Author: kannadanewsnow09

ಚಿಕ್ಕಬಳ್ಳಾಪುರ : ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ತಿಳಿಸಿದರು. ಶನಿವಾರದಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೆವಾರಿಗೆ ಬಾಕಿ ಇದ್ದವು. ಈ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಲವು ಯುಕ್ತ ಕ್ರಮಗಳನ್ನು ಆಯೋಗ ತೆಗೆದುಕೊಂಡು 12,896 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಸ್ತುತ 41,104ಕ್ಕೆ ಮಾಹಿತಿ ಹಕ್ಕು ಅರ್ಜಿಗಳನ್ನು ಇಳಿಸಲಾಗಿದೆ. ಈ 41,104 ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವ ಉದ್ದೇಶದಿಂದ ಮಾಹಿತಿ ಆಯುಕ್ತರೇ ಜಿಲ್ಲಾ ಮಟ್ಟಕ್ಕೆ ಆಗಮಿಸಿ ಅದಾಲತ್ ತೆಗೆದುಕೊಂಡು ಸ್ಥಳದಲ್ಲೆ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಕಾರ್ಯ ಮುಂದಿನ ಕನ್ನಡ…

Read More

ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಭಾರತ ಸರ್ಕಾರ ರೈಲ್ ಮಂತ್ರಾಲಯ ರೈಲ್ವೆ ಸಚಿವಾಲಯ (ರೈಲ್ವೆ ಬೋರ್ಡ್ ರೈಲ್ವೇ ಬೋರ್ಡ್) ತನ್ನ ರೈಲು ನೀರಿನ ಬಾಟಲಿಯ ದರವನ್ನು ಕಡಿತ ಮಾಡಲಾಗಿದೆ.  ಈ ಕುರಿತಂತೆ ರೈಲ್ವೆ ಸಚಿವಾಲಯು ಆದೇಶ ಹೊರಡಿಸಿದ್ದು, ಜಿಎಸ್ಟಿ ಮಂಡಳಿಯ ಸುತ್ತೋಲೆಯ ಮುಂದುವರಿಕೆಯಾಗಿ, F(C) ನಿರ್ದೇಶನಾಲಯದ ಒಪ್ಪಿಗೆಯೊಂದಿಗೆ ರೈಲ್ವೆ ಸಚಿವಾಲಯ (ರೈಲ್ವೇ ಮಂಡಳಿ) ಈಗ ಈ ಕೆಳಗಿನಂತೆ ನಿರ್ಧರಿಸಿದೆ ಎಂದಿದೆ. ಪ್ಯಾಕೇಜ್ಡ್ ಕುಡಿಯುವ ನೀರಿನ ಬಾಟಲಿ ‘ರೈಲ್ ನೀರ್’ ನ ಗರಿಷ್ಠ ಚಿಲ್ಲರೆ ಬೆಲೆಯನ್ನು ಒಂದು ಲೀಟರ್ ಬಾಟಲಿಗೆ 15/- ರಿಂದ 14/- ಕ್ಕೆ ಮತ್ತು 500 ಮಿಲಿ ಸಾಮರ್ಥ್ಯದ ಬಾಟಲಿಗೆ 10/- ರಿಂದ 9/- ಕ್ಕೆ ಪರಿಷ್ಕರಿಸಲಾಗುತ್ತದೆ ಎಂದು ತಿಳಿಸಿದೆ. ಗರಿಷ್ಠ ರೈಲ್ವೆ ಆವರಣ/ರೈಲುಗಳಲ್ಲಿ ಮಾರಾಟವಾಗುವ ಇತರ ಬ್ರಾಂಡ್‌ಗಳ ಐಆರ್‌ಸಿಟಿಸಿ/ರೈಲ್ವೆ ಶಾರ್ಟ್‌ಲಿಸ್ಟ್ ಮಾಡಿದ ಪ್ಯಾಕ್ ಮಾಡಿದ ಕುಡಿಯುವ ನೀರಿನ ಬಾಟಲಿಗಳ ಚಿಲ್ಲರೆ ಬೆಲೆಯನ್ನು ಒಂದು ಲೀಟರ್ ಬಾಟಲಿಗೆ 15/- ರಿಂದ 14/- ಕ್ಕೆ ಮತ್ತು 500 ಮಿಲಿ ಸಾಮರ್ಥ್ಯದ…

Read More

ಶಿವಮೊಗ್ಗ : ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ ಹಿರೇನಾಯ್ಕ್ (91) ನಿಧನರಾಗಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶನಿವಾರ ನಿಧನ ಹೊಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್(19) ವಯೋ ಸಹಜತೆಯಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಇಂದು ಮದ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Read More

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in…

Read More

ಇಂದು ಭಾನುವಾರ, ಸೆಪ್ಟೆಂಬರ್ 21, 2025, ಮಹಾಲಯ ಅಮಾವಾಸ್ಯೆ ದಿನ. ಈ ದಿನದಂದು, ಪೂರ್ವಜರನ್ನು ಪೂಜಿಸುವುದು, ಅವರಿಗೆ ತಿಥಿ ತರ್ಪಣ ಅರ್ಪಿಸುವುದು ಮತ್ತು ಅಗಲಿದ ಪೂರ್ವಜರಿಗೆ ನೈವೇದ್ಯ ಅರ್ಪಿಸುವುದರಿಂದ ನಮ್ಮ ಕುಟುಂಬಕ್ಕೆ ಕೋಟ್ಯಂತರ ಪುಣ್ಯ ಬರುತ್ತದೆ. ಆದ್ದರಿಂದ, ನಾಳೆಯನ್ನು ತಪ್ಪಿಸಿಕೊಳ್ಳಬೇಡಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ…

Read More

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ರಾತ್ರಿ ಪ್ರಕಟಿಸಿದೆ. ಫಲಿತಾಂಶ ಕುರಿತು ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಸೆ.21ರಂದು ಸಂಜೆ 5 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಹಾಗೆಯೇ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾಗಿದ್ದರೆ ಅಂತಹವರಿಗೂ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/attention-residents-of-sagar-taluk-increase-in-the-rates-for-sound-amplification-installation/ https://kannadanewsnow.com/kannada/case-filed-against-a-19-year-old-woman-who-married-a-19-year-old-man/

Read More

ತುಮಕೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ಇಬ್ಬರು ಮಕ್ಕಳನ್ನು ಕೊಲೆಗೈದಂತ ತಾಯಿಯೊಬ್ಬಳು, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಪಲಕೆರೆಯಲ್ಲಿ ಇಬ್ಬರು ಮಕ್ಕಳನ್ನು ಕೊಲೈಗೈದು ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದಂತ ಕೌಶಿಕ್(4), ಯುಕ್ತಿ(1)ಯನ್ನು ಕೊಲೆಗೈದು ತಾಯಿ ಸರಿತಾ(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಯುಕ್ತಿಯನ್ನು ಕತ್ತು ಕೊಯ್ದು ಬರ್ಬರವಾಗಿ ಕೊಂದಿದ್ದರೇ, ಪುತ್ರ ಕೌಶಿಕ್ ನನ್ನು ಉಸಿರುಗಟ್ಟಿಸಿ ಕೊಲೆಯನ್ನು ತಾಯಿ ಸರಿತಾ ಮಾಡಿ, ಆ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಂತ ಸಂದರ್ಭದಲ್ಲ ಈ ಘಟನೆ ನಡೆದಿದೆ. ಆರು ವರ್ಷಗಳ ಹಿಂದೆ ಆಟೋ ಚಾಲಕ ಸಂತೋಷ್ ಜೊತೆಗೆ ಸರಿತಾ ವಿವಾಹವಾಗಿದ್ದರು.

Read More

ಶಿವಮೊಗ್ಗ : ಸೆಪ್ಟೆಂಬರ್ 1ರಿಂದ ಶಾಮಿಯಾನ ಮತ್ತು ಧ್ವನಿಬೆಳಕು ಅಳವಡಿಕೆ ದರವನ್ನು ಹೆಚ್ಚಿಸಲಾಗಿದೆ. ಅತ್ಯಂತ ದುಬಾರಿ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸಿ ನಾವು ಕಡಿಮೆ ದರಕ್ಕೆ ಈತನಕ ಶಾಮಿಯಾನ, ಧ್ವನಿ ಬೆಳಕು ಅಳವಡಿಸಿಕೊಂಡು ಬರಲಾಗಿತ್ತು. ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಧ್ವನಿ ಬೆಳಕು ಶಾಮೀಯಾನ ಮಾಲೀಕರ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ವೈ.ಪಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾಗಿಂತ ಮೊದಲು ನಾವು ದರ ಪರಿಷ್ಕರಣೆ ನಡೆದಿತ್ತು. ನಂತರದ ದಿನಗಳಲ್ಲಿ ರಾಜ್ಯದ ಇತರೆ ಜಿಲ್ಲಾ, ತಾಲ್ಲೂಕುಗಳಲ್ಲಿ ದರ ಹೆಚ್ಚು ಮಾಡಿದ್ದರೂ ನಮ್ಮ ತಾಲ್ಲೂಕಿನಲ್ಲಿ ಮಾತ್ರ ಕಡಿಮೆ ದರದಲ್ಲಿ ಧ್ವನಿಬೆಳಕು ಶಾಮಿಯಾನ ಹಾಕುತ್ತಿದ್ದೇವು ಎಂದರು. ಸೆ. 16ರಂದು ನಡೆದ ಸಂಘದ ಸರ್ವಸದಸ್ಯರ ಸಭೆಯಲ್ಲಿ ದರ ಏರಿಕೆ ಅನಿವಾರ್ಯತೆಯನ್ನು ಸಂಘದ ಎಲ್ಲಾ ಸದಸ್ಯರು ವ್ಯಕ್ತಪಡಿಸಿದ್ದು, ಉದ್ಯಮ ಉಳಿಯಬೇಕಾದರೆ ಸಣ್ಣ ಪ್ರಮಾಣದಲ್ಲಿ ಶಾಮಿಯಾನ ದರ ಏರಿಸುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಾರ್ವಜನಿಕರು ನೂತನ ದರಕ್ಕೆ…

Read More

ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಮುಂದಿವೆ ಓದಿ. * ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು . ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ?  ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ * ಪ್ರತಿ ವಾರ್ಡ್ ನ ಎಂಜಿನಿಯರ್ ಗಳು ,  ಮುಖ್ಯ ಎಂಜಿನಿಯರ್ ಗಳು  ಏನು ಮಾಡುತ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆ ಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. * ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. * ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಿ. * ಮಳೆಗಾಲಕ್ಕೆ ಮುನ್ನವೇ…

Read More

ಮಂಡ್ಯ : ಮದ್ದೂರು ನಗರ ಸಭೆಯ ನೂತನ ಪ್ರಭಾರ ಪೌರಾಯುಕ್ತರಾಗಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಮದ್ದೂರು ಪುರಸಭೆಯ ಮುಖ್ಯಾಧಿಕಾರಿಯವರು ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ಕಛೇರಿ ವ್ಯವಸ್ಥಾಪಕ ಶ್ರೀಧರ್ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೇಲ್ದರ್ಜೆಗೆರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನೂತನ ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ್ ಸತ್ತಿಗೇರಿ ಅವರು ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಮದ್ದೂರು ಪುರಸಭೆ ನಗರಸಭೆಯಾಗಿ ಮೆಲ್ದರ್ಜೆಗೆರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ…

Read More