Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ : ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು ಸಾಧ್ಯವಾಗದಂತೆ ತಡೆದು ನಿಲ್ಲಿಸಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ. ಈ ಕಾರಣಕ್ಕೇ ಸಂವಿಧಾನದ ಕುತ್ತಿಗಿಗೇ ಕೈ ಹಾಕಲಾಗುತ್ತಿದೆ. ಇದಕ್ಕೆ ಸುದ್ದಿ ಮಾಧ್ಯಮ ಮೂಕಸಾಕ್ಷಿಯಾಗಿರುವುದು ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಪ್ರಚಾರ ಇಲಾಖೆ, SC/ST ಸಂಪಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರಗೋಷ್ಠಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಹೊತ್ತಿನ ಬಹಳ ಪತ್ರಕರ್ತರ ಕೈಯಲ್ಲಿ ವಿಚಾರ, ವಿಮರ್ಷೆಗಿಂತ ಹೆಚ್ಚಾಗಿ ಪೆಟ್ರೋಲ್, ಬೆಂಕಿಪೊಟ್ಟಣವೇ ಹೆಚ್ಚಾಗಿದೆ. ಕಡ್ಡಿಗೀರುವ ಅವಕಾಶಕ್ಕಾಗಿ ಕಾಯುತ್ತಿರುವಂತೆ ಕಾಣುತ್ತಾರೆ. ಪ್ರಜಾಪ್ರಭುತ್ವದ ಪ್ರಾಣ ಪಕ್ಷಿ ಸುದ್ದಿ ಸಂಸ್ಥೆಗಳ ಕೈಯಲ್ಲಿದೆ. ಪ್ರಾಣ ಉಳಿಸುವುದು, ಬಿಡುವುದು ಇವರಿಗೇ ಬಿಟ್ಟಿದೆ ಎಂದು ವಿವರಿಸಿದರು. ಸುದ್ದಿ ಮಾಧ್ಯಮದ ಆತ್ಮ ಆಗಿರುವ “ವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯ”ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಉಂಟಾದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಕಾಣೆಯಾಗಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ನೆರೆಯ ರಿಯಾಸಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ರಂಬನ್ ಜಿಲ್ಲೆಯ ರಾಜ್ಗಢ ತಹಸಿಲ್ನಲ್ಲಿ ಇಂದು ಮುಂಜಾನೆ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಪ್ರದೇಶದಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ. ಹಲವಾರು ಮನೆಗಳಿಗೆ ಹಾನಿಯಾಗಿದೆ. ಅಧಿಕಾರಿಗಳು ಈ ಪ್ರದೇಶದಲ್ಲಿ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಎಸ್ಡಿಆರ್ಎಫ್, ಪೊಲೀಸ್, ಸ್ಥಳೀಯ ನಾಗರಿಕ ಸರ್ಕಾರಿ ಸಂಸ್ಥೆಗಳು ಮತ್ತು ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ವ್ಯಕ್ತಿಯನ್ನು ರಕ್ಷಿಸಲು ಪ್ರಯತ್ನಗಳನ್ನು ನಡೆಸಿದ್ದಾರೆ. ರಂಬನ್ ಜಿಲ್ಲೆ ಸೇರಿದಂತೆ ಜಮ್ಮು ಪ್ರದೇಶದಲ್ಲಿ ಭಾರೀ ಮಳೆ, ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ರಂಬನ್ ಮತ್ತು ಪ್ರದೇಶದ ಇತರ ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಏತನ್ಮಧ್ಯೆ, ರಂಬನ್ ಜಿಲ್ಲೆಯ ಮಹೋರ್ ಪ್ರದೇಶದ ಬದರ್ ಗ್ರಾಮದಲ್ಲಿ ಭಾರಿ…
ವಾಸ್ತು ಶಾಸ್ತ್ರದ ಪ್ರಕಾರ, ಸಕಾರಾತ್ಮಕ ಶಕ್ತಿಗಳನ್ನು ಹೆಚ್ಚಿಸಲು ಕೆಲವು ವಿಷಯಗಳನ್ನು ಅನುಸರಿಸುವುದು ನಮ್ಮ ಅಭ್ಯಾಸ. ಪ್ರತಿಯೊಂದು ದಿಕ್ಕಿಗೂ ತನ್ನದೇ ಆದ ವಿಶಿಷ್ಟ ಗುಣಗಳಿವೆ. ಸರಿಯಾದ ವಸ್ತುಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸುವ ಮೂಲಕ, ನಾವು ಅದೃಷ್ಟವನ್ನು ಆಕರ್ಷಿಸಬಹುದು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ, ಅದರ ಆಧಾರದ ಮೇಲೆ, ಮಣ್ಣಿನ ಮಡಕೆಯನ್ನು ಬಳಸುವುದರಿಂದ ವಾಸ್ತು ಶಾಸ್ತ್ರದ ಫಲಿತಾಂಶವೇನು? ಈ ಪೋಸ್ಟ್ನಲ್ಲಿ ವಾಸ್ತು ಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುವುದನ್ನು ನಾವು ಮುಂದುವರಿಸಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ ಮಾನ್ಯತಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 30.08.2025 (ಶನಿವಾರ)ದ ಇಂದು ಬೆಳಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶೋಭಾ ನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನ ಸೌಧ ಲೇಔಟ್, ಕರ್ನಾಟಕ ಕಾಲೇಜು, ಇಂಡಿಯನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. 220/66/11ಕೆ.ವಿ ಐಟಿಐ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 30.08.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಪೂರ್ವ-ನೇಮಕಾತಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2025 ಸಂಜೆ 6:00 ಗಂಟೆ ಆಗಿರುತ್ತದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಮಾತ್ರವೇ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://swdservices.karnataka.gov.in/petccoaching/PCHomeKan.aspx ಆಗಿದೆ. https://twitter.com/SWDGoK/status/1961288596117492017
ಬೆಂಗಳೂರು: ಶಾಖಾ ಸಂಘಗಳ ಅಧ್ಯಕ್ಷರು ತಮ್ಮ ಶಾಖೆಯ ಪದಾಧಿಕಾರಿಗಳ ವರ್ಗಾವಣೆಗೆ ವಿನಾಯಿತಿ ಕೋರಿ ನೇರವಾಗಿ ಇಲಾಖಾ ಮುಖ್ಯಸ್ಥರಿಗೆ ಪತ್ರ ವ್ಯವಹರಿಸದಿರುವ ಬಗ್ಗೆ ಮಹತ್ವದ ಮಾಹಿತಿಯನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಹಂಚಿಕೊಂಡಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ಸುತ್ತೋಲೆ ಹೊರಡಿಸಿದ್ದು,ರಾಜ್ಯದ ಕೆಲವು ಜಿಲ್ಲೆ, ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರುಗಳು ತಮ್ಮ ಶಾಖೆಯ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ಕೋರಿ ಸಂಬಂಧಿಸಿದ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸರ್ಕಾರಕ್ಕೆ ನೇರವಾಗಿ ಶಾಖಾ ಸಂಘಗಳ ಲೆಟರ್ಹೆಡ್ ಮುಖಾಂತರ ಪತ್ರ ವ್ಯವಹರಿಸಿರುವುದು ಕಂಡುಬಂದಿರುತ್ತದೆ ಎಂದಿದ್ದಾರೆ. ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ; ಸಾರ್ವತ್ರಿಕ ವರ್ಗಾವಣೆ/ವರ್ಗಾವಣೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ಸರ್ಕಾರದ ಸುತ್ತೋಲೆಯನ್ವಯ ವಿನಾಯಿತಿ ಕಲ್ಪಿಸಲಾಗಿದ್ದು, ಈ ಅವಕಾಶವನ್ನು ಬಳಸಿಕೊಳ್ಳಲು ಶಾಖಾ ಸಂಘಗಳು ರಾಜ್ಯ ಸಂಘದ ಗಮನಕ್ಕೆ ತರದೇ ನೇರವಾಗಿ ಚುನಾಯಿತರಲ್ಲದ ನಿರ್ದೆಶಕರೂ ಸೇರಿದಂತೆ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಹಾಗೂ ಸರ್ಕಾರಕ್ಕೆ ಪತ್ರ…
ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಆಯಾ ನಿಗಮಗಳ ಅಡಿಯಲ್ಲಿ 5 ಲಕ್ಷದವರೆಗೆ ಸಹಾಯಧನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಆರ್ಥಿಕವಾಗಿ ಅವರನ್ನು ಸಬಲೀಕರಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಸಮುದಾಯದ ಮಹಿಳಾ ಸ್ವಸಹಾಯ ಸಂಘಗಳ(ಕನಿಷ್ಠ 10 ಸದಸ್ಯರು) ವಿವಿಧ ಉದ್ದೇಶದ ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ನೀಡಲಾಗುವುದು. https://twitter.com/SWDGoK/status/1956006687610933446 ಘಟಕ ವೆಚ್ಚ: ರೂ. 5.00 ಲಕ್ಷ ಸಹಾಯಧನ: ರೂ. 2.50 ಲಕ್ಷ ಸಾಲ: ರೂ. 2.50 ಲಕ್ಷ (ಶೇ. 4 ರಷ್ಟು ಬಡ್ಡಿ ದರ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.09.2025. ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: https://sevasindhu.karnataka.gov.in…
ಬೆಂಗಳೂರು: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ, ಮೈಲಸಂದ್ರ ಗ್ರಾಮದ ಸರ್ವೆ ನಂ.26ರಲ್ಲಿ ಅಭಿಮಾನ್ ಸ್ಟುಡಿಯೋಗೆ ನೀಡಿರುವ ಅರಣ್ಯ ಪ್ರದೇಶದ ಆದೇಶವನ್ನು ರದ್ದು ಪಡಿಸಿ, ಹಿಂಪಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚಿಸಿದೆ. ಅಲ್ಲದೇ ಅಭಿಮಾನ್ ಸ್ಟುಡಿಯೋದ ಅರಣ್ಯ ಭೂಮಿ ಹಿಂಪಡೆಯುತ್ತಿರುವ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರ ಕುಮಾರ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮದ ಸರ್ವೆ ನಂ.22 (78-18ಗು), ಸರ್ವ ನಂ.26 (62-20ುದ ಪ್ರದೇಶವನ್ನು ತುರಹಳ್ಳಿ ಕಾಯಿ, ಅರಣ್ಯ ಪ್ರದೇಶವೆಂದು ಉಲ್ಲೇಖ(1)ರ ಪತ್ರದಲ್ಲಿ ಘೋಷಣೆ ಮಾಡಿಲಾಗಿರುತ್ತದೆ ಎಂದಿದ್ದಾರೆ. CHO AFD-54-FGL-69, Bangalore dated: 09.04.1969 ಮೈಲಸಂದ್ರ ಗ್ರಾಮದ ಸರ್ವೆ ನಂ.26ರಲ್ಲಿ 20ಎಕರೆ ಪ್ರದೇಶವನ್ನು ಟಿ.ಎನ್.ಬಾಲಕ್ಕ ರವರಿಗೆ ಅಭಿಮಾನ್ ಚಿತ್ರ ಸುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ…
ಬೆಂಗಳೂರು: ಶಾಸಕರ ಶಿಫಾರಸ್ಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿರುವಂತ ಕರ್ನಾಟಕ ಹೈಕೋರ್ಟ್, ತಹಶೀಲ್ದಾರ್ ಎಸ್.ವೆಂಕಟೇಶಪ್ಪ ವರ್ಗಾವಣೆ ರದ್ದಿಗೆ ನಕಾರ ವ್ಯಕ್ತ ಪಡಿಸಿದೆ. ಬಂಗಾರಪೇಟೆ ಶಾಸಕರ ಶಿಫಾರಸ್ಸಿನಂತೆ ತಹಶೀಲ್ದಾರ್ ಎಸ್ ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ರದ್ದು ಪಡಿಸಲು ಕೆಎಟಿ ಕೂಡ ನಿರಾಕರಿಸಿತ್ತು. ಹೀಗಾಗಿ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಿಯಮದಂತೆ ವರ್ಗಾವಣೆಗೆ ಮುಖ್ಯಮಂತ್ರಿಗಳ ಅನುಮತಿ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳ ದೂರಿದ್ದರಿಂದ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ವಾದ ಒಪ್ಪಿ ವರ್ಗಾವಣೆ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿಯಿತು. ವಿಶೇಷ ಸಂದರ್ಭಗಳಲ್ಲಿ ಸಿಎಂ ಸಮ್ಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಜಿ ಪಂಡಿತ್, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠವು ಅಭಿಪ್ರಾಯ ಪಟ್ಟಿತು. ಈ ಮೂಲಕ ಶಾಸಕರ ಶಿಫಾರಸ್ಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ.
ಡೆಹ್ರಾಡೂನ್: ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನವರೆಗೆ ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದ ಸರಣಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಗರ್ವಾಲ್ ಮತ್ತು ಕುಮಾವೂನ್ ಪ್ರದೇಶಗಳಲ್ಲಿ ಒಂದು ಡಜನ್ಗೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ನಿರಂತರ ಮಳೆಯಿಂದ ಉಲ್ಬಣಗೊಂಡ ನೈಸರ್ಗಿಕ ವಿಕೋಪಗಳು ಚಮೋಲಿ, ರುದ್ರಪ್ರಯಾಗ, ತೆಹ್ರಿ ಮತ್ತು ಬಾಗೇಶ್ವರ ಜಿಲ್ಲೆಗಳಲ್ಲಿ ವ್ಯಾಪಕ ವಿನಾಶಕ್ಕೆ ಕಾರಣವಾಗಿವೆ, ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳಿಗೆ ಹಾನಿಯಾಗಿವೆ ಮತ್ತು 35 ಕ್ಕೂ ಹೆಚ್ಚು ಜಾನುವಾರುಗಳನ್ನು ಸಮಾಧಿ ಮಾಡಿವೆ. ಹಿಮಾಲಯನ್ ರಾಜ್ಯಗಳಾದ ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರಗಳು ಮಾನ್ಸೂನ್ ಪ್ರೇರಿತ ಮೇಘಸ್ಫೋಟಗಳು ಮತ್ತು ಸಂಬಂಧಿತ ನೈಸರ್ಗಿಕ ವಿಕೋಪಗಳ ತೀವ್ರ ಪರಿಣಾಮದಿಂದ ಬಳಲುತ್ತಿವೆ. ವಿಶೇಷವಾಗಿ ಶುಕ್ರವಾರ, ಉತ್ತರಾಖಂಡಕ್ಕೆ ವಿನಾಶಕಾರಿ ದಿನವೆಂದು ಸಾಬೀತಾಯಿತು, ಏಕೆಂದರೆ ರಾಜ್ಯದ ವಿವಿಧ ಭಾಗಗಳಲ್ಲಿ ಮೇಘಸ್ಫೋಟದ ವರದಿಗಳು ವ್ಯಾಪಕ ಭೀತಿಯನ್ನು ಉಂಟುಮಾಡಿದವು. ಧಾರಾಕಾರ ಮಳೆಯು ಬೃಹತ್ ಅವಶೇಷಗಳನ್ನು ಉರುಳಿಸಿ, ಹಲವಾರು ಮನೆಗಳನ್ನು ಮುಳುಗಿಸಿ, ರಸ್ತೆಗಳಿಗೆ ತೀವ್ರ ಹಾನಿಯನ್ನುಂಟುಮಾಡಿತು. ದೃಢಪಡಿಸಿದ ಸಾವುನೋವುಗಳಲ್ಲಿ ದೇವಲ್ (ಚಮೋಲಿ) ನಲ್ಲಿ ಇಬ್ಬರು, ಕಪ್ಕೋಟ್…












