Author: kannadanewsnow09

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ಇದಕ್ಕೆ ಕಾರಣರಾದಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು. ಅದರಂತೆ ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರ…

Read More

ಶಿವಮೊಗ್ಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಹೌದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮೀಕ್ಷೆ ನಡೆಯುತ್ತಿದ್ದರು ಕೂಡ ಎಂ ರಂಗನಾಥ ಕೆಲಸಕ್ಕೆ ರಜೆ ಹಾಕಿದ್ದಾರೆ. ಸಮೀಕ್ಷೆ ಮಾಡುವ ಒಂದಿಷ್ಟು ಜವಾಬ್ದಾರಿ ಹೊಂದಿದ್ದಾರೆ. ರಂಗನಾಥ್ ಬಿ ಆರ್ ಎಸ್ ಕೇಂದ್ರದ ಸಮನ್ವಯ ಅಧಿಕಾರಿಯಾಗಿದ್ದಾರೆ. ರಜೆ ಹಾಕಿ ಅಧಿಕಾರಿಗಳ ದೂರವಾಣಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಂಗನಾಥ್ ಅಮಾನತುಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎನ್ನುವಂತೆ 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025- 26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕದ ಹೆಚ್ಚಳ ವಿವರ ಎಸ್ ಎಸ್…

Read More

ಶಿವಮೊಗ್ಗ: ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಸಾಗರ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಬರೋಬ್ಬರಿ 3 ಕೋಟಿ ಅನುದಾನವನ್ನು ಸರ್ಕಾರದಿಂದ ತಂದಿದ್ದಾರೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ 1 ಕೋಟಿ ಅನುದಾನ ಮಂಜೂರಾತಿ ಪಡೆದಿದ್ದರೇ, ಸಾರಿಗೆ ಇಲಾಖೆಯಿಂದ 2 ಕೋಟಿ ಅನುದಾನವನ್ನು ನೀಡಲಾಗಿದೆ. ಈ ಮೂಲಕ ಸಾಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಹೈಟೆಕ್ ಆಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.  ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿಶೇಷಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಕೋರಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವಂತ ಸರ್ಕಾರವು 3 ಕೋಟಿ ವೆಚ್ಚದಲ್ಲಿ ಸಾಗರದ ಕೆ ಎಸ್ ಆರ್ ಟಿಸಿ…

Read More

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ…

Read More

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ ನಿರ್ಮಾಣ ಹಾಗೂ ರಕ್ಷಣಾ ಭೂಮಿ ತೋಟಗಾರಿಕೆ ಕೆಲಸ (ಪ್ರಥಮ ಹಂತ – 5.34 ಏಕರೆ) ಒಟ್ಟು 3 ಕಿ.ಮೀ ಉದ್ದದಲ್ಲಿ ಪ್ರಾರಂಭಿಸಲಾಗಿದೆ. 2015ರ ಮಾಸ್ಟರ್ ಪ್ಲಾನ್‌ನಲ್ಲಿ, ಈಜಿಪುರ ಸಿಗ್ನಲ್ (ಶ್ರೀನಿವಾಗಿಲು) ಯಿಂದ ಸರಜಾಪುರ ಮೈನ್ ರಸ್ತೆ (ಓಆರ್‌ಆರ್) ವರೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿತ್ತು. ಇದು ಪೂರ್ವ ಬೆಂಗಳೂರು ಮತ್ತು ಓಆರ್‌ಆರ್, ಹೆಚ್‌ಎಸ್‌ಆರ್ ನಡುವೆ ಸಂಪರ್ಕ ಕಲ್ಪಿಸಲು ಉದ್ದೇಶಿತವಾಗಿತ್ತು. ಆದರೆ…

Read More

ಬೆಂಗಳೂರು: ಇಂದು ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಿಂದ ಒಟ್ಟು 280 ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ), ಮುಖ್ಯ ಭದ್ರತಾ ಮತ್ತು ಜಾಗ್ರತಾಧಿಕಾರಿ, ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ ) ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೆಂಪೇಗೌಡ ಬಸ್ ನಿಲ್ದಾಣ, ವಿಭಾಗೀಯ ನಿಯಂತ್ರಣಾಧಿಕಾರಿ‌ ಬೆಂಗಳೂರು ಕೇಂದ್ರೀಯ ವಿಭಾಗ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದವರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಚಾಲಕ ನಿರ್ವಾಹಕರಿಗೆ ಹಾಗೂ ಪ್ರಯಾಣಿಕರಿಗೆ ಸಿಹಿ ವಿತರಿಸುವ ಮೂಲಕ ಶುಭ…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಡುವೆಯೂ ಶಿಕ್ಷಕರು ಜಾತಿಗಣತಿ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಾಗಾದ್ರೇ ಈವರೆಗೆ ಎಷ್ಟು ಮನೆಗಳ ಸರ್ವೆ ಮಾಡಲಾಗಿದೆ ಎಂಬ ಬಗ್ಗೆ ಅಂಕಿ ಅಂಶ ಮುಂದಿದೆ ಓದಿ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ ಏರಿಯೆಲ್ಲ ಶಿಕ್ಷಕರು ಸಮೀಕ್ಷೆ ನಡೆಸುತ್ತಿರುವುದು ವರದಿಯಾಗಿದೆ. ಸರ್ವರ್ ಸಮಸ್ಯೆ ಕಾರಣಕ್ಕಾಗಿ ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಿಕೆ ಮಾಡುವಂತೆಯೂ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಎಲ್ಲದರ ನಡುವೆ ಜಾತಿಗಣತಿ ಕಾರ್ಯ ನಡೆಸಲಾಗುತ್ತಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಹಿತಿಯಂತೆ ಈವರೆಗೆ 1,78,186 ಮನೆಗಳ ಸರ್ವೆಯನ್ನು ಸಿಬ್ಬಂದಿಗಳು ನಡೆಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/two-gram-panchayat-members-caught-in-lokayukta-trap-for-accepting-bribe-in-davangere/ https://kannadanewsnow.com/kannada/important-information-from-bescom-for-griha-jyoti-beneficiaries/

Read More

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿಯನ್ನು ನಡೆಸಿ ಇಬ್ಬರು ಗ್ರಾಮ ಪಂಚಾಯ್ತಿ ಸದಸ್ಯರನ್ನು ರೆಡ್ ಹ್ಯಾಂಡ್ ಹಿಡಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಈ ಇಬ್ಬರು ಗುತ್ತಿಗೆದಾರ ಜಾವೇದ್ ನಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುತ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚ ಪಡೆಯಲು ಸಹಾಯ ಮಾಡ್ತಿದ್ದ ಮಧ್ಯವರ್ತಿ ಮಂಜುನಾಥ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ ಎಸ್ ಕೌಲಾಪುರ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಇದೀಗ ಚನ್ನಗಿರಿಯ ಹೊದಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಪ್ರದೀಪ್, ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/bjp-has-not-even-put-up-a-small-pillar-or-built-a-flyover-in-bengaluru-dks/ https://kannadanewsnow.com/kannada/important-information-from-bescom-for-griha-jyoti-beneficiaries/

Read More

ಬೆಂಗಳೂರು: “ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ರಸ್ತೆಗುಂಡಿ ಮುಚ್ಚಲು ಆಗದವರು ಟನಲ್ ರಸ್ತೆ ಮಾಡಲು ಹೊರಟಿದ್ದಾರೆ ಎನ್ನುವ ಆರ್. ಅಶೋಕ್ ಅವರ ಟೀಕೆಯ ಬಗ್ಗೆ ಕೇಳಿದಾಗ, “ಅವರು ಕೇಂದ್ರದಿಂದ ಬೆಂಗಳೂರಿಗೆ ಒಂದೇ ಒಂದು ರೂಪಾಯಿ ಅನುದಾನ ಕೊಡಿಸಿದ್ದಾರೆಯೇ? ಬಿಜೆಪಿಯವರು ಏನೇನೂ ಮಾಡಿಲ್ಲ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ” ಎಂದು ತಿರುಗೇಟು ನೀಡಿದರು. “ಎಲ್ಲೆಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆಯೋ ಅಲ್ಲಿಗೆ ಆಯಾಯ ಕ್ಷೇತ್ರದ ಶಾಸಕರು ತೆರಳಿ ಪರಿಶೀಲನೆ ನಡೆಸಲಿ. ಅವರುಗಳೇ ಪರಿಶೀಲನೆ ನಡೆಸಿ ಗುಂಡಿಗಳನ್ನು ಮುಚ್ಚಿಸಿಕೊಳ್ಳಲಿ. ಅಧಿಕಾರಿಗಳು ಅವರಿಗೂ ಗೌರವ ನೀಡುತ್ತಾರೆ. ನಾವು…

Read More