Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಬೆಂಗಳೂರಲ್ಲಿ ಅರ್ಚಕ ಗುರುರಾಜ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರಕ್ಕೆ ಹೇಳಿಕೆ ನೀಡಿದ್ದಂತ ಅರ್ಚಕ ಗುರುರಾಜ್ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಈ ದೂರು ಆಧರಿಸಿ ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಅರ್ಚಕ ಗುರುರಾಜ್ ಅಶ್ಲೀಲ ಪದ ಬಳಕೆ ಮಾಡಿದ್ದರು. ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ತಲೆಹಿಡುಕ ಎಂಬುದಾಗಿ ಹೇಳಿದ್ದರು. ಈ ಹಿನ್ನಲೆಯಲ್ಲಿ ಅರ್ಚಕ ಸ್ಥಾನದಿಂದ ರಾಘವೇಂದ್ರ ಸೇವಾ ಸಮಿತಿಯಿಂದ ಗುರುರಾಜ್ ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೆ ಅವರನ್ನು ಕೆಂಗೇರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/the-commission-submitted-an-investigation-report-to-chief-minister-siddaramaiah-regarding-the-irregularities-in-bbmps-work-execution/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರವರೆಗೆ ನಡೆದಿರುವಂತ ಕಾಮಗಾರಿಗಳ ಅನುಷ್ಠಾನದಲ್ಲಿನ ಅಕ್ರಮದ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸಿದೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಕೆಯಾಗಿರುವಂತ ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಸುಧಾರಣಾ ಕ್ರಮಕೈಗೊಳ್ಳಲು ಸಹ ಶಿಫಾರಸ್ಸನ್ನು ಆಯೋಗ ಮಾಡಿದೆ. ಅಂದಹಾಗೇ ಬಿಬಿಎಂಪಿ ಕಾಮಗಾರಿ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಹೀಗಾಗಿ ಆಗಸ್ಟ್.5, 2023ರಂದು ತಜ್ಞರನ್ನೊಳಗೊಂಡ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿತ್ತು. ಡಿಸೆಂಬರ್.15ರಂದು ತನಿಖಾ ಸಮಿತಿ ವಾಪಾಸ್ ಕೂಡ ಸರ್ಕಾರ ಪಡೆದಿತ್ತು. ಆ ಬಳಿಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ವಿಚಾರಣಾ ಆಯೋಗಕ್ಕೆ ತನಿಖೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಲು ಮೂರು ಪರಿಶೀಲನಾ…
ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…
ಬೆಂಗಳೂರು: ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ರೋಸ್ಟರ್ ಪ್ರಕಟಿಸದೇ ಇದ್ದರೇ, ಹಾಲಿ ರೋಸ್ಟರ್ ನಂತೆ ಚುನಾವಣೆ ನಡೆಸಲು ಆದೇಶಿಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇಂದು ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿತು. ಮೀಸಲಾತಿ ಪ್ರಕಟಿಸಲು ಕೊನೆಯ ಅವಕಾಶವನ್ನು ಹೈಕೋರ್ಟ್ ನೀಡಿದೆ. ಮೀಸಲಾತಿ ಪ್ರಕಟಿಸದಿದ್ದರೇ ಹಾಲಿ ರೋಸ್ಟರ್ ಪ್ರಕಾರ ಚುನಾವಣೆ ನಡೆಸಲು ಸೂಚಿಸುವುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಎಚ್ಚರಿಕೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.11ಕ್ಕೆ ಮುಂದೂಡಿದೆ. https://kannadanewsnow.com/kannada/the-47th-ganesh-festival-program-of-the-subhash-nagar-youth-association-of-the-sea-was-celebrated-with-great-enthusiasm/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/
ಶಿವಮೊಗ್ಗ: ಸಾಗರ ಸುಭಾಷ್ ನಗರ ಯುವಕಸಂಘದ ವತಿಯಿಂದ 47ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನಮನ ಸೆಳೆಯಿತು. ಶಿವಮೊಗ್ಗ ಜಿಲ್ಲೆಯ ಸಾಗರದ ಸುಭಾಷ್ ನಗರ ಯುವಕ ಸಂಘದ ವತಿಯಿಂದ 47ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಶುಕ್ರವಾರದಂದು ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಇದರ ಮುಖ್ಯ ಅತಿಥಿಗಳಾಗಿ ಸುಭಾಷ್ ನಗರ ಯುವಕ ಸಂಘದ ಗೌರವಾಧ್ಯಕ್ಷರಾದ ಮಂಜುನಾಥ್ ಎಸ್.ಡಿ, ಅಧ್ಯಕ್ಷರಾದ ಮಹೇಶ್ ಜಿ ಆಚಾರ್, ನಗರಸಭೆ ಅಧ್ಯಕ್ಷರಾದ ಮೈತ್ರಿ ವೀರೇಂದ್ರ ಪಾಟೀಲ್, ನಗರಸಭೆ ಮಾಜಿ ಸದಸ್ಯರಾದ ಪುರುಷೋತ್ತಮ, ಎಸ್. ಎಲ್ ಮಂಜುನಾಥ್, ವಕೀಲರಾದ ಪ್ರೇಮ್ ಸಿಂಗ್, ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶ್ ಹಾಜರಿದ್ದರು. ಇದೇ ವೇಳೆ ನಾಟಿ ವೈದ್ಯರಾದ ಬಿ.ಕೆ ನಾರಾಯಣ ಭಟ್, ಅಮೃತ ಕ್ಲಿನಿಕ್ ವೈದ್ಯರಾದ ಡಾ. ಬಿ. ಗಿರೀಶ್ ಭಟ್ ಹಾಗೂ ಯೋಗ ಪಟು ಕುಮಾರಿ ಸನ್ನಿಧಿ ಎಸ್.ವಿ ಅವರನ್ನು ಸುಭಾಷ್…
ನವದೆಹಲಿ: 2001 ರಲ್ಲಿ ತನ್ನ ಸೊಸೆಯ ಮೇಲೆ ನಡೆದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮಹಿಳೆಯೊಬ್ಬರು ತನ್ನ ನೆರೆಹೊರೆಯವರ ಸಾಕ್ಷ್ಯವನ್ನು ಅವಲಂಬಿಸಿ ಆತ್ಮಹತ್ಯೆ ಮಾಡಿಕೊಂಡರು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ. ಅಲ್ಲದೇ ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಮಹಿಳೆಯ ಬಗ್ಗೆ ಗಾಳಿಗಿಂತ ವೇಗವಾಗಿ ಸುದ್ದಿ ಹರಡುತ್ತದೆ ಎಂಬುದಾಗಿ ಅಭಿಪ್ರಾಯ ಪಟ್ಟಿತು. ಅಂತಹ ವಿಷಯಗಳಲ್ಲಿ ಅತ್ತೆ-ಮಾವಂದಿರು ವರದಕ್ಷಿಣೆಗಾಗಿ ಸೊಸೆಯನ್ನು ಕಿರುಕುಳ ಮಾಡುತ್ತಿದ್ದಾರೆ ಎಂಬ ಮಾತು ಗಾಳಿಗಿಂತ ವೇಗವಾಗಿ ಹರಡುತ್ತದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ ವಿ ಅಂಜಾರಿಯಾ ಅವರ ಪೀಠವು ಉತ್ತರಾಖಂಡ್ ಹೈಕೋರ್ಟ್ನ ತೀರ್ಪನ್ನು ರದ್ದುಗೊಳಿಸಿತು. ಹೈಕೋರ್ಟ್ ಮೇಲ್ಮನವಿದಾರ ಭಗವತಿ ದೇವಿಯ ಅಪರಾಧ ಮತ್ತು ಶಿಕ್ಷೆಯನ್ನು ಎತ್ತಿಹಿಡಿದಿದ್ದು, ಪ್ರತಿವಾದಿ ಸಾಕ್ಷಿಯಾಗಿ ಸಲ್ಲಿಸಲಾದ ನೆರೆಹೊರೆಯವರ ಸಾಕ್ಷ್ಯವನ್ನು ತಳ್ಳಿಹಾಕಿತು. ನಾಲ್ಕು ಗೋಡೆಗಳ ಒಳಗೆ ನಡೆದ ವರದಕ್ಷಿಣೆ ಬೇಡಿಕೆಗೆ ಸಂಬಂಧಿಸಿದಂತೆ ನೆರೆಹೊರೆಯವರು ಯಾವುದೇ ಸತ್ಯವನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಾಲಯವು ಇದನ್ನು “ತಪ್ಪಾದ ಸಂಶೋಧನೆ” ಎಂದು ಬಣ್ಣಿಸಿತು, ವಿಶೇಷವಾಗಿ ಅಂತಹ ವಿಷಯಗಳಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಅನ್ನು ಸರ್ಕಾರ ನೀಡಿದೆ. ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ನಾಳೆಯಿಂದಲೇ ನೂತನ ಮುದ್ರಾಂಕ ಶುಲ್ಕ ಜಾರಿಯಾಗಲಿದೆ. ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕ ನಾಳೆಯಿಂದ ಹೆಚ್ಚಳವಾಗಲಿದೆ. ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿದಂತೆ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ನೋಂದಣಿ ಶುಲ್ಕವನ್ನು ಶೇ.1ರಿಂದ ಶೇ.2ರಷ್ಟು ಪರಿಷ್ಕರಿಸಿದೆ. ನಾಳೆಯಿಂದ ಜಾರಿಗೆ ಬರುವಂತೆ ಶೇ.1ರಿಂದ ಶೇ.2ರಷ್ಟು ಪರಿಷ್ಕರಿಸಿದೆ. ತಮಿಳುನಾಡು ರಾಜ್ಯದಲ್ಲಿ ಶೇ.9ರಷ್ಟು ಕೇರಳದಲ್ಲಿ ಶೇ.10ರಷ್ಟು, ಆಂಧ್ರಪ್ರದೇಶದಲ್ಲಿ ಶೇ.7.5ರಷ್ಟು, ತೆಲಂಗಾಣದಲ್ಲಿ ಶೇ.7.5ರಷ್ಟು ಶುಲ್ಕವನ್ನು ದಾಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ವಿಧಿಸಲಾಗುತ್ತಿದೆ. ಇತರ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು ಸರ್ಕಾರ ಸಮರ್ಥನೆ…
ಬೆಂಗಳೂರು: ಮೀಸಲಾತಿಗೂ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ವೀರಶೈವ ಲಿಂಗಾಯತರು ಗಣತಿ ವೇಳೆ ನೈಜ ಮಾಹಿತಿ ನೀಡುವಂತೆ ಮನವಿ ಮಾಡಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಧರಿಸಿದೆ ಎಂದು ಮಹಾಸಭಾದ ಹಿರಿಯ ಉಪಾಧ್ಯಕ್ಷ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಮೀಸಲಾತಿ ದೊರಕಬಹುದು ಎಂದು ತಮ್ಮ ಉಪಜಾತಿಗೆ ಸಮೀಪದ ಮತ್ತೊಂದು ಜಾತಿಯ ಹೆಸರು ಬರೆಸುತ್ತಿದ್ದಾರೆ. ಈ ಸಮೀಕ್ಷೆಯ ವರದಿ ಗೌಪ್ಯವಾಗಿದ್ದು, ಇದರಿಂದ ಜಾತಿ ಪ್ರಮಾಣ ಪತ್ರ ಲಭಿಸುವುದಿಲ್ಲ ಎಂದು ತಿಳಿಸಿದರು. ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅನುಪಸ್ಥಿತಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ನಡೆದ ಸಚಿವರು, ಶಾಸಕರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಸುಳ್ಳು ಸತ್ಯ ಆಗಲ್ಲ: ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲಿ ಯಾತ್ರೆ ಮಾಡುತ್ತಾ ಮಿಥ್ಯಾರೋಪ ಮಾಡುತ್ತಿದ್ದಾರೆ, ಸುಳ್ಳು ಎಷ್ಟೇ ಸಾರಿ ಹೇಳಿದ್ರು ಅದು ಸತ್ಯ ಆಗಲು ಸಾಧ್ಯವಿಲ್ಲ ಎಂದು ಈಶ್ವರ ಖಂಡ್ರೆ ತಿರುಗೇಟು ನೀಡಿದರು.…
ಬೆಂಗಳೂರು: ಖ್ಯಾತ ಚಿತ್ರನಟ ದಿವಂಗತ ಟಿ.ಎನ್. ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಾಣಕ್ಕಾಗಿ ಮಂಜೂರು ಮಾಡುವಾಗ ವಿಧಿಸಿದ್ದ ಷರತ್ತುಗಳ ಉಲ್ಲಂಘನೆಯಾಗಿದ್ದು, ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಸಲು ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ವಿಕಾಸೌಧದಲ್ಲಿಂದು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರಿಂದ ವಿಷ್ಣುವರ್ಧನ್ ಸ್ಮಾರಕ ಕುರಿತಂತೆ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಲಸಂದ್ರ ಗ್ರಾಮದ ಸರ್ವೆ ನಂ.26 ರಲ್ಲಿ 62 ಎಕರೆ20 ಗುಂಟೆ ಪ್ರದೇಶವನ್ನು “ತುರಹಳ್ಳಿ ರಾಜ್ಯ ಅರಣ್ಯ” ಎಂದು ಘೋಷಸಿ ಮೈಸೂರು ಸರ್ಕಾರ 1935ರಲ್ಲಿ ಅಧಿಸೂಚನೆ ಹೊರಡಿಸಿತ್ತು. 1980ರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಬರುವ ಮೊದಲು ಈ ಅರಣ್ಯ ಭೂಮಿಯ ಪೈಕಿ 20 ಎಕರೆ ಪ್ರದೇಶವನ್ನು ಖ್ಯಾತ ಚಿತ್ರನಟ ಟಿ.ಎನ್.ಬಾಲಕೃಷ್ಣ ಅವರಿಗೆ ಸ್ಟುಡಿಯೋ ನಿರ್ಮಿಸುವ ಸಲುವಾಗಿ 1969 ಒಂದು ಎಕರೆಗೆ ರೂ.300/- ರಂತೆ ಒಟ್ಟು 6,000/- ರೂಗಳಿಗೆ 20 ಎಕರೆ ಪ್ರದೇಶವನ್ನು ಷರತ್ತುಬದ್ಧವಾಗಿ ಮಂಜೂರು…
ಪೋಲೆಂಡ್: ಕರ್ನಾಟಕದೊಂದಿಗೆ ತಂತ್ರಜ್ಞಾನ ವಲಯದಲ್ಲಿ ಸಹಯೋಗವನ್ನು ಬಲಪಡಿಸಲು ಪೋಲೆಂಡ್ನ ಉಪ ಪ್ರಧಾನಿ ಮತ್ತು ಡಿಜಿಟಲ್ ವ್ಯವಹಾರಗಳ ಸಚಿವ ಕ್ರಿಸ್ಟಾಫ್ ಗಾವ್ಕಾವ್ಸ್ಕಿ ಅವರನ್ನು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಂದು ಭೇಟಿಯಾದರು. ಪೋಲೆಂಡ್ ಪ್ರವಾಸದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಕ್ರಿಸ್ಟಾಫ್ ಗಾವ್ಕಾವ್ಸ್ಕಿ ಅವರನ್ನು ಭೇಟಿಯಾಗಿ ಕೌಶಲ್ಯ, AI ಮತ್ತು ನಾವೀನ್ಯತೆ, ಸೈಬರ್ ಭದ್ರತೆ, ಡಿಜಿಟಲ್ ಆಡಳಿತ ಹಾಗೂ ಇತರ ಉದಯೋನ್ಮುಖ ತಂತ್ರಜ್ಞಾನಗಳ ಸಹಯೋಗದ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರಲ್ಲದೆ, ಈ ಭೇಟಿ ತಮಗೆ ಸಂತಸ ತಂದುಕೊಟ್ಟಿದೆ ಎಂದು ಹೇಳಿದ್ದಾರೆ. ಸಭೆಯಲ್ಲಿ ಪೋಲಿಷ್-ಭಾರತೀಯ ತಂತ್ರಜ್ಞಾನ ಸಹಕಾರದ ಕಾರ್ಯತಂತ್ರದ ಮೌಲ್ಯದ ಕುರಿತು ಒತ್ತು ನೀಡಿದ್ದು, ಈ ಮೂಲಕ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ 2025ರ ಚರ್ಚೆಗಳಿಗೆ ಭದ್ರ ಬುನಾದಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರಲ್ಲದೆ, ಭಾರತ ಮತ್ತು ಪೋಲೆಂಡ್ ನಡುವೆ ತಂತ್ರಜ್ಞಾನ ಹಾಗೂ ಡಿಜಿಟಲ್ ಸಹಯೋಗವನ್ನು ಮುಂದುವರಿಸಲು ತಾವು ಎದುರು ನೋಡುತ್ತಿರುವುದಾಗಿ…









