Author: kannadanewsnow09

ಇಂದಿನ ವಾತಾವರಣದಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚುತ್ತಿದೆ. ಒಳ್ಳೆಯದಕ್ಕೆ ಖರ್ಚು ಮಾಡಿದರೆ ಖರ್ಚು ಮಾಡುವುದು ದೊಡ್ಡ ಮಾನಸಿಕ ನ್ಯೂನತೆಯಲ್ಲ. ಆದರೆ ನಮ್ಮ ಹಣವನ್ನು ಅನಗತ್ಯ ವಿಷಯಗಳಿಗೆ ಮತ್ತು ವೈದ್ಯಕೀಯ ವೆಚ್ಚಗಳಿಗೆ ವ್ಯರ್ಥ ಮಾಡುವುದನ್ನು ಮುಂದುವರೆಸಿದರೆ, ಅದು ನಮಗೆ ಅನಾನುಕೂಲವನ್ನು ಉಂಟುಮಾಡುತ್ತದೆ. ಈ ಪರಿಸ್ಥಿತಿಯನ್ನು ಎಷ್ಟರ ಮಟ್ಟಿಗೆ ಬದಲಾಯಿಸಬಹುದು ಎಂಬುದು ತಿಳಿದಿಲ್ಲ. ಆದರೆ ಆದಾಯವನ್ನು ಹೆಚ್ಚಿಸುವುದರಿಂದ ವೆಚ್ಚವನ್ನು ಕಡಿಮೆ ಮಾಡಬಹುದು, ಆದರೆ ಖರ್ಚು ಮಾಡದಿರುವುದು ಅಸಾಧ್ಯ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ 1 ರೂಪಾಯಿ ಖರ್ಚನ್ನೂ 1000 ರೂಪಾಯಿಗಳಾಗಿ ಪರಿವರ್ತಿಸಲು ನಾವು ಏನು ಮಾಡಬೇಕೆಂದು ತಿಳಿಯಬಹುದು . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು…

Read More

ಕಲಬುರ್ಗಿ: ಕಲಬುರ್ಗಿಯಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಕಲ್ಯಾಣ ಭಾಗದ 7 ಜಿಲ್ಲೆಗಳ ಅಭಿವೃದ್ಧಿಗೆ 11,779 ಕೋಟಿ ರೂ.ಗಳ ಯೋಜನೆಗಳಿಗೆ ಅಂಗೀಕಾರವನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಂಗಳವಾರದಂದು ನಡೆದಂತ ಸಂಪುಟ ಸಭೆಯಲ್ಲಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರದಂದು 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಿದ್ಧರಾಮಯ್ಯ ಅವರು, ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ಮಹಾನಗರ ಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು. ಮಂಗಳವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ…

Read More

ನವದೆಹಲಿ: ಅಪರೂಪದ ಧೂಮಕೇತು ಅಟ್ಲಾಸ್ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ನಲ್ಲಿ ಗೋಚರಿಸಲಿದೆ. 2023ರ ಜನವರಿಯಲ್ಲಿ ದೂರದರ್ಶಕದಲ್ಲಿ ಸುಮಾರು 100 ಕೋಟಿ ಕಿಮೀ ದೂರದಲ್ಲಿ ಕಂಡು, ಇದನ್ನು ಶತಮಾನದ ಧೂಮಕೇತು ಎಂದೇ ಬಣ್ಣಿಸಲಾಗಿತ್ತು. ಈಗ ಇದನ್ನು ವರ್ಷದ ಧೂಮಕೇತು ಎಂದು ಅಂದಾಜಿಸಲಾಗಿದ್ದು, ಭೂಮಿಗೆ ಸಮೀಪಕ್ಕೆ ಬರುವಂತ ಅಟ್ಲಾಸ್ ಧೂಮಕೇತುವನ್ನು ಈ ಬಾರಿ ಬರಿಗಣ್ಣಿನಿಂದ ನೋಡಬಹುದಾಗಿದೆ. ಸುಚಿನ್ಸನ್-ಅಟ್ಲಾಸ್ ಹೆಸರಿನ ಧೂಮಕೇತು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸೂರ್ಯೋದಯಕ್ಕೆ ಮುನ್ನ ಬರಿಗಣ್ಣಿಗೆ ಕಾಣಿಸಲಿದೆ. ಸೌರವ್ಯೂಹದ ಹೊರವಲಯ ಊರ್ಸ್ ಕ್ಲೌಡ್ ನಿಂದ ಅಂದರೆ ಸುಮಾರು 3 ಜ್ಯೋತಿರ್ವರ್ಷ ಅಂದರೆ 30 ಟ್ರಿಲಿಯನ್ ಕಿಮೀ ದೂರದಿಂದ ಹೊರಟ ಈ ಧಊಮಕೇತು ಸೆಕೆಂಡ್ ಗೆ ಸುಮಾರು 30 ಕಿಲೋ ಮೀಟರ್ ವೇಗದಲ್ಲಿ ಕ್ರಮಿಸುತ್ತಾ ಸೆ.27ರಂದು ಸೂರ್ಯನನ್ನು ಸಮೀಪಿಸಲಿದೆ. ಸುಮಾರು 80 ಸಾವಿರ ವರ್ಷಕ್ಕೊಮ್ಮೆ ಸೂರ್ಯನನ್ನು ಸುತ್ತುವ ಈ ಧೂಮಕೇತು ಸೂರ್ಯನಿಂದ ಹಿಂತಿರುಗುವಾಗ ಅಕ್ಟೋಬರ್.12ರಂದು ಭೂಮಿಗೆ ಸಮೀಪದಲ್ಲಿ ಸಂಜೆ ವೇಳೆ ಪಶ್ಚಿಮ ಆಕಾಶದಲ್ಲಿ ಬರಿಗಣ್ಣಿಗೆ ಕಾಣಿಸಲಿದೆ. https://kannadanewsnow.com/kannada/man-arrested-for-theft-to-pay-off-tomato-crop-loss-loan/ https://kannadanewsnow.com/kannada/karnataka-high-court-judge-m-nagaprasanna-sets-another-record-hears-503-petitions-in-a-single-day/ https://kannadanewsnow.com/kannada/sc-issues-notice-to-dk-shivakumar-in-disproportionate-assets-case/

Read More

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮತ್ತೊಂದು ದಾಖಲೆ ಎನ್ನುವಂತೆ ಒಂದೇ ದಿನ ಬರೋಬ್ಬರಿ 503 ಅರ್ಜಿಗಳನ್ನು ವಿಚಾರಣೆ ನಡೆಸಿದ್ದಾರೆ. ಹೌದು ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರುವಾಸಿಯಾಗಿರುವಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮಂಗಳವಾರದಂದು ಕಲಪದಲ್ಲಿ ಬರೋಬ್ಬರಿ 503 ಅರ್ಜಿಗಳನ್ನು ವಿಚಾರಣೆ ನಡೆಸಿದರು. ಬೆಂಗಳೂರಿನ ಪ್ರಧಾನ ಪೀಠದಲ್ಲಿನ 17ನೇ ಕೋರ್ಟ್ ಹಾಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಮಂಗಳವಾರದಂದು ಕಲಾಪದಲ್ಲಿ ಪಟ್ಟಿ ಒಟ್ಟು 503 ಕ್ರಿಮಿನಲ್ ಹಾಗೂ ರಿಟ್ ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದವು. ದಿನದ ಕಲಾಪದ ಅವಧಿ ಪೂರ್ಣಗೊಳ್ಳುವುದಕ್ಕೆ 45 ನಿಮಿಷ ಮುಂಚಿತವಾಗೇ ಅಷ್ಟೂ ಅರ್ಜಿಗಳನ್ನು ವಿಚಾರಣೆ ನಡೆಸಿ ಮುಕ್ತಾಗೊಳಿಸಿದರು. ಇನ್ನೂ 187 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದರೇ, 125 ಪ್ರಕರಣಗಳಲ್ಲಿ ಮಧ್ಯಂತರ ಆದೇಶ ನೀಡಲಾಗಿದೆ. ಈ ಹಿಂದೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಒಂದೇ ದಿನ ಕಲಾಪದಲ್ಲಿ 600ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಿ ದಾಖಲೆ ಬರೆದಿದ್ದರು. https://kannadanewsnow.com/kannada/man-arrested-for-theft-to-pay-off-tomato-crop-loss-loan/ https://kannadanewsnow.com/kannada/nekkanti-nagaraj-a-close-aide-of-former-minister-b-nagendra-the-main-accused-in-the-valmiki-scam-has-been-granted-bail/

Read More

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದಂತ ಕೋಟ್ಯಂತರ ರೂ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಜಾಮೀನು ಕೋರಿ ನೆಕ್ಕಂಟಿ ನಾಗರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿದಂತ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದಂತ ಏಕಸದಸ್ಯ ಹೈಕೋರ್ಟ್ ನ್ಯಾಯಪೀಠವು ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ಆರೋಪಿ ನೆಕ್ಕಂಟಿ ನಾಗರಾಜ್ ಗೆ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತೆ ಒದಗಿಸಬೇಕು. ನ್ಯಾಯಾಲಯ ವಿನಾಯ್ತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ನ್ಯಾಯಾಲಯದಲ್ಲಿ ಹಾಜರಿರಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಪ್ರಕರಣ ವಿಲೇವಾರಿಯಾಗುವವರೆಗೂ ನ್ಯಾಯಾಲಯದ ಅನುಮತಿ ಪಡೆಯದೇ ವ್ಯಾಪ್ತಿ ತೊರೆಯುವಂತಿಲ್ಲ ಎನ್ನುವುದು ಸೇರಿದಂತೆ ಹಲವು ಷರತ್ತು ವಿಧಿಸಿ, ಜಾಮೀನ ನೀಡಿದೆ. https://kannadanewsnow.com/kannada/jammu-and-kashmir-assembly-elections-2024-first-phase-of-polling-begins-in-7-districts/ https://kannadanewsnow.com/kannada/man-arrested-for-theft-to-pay-off-tomato-crop-loss-loan/ https://kannadanewsnow.com/kannada/sc-issues-notice-to-dk-shivakumar-in-disproportionate-assets-case/

Read More

ಬೆಂಗಳೂರು: ನಗರದ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು 57 ಲ್ಯಾಪ್ ಟಾಪ್ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲ್ಯಾಪ್ ಟಾಪ್ ಕದ್ದಿದ್ದು ಏಕೆ ಎನ್ನುವ ಪೊಲೀಸರ ತನಿಖೆಯ ಪ್ರಶ್ನೆಗೆ ಆರೋಪಿ ಹೇಳಿದಂತ ಉತ್ತರ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಆ ಬಗ್ಗೆ ಮುಂದೆ ಓದಿ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೂಸೂರು ತಾಲ್ಲೂಕಿನ ತೋರಪಲ್ಲಿ ಗ್ರಾಮದ ಮುರುಗೇಶ್ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದನು. ಈ ಕಂಪನಿಯಲ್ಲಿ ಬರೋಬ್ಬರಿ 22 ಲಕ್ಷ ಮೌಲ್ಯದ 57 ಲ್ಯಾಪ್ ಟಾಪ್ ಕಳ್ಳತನವಾಗಿತ್ತು. ಈ ಸಂಬಂಧ ಕಂಪನಿ ವ್ಯವಸ್ಥಾಪಕರು ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದಂತ ಪೊಲೀಸರು ಕಂಪನಿಯ ಸಿಸ್ಟಂ ಅಡ್ಮಿನ್ ಕೆಲಸ ಮಾಡುತ್ತಿದ್ದಂತ ಆರೋಪಿ ಮುರುಗೇಶ್ ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ಅವರ ಮೇಲೆ ಅನುಮಾನಬಂದು ವಶಕ್ಕೆ ಪಡೆದು ವಿಚಾರಿಸಿದಾಗ…

Read More

ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್ ಮಂಗಳವಾರದಂದು ನೋಟಿಸ್ ಜಾರಿಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನಾಯಾಯಮೂರ್ತಿ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಇನ್ನೂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ. ಆರಂಭದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಪೀಠವು ಇದು ರಾಜ್ಯ, ಸಿಬಿಐ ನಡುವಿನ ವಿಯಷವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್…

Read More

ಜಮ್ಮು-ಕಾಶ್ಮೀರ: ಇಂದು ಜಮ್ಮು-ಕಾಶ್ಮೀರದ 7 ಜಿಲ್ಲೆಗಳಲ್ಲಿ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭಗೊಂಡಿದೆ. ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳು 10 ವರ್ಷಗಳಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲಿವೆ. ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳಲ್ಲಿ 16 ಸೇರಿದಂತೆ 24 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ. 2019 ರ ಆಗಸ್ಟ್ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. ಮೊದಲ ಹಂತದಲ್ಲಿ 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 23,27,580 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮೊದಲ ಹಂತದಲ್ಲಿ 18 ರಿಂದ 19 ವರ್ಷದೊಳಗಿನ…

Read More

ಮಲಪ್ಪುರಂ: ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು ನೋವುಗಳು ಮಂಕಿಪಾಕ್ಸ್ ಕಾರಣವಾಗಿದೆ. ಇಂತಹ ಸಾವಿಗೆ ಕಾರಣವಾದ ಶಂಕಿತ ಮಂಕಿಪಾಕ್ಸ್ ವೈರಸ್ ಲಕ್ಷಣಗಳು ಇತ್ತೀಚಿಗೆ ವಿದೇಶದಿಂದ ಮರಳಿದ ಕೇರಳದ ಮಲಪ್ಪುರಂ ಜಿಲ್ಲೆಯ ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ವಿದೇಶದಿಂದ ದೆಹಲಿಗೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕರ್ನಾಟಕದ ಗಡಿಯ ಕೇರಳದಲ್ಲೇ ಪ್ರಕರಣಗಳ ಆಂತಕ ಎದುರಾಗಿದೆ. ವಿದೇಶದಿಂದ ಬಂದಂತ ವ್ಯಕ್ತಿಯು ಹಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಅನಾರೋಗ್ಯಕ್ಕೆ ತುತ್ತಾಗಿದ್ದ ಈತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಕಿಪಾಕ್ಸ್ ಪ್ರಕರಣವಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆತನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. https://kannadanewsnow.com/kannada/over-15-passengers-injured-as-private-bus-overturns-near-haveri/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/

Read More

ಕುಬೇರನಿಗೆ ಈ 5 ರಾಶಿಯವರಿಗೆ ತುಂಬಾ ಇಷ್ಟ. ನೀವು ಕುಬೇರನ ಆರಾಧನೆಯನ್ನು ನಿಯಮಿತವಾಗಿ ಮಾಡಲು ಪ್ರಾರಂಭಿಸಿದರೆ, ನಿಮಗೆ ಹಣವು ಹರಿದುಬರುತ್ತದೆ. ಜ್ಯೋತಿಷ್ಯದ ಆಧಾರದ ಮೇಲೆ ಕುಬೇರನ ನೆಚ್ಚಿನ ಐದು ರಾಶಿಚಕ್ರ ಚಿಹ್ನೆಗಳ ಕಿರು ಪಟ್ಟಿ ಇಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More