Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಕೂಡ ಎಡಬಿಡದೆ ಮಳೆಯಾಗುತ್ತಿದೆ. ಈ ಕಾರಣದಿಂದ ನಾಳೆ ಸಾಗರ, ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಸೊರಬ ತಾಲ್ಲೂಕಿನ ಶಾಲೆಗಳಿಗೆ ಮಳೆಯ ಕಾರಣ ರಜೆಯ ನಿರ್ಧಾರವನ್ನು ಆಯಾ ಶಾಲಾ-ಕಾಲೇಜು ಮುಖ್ಯಸ್ಥರಿಗೆ ನೀಡಿರುವುದಾಗಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ತಿಳಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಸೊರಬ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೇ, ಮತ್ತೆ ಕೆಲವೆಡೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸೊರಬ ತಾಲ್ಲೂಕಿನಾಧ್ಯಂತ ಶಾಲಾ-ಕಾಲೇಜುಗಳಿಗೆ ರಜೆಯ ನಿರ್ಧಾರವನ್ನು ಕೈಗೊಳ್ಳುತ್ತಿಲ್ಲ ಎಂಬುದಾಗಿ ತಿಳಿಸಿದರು. ನಾಳೆ ಎಲ್ಲೆಲ್ಲಿ ಭಾರೀ ಮಳೆಯಾಗುತ್ತಿದೆಯೋ ಆ ಭಾಗದ ಶಾಲೆಯ ಮುಖ್ಯೋಪಾಧ್ಯಾಯರು, ಕಾಲೇಜು ಪ್ರಾಂಶುಪಾಲರು ರಜೆಯನ್ನು ನೀಡುವಂತ ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಅದರಂತೆ ವ್ಯಾಪಕವಾಗಿ ಮಳೆಯಾಗುತ್ತಿರುವಂತ ಸೊರಬ ತಾಲ್ಲೂಕಿನ ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ರಜೆಯ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ಹೇಳಿದರು. ವರದಿ; ವಸಂತ ಬಿ ಈಶ್ವರಗೆರೆ..,…
ಚಿಕ್ಕಬಳ್ಳಾಪುರ: ಕೆನರಾ ಬ್ಯಾಂಕ್ ಒಟ್ಟು 60 ಸಾವಿರ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಿದೆ ಎಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ರಾಜು ಬುಧವಾರ (ಆಗಸ್ಟ್ 27) ಘೋಷಿಸಿದರು. ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿರುವ ಸತ್ಯ ಸಾಯಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ಗೆ ‘ಸಿಎಸ್ಆರ್ ಸರ್ಕಲ್ ಆಫ್ ಹಾನರ್’ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ನ ಪರವಾಗಿ ಅವರು ಮಾತನಾಡಿದರು. ಕೆನರಾ ಬ್ಯಾಂಕ್ಗೆ ಒಟ್ಟು 10 ಸಾವಿರ ಶಾಖೆಗಳಿವೆ. ಎಲ್ಲ ಶಾಖೆಗಳೂ 5 ರಿಂದ 10 ನೇ ತರಗತಿ ಓದುತ್ತಿರುವ ಸರ್ಕಾರಿ ಶಾಲೆಯ 6 ವಿದ್ಯಾರ್ಥಿನಿಯರನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಲಿವೆ. ಈ ವಿದ್ಯಾರ್ಥಿನಿಯರಿಗೆ ಹಣಕಾಸಿನ ನೆರವು ಒದಗಿಸುವ ಜೊತೆಗೆ ಅವರನ್ನು ಆರ್ಥಿಕ ಸಾಕ್ಷರರನ್ನಾಗಿಯೂ ಮಾಡುತ್ತಿದ್ದೇವೆ ಎಂದು ವಿವರಿಸಿದರು. ನಮ್ಮ 177 ಪ್ರಾದೇಶಿಕ ಕಚೇರಿಗಳು ತಲಾ ಒಂದು ಹಿಂದುಳಿದ ಹಳ್ಳಿಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿ ಖರ್ಚು ಮಾಡುತ್ತಿವೆ. ನಮ್ಮ ಬ್ಯಾಂಕ್ ನಿರ್ವಹಿಸುತ್ತಿರುವ 105…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ. https://kannadanewsnow.com/kannada/note-these-documents-are-mandatory-for-adding-or-correcting-names-in-the-ration-card/ https://kannadanewsnow.com/kannada/chitradurga-the-accused-was-arrested-within-24-hours-of-the-case-being-registered-by-the-chalakkere-police/
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಠಾಣೆಯ ಪೊಲೀಸರು ಕೇಸ್ ದಾಖಲಾದಂತ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಕಳ್ಳನಿಂದ ಸುಮಾರು 96,96,800 ಮೌಲ್ಯದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಚಳ್ಳಕೆರೆಯ ಉಡುಪಿ ಗಾರ್ಡನ್ ಹೊಟೇಲ್ನಲ್ಲಿ ಹಣವನ್ನು ಕಾರಿನಲ್ಲಿ ಇಟ್ಟು ಊಟ ಮಾಡಲು ಹೋಗಿದ್ದು ಕೆಎ-51-ಸಿ-3434 ನ ಕಾರಿನ ಚಾಲಕ ರಮೇಶ್, ಊಟ ಮಾಡಿ ಹೊರಗಡೆ ಹೋಗಿ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಕಾರಿನಲ್ಲಿದ್ದ 97,00,000 /- ಹಣವನ್ನು ಕಳ್ಳತನದಲ್ಲಿ ತೆಗೆದುಕೊಂಡು ಹೋಗಿರುವ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣಿಯ ಮೊ.ನಂ.396/2025 ಕಲಂ.303(2) ಬಿ ಎನ್ ಎಸ್ ರೀತ್ಯ ಪ್ರಕರಣ ದಾಖಲಾಗಿರುತ್ತದೆ. ಸದರಿ ಪ್ರಕರಣಗಳ ಆರೋಪಿತರ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಎಪಿಎಸ್, ಪೊಲೀಸ್ ಅಧೀಕ್ಷಕರು ಚಿತ್ರದುರ್ಗ ಜಿಲ್ಲೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶಿವಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ, ಟಿ.ಜ ರಾಜಣ್ಣ ಡಿ.ವೈ.ಎಸ್.ಪಿ ಚಳ್ಳಕೆರ…
ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಇಂದು ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿದೆ. ಹೀಗಾಗಿ ದಿನಾಂಕ 28.08.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಡಿಪ್ಲೋಮೋ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ ಎಂದಿದ್ದಾರೆ. ಇನ್ನೂ ನಾಳೆಯ ಶಾಲಾ-ಕಾಲೇಜುಗಳ ರಜಾ ಅವಧಿಯ ತರಗತಿ ಪಾಠ ಪ್ರವಚನಗಳ್ನುಮುಂದಿನ ರಜಾ ದಿವಸಗಳಲ್ಲಿ ಸರಿದೂಗಿಸಲು ಆದೇಶದಲ್ಲಿ ಸಾಗರ ತಹಶೀಲ್ದಾರ್ ರಶ್ಮೀ ಹಾಲೇಶ್ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು
ಬೆಂಗಳೂರು: ಕರ್ನಾಟಕ ಮಹರ್ಷಿ ವಾರ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸುಮಾರು 5 ಕೋಟಿ ಮೌಲ್ಯದ ಹಲವರ ಆಸ್ತಿ-ಪಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಮೂಲಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರದಲ್ಲಿ ಭಾಗಿಯಾದವರಿಗೆ ಇಡಿ ಬಿಗ್ ಶಾಕ್ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ (KMVSTDCL) ಪ್ರಕರಣದಲ್ಲಿ, PMLA, 2002 ರ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ED, ಸ್ಥಿರ ಆಸ್ತಿಗಳು ಮತ್ತು ಬ್ಯಾಂಕ್ ಬ್ಯಾಲೆನ್ಸ್ ರೂಪದಲ್ಲಿ 5 ಕೋಟಿ ರೂ. (ಅಂದಾಜು) ವರೆಗಿನ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ. ಅಂದಹಾಗೇ ಜಾರಿ ನಿರ್ದೇಶನಾಲಯದಿಂದ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗೋಲಪಲ್ಲಿ ಕಿಶೋರ ರೆಡ್ಡಿ, ನೆಕ್ಕುಂಟಿ ನಾಗರಾಜ್, ಎಟಕೇರಿ ಸತ್ಯನಾರಾಯಣ, ಚಂದ್ರಮೋಹನ್ ಅವರುಗಳಿಗೆ ಸೇರಿದಂತ 4.45 ಕೋಟಿ ಮೌಲ್ಯದ ಭೂಮಿ, ಫ್ಲಾಟ್ ಹಾಗೂ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಇದ್ದಂತ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚನೆ ಮತ್ತು ವಿಸ್ತರಿಸಲು” ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, “ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (PM SWANidhi) ಯೋಜನೆಯ 31.12.2024 ರ ನಂತರವೂ ಸಾಲ ನೀಡುವ ಅವಧಿಯನ್ನು ಪುನರ್ರಚಿಸಲು ಮತ್ತು ವಿಸ್ತರಿಸಲು” ಅನುಮೋದನೆ ನೀಡಿದೆ. ಸಾಲ ನೀಡುವ ಅವಧಿಯನ್ನು ಈಗ ಮಾರ್ಚ್ 31, 2030 ರವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಯ ಒಟ್ಟು ವೆಚ್ಚ *7,332 ಕೋಟಿ. ಪುನರ್ರಚಿಸಲಾದ ಯೋಜನೆಯು 50 ಲಕ್ಷ ಹೊಸ ಫಲಾನುಭವಿಗಳನ್ನು ಒಳಗೊಂಡಂತೆ 1.15 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ.…
ಬೆಂಗಳೂರು: ನಗರದಲ್ಲಿ ಇಂದು ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡ ಪರಿಣಾಮವಾಗಿ ಗಾರೆ ಕೆಲಸದ ಮೇಸ್ತ್ರಿ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಇದೇ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿಯ ಅಗ್ರಹಾರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡಿದೆ. ಈ ದುರ್ಘಟನೆಯಲ್ಲಿ ಬಿಹಾರ ಮೂಲದ ಗಾರೆ ಮೇಸ್ತ್ರಿ ಶಕಲ್ ದಾಸ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ನೀರಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಇಂದು ಗಣೇಶ ಚತುರ್ಥಿಯ ಶುಭ ಸಂದರ್ಭ. ಗಣಪತಿಯ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಎನ್ನುವ ಸಂಪ್ರದಾಯವಿದೆ. ವಾಸ್ತವವಾಗಿ ಗಣಪತಿಯು ಎಲ್ಲಿಗೂ ಹೋಗುವುದೂ ಇಲ್ಲ, ಎಲ್ಲಿಂದಲೂ ಬರುವುದೂ ಇಲ್ಲ. ಅವನು ಸದಾ ನಮ್ಮೊಂದಿಗೆ ಇರುತ್ತಾನೆ. ನಮ್ಮನ್ನು ಅತ್ಯಂತ ಹತ್ತಿರದಿಂದ ಗಮನಿಸಿ ಮಾರ್ಗದರ್ಶನ ನೀಡುತ್ತಾನೆ. ಅವನಿಂದ ನಾವು ಏನನ್ನೂ ಮುಚ್ಚಿಡಲು ಸಾಧ್ಯವಿಲ್ಲ. ಆದರೆ ಒಂದು ಮಾತನ್ನು ಎಲ್ಲ ಭಕ್ತರೂ ಗ್ರಹಿಸಬೇಕು. ಗಣಪತಿ ಪ್ರತಿಷ್ಠಾಪನೆ ಮಾಡಿದಾಗ ಆ ಪರಿಸರದಲ್ಲಿ ಶ್ರದ್ಧೆ-ಗೌರವ ಇರಬೇಕು. ಗಣಪತಿಯ ಪೂಜಾ ವಿಧಿಗಳು ಸರಿಯಾದ ಕ್ರಮದಲ್ಲಿ ನಡೆಯಬೇಕು. ಭಾರತದಲ್ಲಿ ಗಣೇಶನ ಹಬ್ಬ ಅತ್ಯಂತ ಜನಪ್ರಿಯವಾದುದು. ಭಾರತದಲ್ಲಿ ಬ್ರಿಟಿಷರ ಆಡಳಿತವಿದ್ದಾಗ ಹಿಂದೂಗಳು ಒಗ್ಗೂಡಲು ನಿರ್ಬಂಧವಿತ್ತು. ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಪದ್ಧತಿ ಆರಂಭಿಸುವ ಮೂಲಕ ಈ ಹಬ್ಬವನ್ನು ಸಂಘಟನೆಗೆ ಶ್ರೀಕಾರ ಹಾಕಲು ಬಳಸಿದರು. ಮಹಾರಾಷ್ಟ್ರದಲ್ಲಿ ಇದು ಆರಂಭವಾದರೂ ಈಗ ಇಡೀ ದೇಶಕ್ಕೆ ಇದು ವ್ಯಾಪಿಸಿದೆ. ಎಷ್ಟೋ ಕುಟುಂಬಗಳಲ್ಲಿ ತಾವೇ ಸ್ವತಃ ರೂಪಿಸಿದ ಗಣಪತಿ ವಿಗ್ರಹವನ್ನು ಪೂಜಿಸುತ್ತಾರೆ. ಕೆಲವರು ಕೊಂಡು ತಂದ ವಿಗ್ರಹವನ್ನು ಮನೆಯಲ್ಲಿ…
ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿಯ ಅಗ್ರಹಾರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡಿದೆ. ಈ ದುರ್ಘಟನೆಯಲ್ಲಿ ಬಿಹಾರ ಮೂಲದ ಓರ್ವ ಕಟ್ಟಡ ಕಾರ್ಮಿಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇನ್ನೂ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/why-is-it-necessary-to-offer-a-prayer-in-front-of-ganapati/ https://kannadanewsnow.com/kannada/mysore-dasara-hindu-festival-yaduveer-odefiers-return-to-dk-shivakumar/














