮ್ಮ ಸರ್ಕಾರದ ಆಶಯದಂತೆ…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಹೆಚ್ಚಾಗಿದ್ದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಐಟಿ-ಬಿಟಿ ಕಂಪನಿಗಳು ಬೆಂಗಳೂರು ಬಿಟ್ಟು ಒಲಸೆ ಹೋಗುತ್ತಿರೋ ಆರೋಪ ಕೇಳಿ ಬಂದಿತ್ತು. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಲ್ಲಿ ರಸ್ತೆ ಗುಂಡಿ ಹೆಚ್ಚಾಗೋದಕ್ಕೆ ಕಾರಣ ಕೊಟ್ಟಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನ ಚಲನಶೀಲತೆಯ ಕಥೆ ನಮ್ಮ ಯಶಸ್ಸು ಮತ್ತು ನಮ್ಮ ಸವಾಲುಗಳನ್ನು ಪ್ರತಿಬಿಂಬಿಸುತ್ತದೆ. ನಾವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಮುಂದಿನ ದಶಕದಲ್ಲಿ ನಮ್ಮ GDP ವಾರ್ಷಿಕವಾಗಿ 8.5% ಕ್ಕಿಂತ ಹೆಚ್ಚು ಬೆಳೆಯುವ ನಿರೀಕ್ಷೆಯಿದೆ ಎಂದಿದ್ದಾರೆ. ಇಂದು, ಬೆಂಗಳೂರಿನಲ್ಲಿ 1.2 ಕೋಟಿಗೂ ಹೆಚ್ಚು ನೋಂದಾಯಿತ ವಾಹನಗಳಿವೆ – ಸುಮಾರು 82 ಲಕ್ಷ ದ್ವಿಚಕ್ರ ವಾಹನಗಳು ಮತ್ತು 25 ಲಕ್ಷ ಕಾರುಗಳು. ಕಳೆದ ವರ್ಷವಷ್ಟೇ, ನಾವು ನಮ್ಮ ರಸ್ತೆಗಳಿಗೆ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳನ್ನು ಸೇರಿಸಿದ್ದೇವೆ. ಆಗಸ್ಟ್ 2025 ರಲ್ಲಿ ಮಾತ್ರ 58,913 ಹೊಸ ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ.…

Read More

ಬೆಂಗಳೂರು : ಕೊಲೆ ಆರೋಪಿ ದರ್ಶನಕ್ಕೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ವಿಚಾರವಾಗಿ ಕೊಲೆ ಆರೋಪಿ ದರ್ಶನ ಅರ್ಜಿ ಅಂಗೀಕರಿಸಿರುವಂತ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ ಆದೇಶಿಸಿದೆ. ಹೌದು ಆರೋಪಿ ದರ್ಶನಕ್ಕೆ ಜಲಿನಲಿ ಕನಿಷ್ಠ ಸವಲತ್ತು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜರಿನಲ್ಲಿ ಖುದ್ದು ಪರಿಶೀಲಿಸುವಂತೆ ಕೋರಿದ ಅರ್ಜಿ ಇದೀಗ ಅಂಗೀಕಾರ ಮಾಡಿದೆ. ಕೊಲೆ ಆರೋಪಿ ದರ್ಶನ್ ಅರ್ಜಿ ಭಾಗಶಹ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಅಂಗೀಕರಿಸಿತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸುವಂತೆ ಸೂಚಿಸಿದೆ. ಕೋರ್ಟ್ ಆದೇಶ ಪಾಲನೆಯಾಗಿದೆಯೋ ಇಲ್ಲವೋ ಪರಿಶೀಲಿಸಬೇಕು ಎಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದ ಜಡ್ಜ್ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಈ ಕುರಿತು ಸೂಚನೆ ನೀಡಿದೆ. https://kannadanewsnow.com/kannada/government-orders-formation-of-committee-to-select-kannada-rajyotsava-awardees-for-2025/ https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/

Read More